Homeಕರ್ನಾಟಕಬೆಂಗಳೂರು | ಯುಜಿಸಿ ನೂತನ ನಿಯಮ ವಿರೋಧಿಸಿ ಏಳು ರಾಜ್ಯಗಳ ಶಿಕ್ಷಣ ಸಚಿವರ ಸಮಾವೇಶ

ಬೆಂಗಳೂರು | ಯುಜಿಸಿ ನೂತನ ನಿಯಮ ವಿರೋಧಿಸಿ ಏಳು ರಾಜ್ಯಗಳ ಶಿಕ್ಷಣ ಸಚಿವರ ಸಮಾವೇಶ

- Advertisement -
- Advertisement -

ವಿಶ್ವವಿದ್ಯಾಲಯ ಅನುದಾನ ಆಯೋಗವು (ಯುಜಿಸಿ) ಕುಲಪತಿಗಳ ನೇಮಕ ಹಾಗೂ ಉನ್ನತ ಶಿಕ್ಷಣ ಸಂಸ್ಥೆಗಳ ಸಂಬಂಧಪಟ್ಟಂತೆ ಹೊರಡಿಸಿರುವ ಕರಡು ನಿಯಮಾವಳಿಗಳ ಕುರಿತು ಚರ್ಚಿಸಲು ಫೆಬ್ರವರಿ 05 ರಂದು ಬೆಂಗಳೂರಿನಲ್ಲಿ ಕರೆಯಲಾಗಿರುವ ಒಂದು ದಿನದ ಉನ್ನತ ಶಿಕ್ಷಣ ಸಚಿವರ ರಾಷ್ಟ್ರೀಯ ಮಟ್ಟದ ಸಮಾವೇಶದಲ್ಲಿ ದೇಶದ ಏಳು ರಾಜ್ಯಗಳ ಸಚಿವರು ಪಾಲ್ಗೊಳ್ಳುತ್ತಿದ್ದಾರೆ ಎಂದು ಉನ್ನತ ಶಿಕ್ಷಣ ಸಚಿವರಾದ ಡಾ. ಎಂ.ಸಿ. ಸುಧಾಕರ್ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಬೆಂಗಳೂರು

ದೇಶದ ಕೆಲವು ರಾಜ್ಯಗಳ ಪ್ರಾದೇಶಿಕ ಪಕ್ಷಗಳು ಎನ್‌ಡಿಎ ಜೊತೆ ಹೊಂದಾಣಿಕೆ ಮಾಡಿಕೊಂಡಿರುವುದರಿಂದ ಬಹಿರಂಗವಾಗಿ ತಮ್ಮ ವಿರೋಧವನ್ನು ವ್ಯಕ್ತಪಡಿಸಲಾರದಂತ ಸ್ಥಿತಿಯಲ್ಲಿವೆ. ಎನ್‌ಡಿಎ ಮೈತ್ರಿಕೂಟದಲ್ಲಿರುವ ಜೆಡಿಯು, ಟಿಡಿಪಿ ಹಾಗೂ ಎಲ್‌ಜೆಪಿ (ರಾಮ್ ವಿಲಾಸ್) ಪಕ್ಷಗಳು ಈಗಾಗಲೇ ಈ ಸಂಬಂಧ ಅತೃಪ್ತಿ ವ್ಯಕ್ತಪಡಿಸಿ ಪತ್ರಿಕಾ ಹೇಳಿಕೆ ನೀಡಿರುವುದು ಬಹಿರಂಗಗೊಂಡಿದೆ. ಬೆಂಗಳೂರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ದೆಹಲಿಯಲ್ಲಿ ಚುನಾವಣೆ ಇರುವುದರಿಂದ ದೆಹಲಿಯ ಉನ್ನತ ಶಿಕ್ಷಣ ಸಚಿವರು ಪಾಲ್ಗೊಳ್ಳುತ್ತಿಲ್ಲ. ಉಳಿದಂತೆ ಆತಿಥ್ಯ ವಹಿಸಿರುವ ಕರ್ನಾಟಕವೂ ಸೇರಿದಂತೆ ಜಮ್ಮು ಕಾಶ್ಮೀರ, ಹಿಮಾಚಲ್ ಪ್ರದೇಶ, ಜಾರ್ಖಂಡ್, ತೆಲಂಗಾಣ, ತಮಿಳುನಾಡು ಹಾಗೂ ಕೇರಳದ ಉನ್ನತ ಶಿಕ್ಷಣ ಸಚಿವರು ಈ ಸಮಾವೇಶದಲ್ಲಿ ಪಾಲ್ಗೊಳ್ಳುತ್ತಿದ್ದಾರೆ.

