Homeಕರ್ನಾಟಕಬೆಂಗಳೂರಿನ ಜೋಡಿ ಕೊಲೆಗೆ ವ್ಯವಹಾರ ವೈಷಮ್ಯವೇ ಕಾರಣ; ವಿಫಲವಾದ ಬಿಜೆಪಿಯ ಹೆಣರಾಜಕಾರಣ

ಬೆಂಗಳೂರಿನ ಜೋಡಿ ಕೊಲೆಗೆ ವ್ಯವಹಾರ ವೈಷಮ್ಯವೇ ಕಾರಣ; ವಿಫಲವಾದ ಬಿಜೆಪಿಯ ಹೆಣರಾಜಕಾರಣ

- Advertisement -
- Advertisement -

ಜುಲೈ 11ರ ಮಂಗಳವಾರ ಮಧ್ಯಾಹ್ನ ಬೆಂಗಳೂರಿನ ಅಮೃತಹಳ್ಳಿಯಲ್ಲಿರುವ ಏರೋನಿಕ್ಸ್ ಮೀಡಿಯಾ ಪ್ರೈವೇಟ್ ಲಿಮಿಟೆಡ್ (Aironics Media Pvt Ltd) ಕಂಪನಿಗೆ ನುಗ್ಗಿದ ಮೂವರು ದುಷ್ಕರ್ಮಿಗಳು ಆ ಕಂಪನಿಯ ಮ್ಯಾನೇಜಿಂಗ್ ಡೈರೆಕ್ಟರ್ ಫಣೀಂದ್ರ ಸುಬ್ರಮಣ್ಯ ಹಾಗೂ ಸಿಇಒ ವಿನು ಕುಮಾರ್ ಇಬ್ಬರಿಗೂ ಇರಿದು ಕೊಂದು ಪರಾರಿಯಾಗಿದ್ದಾರೆ. ಈ ಜೋಡಿ ಕೊಲೆಯನ್ನು ಕೋಮುವಾದೀಕರಿಸಿದ ಬಿಜೆಪಿ ಮುಖಂಡರು ಮತ್ತು ಹಿಂದುತ್ವವಾದಿಗಳು, ಹಿಂದೂ ಅರ್ಚಕ, ಹಿಂದೂ ಮುಖಂಡ ಫಣೀಂದ್ರ ಸುಬ್ರಮಣ್ಯರವರ ಕೊಲೆಯಾಗಿದೆ ಎಂದು ಪ್ರಚಾರ ಮಾಡಿದರು. ಇದೇ ಸಂದರ್ಭದಲ್ಲಿ ಬೆಳಗಾವಿಯ ಜೈನ ಮುನಿ ಮತ್ತು ಟಿ.ನರಸೀಪುರದ ಯುವ ಬ್ರಿಗೇಡ್ ಕಾರ್ಯಕರ್ತನ ಕೊಲೆ ಸಂಭವಿಸಿದ್ದರಿಂದ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಹಿಂದೂಗಳ ಕೊಲೆಯಾಗುತ್ತಿದೆ ಎಂಬ ಕೋಮು ನಿರೂಪಣೆಯನ್ನು ಹರಿಯಬಿಟ್ಟರು.

ಬಿಜೆಪಿ ರಾಜ್ಯಸಭಾ ಸಂಸದ ರಾಜೀವ್ ಚಂದ್ರಶೇಖರ್ ಸೇರಿದಂತೆ ಹಲವು ಬಿಜೆಪಿ ನಾಯಕರು ಹಿಂದೂ ಮುಖಂಡನನ್ನು ಅನ್ಯಧರ್ಮದವರು ಕೊಂದಿದ್ದಾರೆ ಎಂದು ಆರೋಪಿಸಿದರು. ಆದರೆ ಪೊಲೀಸರು ಶೀಘ್ರವಾಗಿ ಕೊಲೆಗೆ ಸಂಬಂಧಿಸಿದಂತೆ ಸಂತೋಷ್, ಶಬರೀಶ್ (ಫೆಲಿಕ್ಸ್) ಮತ್ತು ವಿನಯ್ ರೆಡ್ಡಿ ಎಂಬ ಮೂವರು ಆರೋಪಿಗಳನ್ನು ಬಂಧಿಸಿ ವಿಚಾರಣೆ ನಡೆಸಿದಾಗ ಅಸಲೀ ಸತ್ಯ ಬಹಿರಂಗವಾಗಿದೆ. ಅದರ ಪ್ರಕಾರ ವೃತ್ತಿ ಮತ್ಸರವೇ ಜೋಡಿ ಕೊಲೆಗೆ ಪ್ರಧಾನ ಕಾರಣ ಹೊರತು ಯಾವುದೇ ಕೋಮು ಸಂಘರ್ಷವಲ್ಲ. ಜೊತೆಗೆ ಕೊಲೆಯಾದವರು ಮತ್ತು ಕೊಲೆ ಆರೋಪಿಗಳೆಲ್ಲರೂ ಒಂದೇ ಧರ್ಮದವರಾಗಿದ್ದಾರೆ.

