Homeಕರ್ನಾಟಕಬೆಂಗಳೂರಿನ ಜೋಡಿ ಕೊಲೆಗೆ ವ್ಯವಹಾರ ವೈಷಮ್ಯವೇ ಕಾರಣ; ವಿಫಲವಾದ ಬಿಜೆಪಿಯ ಹೆಣರಾಜಕಾರಣ

ಬೆಂಗಳೂರಿನ ಜೋಡಿ ಕೊಲೆಗೆ ವ್ಯವಹಾರ ವೈಷಮ್ಯವೇ ಕಾರಣ; ವಿಫಲವಾದ ಬಿಜೆಪಿಯ ಹೆಣರಾಜಕಾರಣ

- Advertisement -
- Advertisement -

ಜುಲೈ 11ರ ಮಂಗಳವಾರ ಮಧ್ಯಾಹ್ನ ಬೆಂಗಳೂರಿನ ಅಮೃತಹಳ್ಳಿಯಲ್ಲಿರುವ ಏರೋನಿಕ್ಸ್ ಮೀಡಿಯಾ ಪ್ರೈವೇಟ್ ಲಿಮಿಟೆಡ್ (Aironics Media Pvt Ltd) ಕಂಪನಿಗೆ ನುಗ್ಗಿದ ಮೂವರು ದುಷ್ಕರ್ಮಿಗಳು ಆ ಕಂಪನಿಯ ಮ್ಯಾನೇಜಿಂಗ್ ಡೈರೆಕ್ಟರ್ ಫಣೀಂದ್ರ ಸುಬ್ರಮಣ್ಯ ಹಾಗೂ ಸಿಇಒ ವಿನು ಕುಮಾರ್ ಇಬ್ಬರಿಗೂ ಇರಿದು ಕೊಂದು ಪರಾರಿಯಾಗಿದ್ದಾರೆ. ಈ ಜೋಡಿ ಕೊಲೆಯನ್ನು ಕೋಮುವಾದೀಕರಿಸಿದ ಬಿಜೆಪಿ ಮುಖಂಡರು ಮತ್ತು ಹಿಂದುತ್ವವಾದಿಗಳು, ಹಿಂದೂ ಅರ್ಚಕ, ಹಿಂದೂ ಮುಖಂಡ ಫಣೀಂದ್ರ ಸುಬ್ರಮಣ್ಯರವರ ಕೊಲೆಯಾಗಿದೆ ಎಂದು ಪ್ರಚಾರ ಮಾಡಿದರು. ಇದೇ ಸಂದರ್ಭದಲ್ಲಿ ಬೆಳಗಾವಿಯ ಜೈನ ಮುನಿ ಮತ್ತು ಟಿ.ನರಸೀಪುರದ ಯುವ ಬ್ರಿಗೇಡ್ ಕಾರ್ಯಕರ್ತನ ಕೊಲೆ ಸಂಭವಿಸಿದ್ದರಿಂದ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಹಿಂದೂಗಳ ಕೊಲೆಯಾಗುತ್ತಿದೆ ಎಂಬ ಕೋಮು ನಿರೂಪಣೆಯನ್ನು ಹರಿಯಬಿಟ್ಟರು.

ಬಿಜೆಪಿ ರಾಜ್ಯಸಭಾ ಸಂಸದ ರಾಜೀವ್ ಚಂದ್ರಶೇಖರ್ ಸೇರಿದಂತೆ ಹಲವು ಬಿಜೆಪಿ ನಾಯಕರು ಹಿಂದೂ ಮುಖಂಡನನ್ನು ಅನ್ಯಧರ್ಮದವರು ಕೊಂದಿದ್ದಾರೆ ಎಂದು ಆರೋಪಿಸಿದರು. ಆದರೆ ಪೊಲೀಸರು ಶೀಘ್ರವಾಗಿ ಕೊಲೆಗೆ ಸಂಬಂಧಿಸಿದಂತೆ ಸಂತೋಷ್, ಶಬರೀಶ್ (ಫೆಲಿಕ್ಸ್) ಮತ್ತು ವಿನಯ್ ರೆಡ್ಡಿ ಎಂಬ ಮೂವರು ಆರೋಪಿಗಳನ್ನು ಬಂಧಿಸಿ ವಿಚಾರಣೆ ನಡೆಸಿದಾಗ ಅಸಲೀ ಸತ್ಯ ಬಹಿರಂಗವಾಗಿದೆ. ಅದರ ಪ್ರಕಾರ ವೃತ್ತಿ ಮತ್ಸರವೇ ಜೋಡಿ ಕೊಲೆಗೆ ಪ್ರಧಾನ ಕಾರಣ ಹೊರತು ಯಾವುದೇ ಕೋಮು ಸಂಘರ್ಷವಲ್ಲ. ಜೊತೆಗೆ ಕೊಲೆಯಾದವರು ಮತ್ತು ಕೊಲೆ ಆರೋಪಿಗಳೆಲ್ಲರೂ ಒಂದೇ ಧರ್ಮದವರಾಗಿದ್ದಾರೆ.

