Homeಕರ್ನಾಟಕಬೆಂಗಳೂರು | ಯುಜಿಸಿ ನೂತನ ನಿಯಮ ವಿರೋಧಿಸಿ ಏಳು ರಾಜ್ಯಗಳ ಶಿಕ್ಷಣ ಸಚಿವರ ಸಮಾವೇಶ

ಬೆಂಗಳೂರು | ಯುಜಿಸಿ ನೂತನ ನಿಯಮ ವಿರೋಧಿಸಿ ಏಳು ರಾಜ್ಯಗಳ ಶಿಕ್ಷಣ ಸಚಿವರ ಸಮಾವೇಶ

- Advertisement -
- Advertisement -

ವಿಶ್ವವಿದ್ಯಾಲಯ ಅನುದಾನ ಆಯೋಗವು (ಯುಜಿಸಿ) ಕುಲಪತಿಗಳ ನೇಮಕ ಹಾಗೂ ಉನ್ನತ ಶಿಕ್ಷಣ ಸಂಸ್ಥೆಗಳ ಸಂಬಂಧಪಟ್ಟಂತೆ ಹೊರಡಿಸಿರುವ ಕರಡು ನಿಯಮಾವಳಿಗಳ ಕುರಿತು ಚರ್ಚಿಸಲು ಫೆಬ್ರವರಿ 05 ರಂದು ಬೆಂಗಳೂರಿನಲ್ಲಿ ಕರೆಯಲಾಗಿರುವ ಒಂದು ದಿನದ ಉನ್ನತ ಶಿಕ್ಷಣ ಸಚಿವರ ರಾಷ್ಟ್ರೀಯ ಮಟ್ಟದ ಸಮಾವೇಶದಲ್ಲಿ ದೇಶದ ಏಳು ರಾಜ್ಯಗಳ ಸಚಿವರು ಪಾಲ್ಗೊಳ್ಳುತ್ತಿದ್ದಾರೆ ಎಂದು ಉನ್ನತ ಶಿಕ್ಷಣ ಸಚಿವರಾದ ಡಾ. ಎಂ.ಸಿ. ಸುಧಾಕರ್ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಬೆಂಗಳೂರು

ದೇಶದ ಕೆಲವು ರಾಜ್ಯಗಳ ಪ್ರಾದೇಶಿಕ ಪಕ್ಷಗಳು ಎನ್‌ಡಿಎ ಜೊತೆ ಹೊಂದಾಣಿಕೆ ಮಾಡಿಕೊಂಡಿರುವುದರಿಂದ ಬಹಿರಂಗವಾಗಿ ತಮ್ಮ ವಿರೋಧವನ್ನು ವ್ಯಕ್ತಪಡಿಸಲಾರದಂತ ಸ್ಥಿತಿಯಲ್ಲಿವೆ. ಎನ್‌ಡಿಎ ಮೈತ್ರಿಕೂಟದಲ್ಲಿರುವ ಜೆಡಿಯು, ಟಿಡಿಪಿ ಹಾಗೂ ಎಲ್‌ಜೆಪಿ (ರಾಮ್ ವಿಲಾಸ್) ಪಕ್ಷಗಳು ಈಗಾಗಲೇ ಈ ಸಂಬಂಧ ಅತೃಪ್ತಿ ವ್ಯಕ್ತಪಡಿಸಿ ಪತ್ರಿಕಾ ಹೇಳಿಕೆ ನೀಡಿರುವುದು ಬಹಿರಂಗಗೊಂಡಿದೆ. ಬೆಂಗಳೂರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ದೆಹಲಿಯಲ್ಲಿ ಚುನಾವಣೆ ಇರುವುದರಿಂದ ದೆಹಲಿಯ ಉನ್ನತ ಶಿಕ್ಷಣ ಸಚಿವರು ಪಾಲ್ಗೊಳ್ಳುತ್ತಿಲ್ಲ. ಉಳಿದಂತೆ ಆತಿಥ್ಯ ವಹಿಸಿರುವ ಕರ್ನಾಟಕವೂ ಸೇರಿದಂತೆ ಜಮ್ಮು ಕಾಶ್ಮೀರ, ಹಿಮಾಚಲ್ ಪ್ರದೇಶ, ಜಾರ್ಖಂಡ್, ತೆಲಂಗಾಣ, ತಮಿಳುನಾಡು ಹಾಗೂ ಕೇರಳದ ಉನ್ನತ ಶಿಕ್ಷಣ ಸಚಿವರು ಈ ಸಮಾವೇಶದಲ್ಲಿ ಪಾಲ್ಗೊಳ್ಳುತ್ತಿದ್ದಾರೆ.