ಕೊಲೆಯಾದ ಫಣೀಂದ್ರ ಮತ್ತು ವಿನುಕುಮಾರ್ ಜೊತೆಗೆ ಆರೋಪಿಗಳಾದ ಸಂತೋಷ್, ಶಬರೀಶ್ ಈ ಹಿಂದೆ ಜಿ-ನೆಟ್ ಎಂಬ ಇಂಟರ್‌ನೆಟ್ ಸೇವೆ ಒದಗಿಸುವ ಕಂಪನಿಯಲ್ಲಿ ಜೊತೆಯಾಗಿ ಕೆಲಸ ಮಾಡುತ್ತಿದ್ದರು. ಆದರೆ ಆ ಕಂಪನಿಯ ಮಾಲೀಕರಾದ ಅರುಣ್ ಕುಮಾರ್‌ರೊಂದಿಗೆ ಮನಸ್ತಾಪ ಬಂದ ಕಾರಣ ಕೆಲಸ ಬಿಟ್ಟ ಫಣೀಂದ್ರ ಮತ್ತು ವಿನುಕುಮಾರ್ 2022ರ ನವೆಂಬರ್‌ನಲ್ಲಿ ಏರೋನಿಕ್ಸ್ ಮೀಡಿಯಾ ಪ್ರೈವೇಟ್ ಲಿಮಿಟೆಡ್ ಎಂಬ ಸ್ವಂತ ಕಂಪನಿ ಆರಂಭಿಸಿದ್ದರು. ಆರಂಭದಿಂದಲೇ ಕಂಪನಿಯು ಸಾಕಷ್ಟು ಜನಪ್ರಿಯತೆ ಪಡೆದದ್ದರಿಂದ ಹಲವಾರು ಗ್ರಾಹಕರು ಜಿ-ನೆಟ್ ಕಂಪನಿ ಬಿಟ್ಟು ಏರೋನಿಕ್ಸ್‌ನಿಂದ ಸೇವೆ ಪಡೆದುಕೊಳ್ಳಲು ಆರಂಭಿಸಿದ್ದರು. ಅಷ್ಟು ಮಾತ್ರವಲ್ಲದೇ ಹಲವಾರು ಉದ್ಯೋಗಿಗಳು ಸಹ ಜಿ-ನೆಟ್ ತೊರೆದು ಏರೋನಿಕ್ಸ್ ಸೇರಿದ್ದರು. ಹಾಗಾಗಿ ಎರಡು ಕಂಪನಿಗಳ ನಡುವೆ ತುರುಸಿನ ಪೈಪೋಟಿ ಏರ್ಪಟ್ಟಿತ್ತು. ಇದರಿಂದ ಹತಾಶಗೊಂಡ ಜಿ-ನೆಟ್ ಮಾಲೀಕ ಅರುಣ್ ಕುಮಾರ್ ಫೆಲಿಕ್ಸ್ ಮತ್ತು ಇತರರಿಗೆ ಸುಪಾರಿ ನೀಡಿ ಫಣೀಂದ್ರ ಮತ್ತು ವಿನುಕುಮಾರ್ ಕೊಲೆಗೆ ಕಾರಣರಾಗಿದ್ದಾರೆ ಎಂದು ಆರೋಪಿಸಿ ಪೊಲೀಸರು ಅರುಣ್ ಕುಮಾರ್‌ರನ್ನು ವಶಕ್ಕೆ ಪಡೆದು ತನಿಖೆ ನಡೆಸುತ್ತಿದ್ದಾರೆ. ಆರೋಪಿಗಳ ಮೇಲೆ ಐಪಿಸಿ ಸೆಕ್ಷನ್ 302 (ಕೊಲೆ), 120ಬಿ (ಕ್ರಿಮಿನಲ್ ಪಿತೂರಿ) ಮತ್ತು 34 (ಸಾಮಾನ್ಯ ಉದ್ದೇಶ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಫಣೀಂದ್ರ ಸುಬ್ರಹ್ಮಣ್ಯಂ ಅವರು ಹಿಂದುತ್ವ ಸಂಘಟನೆಗಳೊಂದಿಗೆ ಶಾಮೀಲಾಗಿದ್ದರೂ ಕೂಡ ಅನ್ಯ ಧರ್ಮದ ಯಾರೊಂದಿಗೂ ಅವರಿಗೆ ವೈರತ್ವವಿರಲಿಲ್ಲ. ಅಲ್ಲದೆ, ಜಿ-ನೆಟ್ ಕಂಪನಿ ಜೊತೆಗಿನ ವ್ಯವಹಾರ ವೈಷಮ್ಯವೇ ಅವರ ಹತ್ಯೆಗೆ ಕಾರಣ ಎಂದು ದೂರುದಾರರಾದ ಅವರ ಸಹೋದ್ಯೋಗಿ ಶಂಕರ್ ನಾರಾಯಣ್ ತಿಳಿಸಿದ್ದಾರೆ; ಡಿಸಿಪಿ (ಈಶಾನ್ಯ) ಲಕ್ಷ್ಮಿ ಪ್ರಸಾದ್ ಆರಂಭಿಕ ತನಿಖೆಯಲ್ಲಿ ಯಾವುದೇ ಕೋಮು ಆಯಾಮ ಕಂಡುಬಂದಿಲ್ಲ ಎಂದು ತಿಳಿಸಿದ್ದಾರೆ. ಇನ್ನು ಫಣೀಂದ್ರರವರು ಪೂಜೆ ಮಾಡುತ್ತಿರುವ ಫೋಟೊ, ಅವರ ಕಚೇರಿ ಉದ್ಘಾಟನೆ ಸಮಯದಲ್ಲಿ ತೆಗೆಸಿಕೊಂಡಿರುವುದು; ಅದನ್ನು ರೀಲ್ ಒಂದರಲ್ಲಿ ಬಳಸಲಾಗಿದ್ದು ಅದನ್ನೇ ಮುಂದುಮಾಡಿ ಅವರು ಹಿಂದೂ ಅರ್ಚಕ ಎಂದು ತಪ್ಪಾಗಿ ಬಿಂಬಿಸಲಾಗಿದೆ