ಕೊಲೆಯಾದ ಫಣೀಂದ್ರ ಮತ್ತು ವಿನುಕುಮಾರ್ ಜೊತೆಗೆ ಆರೋಪಿಗಳಾದ ಸಂತೋಷ್, ಶಬರೀಶ್ ಈ ಹಿಂದೆ ಜಿ-ನೆಟ್ ಎಂಬ ಇಂಟರ್‌ನೆಟ್ ಸೇವೆ ಒದಗಿಸುವ ಕಂಪನಿಯಲ್ಲಿ ಜೊತೆಯಾಗಿ ಕೆಲಸ ಮಾಡುತ್ತಿದ್ದರು. ಆದರೆ ಆ ಕಂಪನಿಯ ಮಾಲೀಕರಾದ ಅರುಣ್ ಕುಮಾರ್‌ರೊಂದಿಗೆ ಮನಸ್ತಾಪ ಬಂದ ಕಾರಣ ಕೆಲಸ ಬಿಟ್ಟ ಫಣೀಂದ್ರ ಮತ್ತು ವಿನುಕುಮಾರ್ 2022ರ ನವೆಂಬರ್‌ನಲ್ಲಿ ಏರೋನಿಕ್ಸ್ ಮೀಡಿಯಾ ಪ್ರೈವೇಟ್ ಲಿಮಿಟೆಡ್ ಎಂಬ ಸ್ವಂತ ಕಂಪನಿ ಆರಂಭಿಸಿದ್ದರು. ಆರಂಭದಿಂದಲೇ ಕಂಪನಿಯು ಸಾಕಷ್ಟು ಜನಪ್ರಿಯತೆ ಪಡೆದದ್ದರಿಂದ ಹಲವಾರು ಗ್ರಾಹಕರು ಜಿ-ನೆಟ್ ಕಂಪನಿ ಬಿಟ್ಟು ಏರೋನಿಕ್ಸ್‌ನಿಂದ ಸೇವೆ ಪಡೆದುಕೊಳ್ಳಲು ಆರಂಭಿಸಿದ್ದರು. ಅಷ್ಟು ಮಾತ್ರವಲ್ಲದೇ ಹಲವಾರು ಉದ್ಯೋಗಿಗಳು ಸಹ ಜಿ-ನೆಟ್ ತೊರೆದು ಏರೋನಿಕ್ಸ್ ಸೇರಿದ್ದರು. ಹಾಗಾಗಿ ಎರಡು ಕಂಪನಿಗಳ ನಡುವೆ ತುರುಸಿನ ಪೈಪೋಟಿ ಏರ್ಪಟ್ಟಿತ್ತು. ಇದರಿಂದ ಹತಾಶಗೊಂಡ ಜಿ-ನೆಟ್ ಮಾಲೀಕ ಅರುಣ್ ಕುಮಾರ್ ಫೆಲಿಕ್ಸ್ ಮತ್ತು ಇತರರಿಗೆ ಸುಪಾರಿ ನೀಡಿ ಫಣೀಂದ್ರ ಮತ್ತು ವಿನುಕುಮಾರ್ ಕೊಲೆಗೆ ಕಾರಣರಾಗಿದ್ದಾರೆ ಎಂದು ಆರೋಪಿಸಿ ಪೊಲೀಸರು ಅರುಣ್ ಕುಮಾರ್‌ರನ್ನು ವಶಕ್ಕೆ ಪಡೆದು ತನಿಖೆ ನಡೆಸುತ್ತಿದ್ದಾರೆ. ಆರೋಪಿಗಳ ಮೇಲೆ ಐಪಿಸಿ ಸೆಕ್ಷನ್ 302 (ಕೊಲೆ), 120ಬಿ (ಕ್ರಿಮಿನಲ್ ಪಿತೂರಿ) ಮತ್ತು 34 (ಸಾಮಾನ್ಯ ಉದ್ದೇಶ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಫಣೀಂದ್ರ ಸುಬ್ರಹ್ಮಣ್ಯಂ ಅವರು ಹಿಂದುತ್ವ ಸಂಘಟನೆಗಳೊಂದಿಗೆ ಶಾಮೀಲಾಗಿದ್ದರೂ ಕೂಡ ಅನ್ಯ ಧರ್ಮದ ಯಾರೊಂದಿಗೂ ಅವರಿಗೆ ವೈರತ್ವವಿರಲಿಲ್ಲ. ಅಲ್ಲದೆ, ಜಿ-ನೆಟ್ ಕಂಪನಿ ಜೊತೆಗಿನ ವ್ಯವಹಾರ ವೈಷಮ್ಯವೇ ಅವರ ಹತ್ಯೆಗೆ ಕಾರಣ ಎಂದು ದೂರುದಾರರಾದ ಅವರ ಸಹೋದ್ಯೋಗಿ ಶಂಕರ್ ನಾರಾಯಣ್ ತಿಳಿಸಿದ್ದಾರೆ; ಡಿಸಿಪಿ (ಈಶಾನ್ಯ) ಲಕ್ಷ್ಮಿ ಪ್ರಸಾದ್ ಆರಂಭಿಕ ತನಿಖೆಯಲ್ಲಿ ಯಾವುದೇ ಕೋಮು ಆಯಾಮ ಕಂಡುಬಂದಿಲ್ಲ ಎಂದು ತಿಳಿಸಿದ್ದಾರೆ. ಇನ್ನು ಫಣೀಂದ್ರರವರು ಪೂಜೆ ಮಾಡುತ್ತಿರುವ ಫೋಟೊ, ಅವರ ಕಚೇರಿ ಉದ್ಘಾಟನೆ ಸಮಯದಲ್ಲಿ ತೆಗೆಸಿಕೊಂಡಿರುವುದು; ಅದನ್ನು ರೀಲ್ ಒಂದರಲ್ಲಿ ಬಳಸಲಾಗಿದ್ದು ಅದನ್ನೇ ಮುಂದುಮಾಡಿ ಅವರು ಹಿಂದೂ ಅರ್ಚಕ ಎಂದು ತಪ್ಪಾಗಿ ಬಿಂಬಿಸಲಾಗಿದೆ

