Homeಕರ್ನಾಟಕಬೆಂಗಳೂರು | ಯುಜಿಸಿ ನೂತನ ನಿಯಮ ವಿರೋಧಿಸಿ ಏಳು ರಾಜ್ಯಗಳ ಶಿಕ್ಷಣ ಸಚಿವರ ಸಮಾವೇಶ

ಬೆಂಗಳೂರು | ಯುಜಿಸಿ ನೂತನ ನಿಯಮ ವಿರೋಧಿಸಿ ಏಳು ರಾಜ್ಯಗಳ ಶಿಕ್ಷಣ ಸಚಿವರ ಸಮಾವೇಶ

- Advertisement -
- Advertisement -

ವಿಶ್ವವಿದ್ಯಾಲಯ ಅನುದಾನ ಆಯೋಗವು (ಯುಜಿಸಿ) ಕುಲಪತಿಗಳ ನೇಮಕ ಹಾಗೂ ಉನ್ನತ ಶಿಕ್ಷಣ ಸಂಸ್ಥೆಗಳ ಸಂಬಂಧಪಟ್ಟಂತೆ ಹೊರಡಿಸಿರುವ ಕರಡು ನಿಯಮಾವಳಿಗಳ ಕುರಿತು ಚರ್ಚಿಸಲು ಫೆಬ್ರವರಿ 05 ರಂದು ಬೆಂಗಳೂರಿನಲ್ಲಿ ಕರೆಯಲಾಗಿರುವ ಒಂದು ದಿನದ ಉನ್ನತ ಶಿಕ್ಷಣ ಸಚಿವರ ರಾಷ್ಟ್ರೀಯ ಮಟ್ಟದ ಸಮಾವೇಶದಲ್ಲಿ ದೇಶದ ಏಳು ರಾಜ್ಯಗಳ ಸಚಿವರು ಪಾಲ್ಗೊಳ್ಳುತ್ತಿದ್ದಾರೆ ಎಂದು ಉನ್ನತ ಶಿಕ್ಷಣ ಸಚಿವರಾದ ಡಾ. ಎಂ.ಸಿ. ಸುಧಾಕರ್ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಬೆಂಗಳೂರು

ದೇಶದ ಕೆಲವು ರಾಜ್ಯಗಳ ಪ್ರಾದೇಶಿಕ ಪಕ್ಷಗಳು ಎನ್‌ಡಿಎ ಜೊತೆ ಹೊಂದಾಣಿಕೆ ಮಾಡಿಕೊಂಡಿರುವುದರಿಂದ ಬಹಿರಂಗವಾಗಿ ತಮ್ಮ ವಿರೋಧವನ್ನು ವ್ಯಕ್ತಪಡಿಸಲಾರದಂತ ಸ್ಥಿತಿಯಲ್ಲಿವೆ. ಎನ್‌ಡಿಎ ಮೈತ್ರಿಕೂಟದಲ್ಲಿರುವ ಜೆಡಿಯು, ಟಿಡಿಪಿ ಹಾಗೂ ಎಲ್‌ಜೆಪಿ (ರಾಮ್ ವಿಲಾಸ್) ಪಕ್ಷಗಳು ಈಗಾಗಲೇ ಈ ಸಂಬಂಧ ಅತೃಪ್ತಿ ವ್ಯಕ್ತಪಡಿಸಿ ಪತ್ರಿಕಾ ಹೇಳಿಕೆ ನೀಡಿರುವುದು ಬಹಿರಂಗಗೊಂಡಿದೆ. ಬೆಂಗಳೂರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ದೆಹಲಿಯಲ್ಲಿ ಚುನಾವಣೆ ಇರುವುದರಿಂದ ದೆಹಲಿಯ ಉನ್ನತ ಶಿಕ್ಷಣ ಸಚಿವರು ಪಾಲ್ಗೊಳ್ಳುತ್ತಿಲ್ಲ. ಉಳಿದಂತೆ ಆತಿಥ್ಯ ವಹಿಸಿರುವ ಕರ್ನಾಟಕವೂ ಸೇರಿದಂತೆ ಜಮ್ಮು ಕಾಶ್ಮೀರ, ಹಿಮಾಚಲ್ ಪ್ರದೇಶ, ಜಾರ್ಖಂಡ್, ತೆಲಂಗಾಣ, ತಮಿಳುನಾಡು ಹಾಗೂ ಕೇರಳದ ಉನ್ನತ ಶಿಕ್ಷಣ ಸಚಿವರು ಈ ಸಮಾವೇಶದಲ್ಲಿ ಪಾಲ್ಗೊಳ್ಳುತ್ತಿದ್ದಾರೆ.