ಫಣೀಂದ್ರರವರ ವ್ಯವಹಾರ ಪಾಲುದಾರರಾದ ಕನ್ನಡಪರ ಹೋರಾಟಗಾರರಾದ ಬಿ.ಹರೀಶ್ ಕುಮಾರ್‌ರವರು ಮಾತನಾಡಿ, “ಫಣೀಂದ್ರರವರು ಒಳ್ಳೆಯ ಸ್ವಭಾವದವರು. ಅವರು ಹಿಂದುತ್ವವನ್ನು ಒಪ್ಪಿಕೊಂಡರೂ ಸಹ ಅನ್ಯಧರ್ಮದವರನ್ನು ದ್ವೇಷಿಸುವವರಲ್ಲ. ಕೇವಲ 4 ತಿಂಗಳ ಹಿಂದೆ ಹೊಸ ಇಂಟರ್‌ನೆಟ್ ಸೇವೆ ನೀಡುವ ಕಂಪನಿ ಆರಂಭಿಸಿದ್ದೇವೆ. ಎಲ್ಲವೂ ಚೆನ್ನಾಗಿ ನಡೆದುಕೊಂಡು ಹೋಗುತ್ತಿರುವಾಗ ಅವರ ಏಳಿಗೆ ಸಹಿಸದೇ ಕೊಲೆಗೈಯ್ಯಲಾಗಿದೆ” ಎಂದರು.

