Homeಕರ್ನಾಟಕಬೆಂಗಳೂರಿನ ಜೋಡಿ ಕೊಲೆಗೆ ವ್ಯವಹಾರ ವೈಷಮ್ಯವೇ ಕಾರಣ; ವಿಫಲವಾದ ಬಿಜೆಪಿಯ ಹೆಣರಾಜಕಾರಣ

ಬೆಂಗಳೂರಿನ ಜೋಡಿ ಕೊಲೆಗೆ ವ್ಯವಹಾರ ವೈಷಮ್ಯವೇ ಕಾರಣ; ವಿಫಲವಾದ ಬಿಜೆಪಿಯ ಹೆಣರಾಜಕಾರಣ

- Advertisement -
- Advertisement -

ಜುಲೈ 11ರ ಮಂಗಳವಾರ ಮಧ್ಯಾಹ್ನ ಬೆಂಗಳೂರಿನ ಅಮೃತಹಳ್ಳಿಯಲ್ಲಿರುವ ಏರೋನಿಕ್ಸ್ ಮೀಡಿಯಾ ಪ್ರೈವೇಟ್ ಲಿಮಿಟೆಡ್ (Aironics Media Pvt Ltd) ಕಂಪನಿಗೆ ನುಗ್ಗಿದ ಮೂವರು ದುಷ್ಕರ್ಮಿಗಳು ಆ ಕಂಪನಿಯ ಮ್ಯಾನೇಜಿಂಗ್ ಡೈರೆಕ್ಟರ್ ಫಣೀಂದ್ರ ಸುಬ್ರಮಣ್ಯ ಹಾಗೂ ಸಿಇಒ ವಿನು ಕುಮಾರ್ ಇಬ್ಬರಿಗೂ ಇರಿದು ಕೊಂದು ಪರಾರಿಯಾಗಿದ್ದಾರೆ. ಈ ಜೋಡಿ ಕೊಲೆಯನ್ನು ಕೋಮುವಾದೀಕರಿಸಿದ ಬಿಜೆಪಿ ಮುಖಂಡರು ಮತ್ತು ಹಿಂದುತ್ವವಾದಿಗಳು, ಹಿಂದೂ ಅರ್ಚಕ, ಹಿಂದೂ ಮುಖಂಡ ಫಣೀಂದ್ರ ಸುಬ್ರಮಣ್ಯರವರ ಕೊಲೆಯಾಗಿದೆ ಎಂದು ಪ್ರಚಾರ ಮಾಡಿದರು. ಇದೇ ಸಂದರ್ಭದಲ್ಲಿ ಬೆಳಗಾವಿಯ ಜೈನ ಮುನಿ ಮತ್ತು ಟಿ.ನರಸೀಪುರದ ಯುವ ಬ್ರಿಗೇಡ್ ಕಾರ್ಯಕರ್ತನ ಕೊಲೆ ಸಂಭವಿಸಿದ್ದರಿಂದ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಹಿಂದೂಗಳ ಕೊಲೆಯಾಗುತ್ತಿದೆ ಎಂಬ ಕೋಮು ನಿರೂಪಣೆಯನ್ನು ಹರಿಯಬಿಟ್ಟರು.

ಬಿಜೆಪಿ ರಾಜ್ಯಸಭಾ ಸಂಸದ ರಾಜೀವ್ ಚಂದ್ರಶೇಖರ್ ಸೇರಿದಂತೆ ಹಲವು ಬಿಜೆಪಿ ನಾಯಕರು ಹಿಂದೂ ಮುಖಂಡನನ್ನು ಅನ್ಯಧರ್ಮದವರು ಕೊಂದಿದ್ದಾರೆ ಎಂದು ಆರೋಪಿಸಿದರು. ಆದರೆ ಪೊಲೀಸರು ಶೀಘ್ರವಾಗಿ ಕೊಲೆಗೆ ಸಂಬಂಧಿಸಿದಂತೆ ಸಂತೋಷ್, ಶಬರೀಶ್ (ಫೆಲಿಕ್ಸ್) ಮತ್ತು ವಿನಯ್ ರೆಡ್ಡಿ ಎಂಬ ಮೂವರು ಆರೋಪಿಗಳನ್ನು ಬಂಧಿಸಿ ವಿಚಾರಣೆ ನಡೆಸಿದಾಗ ಅಸಲೀ ಸತ್ಯ ಬಹಿರಂಗವಾಗಿದೆ. ಅದರ ಪ್ರಕಾರ ವೃತ್ತಿ ಮತ್ಸರವೇ ಜೋಡಿ ಕೊಲೆಗೆ ಪ್ರಧಾನ ಕಾರಣ ಹೊರತು ಯಾವುದೇ ಕೋಮು ಸಂಘರ್ಷವಲ್ಲ. ಜೊತೆಗೆ ಕೊಲೆಯಾದವರು ಮತ್ತು ಕೊಲೆ ಆರೋಪಿಗಳೆಲ್ಲರೂ ಒಂದೇ ಧರ್ಮದವರಾಗಿದ್ದಾರೆ.

