Homeಕರ್ನಾಟಕಬೆಂಗಳೂರು: ಹೋಟೆಲ್‌ನಲ್ಲಿ ನೀರು ಕುಡಿದಿದ್ದಕ್ಕೆ ಇಬ್ಬರು ದಲಿತರ ಹತ್ಯೆ

ಬೆಂಗಳೂರು: ಹೋಟೆಲ್‌ನಲ್ಲಿ ನೀರು ಕುಡಿದಿದ್ದಕ್ಕೆ ಇಬ್ಬರು ದಲಿತರ ಹತ್ಯೆ

- Advertisement -
- Advertisement -

ಹೋಟೆಲ್‌ವೊಂದರಲ್ಲಿ ನೀರು ಕುಡಿದರೆಂಬ ಕಾರಣಕ್ಕೆ ಇಬ್ಬರು ದಲಿತರನ್ನು ಹತ್ಯೆ ಮಾಡಲಾಗಿದೆ ಎಂದು ಆರೋಪಿಸಿ ರಾಜಾನಕುಂಟೆ ಪೊಲೀಸ್ ಠಾಣೆ ಎದುರು ಶವವಿಟ್ಟು ಗುರುವಾರ ಪ್ರತಿಭಟನೆ ನಡೆಸಲಾಗಿದೆ.

ಇತ್ತೀಚಿಗೆ ಹೋಟೆಲ್‍ವೊಂದರಲ್ಲಿ ನೀರು ಕುಡಿದ ವಿಚಾರಕ್ಕೆ ನಡೆದ ಜಗಳವನ್ನೇ ಮುಂದಿಟ್ಟುಕೊಂಡು ಇಪ್ಪತ್ತು ದಿನಗಳ ಬಳಿಕ ಕಾರು ಹತ್ತಿಸಿ ಇಬ್ಬರು ದಲಿತರನ್ನು ಕೊಲೆ ಮಾಡಲಾಗಿದೆ. ಈ ಕೃತ್ಯ ಎಸಗಿದವರನ್ನು ಕೂಡಲೇ ಬಂಧಿಸುವಂತೆ ಆಗ್ರಹಿಸಿ ಪ್ರತಿಭಟನಾಕಾರರು ಆಗ್ರಹಿಸಿದ್ದಾರೆ.

ಹೆಸರಘಟ್ಟ ಹೋಬಳಿಯ ಚಲ್ಲಹಳ್ಳಿ ನಿವಾಸಿಗಳಾದ ನಾಗರಾಜ್ ಹಾಗೂ ರಾಮಯ್ಯ ಎಂಬುವರನ್ನು ಉದ್ದೇಶ ಪೂರಕವಾಗಿ ಜಾತಿಯ ವಿಚಾರಕ್ಕೆ ಕಾರು ಹತ್ತಿಸಿ ಹಾಡಹಾಗಲೇ ಹತ್ಯೆ ಮಾಡಲಾಗಿದೆ, ದುಷ್ಕರ್ಮಿಗಳ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಲಾಗಿದೆ. ಮೃತರ ಸಂಬಂಧಿಕರು, ಬಿಎಸ್ಪಿ ಮುಖಂಡರು ಪ್ರತಿಭಟನೆ ನಡೆಸಿದ್ದಾರೆ.

ರಾಜಾನಕುಂಟೆ ಪೊಲೀಸ್ ಠಾಣೆ ಎದುರು ಶವವಿಟ್ಟು ಗುರುವಾರ ಪ್ರತಿಭಟನೆ ನಡೆಸಲಾಗಿದೆ

ಇಪ್ಪತ್ತು ದಿನಗಳ ಹಿಂದೆ ಹೆಸರುಘಟ್ಟದಲ್ಲಿ ಹೋಟೆಲ್‍ವೊಂದರಲ್ಲಿ ನಾಗರಾಜ್ ನೀರು ಕುಡಿದ ವಿಚಾರಕ್ಕೆ ಭರತ್ ಎಂಬಾತ ಜಾತಿ ನಿಂದನೆ ಮಾಡಿ ಅವಾಚ್ಯ ಶಬ್ದಗಳನ್ನು ಬಳಸಿದ್ದ. ಚುನಾವಣೆ ಮುಗಿದ ಬಳಿಕ ಕೊಲೆ ಮಾಡುವುದಾಗಿ ಬಹಿರಂಗ ಬೆದರಿಕೆ ಹಾಕಿದ್ದ. ಈ ಭರತ್ ಈಗಾಗಲೇ ರೌಡಿಶೀಟರ್ ಆಗಿದ್ದು, ಈತನ ತಂದೆ ವಿರುದ್ಧವೂ ಅನೇಕ ಗಂಭೀರ ಆರೋಪಗಳಿವೆ. ಕೃತ್ಯದಲ್ಲಿ ಭಾಗಿಯಾಗಿರುವ ಭರತ್, ನಿಶಾಂತ್, ವಿನಯ್ ಎಂಬುವರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಬೇಕು ಎಂದು ಮೃತರ ಸಂಬಂಧಿ ವೆಂಕಟೇಶ್ ದೂರು ಸಲ್ಲಿಸಿದ್ದಾರೆ.