ಫೆಬ್ರವರಿ 5 ರಂದು ಬೆಳಗ್ಗೆ 10:30ಕ್ಕೆ ಸಮಾವೇಶವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಲಿದ್ದಾರೆ. ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ವಿಶೇಷ ಆಹ್ವಾನಿತರಾಗಿ ಪಾಲ್ಗೊಳ್ಳುತ್ತಿದ್ದಾರೆ ಎಂದು ಡಾ.ಎಂ.ಸಿ. ಸುಧಾಕರ್ ತಿಳಿಸಿದ್ದಾರೆ.

ಯುಜಿಸಿ ಕರಡು ನಿಯಮಾವಳಿಗಳಿಂದ ದೇಶದ ಉನ್ನತ ಶಿಕ್ಷಣ ವ್ಯವಸ್ಥೆ ಮೇಲೆ ಕೇಂದ್ರ ಸರ್ಕಾರ ರಾಜ್ಯಗಳಿಗಿದ್ದ ಅಧಿಕಾರವನ್ನು ಮೊಟಕು ಗೊಳಿಸುವುದು ಮಾತ್ರವಲ್ಲದೆ ರಾಜ್ಯ ಸರ್ಕಾರಗಳ ಸಂವಿಧಾನಾತ್ಮಕ ಕರ್ತವ್ಯ ಮತ್ತು ಜವಾಬ್ದಾರಿಯನ್ನು ನಿಗ್ರಹಿಸ ಹೊರಟಿರುವುದು ಒಕ್ಕೂಟ ವ್ಯವಸ್ಥೆಯಲ್ಲಿ ಸರಿಯಲ್ಲ ಎಂದು ಅವರು ಹೇಳಿದ್ದಾರೆ.

ಇಷ್ಟೇ ಅಲ್ಲದೆ ಉನ್ನತ ಶಿಕ್ಷಣದ ಹಲವಾರು ಹಂತಗಳಲ್ಲಿ ಒತ್ತಾಯಪೂರ್ವಕವಾಗಿ ಕೆಲವು ನಿಯಮಾವಳಿಗಳನ್ನು ಹೇರಲಾಗುತ್ತಿದೆ. ಹಾಗಾಗಿ ಎಲ್ಲಾ ರಾಜ್ಯಗಳ ಒಕ್ಕೊರಲಿನ ಧ್ವನಿಯಾಗಿ ಕೇಂದ್ರಕ್ಕೆ ತಿಳಿಸಲು ಈ ಸಮಾವೇಶ ನಡೆಯುತ್ತಿದೆ. ಸಮಾವೇಶದಲ್ಲಿ ಉನ್ನತ ಶಿಕ್ಷಣಕ್ಕೆ ಸಂಬಂಧಪಟ್ಟಂತೆ ಕೇಂದ್ರ ಸರ್ಕಾರದ ಧೋರಣೆಯ ಬಗ್ಗೆ ಸಮಗ್ರವಾಗಿ ಚರ್ಚಿಸಲಾಗುವುದು. ಸಮಾವೇಶದ ನಿರ್ಣಯಗಳನ್ನು ಕೇಂದ್ರ ಸರ್ಕಾರ ಹಾಗೂ ಯು.ಜಿ.ಸಿ ಗೆ ಕಳುಹಿಸಿ ಕೊಡಲಾಗುವುದು ಎಂದು ಡಾ. ಎಂ.ಸಿ. ಸುಧಾಕರ್ ಅವರು ತಿಳಿಸಿದ್ದಾರೆ.

