Homeಕರ್ನಾಟಕಬೆಂಗಳೂರಿನ ಜೋಡಿ ಕೊಲೆಗೆ ವ್ಯವಹಾರ ವೈಷಮ್ಯವೇ ಕಾರಣ; ವಿಫಲವಾದ ಬಿಜೆಪಿಯ ಹೆಣರಾಜಕಾರಣ

ಬೆಂಗಳೂರಿನ ಜೋಡಿ ಕೊಲೆಗೆ ವ್ಯವಹಾರ ವೈಷಮ್ಯವೇ ಕಾರಣ; ವಿಫಲವಾದ ಬಿಜೆಪಿಯ ಹೆಣರಾಜಕಾರಣ

- Advertisement -
- Advertisement -

ಜುಲೈ 11ರ ಮಂಗಳವಾರ ಮಧ್ಯಾಹ್ನ ಬೆಂಗಳೂರಿನ ಅಮೃತಹಳ್ಳಿಯಲ್ಲಿರುವ ಏರೋನಿಕ್ಸ್ ಮೀಡಿಯಾ ಪ್ರೈವೇಟ್ ಲಿಮಿಟೆಡ್ (Aironics Media Pvt Ltd) ಕಂಪನಿಗೆ ನುಗ್ಗಿದ ಮೂವರು ದುಷ್ಕರ್ಮಿಗಳು ಆ ಕಂಪನಿಯ ಮ್ಯಾನೇಜಿಂಗ್ ಡೈರೆಕ್ಟರ್ ಫಣೀಂದ್ರ ಸುಬ್ರಮಣ್ಯ ಹಾಗೂ ಸಿಇಒ ವಿನು ಕುಮಾರ್ ಇಬ್ಬರಿಗೂ ಇರಿದು ಕೊಂದು ಪರಾರಿಯಾಗಿದ್ದಾರೆ. ಈ ಜೋಡಿ ಕೊಲೆಯನ್ನು ಕೋಮುವಾದೀಕರಿಸಿದ ಬಿಜೆಪಿ ಮುಖಂಡರು ಮತ್ತು ಹಿಂದುತ್ವವಾದಿಗಳು, ಹಿಂದೂ ಅರ್ಚಕ, ಹಿಂದೂ ಮುಖಂಡ ಫಣೀಂದ್ರ ಸುಬ್ರಮಣ್ಯರವರ ಕೊಲೆಯಾಗಿದೆ ಎಂದು ಪ್ರಚಾರ ಮಾಡಿದರು. ಇದೇ ಸಂದರ್ಭದಲ್ಲಿ ಬೆಳಗಾವಿಯ ಜೈನ ಮುನಿ ಮತ್ತು ಟಿ.ನರಸೀಪುರದ ಯುವ ಬ್ರಿಗೇಡ್ ಕಾರ್ಯಕರ್ತನ ಕೊಲೆ ಸಂಭವಿಸಿದ್ದರಿಂದ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಹಿಂದೂಗಳ ಕೊಲೆಯಾಗುತ್ತಿದೆ ಎಂಬ ಕೋಮು ನಿರೂಪಣೆಯನ್ನು ಹರಿಯಬಿಟ್ಟರು.