ಕೊಲೆಯಾದ ಫಣೀಂದ್ರ ಮತ್ತು ವಿನುಕುಮಾರ್ ಜೊತೆಗೆ ಆರೋಪಿಗಳಾದ ಸಂತೋಷ್, ಶಬರೀಶ್ ಈ ಹಿಂದೆ ಜಿ-ನೆಟ್ ಎಂಬ ಇಂಟರ್‌ನೆಟ್ ಸೇವೆ ಒದಗಿಸುವ ಕಂಪನಿಯಲ್ಲಿ ಜೊತೆಯಾಗಿ ಕೆಲಸ ಮಾಡುತ್ತಿದ್ದರು. ಆದರೆ ಆ ಕಂಪನಿಯ ಮಾಲೀಕರಾದ ಅರುಣ್ ಕುಮಾರ್‌ರೊಂದಿಗೆ ಮನಸ್ತಾಪ ಬಂದ ಕಾರಣ ಕೆಲಸ ಬಿಟ್ಟ ಫಣೀಂದ್ರ ಮತ್ತು ವಿನುಕುಮಾರ್ 2022ರ ನವೆಂಬರ್‌ನಲ್ಲಿ ಏರೋನಿಕ್ಸ್ ಮೀಡಿಯಾ ಪ್ರೈವೇಟ್ ಲಿಮಿಟೆಡ್ ಎಂಬ ಸ್ವಂತ ಕಂಪನಿ ಆರಂಭಿಸಿದ್ದರು. ಆರಂಭದಿಂದಲೇ ಕಂಪನಿಯು ಸಾಕಷ್ಟು ಜನಪ್ರಿಯತೆ ಪಡೆದದ್ದರಿಂದ ಹಲವಾರು ಗ್ರಾಹಕರು ಜಿ-ನೆಟ್ ಕಂಪನಿ ಬಿಟ್ಟು ಏರೋನಿಕ್ಸ್‌ನಿಂದ ಸೇವೆ ಪಡೆದುಕೊಳ್ಳಲು ಆರಂಭಿಸಿದ್ದರು. ಅಷ್ಟು ಮಾತ್ರವಲ್ಲದೇ ಹಲವಾರು ಉದ್ಯೋಗಿಗಳು ಸಹ ಜಿ-ನೆಟ್ ತೊರೆದು ಏರೋನಿಕ್ಸ್ ಸೇರಿದ್ದರು. ಹಾಗಾಗಿ ಎರಡು ಕಂಪನಿಗಳ ನಡುವೆ ತುರುಸಿನ ಪೈಪೋಟಿ ಏರ್ಪಟ್ಟಿತ್ತು. ಇದರಿಂದ ಹತಾಶಗೊಂಡ ಜಿ-ನೆಟ್ ಮಾಲೀಕ ಅರುಣ್ ಕುಮಾರ್ ಫೆಲಿಕ್ಸ್ ಮತ್ತು ಇತರರಿಗೆ ಸುಪಾರಿ ನೀಡಿ ಫಣೀಂದ್ರ ಮತ್ತು ವಿನುಕುಮಾರ್ ಕೊಲೆಗೆ ಕಾರಣರಾಗಿದ್ದಾರೆ ಎಂದು ಆರೋಪಿಸಿ ಪೊಲೀಸರು ಅರುಣ್ ಕುಮಾರ್‌ರನ್ನು ವಶಕ್ಕೆ ಪಡೆದು ತನಿಖೆ ನಡೆಸುತ್ತಿದ್ದಾರೆ. ಆರೋಪಿಗಳ ಮೇಲೆ ಐಪಿಸಿ ಸೆಕ್ಷನ್ 302 (ಕೊಲೆ), 120ಬಿ (ಕ್ರಿಮಿನಲ್ ಪಿತೂರಿ) ಮತ್ತು 34 (ಸಾಮಾನ್ಯ ಉದ್ದೇಶ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಫಣೀಂದ್ರ ಸುಬ್ರಹ್ಮಣ್ಯಂ ಅವರು ಹಿಂದುತ್ವ ಸಂಘಟನೆಗಳೊಂದಿಗೆ ಶಾಮೀಲಾಗಿದ್ದರೂ ಕೂಡ ಅನ್ಯ ಧರ್ಮದ ಯಾರೊಂದಿಗೂ ಅವರಿಗೆ ವೈರತ್ವವಿರಲಿಲ್ಲ. ಅಲ್ಲದೆ, ಜಿ-ನೆಟ್ ಕಂಪನಿ ಜೊತೆಗಿನ ವ್ಯವಹಾರ ವೈಷಮ್ಯವೇ ಅವರ ಹತ್ಯೆಗೆ ಕಾರಣ ಎಂದು ದೂರುದಾರರಾದ ಅವರ ಸಹೋದ್ಯೋಗಿ ಶಂಕರ್ ನಾರಾಯಣ್ ತಿಳಿಸಿದ್ದಾರೆ; ಡಿಸಿಪಿ (ಈಶಾನ್ಯ) ಲಕ್ಷ್ಮಿ ಪ್ರಸಾದ್ ಆರಂಭಿಕ ತನಿಖೆಯಲ್ಲಿ ಯಾವುದೇ ಕೋಮು ಆಯಾಮ ಕಂಡುಬಂದಿಲ್ಲ ಎಂದು ತಿಳಿಸಿದ್ದಾರೆ. ಇನ್ನು ಫಣೀಂದ್ರರವರು ಪೂಜೆ ಮಾಡುತ್ತಿರುವ ಫೋಟೊ, ಅವರ ಕಚೇರಿ ಉದ್ಘಾಟನೆ ಸಮಯದಲ್ಲಿ ತೆಗೆಸಿಕೊಂಡಿರುವುದು; ಅದನ್ನು ರೀಲ್ ಒಂದರಲ್ಲಿ ಬಳಸಲಾಗಿದ್ದು ಅದನ್ನೇ ಮುಂದುಮಾಡಿ ಅವರು ಹಿಂದೂ ಅರ್ಚಕ ಎಂದು ತಪ್ಪಾಗಿ ಬಿಂಬಿಸಲಾಗಿದೆ