ದೇಶದ ಒಕ್ಕೂಟ ವ್ಯವಸ್ಥೆಯನ್ನು ಬಲಗೊಳಿಸುವುದು ಅತಿ ಮುಖ್ಯವಾಗಿದೆ. ಭಾರತದ ಶೈಕ್ಷಣಿಕ ವ್ಯವಸ್ಥೆ ಅತ್ಯಂತ ಸುಭದ್ರವಾದಂತದ್ದು, ಅದನ್ನು ಯಾವುದೇ ರಾಜ್ಯಗಳೊಂದಿಗೆ ಸಮಾಲೋಚಿಸದೆ ಏಕಾಏಕಿ ಕೇಂದ್ರ ಸರ್ಕಾರ ತನ್ನ ನಿಲುವುಗಳನ್ನು ಬಲವಂತವಾಗಿ ಹೇರುತ್ತಿರುವುದು ಒಕ್ಕೂಟ ವ್ಯವಸ್ಥೆಯಲ್ಲಿ ಸೂಕ್ತವಲ್ಲ. ಇದೊಂದು ಸಂವಿಧಾನ ವಿರೋಧಿ ಧೋರಣೆ ಎಂದು ಅವರು ಹೇಳಿದ್ದಾರೆ.

ಸಮಾವೇಶದಲ್ಲಿ ಉನ್ನತ ಶಿಕ್ಷಣ ಸಚಿವರ ಅಭಿಪ್ರಾಯವನ್ನು ಕ್ರೂಡೀಕರಿಸಿ ನಿರ್ಣಯಗಳನ್ನು ಕೈಗೊಳ್ಳಲಾಗುವುದು. ಕೇಂದ್ರ ಸರ್ಕಾರ ಯು.ಜಿ.ಸಿ ಮಾಡಿರುವ ಮಾರ್ಪಾಡುಗಳನ್ನು ಪುನರ್ ಪರಿಶೀಲಿಸದಿದ್ದರೆ ಮುಂದೆ ಯಾವ ನಿರ್ಧಾರ ಕೈಗೊಳ್ಳಬೇಕು ಎಂಬುದರ ಬಗ್ಗೆಯೂ ಚರ್ಚಿಸಲಾಗುವುದು ಎಂದು ಡಾ. ಎಂ.ಸಿ. ಸುಧಾಕರ್ ಅವರು ತಿಳಿಸಿದ್ದಾರೆ.

ಇದನ್ನೂಓದಿ:  ಬಿರಿಯಾನಿ, ಚಿಕನ್ ಫ್ರೈಗೆ ಮನವಿ ಮಾಡಿದ ಮಗು ; ಅಂಗನವಾಡಿ ಮೆನು ಪರಿಷ್ಕರಣೆಗೆ ಮುಂದಾದ ಕೇರಳ ಸರ್ಕಾರ!

ಬಿರಿಯಾನಿ, ಚಿಕನ್ ಫ್ರೈಗೆ ಮನವಿ ಮಾಡಿದ ಮಗು ; ಅಂಗನವಾಡಿ ಮೆನು ಪರಿಷ್ಕರಣೆಗೆ ಮುಂದಾದ ಕೇರಳ ಸರ್ಕಾರ!

ಇದನ್ನೂಓದಿ:  ಬಿರಿಯಾನಿ, ಚಿಕನ್ ಫ್ರೈಗೆ ಮನವಿ ಮಾಡಿದ ಮಗು ; ಅಂಗನವಾಡಿ ಮೆನು ಪರಿಷ್ಕರಣೆಗೆ ಮುಂದಾದ ಕೇರಳ ಸರ್ಕಾರ!