ಫಣೀಂದ್ರರವರ ವ್ಯವಹಾರ ಪಾಲುದಾರರಾದ ಕನ್ನಡಪರ ಹೋರಾಟಗಾರರಾದ ಬಿ.ಹರೀಶ್ ಕುಮಾರ್‌ರವರು ಮಾತನಾಡಿ, “ಫಣೀಂದ್ರರವರು ಒಳ್ಳೆಯ ಸ್ವಭಾವದವರು. ಅವರು ಹಿಂದುತ್ವವನ್ನು ಒಪ್ಪಿಕೊಂಡರೂ ಸಹ ಅನ್ಯಧರ್ಮದವರನ್ನು ದ್ವೇಷಿಸುವವರಲ್ಲ. ಕೇವಲ 4 ತಿಂಗಳ ಹಿಂದೆ ಹೊಸ ಇಂಟರ್‌ನೆಟ್ ಸೇವೆ ನೀಡುವ ಕಂಪನಿ ಆರಂಭಿಸಿದ್ದೇವೆ. ಎಲ್ಲವೂ ಚೆನ್ನಾಗಿ ನಡೆದುಕೊಂಡು ಹೋಗುತ್ತಿರುವಾಗ ಅವರ ಏಳಿಗೆ ಸಹಿಸದೇ ಕೊಲೆಗೈಯ್ಯಲಾಗಿದೆ” ಎಂದರು.

ಠುಸ್ ಆದ ಬಿಜೆಪಿಯ ಹೆಣದ ರಾಜಕೀಯ

4 ವರ್ಷಗಳ ಕಾಲ ಅಧಿಕಾರದಲ್ಲಿದ್ದ ಬಿಜೆಪಿಯು ಜನಪರ ಆಡಳಿತ ನೀಡಲು, ಅಭಿವೃದ್ದಿ ಮಾಡಲು ವಿಫಲವಾಗಿ ಸೋತು ಸುಣ್ಣವಾಗಿದೆ. ಆದರೂ ತನ್ನ ಹೆಣ ರಾಜಕಾರಣವನ್ನು ಮಾತ್ರ ಕೈಬಿಟ್ಟಿಲ್ಲ. ರಾಜ್ಯದಲ್ಲಿ ಯಾರಾದರೂ ಸಾವನಪ್ಪಿದ್ದರೆ ಹಿಂದೂ ಮುಖಂಡನ ಕೊಲೆ ಎಂದು ಗಲಭೆ ಎಬ್ಬಿಸಲು ಬಿಜೆಪಿ ಯತ್ನಿಸುತ್ತಿದೆ. ಈ ಹಿಂದೆ ಹೊನ್ನಾವರದಲ್ಲಿ ಪರೇಶ್ ಮೇಸ್ತಾ ಎಂಬ ಯುವಕ ಸಾವನಪ್ಪಿದ ಘಟನೆಯನ್ನು ಕೋಮುವಾದೀಕರಿಸಿ, ಗಲಭೆಗಳನ್ನು ಎಬ್ಬಿಸಿ ಮತಗಳ ಬೇಟೆಯಾಡಿದ್ದ ಬಿಜೆಪಿಗೆ ಇನ್ನೂ ರಕ್ತದ ರುಚಿ ಆರಿಲ್ಲ. ಹಾಗಾಗಿ ಹೆಣಗಳು ಬೀಳುವುದನ್ನೇ ಕಾಯ್ದು ಕೋಮು ಆಯಾಮ ನೀಡಲು ಯತ್ನಿಸುತ್ತಿದೆ. ಆ ಮೂಲಕ ಸಮಾಜದಲ್ಲಿ ಶಾಂತಿ ಕದಡಲು ಯತ್ನಿಸುತ್ತಿದೆ. ಈ ಜೋಡಿ ಕೊಲೆ ವಿಚಾರದಲ್ಲಿಯೂ ಹಾಗೆ ಮಾಡಲು ಯತ್ನಿಸಿತು. ಆದರೆ ನೈಜ ಕಾರಣ ಹೊರಬರುತ್ತಲೇ ಮುಖಭಂಗ ಅನುಭವಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...