ಫಣೀಂದ್ರರವರ ವ್ಯವಹಾರ ಪಾಲುದಾರರಾದ ಕನ್ನಡಪರ ಹೋರಾಟಗಾರರಾದ ಬಿ.ಹರೀಶ್ ಕುಮಾರ್‌ರವರು ಮಾತನಾಡಿ, “ಫಣೀಂದ್ರರವರು ಒಳ್ಳೆಯ ಸ್ವಭಾವದವರು. ಅವರು ಹಿಂದುತ್ವವನ್ನು ಒಪ್ಪಿಕೊಂಡರೂ ಸಹ ಅನ್ಯಧರ್ಮದವರನ್ನು ದ್ವೇಷಿಸುವವರಲ್ಲ. ಕೇವಲ 4 ತಿಂಗಳ ಹಿಂದೆ ಹೊಸ ಇಂಟರ್‌ನೆಟ್ ಸೇವೆ ನೀಡುವ ಕಂಪನಿ ಆರಂಭಿಸಿದ್ದೇವೆ. ಎಲ್ಲವೂ ಚೆನ್ನಾಗಿ ನಡೆದುಕೊಂಡು ಹೋಗುತ್ತಿರುವಾಗ ಅವರ ಏಳಿಗೆ ಸಹಿಸದೇ ಕೊಲೆಗೈಯ್ಯಲಾಗಿದೆ” ಎಂದರು.