ಫೆಬ್ರವರಿ 5 ರಂದು ಬೆಳಗ್ಗೆ 10:30ಕ್ಕೆ ಸಮಾವೇಶವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಲಿದ್ದಾರೆ. ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ವಿಶೇಷ ಆಹ್ವಾನಿತರಾಗಿ ಪಾಲ್ಗೊಳ್ಳುತ್ತಿದ್ದಾರೆ ಎಂದು ಡಾ.ಎಂ.ಸಿ. ಸುಧಾಕರ್ ತಿಳಿಸಿದ್ದಾರೆ.

ಯುಜಿಸಿ ಕರಡು ನಿಯಮಾವಳಿಗಳಿಂದ ದೇಶದ ಉನ್ನತ ಶಿಕ್ಷಣ ವ್ಯವಸ್ಥೆ ಮೇಲೆ ಕೇಂದ್ರ ಸರ್ಕಾರ ರಾಜ್ಯಗಳಿಗಿದ್ದ ಅಧಿಕಾರವನ್ನು ಮೊಟಕು ಗೊಳಿಸುವುದು ಮಾತ್ರವಲ್ಲದೆ ರಾಜ್ಯ ಸರ್ಕಾರಗಳ ಸಂವಿಧಾನಾತ್ಮಕ ಕರ್ತವ್ಯ ಮತ್ತು ಜವಾಬ್ದಾರಿಯನ್ನು ನಿಗ್ರಹಿಸ ಹೊರಟಿರುವುದು ಒಕ್ಕೂಟ ವ್ಯವಸ್ಥೆಯಲ್ಲಿ ಸರಿಯಲ್ಲ ಎಂದು ಅವರು ಹೇಳಿದ್ದಾರೆ.

ಇಷ್ಟೇ ಅಲ್ಲದೆ ಉನ್ನತ ಶಿಕ್ಷಣದ ಹಲವಾರು ಹಂತಗಳಲ್ಲಿ ಒತ್ತಾಯಪೂರ್ವಕವಾಗಿ ಕೆಲವು ನಿಯಮಾವಳಿಗಳನ್ನು ಹೇರಲಾಗುತ್ತಿದೆ. ಹಾಗಾಗಿ ಎಲ್ಲಾ ರಾಜ್ಯಗಳ ಒಕ್ಕೊರಲಿನ ಧ್ವನಿಯಾಗಿ ಕೇಂದ್ರಕ್ಕೆ ತಿಳಿಸಲು ಈ ಸಮಾವೇಶ ನಡೆಯುತ್ತಿದೆ. ಸಮಾವೇಶದಲ್ಲಿ ಉನ್ನತ ಶಿಕ್ಷಣಕ್ಕೆ ಸಂಬಂಧಪಟ್ಟಂತೆ ಕೇಂದ್ರ ಸರ್ಕಾರದ ಧೋರಣೆಯ ಬಗ್ಗೆ ಸಮಗ್ರವಾಗಿ ಚರ್ಚಿಸಲಾಗುವುದು. ಸಮಾವೇಶದ ನಿರ್ಣಯಗಳನ್ನು ಕೇಂದ್ರ ಸರ್ಕಾರ ಹಾಗೂ ಯು.ಜಿ.ಸಿ ಗೆ ಕಳುಹಿಸಿ ಕೊಡಲಾಗುವುದು ಎಂದು ಡಾ. ಎಂ.ಸಿ. ಸುಧಾಕರ್ ಅವರು ತಿಳಿಸಿದ್ದಾರೆ.