ಬಿರಿಯಾನಿ, ಚಿಕನ್ ಫ್ರೈಗೆ ಮನವಿ ಮಾಡಿದ ಮಗು ; ಅಂಗನವಾಡಿ ಮೆನು ಪರಿಷ್ಕರಣೆಗೆ ಮುಂದಾದ ಕೇರಳ ಸರ್ಕಾರ!

ಇದನ್ನೂಓದಿ:  ಬಿರಿಯಾನಿ, ಚಿಕನ್ ಫ್ರೈಗೆ ಮನವಿ ಮಾಡಿದ ಮಗು ; ಅಂಗನವಾಡಿ ಮೆನು ಪರಿಷ್ಕರಣೆಗೆ ಮುಂದಾದ ಕೇರಳ ಸರ್ಕಾರ!

ಬಿರಿಯಾನಿ, ಚಿಕನ್ ಫ್ರೈಗೆ ಮನವಿ ಮಾಡಿದ ಮಗು ; ಅಂಗನವಾಡಿ ಮೆನು ಪರಿಷ್ಕರಣೆಗೆ ಮುಂದಾದ ಕೇರಳ ಸರ್ಕಾರ!

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ವೇಳೆ ಮತಪಟ್ಟಿಯಿಂದ ಹೆಸರು ಡಿಲೀಟ್: ‘ದಿ ಟೆಲಿಗ್ರಾಫ್’ ಮಾಜಿ ಸಂಪಾದಕ ರಾಜಗೋಪಾಲ್ ಪಾಸ್‌ಪೋರ್ಟ್ ನವೀಕರಣಕ್ಕೆ ತಡೆ

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ವೇಳೆ ಮತದಾರರ ಪಟ್ಟಿಯಿಂದ ಹೆಸರು ತೆಗೆದುಹಾಕಿದ ಕಾರಣ ಪಾಸ್‌ಪೋರ್ಟ್ ನವೀಕರಿಸಲು ಆಗುತ್ತಿಲ್ಲ ಎಂದು ದೇಶದ ಖ್ಯಾತ ಇಂಗ್ಲಿಷ್ ದಿನಪತ್ರಿಕೆ ‘ದಿ ಟೆಲಿಗ್ರಾಫ್’ನ ಮಾಜಿ ಸಂಪಾದಕ ಆರ್. ರಾಜಗೋಪಾಲ್...

‘ಈಗಲೂ ಮಮತಾ ಬ್ಯಾನರ್ಜಿಯೇ ನಮ್ಮ ನಾಯಕಿ’ : ಟಿಎಂಸಿ ಬಂಡಾಯ ಬಣದ ಅಧ್ಯಕ್ಷ ಅರೂಪ್ ರಾಯ್ ಹೇಳಿಕೆ

"ಮಮತಾ ಬ್ಯಾನರ್ಜಿ ಅವರೇ ಇಂದಿಗೂ ನಮ್ಮ ನಾಯಕಿ. ಅವರೇ ಈ ಪಕ್ಷವನ್ನು ಸ್ಥಾಪಿಸಿದವರು. ಅವರೇ ನಮ್ಮ ಪಕ್ಷದ ಕಾಂದಾರಿ (ಮಾರ್ಗದರ್ಶಕರು ಅಥವಾ ಪಕ್ಷವನ್ನು ಮುನ್ನಡೆಸುವವರು). ಮಮತಾ ಬ್ಯಾನರ್ಜಿ ಅವರಿಂದಾಗಿಯೇ ನಾವು ಈ ಪಕ್ಷವನ್ನು...