ಫೆಬ್ರವರಿ 5 ರಂದು ಬೆಳಗ್ಗೆ 10:30ಕ್ಕೆ ಸಮಾವೇಶವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಲಿದ್ದಾರೆ. ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ವಿಶೇಷ ಆಹ್ವಾನಿತರಾಗಿ ಪಾಲ್ಗೊಳ್ಳುತ್ತಿದ್ದಾರೆ ಎಂದು ಡಾ.ಎಂ.ಸಿ. ಸುಧಾಕರ್ ತಿಳಿಸಿದ್ದಾರೆ.

ಯುಜಿಸಿ ಕರಡು ನಿಯಮಾವಳಿಗಳಿಂದ ದೇಶದ ಉನ್ನತ ಶಿಕ್ಷಣ ವ್ಯವಸ್ಥೆ ಮೇಲೆ ಕೇಂದ್ರ ಸರ್ಕಾರ ರಾಜ್ಯಗಳಿಗಿದ್ದ ಅಧಿಕಾರವನ್ನು ಮೊಟಕು ಗೊಳಿಸುವುದು ಮಾತ್ರವಲ್ಲದೆ ರಾಜ್ಯ ಸರ್ಕಾರಗಳ ಸಂವಿಧಾನಾತ್ಮಕ ಕರ್ತವ್ಯ ಮತ್ತು ಜವಾಬ್ದಾರಿಯನ್ನು ನಿಗ್ರಹಿಸ ಹೊರಟಿರುವುದು ಒಕ್ಕೂಟ ವ್ಯವಸ್ಥೆಯಲ್ಲಿ ಸರಿಯಲ್ಲ ಎಂದು ಅವರು ಹೇಳಿದ್ದಾರೆ.

ಇಷ್ಟೇ ಅಲ್ಲದೆ ಉನ್ನತ ಶಿಕ್ಷಣದ ಹಲವಾರು ಹಂತಗಳಲ್ಲಿ ಒತ್ತಾಯಪೂರ್ವಕವಾಗಿ ಕೆಲವು ನಿಯಮಾವಳಿಗಳನ್ನು ಹೇರಲಾಗುತ್ತಿದೆ. ಹಾಗಾಗಿ ಎಲ್ಲಾ ರಾಜ್ಯಗಳ ಒಕ್ಕೊರಲಿನ ಧ್ವನಿಯಾಗಿ ಕೇಂದ್ರಕ್ಕೆ ತಿಳಿಸಲು ಈ ಸಮಾವೇಶ ನಡೆಯುತ್ತಿದೆ. ಸಮಾವೇಶದಲ್ಲಿ ಉನ್ನತ ಶಿಕ್ಷಣಕ್ಕೆ ಸಂಬಂಧಪಟ್ಟಂತೆ ಕೇಂದ್ರ ಸರ್ಕಾರದ ಧೋರಣೆಯ ಬಗ್ಗೆ ಸಮಗ್ರವಾಗಿ ಚರ್ಚಿಸಲಾಗುವುದು. ಸಮಾವೇಶದ ನಿರ್ಣಯಗಳನ್ನು ಕೇಂದ್ರ ಸರ್ಕಾರ ಹಾಗೂ ಯು.ಜಿ.ಸಿ ಗೆ ಕಳುಹಿಸಿ ಕೊಡಲಾಗುವುದು ಎಂದು ಡಾ. ಎಂ.ಸಿ. ಸುಧಾಕರ್ ಅವರು ತಿಳಿಸಿದ್ದಾರೆ.

ದೇಶದ ಒಕ್ಕೂಟ ವ್ಯವಸ್ಥೆಯನ್ನು ಬಲಗೊಳಿಸುವುದು ಅತಿ ಮುಖ್ಯವಾಗಿದೆ. ಭಾರತದ ಶೈಕ್ಷಣಿಕ ವ್ಯವಸ್ಥೆ ಅತ್ಯಂತ ಸುಭದ್ರವಾದಂತದ್ದು, ಅದನ್ನು ಯಾವುದೇ ರಾಜ್ಯಗಳೊಂದಿಗೆ ಸಮಾಲೋಚಿಸದೆ ಏಕಾಏಕಿ ಕೇಂದ್ರ ಸರ್ಕಾರ ತನ್ನ ನಿಲುವುಗಳನ್ನು ಬಲವಂತವಾಗಿ ಹೇರುತ್ತಿರುವುದು ಒಕ್ಕೂಟ ವ್ಯವಸ್ಥೆಯಲ್ಲಿ ಸೂಕ್ತವಲ್ಲ. ಇದೊಂದು ಸಂವಿಧಾನ ವಿರೋಧಿ ಧೋರಣೆ ಎಂದು ಅವರು ಹೇಳಿದ್ದಾರೆ.