ಬಿಜೆಪಿ ರಾಜ್ಯಸಭಾ ಸಂಸದ ರಾಜೀವ್ ಚಂದ್ರಶೇಖರ್ ಸೇರಿದಂತೆ ಹಲವು ಬಿಜೆಪಿ ನಾಯಕರು ಹಿಂದೂ ಮುಖಂಡನನ್ನು ಅನ್ಯಧರ್ಮದವರು ಕೊಂದಿದ್ದಾರೆ ಎಂದು ಆರೋಪಿಸಿದರು. ಆದರೆ ಪೊಲೀಸರು ಶೀಘ್ರವಾಗಿ ಕೊಲೆಗೆ ಸಂಬಂಧಿಸಿದಂತೆ ಸಂತೋಷ್, ಶಬರೀಶ್ (ಫೆಲಿಕ್ಸ್) ಮತ್ತು ವಿನಯ್ ರೆಡ್ಡಿ ಎಂಬ ಮೂವರು ಆರೋಪಿಗಳನ್ನು ಬಂಧಿಸಿ ವಿಚಾರಣೆ ನಡೆಸಿದಾಗ ಅಸಲೀ ಸತ್ಯ ಬಹಿರಂಗವಾಗಿದೆ. ಅದರ ಪ್ರಕಾರ ವೃತ್ತಿ ಮತ್ಸರವೇ ಜೋಡಿ ಕೊಲೆಗೆ ಪ್ರಧಾನ ಕಾರಣ ಹೊರತು ಯಾವುದೇ ಕೋಮು ಸಂಘರ್ಷವಲ್ಲ. ಜೊತೆಗೆ ಕೊಲೆಯಾದವರು ಮತ್ತು ಕೊಲೆ ಆರೋಪಿಗಳೆಲ್ಲರೂ ಒಂದೇ ಧರ್ಮದವರಾಗಿದ್ದಾರೆ.

ಕೊಲೆಯಾದ ಫಣೀಂದ್ರ ಮತ್ತು ವಿನುಕುಮಾರ್ ಜೊತೆಗೆ ಆರೋಪಿಗಳಾದ ಸಂತೋಷ್, ಶಬರೀಶ್ ಈ ಹಿಂದೆ ಜಿ-ನೆಟ್ ಎಂಬ ಇಂಟರ್‌ನೆಟ್ ಸೇವೆ ಒದಗಿಸುವ ಕಂಪನಿಯಲ್ಲಿ ಜೊತೆಯಾಗಿ ಕೆಲಸ ಮಾಡುತ್ತಿದ್ದರು. ಆದರೆ ಆ ಕಂಪನಿಯ ಮಾಲೀಕರಾದ ಅರುಣ್ ಕುಮಾರ್‌ರೊಂದಿಗೆ ಮನಸ್ತಾಪ ಬಂದ ಕಾರಣ ಕೆಲಸ ಬಿಟ್ಟ ಫಣೀಂದ್ರ ಮತ್ತು ವಿನುಕುಮಾರ್ 2022ರ ನವೆಂಬರ್‌ನಲ್ಲಿ ಏರೋನಿಕ್ಸ್ ಮೀಡಿಯಾ ಪ್ರೈವೇಟ್ ಲಿಮಿಟೆಡ್ ಎಂಬ ಸ್ವಂತ ಕಂಪನಿ ಆರಂಭಿಸಿದ್ದರು. ಆರಂಭದಿಂದಲೇ ಕಂಪನಿಯು ಸಾಕಷ್ಟು ಜನಪ್ರಿಯತೆ ಪಡೆದದ್ದರಿಂದ ಹಲವಾರು ಗ್ರಾಹಕರು ಜಿ-ನೆಟ್ ಕಂಪನಿ ಬಿಟ್ಟು ಏರೋನಿಕ್ಸ್‌ನಿಂದ ಸೇವೆ ಪಡೆದುಕೊಳ್ಳಲು ಆರಂಭಿಸಿದ್ದರು. ಅಷ್ಟು ಮಾತ್ರವಲ್ಲದೇ ಹಲವಾರು ಉದ್ಯೋಗಿಗಳು ಸಹ ಜಿ-ನೆಟ್ ತೊರೆದು ಏರೋನಿಕ್ಸ್ ಸೇರಿದ್ದರು. ಹಾಗಾಗಿ ಎರಡು ಕಂಪನಿಗಳ ನಡುವೆ ತುರುಸಿನ ಪೈಪೋಟಿ ಏರ್ಪಟ್ಟಿತ್ತು. ಇದರಿಂದ ಹತಾಶಗೊಂಡ ಜಿ-ನೆಟ್ ಮಾಲೀಕ ಅರುಣ್ ಕುಮಾರ್ ಫೆಲಿಕ್ಸ್ ಮತ್ತು ಇತರರಿಗೆ ಸುಪಾರಿ ನೀಡಿ ಫಣೀಂದ್ರ ಮತ್ತು ವಿನುಕುಮಾರ್ ಕೊಲೆಗೆ ಕಾರಣರಾಗಿದ್ದಾರೆ ಎಂದು ಆರೋಪಿಸಿ ಪೊಲೀಸರು ಅರುಣ್ ಕುಮಾರ್‌ರನ್ನು ವಶಕ್ಕೆ ಪಡೆದು ತನಿಖೆ ನಡೆಸುತ್ತಿದ್ದಾರೆ. ಆರೋಪಿಗಳ ಮೇಲೆ ಐಪಿಸಿ ಸೆಕ್ಷನ್ 302 (ಕೊಲೆ), 120ಬಿ (ಕ್ರಿಮಿನಲ್ ಪಿತೂರಿ) ಮತ್ತು 34 (ಸಾಮಾನ್ಯ ಉದ್ದೇಶ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಫಣೀಂದ್ರ ಸುಬ್ರಹ್ಮಣ್ಯಂ ಅವರು ಹಿಂದುತ್ವ ಸಂಘಟನೆಗಳೊಂದಿಗೆ ಶಾಮೀಲಾಗಿದ್ದರೂ ಕೂಡ ಅನ್ಯ ಧರ್ಮದ ಯಾರೊಂದಿಗೂ ಅವರಿಗೆ ವೈರತ್ವವಿರಲಿಲ್ಲ. ಅಲ್ಲದೆ, ಜಿ-ನೆಟ್ ಕಂಪನಿ ಜೊತೆಗಿನ ವ್ಯವಹಾರ ವೈಷಮ್ಯವೇ ಅವರ ಹತ್ಯೆಗೆ ಕಾರಣ ಎಂದು ದೂರುದಾರರಾದ ಅವರ ಸಹೋದ್ಯೋಗಿ ಶಂಕರ್ ನಾರಾಯಣ್ ತಿಳಿಸಿದ್ದಾರೆ; ಡಿಸಿಪಿ (ಈಶಾನ್ಯ) ಲಕ್ಷ್ಮಿ ಪ್ರಸಾದ್ ಆರಂಭಿಕ ತನಿಖೆಯಲ್ಲಿ ಯಾವುದೇ ಕೋಮು ಆಯಾಮ ಕಂಡುಬಂದಿಲ್ಲ ಎಂದು ತಿಳಿಸಿದ್ದಾರೆ. ಇನ್ನು ಫಣೀಂದ್ರರವರು ಪೂಜೆ ಮಾಡುತ್ತಿರುವ ಫೋಟೊ, ಅವರ ಕಚೇರಿ ಉದ್ಘಾಟನೆ ಸಮಯದಲ್ಲಿ ತೆಗೆಸಿಕೊಂಡಿರುವುದು; ಅದನ್ನು ರೀಲ್ ಒಂದರಲ್ಲಿ ಬಳಸಲಾಗಿದ್ದು ಅದನ್ನೇ ಮುಂದುಮಾಡಿ ಅವರು ಹಿಂದೂ ಅರ್ಚಕ ಎಂದು ತಪ್ಪಾಗಿ ಬಿಂಬಿಸಲಾಗಿದೆ

