Homeಕರ್ನಾಟಕಬೆಂಗಳೂರಿನ ಜೋಡಿ ಕೊಲೆಗೆ ವ್ಯವಹಾರ ವೈಷಮ್ಯವೇ ಕಾರಣ; ವಿಫಲವಾದ ಬಿಜೆಪಿಯ ಹೆಣರಾಜಕಾರಣ

ಬೆಂಗಳೂರಿನ ಜೋಡಿ ಕೊಲೆಗೆ ವ್ಯವಹಾರ ವೈಷಮ್ಯವೇ ಕಾರಣ; ವಿಫಲವಾದ ಬಿಜೆಪಿಯ ಹೆಣರಾಜಕಾರಣ

- Advertisement -
- Advertisement -

ಜುಲೈ 11ರ ಮಂಗಳವಾರ ಮಧ್ಯಾಹ್ನ ಬೆಂಗಳೂರಿನ ಅಮೃತಹಳ್ಳಿಯಲ್ಲಿರುವ ಏರೋನಿಕ್ಸ್ ಮೀಡಿಯಾ ಪ್ರೈವೇಟ್ ಲಿಮಿಟೆಡ್ (Aironics Media Pvt Ltd) ಕಂಪನಿಗೆ ನುಗ್ಗಿದ ಮೂವರು ದುಷ್ಕರ್ಮಿಗಳು ಆ ಕಂಪನಿಯ ಮ್ಯಾನೇಜಿಂಗ್ ಡೈರೆಕ್ಟರ್ ಫಣೀಂದ್ರ ಸುಬ್ರಮಣ್ಯ ಹಾಗೂ ಸಿಇಒ ವಿನು ಕುಮಾರ್ ಇಬ್ಬರಿಗೂ ಇರಿದು ಕೊಂದು ಪರಾರಿಯಾಗಿದ್ದಾರೆ. ಈ ಜೋಡಿ ಕೊಲೆಯನ್ನು ಕೋಮುವಾದೀಕರಿಸಿದ ಬಿಜೆಪಿ ಮುಖಂಡರು ಮತ್ತು ಹಿಂದುತ್ವವಾದಿಗಳು, ಹಿಂದೂ ಅರ್ಚಕ, ಹಿಂದೂ ಮುಖಂಡ ಫಣೀಂದ್ರ ಸುಬ್ರಮಣ್ಯರವರ ಕೊಲೆಯಾಗಿದೆ ಎಂದು ಪ್ರಚಾರ ಮಾಡಿದರು. ಇದೇ ಸಂದರ್ಭದಲ್ಲಿ ಬೆಳಗಾವಿಯ ಜೈನ ಮುನಿ ಮತ್ತು ಟಿ.ನರಸೀಪುರದ ಯುವ ಬ್ರಿಗೇಡ್ ಕಾರ್ಯಕರ್ತನ ಕೊಲೆ ಸಂಭವಿಸಿದ್ದರಿಂದ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಹಿಂದೂಗಳ ಕೊಲೆಯಾಗುತ್ತಿದೆ ಎಂಬ ಕೋಮು ನಿರೂಪಣೆಯನ್ನು ಹರಿಯಬಿಟ್ಟರು.

ಬಿಜೆಪಿ ರಾಜ್ಯಸಭಾ ಸಂಸದ ರಾಜೀವ್ ಚಂದ್ರಶೇಖರ್ ಸೇರಿದಂತೆ ಹಲವು ಬಿಜೆಪಿ ನಾಯಕರು ಹಿಂದೂ ಮುಖಂಡನನ್ನು ಅನ್ಯಧರ್ಮದವರು ಕೊಂದಿದ್ದಾರೆ ಎಂದು ಆರೋಪಿಸಿದರು. ಆದರೆ ಪೊಲೀಸರು ಶೀಘ್ರವಾಗಿ ಕೊಲೆಗೆ ಸಂಬಂಧಿಸಿದಂತೆ ಸಂತೋಷ್, ಶಬರೀಶ್ (ಫೆಲಿಕ್ಸ್) ಮತ್ತು ವಿನಯ್ ರೆಡ್ಡಿ ಎಂಬ ಮೂವರು ಆರೋಪಿಗಳನ್ನು ಬಂಧಿಸಿ ವಿಚಾರಣೆ ನಡೆಸಿದಾಗ ಅಸಲೀ ಸತ್ಯ ಬಹಿರಂಗವಾಗಿದೆ. ಅದರ ಪ್ರಕಾರ ವೃತ್ತಿ ಮತ್ಸರವೇ ಜೋಡಿ ಕೊಲೆಗೆ ಪ್ರಧಾನ ಕಾರಣ ಹೊರತು ಯಾವುದೇ ಕೋಮು ಸಂಘರ್ಷವಲ್ಲ. ಜೊತೆಗೆ ಕೊಲೆಯಾದವರು ಮತ್ತು ಕೊಲೆ ಆರೋಪಿಗಳೆಲ್ಲರೂ ಒಂದೇ ಧರ್ಮದವರಾಗಿದ್ದಾರೆ.