ದೇಶದ ಒಕ್ಕೂಟ ವ್ಯವಸ್ಥೆಯನ್ನು ಬಲಗೊಳಿಸುವುದು ಅತಿ ಮುಖ್ಯವಾಗಿದೆ. ಭಾರತದ ಶೈಕ್ಷಣಿಕ ವ್ಯವಸ್ಥೆ ಅತ್ಯಂತ ಸುಭದ್ರವಾದಂತದ್ದು, ಅದನ್ನು ಯಾವುದೇ ರಾಜ್ಯಗಳೊಂದಿಗೆ ಸಮಾಲೋಚಿಸದೆ ಏಕಾಏಕಿ ಕೇಂದ್ರ ಸರ್ಕಾರ ತನ್ನ ನಿಲುವುಗಳನ್ನು ಬಲವಂತವಾಗಿ ಹೇರುತ್ತಿರುವುದು ಒಕ್ಕೂಟ ವ್ಯವಸ್ಥೆಯಲ್ಲಿ ಸೂಕ್ತವಲ್ಲ. ಇದೊಂದು ಸಂವಿಧಾನ ವಿರೋಧಿ ಧೋರಣೆ ಎಂದು ಅವರು ಹೇಳಿದ್ದಾರೆ.

ಸಮಾವೇಶದಲ್ಲಿ ಉನ್ನತ ಶಿಕ್ಷಣ ಸಚಿವರ ಅಭಿಪ್ರಾಯವನ್ನು ಕ್ರೂಡೀಕರಿಸಿ ನಿರ್ಣಯಗಳನ್ನು ಕೈಗೊಳ್ಳಲಾಗುವುದು. ಕೇಂದ್ರ ಸರ್ಕಾರ ಯು.ಜಿ.ಸಿ ಮಾಡಿರುವ ಮಾರ್ಪಾಡುಗಳನ್ನು ಪುನರ್ ಪರಿಶೀಲಿಸದಿದ್ದರೆ ಮುಂದೆ ಯಾವ ನಿರ್ಧಾರ ಕೈಗೊಳ್ಳಬೇಕು ಎಂಬುದರ ಬಗ್ಗೆಯೂ ಚರ್ಚಿಸಲಾಗುವುದು ಎಂದು ಡಾ. ಎಂ.ಸಿ. ಸುಧಾಕರ್ ಅವರು ತಿಳಿಸಿದ್ದಾರೆ.

ಇದನ್ನೂಓದಿ:  ಬಿರಿಯಾನಿ, ಚಿಕನ್ ಫ್ರೈಗೆ ಮನವಿ ಮಾಡಿದ ಮಗು ; ಅಂಗನವಾಡಿ ಮೆನು ಪರಿಷ್ಕರಣೆಗೆ ಮುಂದಾದ ಕೇರಳ ಸರ್ಕಾರ!

ಬಿರಿಯಾನಿ, ಚಿಕನ್ ಫ್ರೈಗೆ ಮನವಿ ಮಾಡಿದ ಮಗು ; ಅಂಗನವಾಡಿ ಮೆನು ಪರಿಷ್ಕರಣೆಗೆ ಮುಂದಾದ ಕೇರಳ ಸರ್ಕಾರ!

ಇದನ್ನೂಓದಿ:  ಬಿರಿಯಾನಿ, ಚಿಕನ್ ಫ್ರೈಗೆ ಮನವಿ ಮಾಡಿದ ಮಗು ; ಅಂಗನವಾಡಿ ಮೆನು ಪರಿಷ್ಕರಣೆಗೆ ಮುಂದಾದ ಕೇರಳ ಸರ್ಕಾರ!

ಬಿರಿಯಾನಿ, ಚಿಕನ್ ಫ್ರೈಗೆ ಮನವಿ ಮಾಡಿದ ಮಗು ; ಅಂಗನವಾಡಿ ಮೆನು ಪರಿಷ್ಕರಣೆಗೆ ಮುಂದಾದ ಕೇರಳ ಸರ್ಕಾರ!

ಇದನ್ನೂಓದಿ:  ಬಿರಿಯಾನಿ, ಚಿಕನ್ ಫ್ರೈಗೆ ಮನವಿ ಮಾಡಿದ ಮಗು ; ಅಂಗನವಾಡಿ ಮೆನು ಪರಿಷ್ಕರಣೆಗೆ ಮುಂದಾದ ಕೇರಳ ಸರ್ಕಾರ!

ಬಿರಿಯಾನಿ, ಚಿಕನ್ ಫ್ರೈಗೆ ಮನವಿ ಮಾಡಿದ ಮಗು ; ಅಂಗನವಾಡಿ ಮೆನು ಪರಿಷ್ಕರಣೆಗೆ ಮುಂದಾದ ಕೇರಳ ಸರ್ಕಾರ!