ಠುಸ್ ಆದ ಬಿಜೆಪಿಯ ಹೆಣದ ರಾಜಕೀಯ

4 ವರ್ಷಗಳ ಕಾಲ ಅಧಿಕಾರದಲ್ಲಿದ್ದ ಬಿಜೆಪಿಯು ಜನಪರ ಆಡಳಿತ ನೀಡಲು, ಅಭಿವೃದ್ದಿ ಮಾಡಲು ವಿಫಲವಾಗಿ ಸೋತು ಸುಣ್ಣವಾಗಿದೆ. ಆದರೂ ತನ್ನ ಹೆಣ ರಾಜಕಾರಣವನ್ನು ಮಾತ್ರ ಕೈಬಿಟ್ಟಿಲ್ಲ. ರಾಜ್ಯದಲ್ಲಿ ಯಾರಾದರೂ ಸಾವನಪ್ಪಿದ್ದರೆ ಹಿಂದೂ ಮುಖಂಡನ ಕೊಲೆ ಎಂದು ಗಲಭೆ ಎಬ್ಬಿಸಲು ಬಿಜೆಪಿ ಯತ್ನಿಸುತ್ತಿದೆ. ಈ ಹಿಂದೆ ಹೊನ್ನಾವರದಲ್ಲಿ ಪರೇಶ್ ಮೇಸ್ತಾ ಎಂಬ ಯುವಕ ಸಾವನಪ್ಪಿದ ಘಟನೆಯನ್ನು ಕೋಮುವಾದೀಕರಿಸಿ, ಗಲಭೆಗಳನ್ನು ಎಬ್ಬಿಸಿ ಮತಗಳ ಬೇಟೆಯಾಡಿದ್ದ ಬಿಜೆಪಿಗೆ ಇನ್ನೂ ರಕ್ತದ ರುಚಿ ಆರಿಲ್ಲ. ಹಾಗಾಗಿ ಹೆಣಗಳು ಬೀಳುವುದನ್ನೇ ಕಾಯ್ದು ಕೋಮು ಆಯಾಮ ನೀಡಲು ಯತ್ನಿಸುತ್ತಿದೆ. ಆ ಮೂಲಕ ಸಮಾಜದಲ್ಲಿ ಶಾಂತಿ ಕದಡಲು ಯತ್ನಿಸುತ್ತಿದೆ. ಈ ಜೋಡಿ ಕೊಲೆ ವಿಚಾರದಲ್ಲಿಯೂ ಹಾಗೆ ಮಾಡಲು ಯತ್ನಿಸಿತು. ಆದರೆ ನೈಜ ಕಾರಣ ಹೊರಬರುತ್ತಲೇ ಮುಖಭಂಗ ಅನುಭವಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಆರ್‌ಎಸ್‌ಎಸ್‌ ನೋಂದಣಿಯಾದರೆ ಒಳ್ಳೆಯದು’: ರಾಮಮಂದಿರ ಹಗರಣ ವಿಚಾರದಲ್ಲಿ ‘ಸತ್ಯ ಹೊರಬರಬೇಕು’: ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ

‘ರಾಷ್ಟ್ರೀಯ ಸ್ವಯಂಸೇವಕ ಸಂಘವನ್ನು (ಆರ್‌ಎಸ್‌ಎಸ್‌) ನೋಂದಣಿ ಮಾಡಿಸಿದರೆ ಯಾರಿಗೂ ಆರೋಪ ಮಾಡಲು ಅವಕಾಶ ಇರುವುದಿಲ್ಲ’ ಎಂದು ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಶುಕ್ರವಾರ ಹೇಳಿದ್ದಾರೆ. ಆರ್‌ಎಸ್‌ಎಸ್ ನೋಂದಣಿ ಕುರಿತು ಕರ್ನಾಟಕದ ಗೃಹ ಸಚಿವ...