ಠುಸ್ ಆದ ಬಿಜೆಪಿಯ ಹೆಣದ ರಾಜಕೀಯ

4 ವರ್ಷಗಳ ಕಾಲ ಅಧಿಕಾರದಲ್ಲಿದ್ದ ಬಿಜೆಪಿಯು ಜನಪರ ಆಡಳಿತ ನೀಡಲು, ಅಭಿವೃದ್ದಿ ಮಾಡಲು ವಿಫಲವಾಗಿ ಸೋತು ಸುಣ್ಣವಾಗಿದೆ. ಆದರೂ ತನ್ನ ಹೆಣ ರಾಜಕಾರಣವನ್ನು ಮಾತ್ರ ಕೈಬಿಟ್ಟಿಲ್ಲ. ರಾಜ್ಯದಲ್ಲಿ ಯಾರಾದರೂ ಸಾವನಪ್ಪಿದ್ದರೆ ಹಿಂದೂ ಮುಖಂಡನ ಕೊಲೆ ಎಂದು ಗಲಭೆ ಎಬ್ಬಿಸಲು ಬಿಜೆಪಿ ಯತ್ನಿಸುತ್ತಿದೆ. ಈ ಹಿಂದೆ ಹೊನ್ನಾವರದಲ್ಲಿ ಪರೇಶ್ ಮೇಸ್ತಾ ಎಂಬ ಯುವಕ ಸಾವನಪ್ಪಿದ ಘಟನೆಯನ್ನು ಕೋಮುವಾದೀಕರಿಸಿ, ಗಲಭೆಗಳನ್ನು ಎಬ್ಬಿಸಿ ಮತಗಳ ಬೇಟೆಯಾಡಿದ್ದ ಬಿಜೆಪಿಗೆ ಇನ್ನೂ ರಕ್ತದ ರುಚಿ ಆರಿಲ್ಲ. ಹಾಗಾಗಿ ಹೆಣಗಳು ಬೀಳುವುದನ್ನೇ ಕಾಯ್ದು ಕೋಮು ಆಯಾಮ ನೀಡಲು ಯತ್ನಿಸುತ್ತಿದೆ. ಆ ಮೂಲಕ ಸಮಾಜದಲ್ಲಿ ಶಾಂತಿ ಕದಡಲು ಯತ್ನಿಸುತ್ತಿದೆ. ಈ ಜೋಡಿ ಕೊಲೆ ವಿಚಾರದಲ್ಲಿಯೂ ಹಾಗೆ ಮಾಡಲು ಯತ್ನಿಸಿತು. ಆದರೆ ನೈಜ ಕಾರಣ ಹೊರಬರುತ್ತಲೇ ಮುಖಭಂಗ ಅನುಭವಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಮ್ಮು-ಕಾಶ್ಮೀರ| ಭದ್ರತಾ ಸಿಬ್ಬಂದಿ ಗುಂಡಿಗೆ ವ್ಯಕ್ತಿ ಸಾವು; ಭುಗಿಲೆದ್ದ ಪ್ರತಿಭಟನೆ

ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯ ಭದೇರ್ವಾದ ಜೈ ಕಣಿವೆ ಪ್ರದೇಶದಲ್ಲಿ ಗುರುವಾರ ತಡರಾತ್ರಿ ನಡೆದ ಗುಂಡಿನ ದಾಳಿಯಲ್ಲಿ 30 ವರ್ಷದ ನಾಗರಿಕನೊಬ್ಬ ಸಾವನ್ನಪ್ಪಿ ಇಬ್ಬರು ಗಾಯಗೊಂಡಿದ್ದು ವ್ಯಾಪಕ ಪ್ರತಿಭಟನೆಗಳಿಗೆ ಕಾರಣವಾಗಿದೆ. ಮೃತರನ್ನು...

ಸಿಜೆಪಿ ಪ್ರತಿಭಟನೆ ಮೇಲೆ ಕೇಂದ್ರದ ಬಲಪ್ರಯೋಗ: ಸೋನಮ್ ವಾಂಗ್‌ಚುಕ್ ಅವರನ್ನು ಬಂಧಿಸಿ ಆಸ್ಪತ್ರೆಗೆ ಕರೆದೊಯ್ದ ಪೊಲೀಸರು

ದೆಹಲಿಯ ಜಂತರ್ ಮಂತರ್‌ನಲ್ಲಿ 21 ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪರಿಸರ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ಅವರನ್ನು ಪ್ರತಿಭಟನಾ ಸ್ಥಳದಿಂದ ಪೊಲೀಸರು ಬಲವಂತವಾಗಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಶನಿವಾರ ಬೆಳಿಗ್ಗೆ ಪೊಲೀಸರು ಪ್ರತಿಭಟನಾ ಸ್ಥಳಕ್ಕೆ ಆಗಮಿಸಿ...