ಕೊಲೆಯಾದ ಫಣೀಂದ್ರ ಮತ್ತು ವಿನುಕುಮಾರ್ ಜೊತೆಗೆ ಆರೋಪಿಗಳಾದ ಸಂತೋಷ್, ಶಬರೀಶ್ ಈ ಹಿಂದೆ ಜಿ-ನೆಟ್ ಎಂಬ ಇಂಟರ್‌ನೆಟ್ ಸೇವೆ ಒದಗಿಸುವ ಕಂಪನಿಯಲ್ಲಿ ಜೊತೆಯಾಗಿ ಕೆಲಸ ಮಾಡುತ್ತಿದ್ದರು. ಆದರೆ ಆ ಕಂಪನಿಯ ಮಾಲೀಕರಾದ ಅರುಣ್ ಕುಮಾರ್‌ರೊಂದಿಗೆ ಮನಸ್ತಾಪ ಬಂದ ಕಾರಣ ಕೆಲಸ ಬಿಟ್ಟ ಫಣೀಂದ್ರ ಮತ್ತು ವಿನುಕುಮಾರ್ 2022ರ ನವೆಂಬರ್‌ನಲ್ಲಿ ಏರೋನಿಕ್ಸ್ ಮೀಡಿಯಾ ಪ್ರೈವೇಟ್ ಲಿಮಿಟೆಡ್ ಎಂಬ ಸ್ವಂತ ಕಂಪನಿ ಆರಂಭಿಸಿದ್ದರು. ಆರಂಭದಿಂದಲೇ ಕಂಪನಿಯು ಸಾಕಷ್ಟು ಜನಪ್ರಿಯತೆ ಪಡೆದದ್ದರಿಂದ ಹಲವಾರು ಗ್ರಾಹಕರು ಜಿ-ನೆಟ್ ಕಂಪನಿ ಬಿಟ್ಟು ಏರೋನಿಕ್ಸ್‌ನಿಂದ ಸೇವೆ ಪಡೆದುಕೊಳ್ಳಲು ಆರಂಭಿಸಿದ್ದರು. ಅಷ್ಟು ಮಾತ್ರವಲ್ಲದೇ ಹಲವಾರು ಉದ್ಯೋಗಿಗಳು ಸಹ ಜಿ-ನೆಟ್ ತೊರೆದು ಏರೋನಿಕ್ಸ್ ಸೇರಿದ್ದರು. ಹಾಗಾಗಿ ಎರಡು ಕಂಪನಿಗಳ ನಡುವೆ ತುರುಸಿನ ಪೈಪೋಟಿ ಏರ್ಪಟ್ಟಿತ್ತು. ಇದರಿಂದ ಹತಾಶಗೊಂಡ ಜಿ-ನೆಟ್ ಮಾಲೀಕ ಅರುಣ್ ಕುಮಾರ್ ಫೆಲಿಕ್ಸ್ ಮತ್ತು ಇತರರಿಗೆ ಸುಪಾರಿ ನೀಡಿ ಫಣೀಂದ್ರ ಮತ್ತು ವಿನುಕುಮಾರ್ ಕೊಲೆಗೆ ಕಾರಣರಾಗಿದ್ದಾರೆ ಎಂದು ಆರೋಪಿಸಿ ಪೊಲೀಸರು ಅರುಣ್ ಕುಮಾರ್‌ರನ್ನು ವಶಕ್ಕೆ ಪಡೆದು ತನಿಖೆ ನಡೆಸುತ್ತಿದ್ದಾರೆ. ಆರೋಪಿಗಳ ಮೇಲೆ ಐಪಿಸಿ ಸೆಕ್ಷನ್ 302 (ಕೊಲೆ), 120ಬಿ (ಕ್ರಿಮಿನಲ್ ಪಿತೂರಿ) ಮತ್ತು 34 (ಸಾಮಾನ್ಯ ಉದ್ದೇಶ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಫಣೀಂದ್ರ ಸುಬ್ರಹ್ಮಣ್ಯಂ ಅವರು ಹಿಂದುತ್ವ ಸಂಘಟನೆಗಳೊಂದಿಗೆ ಶಾಮೀಲಾಗಿದ್ದರೂ ಕೂಡ ಅನ್ಯ ಧರ್ಮದ ಯಾರೊಂದಿಗೂ ಅವರಿಗೆ ವೈರತ್ವವಿರಲಿಲ್ಲ. ಅಲ್ಲದೆ, ಜಿ-ನೆಟ್ ಕಂಪನಿ ಜೊತೆಗಿನ ವ್ಯವಹಾರ ವೈಷಮ್ಯವೇ ಅವರ ಹತ್ಯೆಗೆ ಕಾರಣ ಎಂದು ದೂರುದಾರರಾದ ಅವರ ಸಹೋದ್ಯೋಗಿ ಶಂಕರ್ ನಾರಾಯಣ್ ತಿಳಿಸಿದ್ದಾರೆ; ಡಿಸಿಪಿ (ಈಶಾನ್ಯ) ಲಕ್ಷ್ಮಿ ಪ್ರಸಾದ್ ಆರಂಭಿಕ ತನಿಖೆಯಲ್ಲಿ ಯಾವುದೇ ಕೋಮು ಆಯಾಮ ಕಂಡುಬಂದಿಲ್ಲ ಎಂದು ತಿಳಿಸಿದ್ದಾರೆ. ಇನ್ನು ಫಣೀಂದ್ರರವರು ಪೂಜೆ ಮಾಡುತ್ತಿರುವ ಫೋಟೊ, ಅವರ ಕಚೇರಿ ಉದ್ಘಾಟನೆ ಸಮಯದಲ್ಲಿ ತೆಗೆಸಿಕೊಂಡಿರುವುದು; ಅದನ್ನು ರೀಲ್ ಒಂದರಲ್ಲಿ ಬಳಸಲಾಗಿದ್ದು ಅದನ್ನೇ ಮುಂದುಮಾಡಿ ಅವರು ಹಿಂದೂ ಅರ್ಚಕ ಎಂದು ತಪ್ಪಾಗಿ ಬಿಂಬಿಸಲಾಗಿದೆ