ಫಣೀಂದ್ರರವರ ವ್ಯವಹಾರ ಪಾಲುದಾರರಾದ ಕನ್ನಡಪರ ಹೋರಾಟಗಾರರಾದ ಬಿ.ಹರೀಶ್ ಕುಮಾರ್‌ರವರು ಮಾತನಾಡಿ, “ಫಣೀಂದ್ರರವರು ಒಳ್ಳೆಯ ಸ್ವಭಾವದವರು. ಅವರು ಹಿಂದುತ್ವವನ್ನು ಒಪ್ಪಿಕೊಂಡರೂ ಸಹ ಅನ್ಯಧರ್ಮದವರನ್ನು ದ್ವೇಷಿಸುವವರಲ್ಲ. ಕೇವಲ 4 ತಿಂಗಳ ಹಿಂದೆ ಹೊಸ ಇಂಟರ್‌ನೆಟ್ ಸೇವೆ ನೀಡುವ ಕಂಪನಿ ಆರಂಭಿಸಿದ್ದೇವೆ. ಎಲ್ಲವೂ ಚೆನ್ನಾಗಿ ನಡೆದುಕೊಂಡು ಹೋಗುತ್ತಿರುವಾಗ ಅವರ ಏಳಿಗೆ ಸಹಿಸದೇ ಕೊಲೆಗೈಯ್ಯಲಾಗಿದೆ” ಎಂದರು.