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪೆಂಗ್ವಿನ್ ಇಂಡಿಯಾ ಹಿಂದೆ ಸರಿದ ನಂತರ ಸೋನಿಯಾ ಗಾಂಧಿ ಅವರ ಆತ್ಮಚರಿತ್ರೆ ‘ಬಿಲಾಂಗಿಂಗ್’ ಅನ್ನು ಪ್ರಕಟಿಸಲಿರುವ ‘ಹಾರ್ಪರ್‌ಕಾಲಿನ್ಸ್’ 

ನವದೆಹಲಿ: ಕಾಂಗ್ರೆಸ್‌ನ ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರ ಬಹುನಿರೀಕ್ಷಿತ ಆತ್ಮಚರಿತ್ರೆ ‘ಬಿಲಾಂಗಿಂಗ್: ಎ ಜರ್ನಿ ಆಫ್ ಲವ್’ ಇದೀಗ ಭಾರತದಲ್ಲಿ ಹಾರ್ಪರ್‌ಕಾಲಿನ್ಸ್ ಇಂಡಿಯಾ ಮೂಲಕ ಪ್ರಕಟವಾಗಲಿದೆ. ಪೆಂಗ್ವಿನ್ ರ‍್ಯಾಂಡಮ್ ಹೌಸ್ ಇಂಡಿಯಾ...

ಜೈಲಿನಲ್ಲಿ ಕಂಬಿ ಎಣಿಸುತ್ತಿರುವ 25 ಕ್ರಿಮಿನಲ್‌ಗಳು, ದೆಹಲಿಯ ಜಂತರ್-ಮಂತರ್‌ಗೆ ಬರುಲು ಹೇಗೆ ಸಾಧ? ತನಿಖಾ ವರದಿಯಲ್ಲಿ ಬಯಲಾಯ್ತು ಪೊಲೀಸರ ಕುತಂತ್ರ

ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ವಿರೋಧಿ ಪ್ರತಿಭಟನೆ ವೇಳೆ ದೆಹಲಿ ಪೊಲೀಸರು ಬಳಸಿದ್ದ ‘ಅಟೋಮೇಟೆಡ್ ಫೇಶಿಯಲ್ ರೆಕಗ್ನಿಷನ್ ಸಿಸ್ಟಮ್’ (AFRS - ಮುಖಚರ್ಯೆ ಗುರುತಿಸುವ ತಂತ್ರಜ್ಞಾನ) ಗಂಭೀರ...

ಪಶ್ಚಿಮ ಬಂಗಾಳ: ವರ್ಷದಲ್ಲಿ 1,000 ಆರ್‌ಎಸ್‌ಎಸ್‌ ಶಾಲೆ: ಶಿಕ್ಷಣ ವ್ಯವಸ್ಥೆಯನ್ನೇ ‘ರಾಷ್ಟ್ರೀಯತಾವಾದಿ’ಗೊಳಿಸುವುದಾಗಿ ಘೋಷಿಸಿದ ಸುವೇಂದು ಅಧಿಕಾರಿ

ಕೋಲ್ಕತ್ತಾ: ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಶೈಕ್ಷಣಿಕ ವಿಭಾಗವಾಗಿರುವ ವಿದ್ಯಾ ಭಾರತಿಯ ಶಾಲೆಗಳ ಸಂಖ್ಯೆಯನ್ನು ಪಶ್ಚಿಮ ಬಂಗಾಳದಲ್ಲಿ ಭಾರಿ ಪ್ರಮಾಣದಲ್ಲಿ ಹೆಚ್ಚಿಸುವುದಾಗಿ ಮುಖ್ಯಮಂತ್ರಿ ಸುವೇಂದು ಅಧಿಕಾರಿ ಘೋಷಿಸಿದ್ದಾರೆ. ರಾಜ್ಯದ ಪ್ರತಿಯೊಂದು ಜಿಲ್ಲೆ, ಪುರಸಭೆ...