ತುಮಕೂರಿನಲ್ಲಿ ಮಲಹೊರುವ ಪದ್ದತಿ ಜೀವಂತ; ದಲಿತ ಕಾರ್ಮಿಕರನ್ನು ಶೌಚಗುಂಡಿ ಸ್ವಚ್ಛತೆಗೆ ನಿಯೋಜಿಸಿದ ಕೆಇಬಿ ಇಂಜಿನಿಯರ್ಸ್ ಸಂಘ

ದಶಕಗಳ ಹಿಂದೆಯೇ ತಲೆ ಮೇಲೆ ಮಲಹೊರುವ ಅನಿಷ್ಠ ಪದ್ಧತಿಯನ್ನು ದೇಶದಲ್ಲಿ ನಿಷೇಧಿಸಲಾಗಿದೆ. ಕಾನೂನಿನ ಪ್ರಕಾರ ಈ ಅಮಾನವೀಯ ಪದ್ಧತಿ ನಿಷೇದಗೊಂಡಿದ್ದರು ರಾಜ್ಯದಲ್ಲಿ ಮಾತ್ರ ಇನ್ನೂ ಜೀವಂತವಾಗಿರುವುದು ತುಮಕೂರಿನಲ್ಲಿ ಮತ್ತೊಮ್ಮೆ ಬಹಿರಂಗವಾಗಿದೆ. ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್...

ವರ್ಷ ಪೂರೈಸಿದ ಎಸ್‌ಐಆರ್‌ ಪ್ರಕ್ರಿಯೆ; ಸುಮಾರು 6 ಕೋಟಿ ಹೆಸರುಗಳು ಡಿಲೀಟ್

ಸುಮಾರು ಆರು ಕೋಟಿ ಮತದಾರರನ್ನು ಅಳಿಸಲು ಕಾರಣವಾದ, ವಿರೋಧ ಪಕ್ಷಗಳು ಮತ್ತು ಚುನಾವಣಾ ಆಯೋಗದ ನಡುವೆ ಘರ್ಷಣೆಗೆ ಕಾರಣವಾದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು 19 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ...

ರಾಮ ಮಂದಿರ ಹಗರಣ | ಶಿವಸೇನೆ ಕೊಟ್ಟ 1 ಕೋಟಿ ರೂ.ಗೆ ರಸೀದಿ ಸಿಕ್ಕಿಲ್ಲ : ಸಂಜಯ್ ರಾವತ್

ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರಕ್ಕೆ ನೀಡಿದ 1 ಕೋಟಿ ರೂಪಾಯಿ ದೇಣಿಗೆಗೆ ತಮ್ಮ ಪಕ್ಷ ಶಿವಸೇನೆ (ಯುಬಿಟಿ) ರಸೀದಿಯನ್ನು ಸ್ವೀಕರಿಸಿಲ್ಲ ಎಂದು ಸಂಜಯ್ ರಾವತ್ ಶುಕ್ರವಾರ (ಜೂ.26) ಹೇಳಿದ್ದಾರೆ. ರಾಮ ಮಂದಿರದ ದೇಣಿಗೆ...

ರಾಮ ಮಂದಿರ ಹಗರಣ: ಶ್ರೀರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಮತ್ತು ಟ್ರಸ್ಟಿ ಅನಿಲ್ ಮಿಶ್ರಾ ರಾಜೀನಾಮೆ

ಶ್ರೀ ರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್, ರಾಮ ಮಂದಿರ ದೇಣಿಗೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ನೈತಿಕ ಹೊಣೆ ಹೊತ್ತು, ಸದಸ್ಯ ಟ್ರಸ್ಟಿ ಅನಿಲ್ ಮಿಶ್ರಾ ಅವರೊಂದಿಗೆ ಶುಕ್ರವಾರ ರಾಜೀನಾಮೆ...

‘ಕೂಡಿ ಹಾಕಿ ಥಳಿಸುತ್ತಿದ್ದರು, ತಪ್ಪಿಸಿಕೊಳ್ಳದಂತೆ ನಾಯಿ ಬಿಟ್ಟಿದ್ದರು’: ಭೀಕರ ಶೋಷಣೆಯಿಂದ 12 ಜೀತ ಕಾರ್ಮಿಕರ ರಕ್ಷಣೆ

ಮೂರು ತಿಂಗಳ ಕಾಲ 68 ವರ್ಷದ ಮೆಹರ್ಬಾನ್ ಶಾ ಅನಿಶ್ಚಿತತೆಯಲ್ಲಿ ಜೀವನ ನಡೆಸುತ್ತಿದ್ದರು. ದುಡಿಯಲು ಹೋಗಿದ್ದ ಅವರ ಕಿರಿಯ ಮಗ ದಿಲ್ಶಾದ್ ಮೊಹಮ್ಮದ್ ಜೀವಂತವಾಗಿದ್ದಾನಾ?, ಇಲ್ಲಾ ಮರಣ ಹೊಂದಿದ್ದಾನಾ? ಎಂಬುವುದು ಅವರಿಗೆ ಗೊತ್ತಿರಲಿಲ್ಲ. 24...