ಸಮಾವೇಶದಲ್ಲಿ ಉನ್ನತ ಶಿಕ್ಷಣ ಸಚಿವರ ಅಭಿಪ್ರಾಯವನ್ನು ಕ್ರೂಡೀಕರಿಸಿ ನಿರ್ಣಯಗಳನ್ನು ಕೈಗೊಳ್ಳಲಾಗುವುದು. ಕೇಂದ್ರ ಸರ್ಕಾರ ಯು.ಜಿ.ಸಿ ಮಾಡಿರುವ ಮಾರ್ಪಾಡುಗಳನ್ನು ಪುನರ್ ಪರಿಶೀಲಿಸದಿದ್ದರೆ ಮುಂದೆ ಯಾವ ನಿರ್ಧಾರ ಕೈಗೊಳ್ಳಬೇಕು ಎಂಬುದರ ಬಗ್ಗೆಯೂ ಚರ್ಚಿಸಲಾಗುವುದು ಎಂದು ಡಾ. ಎಂ.ಸಿ. ಸುಧಾಕರ್ ಅವರು ತಿಳಿಸಿದ್ದಾರೆ.

ಇದನ್ನೂಓದಿ:  ಬಿರಿಯಾನಿ, ಚಿಕನ್ ಫ್ರೈಗೆ ಮನವಿ ಮಾಡಿದ ಮಗು ; ಅಂಗನವಾಡಿ ಮೆನು ಪರಿಷ್ಕರಣೆಗೆ ಮುಂದಾದ ಕೇರಳ ಸರ್ಕಾರ!

ಬಿರಿಯಾನಿ, ಚಿಕನ್ ಫ್ರೈಗೆ ಮನವಿ ಮಾಡಿದ ಮಗು ; ಅಂಗನವಾಡಿ ಮೆನು ಪರಿಷ್ಕರಣೆಗೆ ಮುಂದಾದ ಕೇರಳ ಸರ್ಕಾರ!

ಇದನ್ನೂಓದಿ:  ಬಿರಿಯಾನಿ, ಚಿಕನ್ ಫ್ರೈಗೆ ಮನವಿ ಮಾಡಿದ ಮಗು ; ಅಂಗನವಾಡಿ ಮೆನು ಪರಿಷ್ಕರಣೆಗೆ ಮುಂದಾದ ಕೇರಳ ಸರ್ಕಾರ!

ಬಿರಿಯಾನಿ, ಚಿಕನ್ ಫ್ರೈಗೆ ಮನವಿ ಮಾಡಿದ ಮಗು ; ಅಂಗನವಾಡಿ ಮೆನು ಪರಿಷ್ಕರಣೆಗೆ ಮುಂದಾದ ಕೇರಳ ಸರ್ಕಾರ!

ಇದನ್ನೂಓದಿ:  ಬಿರಿಯಾನಿ, ಚಿಕನ್ ಫ್ರೈಗೆ ಮನವಿ ಮಾಡಿದ ಮಗು ; ಅಂಗನವಾಡಿ ಮೆನು ಪರಿಷ್ಕರಣೆಗೆ ಮುಂದಾದ ಕೇರಳ ಸರ್ಕಾರ!

ಬಿರಿಯಾನಿ, ಚಿಕನ್ ಫ್ರೈಗೆ ಮನವಿ ಮಾಡಿದ ಮಗು ; ಅಂಗನವಾಡಿ ಮೆನು ಪರಿಷ್ಕರಣೆಗೆ ಮುಂದಾದ ಕೇರಳ ಸರ್ಕಾರ!