ಪಶ್ಚಿಮ ಬಂಗಾಳದ ಆಹಾರ ಸಂಸ್ಕೃತಿಯನ್ನು ಗೌರವಿಸುತ್ತೇವೆ ಎಂಬ ಬಿಜೆಪಿಯ ಚುನಾವಣಾ ಭರವಸೆಗೆ ಈಗ ‘ಮೊಟ್ಟೆ’ ಮೊದಲ ಬಲಿ

ಚುನಾವಣಾ ಸಮಯದಲ್ಲಿ, ಬಿಜೆಪಿ ಪರಿಸ್ಥಿತಿಯನ್ನು ಮತ್ತು ಮೀನಿನ ಮಾರುಕಟ್ಟೆಯ ನಾಡಿಮಿಡಿತವನ್ನು ಸರಿಯಾಗಿಯೇ ಅರ್ಥಮಾಡಿಕೊಂಡಿತ್ತು. ಅವರ ನಾಯಕರು ಟಿವಿ ಕ್ಯಾಮೆರಾಗಳ ಮುಂದೆ ಮೀನುಗಳನ್ನು ಪ್ರದರ್ಶಿಸಿದರು ಮತ್ತು ಕುರಿ ಮಾಂಸದೂಟವನ್ನು ಸವಿದಿದ್ದರು. ಬಂಗಾಳಿಗಳ ತಟ್ಟೆಗೆ (ಆಹಾರಕ್ಕೆ)...

24 ಗಂಟೆಗೂ ಮೊದಲೇ ಮಹಾರಾಷ್ಟ್ರದಲ್ಲಿ TET ಪ್ರಶ್ನೆ ಪತ್ರಿಕೆ ಸೋರಿಕೆ: ರದ್ದಾದ ಪರೀಕ್ಷೆ

ಮಹಾರಾಷ್ಟ್ರದಲ್ಲಿ ಮತ್ತೊಂದು ಪರೀಕ್ಷಾ ಅಕ್ರಮದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಜೂನ್ 28ರ ಭಾನುವಾರ ನಡೆಯಬೇಕಿದ್ದ ‘ಶಿಕ್ಷಕರ ಅರ್ಹತಾ ಪರೀಕ್ಷೆ’ (TET) ಆರಂಭಕ್ಕೆ ಕೇವಲ 24 ಗಂಟೆಗಳ ಮುನ್ನವೇ ಪ್ರಶ್ನೆ ಪತ್ರಿಕೆ ಸೋರಿಕೆಯಾದ...

ಸೌತೆಕಾಯಿ ಕೃಷಿಗೆ ತನ್ನ ಸಚಿವಾಲಯದಿಂದಲೇ ₹99 ಲಕ್ಷ ಸಬ್ಸಿಡಿ ಪಡೆದ ಕೇಂದ್ರ BJP ಸಚಿವ ಭಾಗೀರಥ್ ಚೌಧರಿ

ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವ ಭಾಗೀರಥ್ ಚೌಧರಿ ಅವರು ತಮ್ಮದೇ ಸಚಿವಾಲಯದ ವ್ಯಾಪ್ತಿಗೆ ಒರುವ ಯೋಜನೆಯಡಿ, ವಾಣಿಜ್ಯ ಸೌತೆಕಾಯಿ ಕೃಷಿ ಯೋಜನೆಗಾಗಿ 99.03 ಲಕ್ಷ ರೂ. ಸಬ್ಸಿಡಿ (ಸಹಾಯಧನ) ಪಡೆದಿರುವುದು ತನಿಖಾ...

‘ಆರ್‌ಎಸ್‌ಎಸ್‌ ನೋಂದಣಿಯಾದರೆ ಒಳ್ಳೆಯದು’: ರಾಮಮಂದಿರ ಹಗರಣ ವಿಚಾರದಲ್ಲಿ ‘ಸತ್ಯ ಹೊರಬರಬೇಕು’: ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ

‘ರಾಷ್ಟ್ರೀಯ ಸ್ವಯಂಸೇವಕ ಸಂಘವನ್ನು (ಆರ್‌ಎಸ್‌ಎಸ್‌) ನೋಂದಣಿ ಮಾಡಿಸಿದರೆ ಯಾರಿಗೂ ಆರೋಪ ಮಾಡಲು ಅವಕಾಶ ಇರುವುದಿಲ್ಲ’ ಎಂದು ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಶುಕ್ರವಾರ ಹೇಳಿದ್ದಾರೆ. ಆರ್‌ಎಸ್‌ಎಸ್ ನೋಂದಣಿ ಕುರಿತು ಕರ್ನಾಟಕದ ಗೃಹ ಸಚಿವ...