ಠುಸ್ ಆದ ಬಿಜೆಪಿಯ ಹೆಣದ ರಾಜಕೀಯ

4 ವರ್ಷಗಳ ಕಾಲ ಅಧಿಕಾರದಲ್ಲಿದ್ದ ಬಿಜೆಪಿಯು ಜನಪರ ಆಡಳಿತ ನೀಡಲು, ಅಭಿವೃದ್ದಿ ಮಾಡಲು ವಿಫಲವಾಗಿ ಸೋತು ಸುಣ್ಣವಾಗಿದೆ. ಆದರೂ ತನ್ನ ಹೆಣ ರಾಜಕಾರಣವನ್ನು ಮಾತ್ರ ಕೈಬಿಟ್ಟಿಲ್ಲ. ರಾಜ್ಯದಲ್ಲಿ ಯಾರಾದರೂ ಸಾವನಪ್ಪಿದ್ದರೆ ಹಿಂದೂ ಮುಖಂಡನ ಕೊಲೆ ಎಂದು ಗಲಭೆ ಎಬ್ಬಿಸಲು ಬಿಜೆಪಿ ಯತ್ನಿಸುತ್ತಿದೆ. ಈ ಹಿಂದೆ ಹೊನ್ನಾವರದಲ್ಲಿ ಪರೇಶ್ ಮೇಸ್ತಾ ಎಂಬ ಯುವಕ ಸಾವನಪ್ಪಿದ ಘಟನೆಯನ್ನು ಕೋಮುವಾದೀಕರಿಸಿ, ಗಲಭೆಗಳನ್ನು ಎಬ್ಬಿಸಿ ಮತಗಳ ಬೇಟೆಯಾಡಿದ್ದ ಬಿಜೆಪಿಗೆ ಇನ್ನೂ ರಕ್ತದ ರುಚಿ ಆರಿಲ್ಲ. ಹಾಗಾಗಿ ಹೆಣಗಳು ಬೀಳುವುದನ್ನೇ ಕಾಯ್ದು ಕೋಮು ಆಯಾಮ ನೀಡಲು ಯತ್ನಿಸುತ್ತಿದೆ. ಆ ಮೂಲಕ ಸಮಾಜದಲ್ಲಿ ಶಾಂತಿ ಕದಡಲು ಯತ್ನಿಸುತ್ತಿದೆ. ಈ ಜೋಡಿ ಕೊಲೆ ವಿಚಾರದಲ್ಲಿಯೂ ಹಾಗೆ ಮಾಡಲು ಯತ್ನಿಸಿತು. ಆದರೆ ನೈಜ ಕಾರಣ ಹೊರಬರುತ್ತಲೇ ಮುಖಭಂಗ ಅನುಭವಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನ ಬದಲಿಸಿ ಮನುಸ್ಮೃತಿ ತರಲು SIR ಷಡ್ಯಂತ್ರ: ನಟ ಕಿಶೋರ್

ದೇಶದ ಬಹುಕೋಟಿ ಉದ್ಯಮಿ ಗೌತಮ್ ಅದಾನಿಯದ್ದೇ ಇರಲಿ ಅಥವಾ ಒಬ್ಬ ಬಡ ರೈತನದ್ದೇ ಇರಲಿ, ಪ್ರಜಾಪ್ರಭುತ್ವದಲ್ಲಿ ಎಲ್ಲರ ಮತವೂ ಒಂದೇ ಸಮ. ಪ್ರಜೆಗಳನ್ನೆಲ್ಲ ಸಮಾನವಾಗಿ ಕಾಣುವ ಏಕೈಕ ಅಸ್ತ್ರ ಎಂದರೆ ಅದು ಮತದಾನದ...

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...