ಘಟನೆ ಸಂಬಂಧ ಇಲ್ಲಿನ ರಾಜಾನಕುಂಟೆ ಠಾಣಾ ಪೊಲೀಸರಿಗೆ ದೂರು ನೀಡಲಾಗಿದ್ದು, “ಗುರುವಾರ ಮುಂಜಾನೆ ನಾಗರಾಜ್, ರಾಮಯ್ಯ ಹಾಗೂ ಗೋಪಾಲ್ ಎಂಬುವರು ಒಂದೇ ಬೈಕ್‍ನಲ್ಲಿ ಇಲ್ಲಿನ ಕೆಎಂಎಫ್ ಕಾರ್ಖಾನೆಗೆ ಕೆಲಸಕ್ಕೆ ಹೋಗುತ್ತಿದ್ದ ಸಂದರ್ಭದಲ್ಲಿ ಹಿಂಬದಿಯಿಂದ ಬಂದ ಕಾರು ಢಿಕ್ಕಿ ಹೊಡೆದಿದೆ. ಇದರ ರಭಸಕ್ಕೆ ನಾಗರಾಜ್, ರಾಮಯ್ಯ ಸ್ಥಳದಲ್ಲಿಯೇ ಮೃತಪಟ್ಟರೆ, ಗೋಪಾಲ್ ಅವರು ಗಂಭೀರವಾಗಿ ಗಾಯಗೊಂಡು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಕಾರನ್ನು ರೌಡಿಶೀಟರ್ ಭರತ್, ನಿಶಾಂತ್, ವಿನಯ್ ಸೇರಿದಂತೆ ಇತರರು ಶರವೇಗವಾಗಿ ಚಲಾಯಿಸಿಕೊಂಡು ಬಂದು ಉದ್ದೇಶ ಪೂರಕವಾಗಿ ಹತ್ಯೆ ಮಾಡಿದ್ದಾರೆ” ಎಂದು ವೆಂಕಟೇಶ್‌ ತಿಳಿಸಿದ್ದಾರೆ.

ಇದನ್ನೂ ಓದಿರಿ: ಮಾಜಿ ಸಿಜೆಐ ರಂಜನ್ ಗೊಗೊಯ್ ವಿರುದ್ಧ ಮಾನನಷ್ಟ ಪ್ರಕರಣ ದಾಖಲು

ಬಿಎಸ್ಪಿ ರಾಜ್ಯ ಉಸ್ತುವಾರಿ ಮಾರಸಂದ್ರ ಮುನಿಯಪ್ಪ ಪ್ರತಿಕ್ರಿಯಿಸಿ, “ಉದ್ದೇಶ ಪೂರಕವಾಗಿಯೇ ಕಾರು ಹತ್ತಿಸಿ ಕೊಲೆ ಮಾಡಲಾಗಿದೆ. ಘಟನೆ ನಡೆದ ಸ್ಥಳ ಪರಿಶೀಲನೆ ನಡೆಸಿದರೆ, ಇದು ಕೊಲೆಯೆಂದೇ ಹೇಳಬಹುದಾಗಿದೆ. ಸದ್ಯ ಪೊಲೀಸರು ಆರೋಪಿಗಳ ವಿರುದ್ಧ ಮೊಕದ್ದಮೆ ದಾಖಲಿಸಿಕೊಂಡಿದ್ದಾರೆ. ಆದರೆ, ಇಂತಹ ಭಯಾನಕ ಕೃತ್ಯವೆಸಗಿದ ದುಷ್ಕರ್ಮಿಗಳ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಬೇಕು. ಇಲ್ಲದಿದ್ದರೆ, ಹೋರಾಟ ಮುಂದುವರೆಸುತ್ತೇವೆ” ಎಂದು ಎಚ್ಚರಿಕೆ ನೀಡಿದ್ದಾರೆ.

ಹಿರಿಯ ಪೊಲೀಸ್ ಅಧಿಕಾರಿವೊಬ್ಬರು ಪ್ರತಿಕ್ರಿಯಿಸಿ, “ಘಟನೆಗೆ ಸಂಬಂಧಿಸಿದಂತೆ ರಾಜಾನುಕುಂಟೆ ಪೊಲೀಸ್ ಠಾಣೆಗೆ ದೂರು ನೀಡಲಾಗಿದ್ದು, ಘಟನೆಗೆ ಕಾರಣನಾದ ಭರತ್ ಮತ್ತು ಆತನ ಸ್ನೇಹಿತರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗಿದೆ” ಎಂದು ಮಾಹಿತಿ ನೀಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...