ತುಮಕೂರಿನಲ್ಲಿ ಮಲಹೊರುವ ಪದ್ದತಿ ಜೀವಂತ; ದಲಿತ ಕಾರ್ಮಿಕರನ್ನು ಶೌಚಗುಂಡಿ ಸ್ವಚ್ಛತೆಗೆ ನಿಯೋಜಿಸಿದ ಕೆಇಬಿ ಇಂಜಿನಿಯರ್ಸ್ ಸಂಘ

ದಶಕಗಳ ಹಿಂದೆಯೇ ತಲೆ ಮೇಲೆ ಮಲಹೊರುವ ಅನಿಷ್ಠ ಪದ್ಧತಿಯನ್ನು ದೇಶದಲ್ಲಿ ನಿಷೇಧಿಸಲಾಗಿದೆ. ಕಾನೂನಿನ ಪ್ರಕಾರ ಈ ಅಮಾನವೀಯ ಪದ್ಧತಿ ನಿಷೇದಗೊಂಡಿದ್ದರು ರಾಜ್ಯದಲ್ಲಿ ಮಾತ್ರ ಇನ್ನೂ ಜೀವಂತವಾಗಿರುವುದು ತುಮಕೂರಿನಲ್ಲಿ ಮತ್ತೊಮ್ಮೆ ಬಹಿರಂಗವಾಗಿದೆ. ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್...

ವರ್ಷ ಪೂರೈಸಿದ ಎಸ್‌ಐಆರ್‌ ಪ್ರಕ್ರಿಯೆ; ಸುಮಾರು 6 ಕೋಟಿ ಹೆಸರುಗಳು ಡಿಲೀಟ್

ಸುಮಾರು ಆರು ಕೋಟಿ ಮತದಾರರನ್ನು ಅಳಿಸಲು ಕಾರಣವಾದ, ವಿರೋಧ ಪಕ್ಷಗಳು ಮತ್ತು ಚುನಾವಣಾ ಆಯೋಗದ ನಡುವೆ ಘರ್ಷಣೆಗೆ ಕಾರಣವಾದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು 19 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ...

ರಾಮ ಮಂದಿರ ಹಗರಣ | ಶಿವಸೇನೆ ಕೊಟ್ಟ 1 ಕೋಟಿ ರೂ.ಗೆ ರಸೀದಿ ಸಿಕ್ಕಿಲ್ಲ : ಸಂಜಯ್ ರಾವತ್

ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರಕ್ಕೆ ನೀಡಿದ 1 ಕೋಟಿ ರೂಪಾಯಿ ದೇಣಿಗೆಗೆ ತಮ್ಮ ಪಕ್ಷ ಶಿವಸೇನೆ (ಯುಬಿಟಿ) ರಸೀದಿಯನ್ನು ಸ್ವೀಕರಿಸಿಲ್ಲ ಎಂದು ಸಂಜಯ್ ರಾವತ್ ಶುಕ್ರವಾರ (ಜೂ.26) ಹೇಳಿದ್ದಾರೆ. ರಾಮ ಮಂದಿರದ ದೇಣಿಗೆ...

ರಾಮ ಮಂದಿರ ಹಗರಣ: ಶ್ರೀರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಮತ್ತು ಟ್ರಸ್ಟಿ ಅನಿಲ್ ಮಿಶ್ರಾ ರಾಜೀನಾಮೆ

ಶ್ರೀ ರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್, ರಾಮ ಮಂದಿರ ದೇಣಿಗೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ನೈತಿಕ ಹೊಣೆ ಹೊತ್ತು, ಸದಸ್ಯ ಟ್ರಸ್ಟಿ ಅನಿಲ್ ಮಿಶ್ರಾ ಅವರೊಂದಿಗೆ ಶುಕ್ರವಾರ ರಾಜೀನಾಮೆ...