ಪ್ರಶ್ನೆಪತ್ರಿಕೆ ಸೋರಿಕೆಗೆ ಇಡೀ ವ್ಯವಸ್ಥೆಯನ್ನೇ ದೂಷಿಸಿದ ವಿಪಕ್ಷ ನಾಯಕ ರಾಹುಲ್ ಗಾಂಧಿ

ರಾಜಕೀಯ ಪಕ್ಷ ಅಥವಾ ಸಂಘಟನೆಯು ಯಾವುದೇ ಶಿಕ್ಷಣ ಸಂಸ್ಥೆಗಳ ಮೇಲೆ ಹಿಡಿತ ಸಾಧಿಸಬಾರದು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (ಜು.17) ರಂದು ಹೇಳಿದ್ದಾರೆ. ಪ್ರಶ್ನೆಪತ್ರಿಕೆ ಸೋರಿಕೆಯ ವಿಷಯದ ಬಗ್ಗೆ ರಾಜಕೀಯ ಒಮ್ಮತಕ್ಕೆ ಕರೆ...

ಧರ್ಮದ ಕಾರಣಕ್ಕೆ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಗೆ ಹಲವು ಬಾರಿ ಇರಿತ: ಅಮೆರಿಕದ ಮಾಲ್‌ನಲ್ಲಿ ಕೃತ್ಯ

ಅಮೆರಿಕದ ಉತಾಹ್‌ನಲ್ಲಿರುವ ಶಾಪಿಂಗ್ ಮಾಲ್‌ನಲ್ಲಿ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಯೊಬ್ಬನಿಗೆ ಹಲವು ಬಾರಿ ಇರಿತದ ಆರೋಪ ಹೊರಿಸಲಾಗಿದೆ. ಹೈದರಾಬಾದ್‌ ನಗರದ ಟೋಲಿಚೌಕಿಯ ನಿವಾಸಿ ಸೈಯದ್ ಸೊಹೈಲ್ ಉದ್ದೀನ್, ಉತಾಹ್‌ನ ಸಾಲ್ಟ್ ಲೇಕ್ ಕೌಂಟಿಯ...

47 ವರ್ಷಗಳ ನಂತರ ಸಾಮೂಹಿಕ ಅತ್ಯಾಚಾರ ಪ್ರಕರಣದ ಶಿಕ್ಷೆ ಎತ್ತಿಹಿಡಿದ ಅಲಹಾಬಾದ್ ಹೈಕೋರ್ಟ್

1979 ರಲ್ಲಿ ನಡೆದಿದ್ದ ಅಪ್ರಾಪ್ತೆ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ 71 ವರ್ಷದ ವ್ಯಕ್ತಿಯ ಶಿಕ್ಷೆಯನ್ನು ಅಲಹಾಬಾದ್ ಹೈಕೋರ್ಟ್ ಎತ್ತಿಹಿಡಿದಿದೆ. ಆದರೆ, ಕ್ರಿಮಿನಲ್ ಮೇಲ್ಮನವಿಯ 43 ವರ್ಷಗಳ ಸುದೀರ್ಘ ವಿಚಾರಣೆ ಮತ್ತು ಆತನ...

ಪಶ್ಚಿಮ ಬಂಗಾಳ: ಮುರ್ಷಿದಾಬಾದ್‌ನಲ್ಲಿ ಶಾಲಾ ವ್ಯಾನ್‌ಗೆ ರೈಲು ಡಿಕ್ಕಿ: ಇಬ್ಬರು ವಿದ್ಯಾರ್ಥಿಗಳು ಸೇರಿ 3 ಮಂದಿ ಸಾವು

ಮುರ್ಷಿದಾಬಾದ್: ದೇಶದಲ್ಲಿ ರೈಲ್ವೆ ಸುರಕ್ಷತೆಯ ಕುರಿತು ಸರ್ಕಾರಗಳು ದೊಡ್ಡ ದೊಡ್ಡ ಭರವಸೆ ಹಾಗೂ ಯೋಜನೆಗಳನ್ನು ಮಂಡಿಸುತ್ತಿದ್ದರೂ, ತಳಮಟ್ಟದ ವಾಸ್ತವ ಮಾತ್ರ ಇಂದಿಗೂ ಅತ್ಯಂತ ಭೀಕರವಾಗಿದೆ ಎಂಬುದಕ್ಕೆ ಪಶ್ಚಿಮ ಬಂಗಾಳದಲ್ಲಿ ನಡೆದ ಈ ಘೋರ...