ಅಯ್ಯೋಧ್ಯೆ ರಾಮ ಮಂದಿರ ಹಗರಣ: ಎಂಟು ಜನರ ವಿರುದ್ಧ ಎಫ್‌ಐಆರ್; ಪ್ರಭಾವಿ ವ್ಯಕ್ತಿಗಳನ್ನು ರಕ್ಷಿಸಲಾಗಿದೆ ಎಂದು ಪ್ರತಿಪಕ್ಷಗಳ ಆರೋಪ 

ಅಯೋಧ್ಯೆ: ವಿಶ್ವದಾದ್ಯಂತ ಕೋಟ್ಯಂತರ ಭಕ್ತರ ಆರಾಧ್ಯ ದೈವವಾಗಿರುವ ಅಯೋಧ್ಯೆಯ ಶ್ರೀ ರಾಮ ಮಂದಿರದಲ್ಲಿ ಭಕ್ತರು ಸಮರ್ಪಿಸಿದ ನಗದು, ಚಿನ್ನಾಭರಣ ಸೇರಿದಂತೆ ಇತರೆ ಬೆಲೆಬಾಳುವ ಕಾಣಿಕೆಗಳ ಕಳ್ಳತನ ಮತ್ತು ಹಣ ದುರುಪಯೋಗದ ಗಂಭೀರ ಹಗರಣವೊಂದು...

ಪೋಕ್ಸೋ ಕೇಸ್ : ವಚನಾನಂದ ಸ್ವಾಮಿಯ ನಿರೀಕ್ಷಣಾ ಜಾಮೀನು ರದ್ದು

ಪೋಕ್ಸೋ ಪ್ರಕರಣದಲ್ಲಿ ವಚನಾನಂದ ಸ್ವಾಮಿಗೆ ಸೆಷನ್ಸ್ ಕೋರ್ಟ್ ನೀಡಿದ್ದ ನಿರೀಕ್ಷಣಾ ಜಾಮೀನನ್ನು ಹೈಕೋರ್ಟ್ ಗುರುವಾರ (ಜೂನ್ 25) ರದ್ದುಗೊಳಿಸಿದೆ. ಅಲ್ಲದೆ, ಸೆಷನ್ಸ್ ಕೋರ್ಟ್ ಜಾಮೀನು ನೀಡಿದ ರೀತಿಯ ಬಗ್ಗೆ ತೀವ್ರ ಕಳವಳ ಮತ್ತು...

ಎಸ್‌ಐಆರ್‌ಗೂ ಸರ್ಕಾರಿ ಸೌಲಭ್ಯಕ್ಕೂ ಲಿಂಕ್; ಅರ್ಜಿ ವಿಚಾರಣೆಗೆ ಸುಪ್ರೀಂ ನಕಾರ : ನಿಜವಾದ ಆತಂಕ

ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳದ ಹೊಸ ಸರ್ಕಾರ ನೀಡಿರುವ ಆದೇಶಗಳ ವಿರುದ್ಧ ಸಲ್ಲಿಕೆಯಾಗಿದ್ದ ಅರ್ಜಿಯೊಂದರ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ 23 ಜೂನ್ 2026ರಂದು ನಿರಾಕರಿಸಿದೆ. ವಿಧಾನಸಭೆ ಚುನಾವಣೆಗೆ ಮುನ್ನ ನಡೆದ ವಿಶೇಷ...

ಒಂಬತ್ತನೇ ತರಗತಿ ಪಠ್ಯಪುಸ್ತಕದಲ್ಲಿ ತುರ್ತು ಪರಿಸ್ಥಿತಿ ಅಧ್ಯಾಯ ಸೇರಿಸಿದ ಎನ್‌ಸಿಇಆರ್‌ಟಿ

ಭಾರತದಲ್ಲಿ ತುರ್ತು ಪರಿಸ್ಥಿತಿ ಘೋಷಿಸಲ್ಪಟ್ಟ ಸುಮಾರು ಐದು ದಶಕಗಳ ನಂತರ, ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಈ ವಿಷಯವನ್ನು 9 ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ಮೊದಲ...