SIR ನ್ಯಾಯಸಮ್ಮತವಾಗಿಲ್ಲ ಮಾಜಿ ಚುನಾವಣಾ ಆಯುಕ್ತ ಅಶೋಕ್ ಲಾವಾಸ ಆತಂಕ

ಭಾರತೀಯ ಚುನಾವಣಾ ಆಯೋಗವು (ಇಸಿಐ) ದೇಶಾದ್ಯಂತ ಕೈಗೊಂಡಿರುವ ಮತದಾರರ ಪಟ್ಟಿಯ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯು ಶಾಸನಾತ್ಮಕವಾಗಿ ಕಾನೂನುಬದ್ಧವಾಗಿದ್ದರೂ, ನೈತಿಕವಾಗಿ ನ್ಯಾಯಸಮ್ಮತವಾಗಿಲ್ಲ ಎಂದು ಮಾಜಿ ಚುನಾವಣಾ ಆಯುಕ್ತ ಅಶೋಕ್ ಲಾವಾಸ ತೀವ್ರ...

ಜಂತರ್ ಮಂತರ್ ಹಲ್ಲೆ: ‘ತಲೆಬುರುಡೆ ಒಡೆದೆ, ಜೈಲಿಗೆ ಹೋಗಲಿಲ್ಲ; ಕಪಿಲ್ ಮಿಶ್ರಾ ನನ್ನ ಅಣ್ಣ’: ಬಿಜೆಪಿ ಬೆಂಬಲದ ಬಗ್ಗೆ ದಾಳಿ ಆರೋಪಿ ಬಹಿರಂಗ ಹೇಳಿಕೆ

ನವದೆಹಲಿ: ದೆಹಲಿಯ ಜಂತರ್ ಮಂತರ್‌ನಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆಯ ವೇಳೆ ಪ್ರತಿಭಟನಾಕಾರಿಯ ತಂದೆಯ ಮೇಲೆ ನಡೆದ ಹಲ್ಲೆ ಪ್ರಕರಣ ಇದೀಗ ರಾಜಕೀಯ ವಿವಾದದ ಕೇಂದ್ರವಾಗಿದೆ. ಪ್ರಕರಣದ ಆರೋಪಿಯಾಗಿರುವ ಸ್ವತಃ ಬಲಪಂಥೀಯ ಹಾಗೂ ಹಿಂದೂತ್ವ ಕಾರ್ಯಕರ್ತ...

ದೆಹಲಿ: ‘ಖಾನ್’ ಎಂಬ ಹೆಸರಿನ ಕಾರಣಕ್ಕೆ ಪತ್ರಕರ್ತೆಯರ ಮೇಲೆ ಹಲ್ಲೆ ಆರೋಪ, FIR ದಾಖಲಿಸುವಂತೆ ಸಾಕೇತ್ ಠಾಣೆಯಲ್ಲಿ ಧರಣಿ

ದೆಹಲಿಯ ಸಾಕೇತ್ ಮ್ಯಾಕ್ಸ್ ಆಸ್ಪತ್ರೆಯ ಹೊಸ ವಿಭಾಗದ ಉದ್ಘಾಟನಾ ಕಾರ್ಯಕ್ರಮದ ವರದಿಗೆ ತೆರಳಿದ್ದ '4PM ನ್ಯೂಸ್ ನೆಟ್‌ವರ್ಕ್'ನ ಮುಸ್ಲಿಂ ಮಹಿಳಾ ಪತ್ರಕರ್ತೆಯರಾದ ಶಾಹೀನ್ ಖಾನ್ ಮತ್ತು ನಫೀಸಾ ಖಾನ್ ಅವರ ಮೇಲೆ ದಿಲ್ಲಿ...

ಮುಖ್ಯಮಂತ್ರಿಗಳನ್ನು ಪ್ರಶ್ನಿಸಿದ್ದಕ್ಕೆ ದೆಹಲಿ ಪೊಲೀಸರಿಂದ ಬಂಧನ-ಹಲ್ಲೆ: ಇಬ್ಬರು ಪತ್ರಕರ್ತೆಯರ ಆರೋಪ

ಸುದ್ದಿ ಮಾಡುತ್ತಿದ್ದಾಗ ದಕ್ಷಿಣ ದೆಹಲಿಯಲ್ಲಿ ದೆಹಲಿ ಪೊಲೀಸ್ ಸಿಬ್ಬಂದಿ ತಮ್ಮನ್ನು ವಶಕ್ಕೆ ಪಡೆದು ಥಳಿಸಿದ್ದಾರೆ ಎಂದು ಇಬ್ಬರು ಮುಸ್ಲಿಂ ಸ್ವತಂತ್ರ ಮಹಿಳಾ ಪತ್ರಕರ್ತೆಯರು ಆರೋಪಿಸಿದ್ದಾರೆ. '4 ಪಿಎಮ್ ನ್ಯೂಸ್ ನೆಟ್‌ವರ್ಕ್' (4 PM News...