ವಿಜಯ್ ನೇತೃತ್ವದ ಟಿವಿಕೆ ಸರ್ಕಾರವನ್ನು ಅಸ್ಥಿರಗೊಳಿಸಲು ‘ಪ್ರಾಜೆಕ್ಟ್ ಮೇಘಾಲಯ’ ಸಂಚು ಆರೋಪ : ಪತ್ರಕರ್ತನ ವಿಚಾರಣೆ

ತಮಿಳುನಾಡಿನ ಆಡಳಿತಾರೂಢ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಶಾಸಕ ಎನ್. ಇಲೈಯರಾಜ ಅವರಿಗೆ ಹಣದ ಆಮಿಷವೊಡ್ಡಲು ಯತ್ನಿಸಿದ ಆರೋಪ ಪ್ರಕರಣ ಸಂಬಂಧ ಚೆನ್ನೈ ಪೊಲೀಸರು 'ಪುದಿಯಾ ತಲೈಮುರೈ' ವಾಹಿನಿಯ ಪತ್ರಕರ್ತ ವಿಜಯನ್...

ಜಂತರ್ ಮಂತರ್ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಕೇಜ್ರಿವಾಲ್ ಭೇಟಿ

ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಜಂತರ್ ಮಂತರ್‌ನಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ ಶಿಕ್ಷಣ ತಜ್ಞ ಹಾಗೂ ಪರಿಸರ...

E20 ಪೆಟ್ರೋಲ್ ಪ್ರಕರಣ : ‘ಗ್ರ್ಯಾಂಡ್ ವಿಟಾರಾ’ ಕಾರು ಬದಲಾಯಿಸಿ ಕೊಡಲು ಮಾರುತಿ ಸುಝುಕಿಗೆ ಗ್ರಾಹಕ ನ್ಯಾಯಾಲಯ ಆದೇಶ

ಛತ್ತೀಸ್‌ಗಢದ ರಾಯ್‌ಪುರದ ಜಿಲ್ಲಾ ಗ್ರಾಹಕ ವಿವಾದಗಳ ಪರಿಹಾರ ಆಯೋಗವು (ಡಿಸಿಡಿಆರ್‌ಸಿ), E20 ಇಂಧನ (ಪೆಟ್ರೋಲ್) ಬಳಕೆಯಿಂದಾಗಿ ಕಾರು ಕೆಟ್ಟುಹೋಗಿದೆ ಎಂದು ಆರೋಪಿಸಿದ ವ್ಯಕ್ತಿಗೆ ಹೊಸ 'ಗ್ರಾಂಡ್ ವಿಟಾರಾ' ಕಾರನ್ನು ನೀಡುವಂತೆ ಕಾರು ತಯಾರಿಕಾ...

ಸಿಜೆಪಿ ಶಾಂತಿಯುತ ಪ್ರತಿಭಟನೆಗೆ ನಿರಂತರ ಪೊಲೀಸ್ ಕಣ್ಗಾವಲು ಪ್ರಶ್ನಿಸಿ ದೆಹಲಿ ಹೈಕೋರ್ಟ್‌ಗೆ ಅರ್ಜಿ

ರಾಷ್ಟ್ರ ರಾಜಧಾನಿ ದೆಹಲಿಯ ಜಂತರ್ ಮಂತರ್‌ನಲ್ಲಿ ಜಿರಳೆ ಜನತಾ ಪಕ್ಷ (ಸಿಜೆಪಿ) ಆಯೋಜಿಸಿರುವ ಶಾಂತಿಯುತ ಧರಣಿ ಮತ್ತು ಉಪವಾಸ ಸತ್ಯಾಗ್ರಹದಲ್ಲಿ ಭಾಗವಹಿಸುವ ನಾಗರಿಕರ ಮೇಲೆ ದೆಹಲಿ ಪೊಲೀಸರು ನಿರಂತರ ಮತ್ತು ವ್ಯಾಪಕ ಕಣ್ಗಾವಲು...