ಫಣೀಂದ್ರರವರ ವ್ಯವಹಾರ ಪಾಲುದಾರರಾದ ಕನ್ನಡಪರ ಹೋರಾಟಗಾರರಾದ ಬಿ.ಹರೀಶ್ ಕುಮಾರ್‌ರವರು ಮಾತನಾಡಿ, “ಫಣೀಂದ್ರರವರು ಒಳ್ಳೆಯ ಸ್ವಭಾವದವರು. ಅವರು ಹಿಂದುತ್ವವನ್ನು ಒಪ್ಪಿಕೊಂಡರೂ ಸಹ ಅನ್ಯಧರ್ಮದವರನ್ನು ದ್ವೇಷಿಸುವವರಲ್ಲ. ಕೇವಲ 4 ತಿಂಗಳ ಹಿಂದೆ ಹೊಸ ಇಂಟರ್‌ನೆಟ್ ಸೇವೆ ನೀಡುವ ಕಂಪನಿ ಆರಂಭಿಸಿದ್ದೇವೆ. ಎಲ್ಲವೂ ಚೆನ್ನಾಗಿ ನಡೆದುಕೊಂಡು ಹೋಗುತ್ತಿರುವಾಗ ಅವರ ಏಳಿಗೆ ಸಹಿಸದೇ ಕೊಲೆಗೈಯ್ಯಲಾಗಿದೆ” ಎಂದರು.

ಠುಸ್ ಆದ ಬಿಜೆಪಿಯ ಹೆಣದ ರಾಜಕೀಯ

4 ವರ್ಷಗಳ ಕಾಲ ಅಧಿಕಾರದಲ್ಲಿದ್ದ ಬಿಜೆಪಿಯು ಜನಪರ ಆಡಳಿತ ನೀಡಲು, ಅಭಿವೃದ್ದಿ ಮಾಡಲು ವಿಫಲವಾಗಿ ಸೋತು ಸುಣ್ಣವಾಗಿದೆ. ಆದರೂ ತನ್ನ ಹೆಣ ರಾಜಕಾರಣವನ್ನು ಮಾತ್ರ ಕೈಬಿಟ್ಟಿಲ್ಲ. ರಾಜ್ಯದಲ್ಲಿ ಯಾರಾದರೂ ಸಾವನಪ್ಪಿದ್ದರೆ ಹಿಂದೂ ಮುಖಂಡನ ಕೊಲೆ ಎಂದು ಗಲಭೆ ಎಬ್ಬಿಸಲು ಬಿಜೆಪಿ ಯತ್ನಿಸುತ್ತಿದೆ. ಈ ಹಿಂದೆ ಹೊನ್ನಾವರದಲ್ಲಿ ಪರೇಶ್ ಮೇಸ್ತಾ ಎಂಬ ಯುವಕ ಸಾವನಪ್ಪಿದ ಘಟನೆಯನ್ನು ಕೋಮುವಾದೀಕರಿಸಿ, ಗಲಭೆಗಳನ್ನು ಎಬ್ಬಿಸಿ ಮತಗಳ ಬೇಟೆಯಾಡಿದ್ದ ಬಿಜೆಪಿಗೆ ಇನ್ನೂ ರಕ್ತದ ರುಚಿ ಆರಿಲ್ಲ. ಹಾಗಾಗಿ ಹೆಣಗಳು ಬೀಳುವುದನ್ನೇ ಕಾಯ್ದು ಕೋಮು ಆಯಾಮ ನೀಡಲು ಯತ್ನಿಸುತ್ತಿದೆ. ಆ ಮೂಲಕ ಸಮಾಜದಲ್ಲಿ ಶಾಂತಿ ಕದಡಲು ಯತ್ನಿಸುತ್ತಿದೆ. ಈ ಜೋಡಿ ಕೊಲೆ ವಿಚಾರದಲ್ಲಿಯೂ ಹಾಗೆ ಮಾಡಲು ಯತ್ನಿಸಿತು. ಆದರೆ ನೈಜ ಕಾರಣ ಹೊರಬರುತ್ತಲೇ ಮುಖಭಂಗ ಅನುಭವಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...