ತ್ರಿಪುರಾ: ‘ದನ ಕಳ್ಳ’ ಎಂದು, ಖರೀದಿಸಿದ ದನಗಳೊಂದಿಗೆ ಹಿಂತಿರುಗುತ್ತಿದ್ದ ಮುಸ್ಲಿಂ ವ್ಯಾಪಾರಿ ಮೇಲೆ ಗುಂಪು ಹಲ್ಲೆ: 46 ವರ್ಷದ ಜಲೀಲುರ್ ರೆಹಮಾನ್ ಸಾವು

ಅಗರ್ತಲಾ: ಖರೀದಿಸಿದ ಎರಡು ದನಗಳನ್ನು ತೆಗೆದುಕೊಂಡು ಹೋಗುತ್ತಿದ್ದ ಮುಸ್ಲಿಂ ದನ ವ್ಯಾಪಾರಿಯೊಬ್ಬರನ್ನು ‘ದನ ಕಳ್ಳ’ ಎಂದು ಆರೋಪಿಸಿ ಗುಂಪೊಂದು ಥಳಿಸಿದ ಪರಿಣಾಮ ಅವರು ಮೃತಪಟ್ಟಿರುವ ಘಟನೆ ತ್ರಿಪುರಾದ ಕಲ್ಯಾಣಪುರ ಪೊಲೀಸ್ ಠಾಣೆ ವ್ಯಾಪ್ತಿಯ...

ಪ್ರಶ್ನಿಸುವವರನ್ನು ‘ದಿಮಾಗಿ ನಕ್ಸಲ್’ ಎಂದು ಕರೆಯುವುದು ಸೂಕ್ಷ್ಮತೆಯಿಲ್ಲದ ನಡವಳಿಕೆ: ಗೀತಾಂಜಲಿ ಅಂಗಮೋ

ಪ್ರಶ್ನೆ ಕೇಳುವ ವ್ಯಕ್ತಿಯನ್ನು ‘ದಿಮಾಗಿ ನಕ್ಸಲ್’ (ಬುದ್ಧಿಜೀವಿ ನಕ್ಸಲರು) ಎಂದು ಕರೆಯುವುದು ಅತ್ಯಂತ ಸೂಕ್ಷ್ಮತೆಯಿಲ್ಲದ ರೀತಿಯಾಗಿದೆ ಎಂದು ಪ್ರಸಿದ್ಧ ಹವಾಮಾನ ಕಾರ್ಯಕರ್ತ ಮತ್ತು ಶಿಕ್ಷಣ ತಜ್ಞ ಸೋನಂ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ...

ಬಸವರಾಜ ಕನ್ನಾಳೆ ಸಿಂಡಿಕೇಟ್ ಸದಸ್ಯತ್ವ ರದ್ದಾಗುತ್ತಾ? ರಾಜಭವನದ ಮೌನಕ್ಕೆ ಮೂಡಿದ ಅನುಮಾನ

ತುಮಕೂರು ವಿಶ್ವವಿದ್ಯಾಲಯದ ರಾಜ್ಯಪಾಲರ ನಾಮನಿರ್ದೇಶಿತ ಸಿಂಡಿಕೇಟ್ ಸದಸ್ಯ ಬಸವರಾಜ ಕನ್ನಾಳೆ ಬಂಧನದ ಬೆನ್ನಲ್ಲೇ, ತನಿಖಾ ಸಂಸ್ಥೆಗಳು ತಮ್ಮ ಕಾರ್ಯಾಚರಣೆಯನ್ನು ತೀವ್ರಗೊಳಿಸಿವೆ. ಪ್ರಕರಣಕ್ಕೆ ಸಂಬಂಧಿಸಿದಂತೆ ತುಮಕೂರು ವಿವಿಯ ಪ್ರಭಾರ ಕುಲಪತಿ ಪ್ರೊ. ನಾಗಭೂಷಣ ಅವರಿಂದ...