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಯಾವ ಸಂಘಗಳೇ ಆಗಲಿ ಸಂವಿಧಾನದ ಮುಂದೆ ಯಾರೂ ದೊಡ್ಡವರಲ್ಲ’: ಪ್ರಿಯಾಂಕ್ ಖರ್ಗೆ

ಬೆಂಗಳೂರು: ‘ಯಾವ ಸಂಘಗಳೇ ಆಗಲಿ ಸಂವಿಧಾನದ ಮುಂದೆ ಯಾರೂ ದೊಡ್ಡವರಲ್ಲ, ಯಾರೂ ನಿಯಮಗಳಿಗೆ ಅತೀತರಲ್ಲ’ ಎಂದು ಆರ್.ಎಸ್.ಎಸ್ ವಿರುದ್ಧ ಸಚಿವ ಪ್ರಿಯಾಂಕ್ ಖರ್ಗೆ ಮತ್ತೆ ಗುಡುಗಿದ್ದಾರೆ.  ರಾಜ್ಯದ ಗಮನ‌ ಸೆಳೆದಿದ್ದ ಕಲಬುರಗಿ ಜಿಲ್ಲೆಯ ಚಿತ್ತಾಪುರದಲ್ಲಿ...

“ಮಾಸ್ಕ್ ಧರಿಸಿದರೂ ಪ್ರಯೋಜನವಿಲ್ಲ”: ದೆಹಲಿ ವಾಯುಮಾಲಿನ್ಯದ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿದ ಸುಪ್ರೀಂ ಕೋರ್ಟ್

ದೆಹಲಿಯ ವಾಯುಮಾಲಿನ್ಯ 'ಗಂಭೀರ ಮಟ್ಟ' ತಲುಪಿರುವ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿದ ಸುಪ್ರೀಂ ಕೋರ್ಟ್, ಮಾಸ್ಕ್‌ ಧರಿಸಿದರೂ ಯಾವುದೇ ಪ್ರಯೋಜನವಿಲ್ಲದಂತಾಗಿದೆ. ವಕೀಲರು ವರ್ಚುವಲ್ ಮೂಲಕ ನ್ಯಾಯಾಲಯಕ್ಕೆ ಹಾಜರಾದರೆ ಸಾಕು ಎಂದು ಹೇಳಿದೆ. ವಿವಿಧ ಪ್ರಕರಣಗಳಲ್ಲಿ...

ಛತ್ತೀಸ್‌ಗಢ| ಇಬ್ಬರು ಉನ್ನತ ಕಮಾಂಡರ್‌ಗಳು ಸೇರಿದಂತೆ ಆರು ಜನ ಮಾವೋವಾದಿಗಳ ಎನ್‌ಕೌಂಟರ್‌

ಛತ್ತೀಸ್‌ಗಢದ ಬಿಜಾಪುರ ಜಿಲ್ಲೆಯಲ್ಲಿ ನವೆಂಬರ್ 11 ರಂದು ಭದ್ರತಾ ಸಿಬ್ಬಂದಿಯೊಂದಿಗೆ ನಡೆದ ಎನ್‌ಕೌಂಟರ್‌ನಲ್ಲಿ ಕೊಲ್ಲಲ್ಪಟ್ಟ ಆರು ಮಾವೋವಾದಿಗಳಲ್ಲಿ ಮಾವೋವಾದಿ ನಾಯಕಿ, ಹಿರಿಯ ಕಾರ್ಯಕರ್ತ ಪಾಪಾ ರಾವ್ ಅವರ ಪತ್ನಿ ಊರ್ಮಿಳಾ ಮತ್ತು ಬುಚಣ್ಣ...

ಗ್ರೆನೇಡ್ ದಾಳಿಗೆ ಸಂಚು ರೂಪಿಸಿದ್ದ, ಪಾಕ್ ಐಎಸ್ಐ ಬೆಂಬಲಿತ ಗುಂಪು: ವಿದೇಶಿ ಮೂಲದ 10 ಹ್ಯಾಂಡ್ಲರ್‌ಗಳ ಬಂಧನ

ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಯಲ್ಲಿ ಮಹತ್ವದ ಪ್ರಗತಿ ಸಾಧಿಸಿರುವ ಲುಧಿಯಾನ ಕಮಿಷನರೇಟ್ ಪೊಲೀಸರು, ಪಾಕಿಸ್ತಾನದ ಇಂಟರ್-ಸರ್ವೀಸಸ್ ಇಂಟೆಲಿಜೆನ್ಸ್ (ಐಎಸ್ಐ) ಬೆಂಬಲಿತ ಗ್ರೆನೇಡ್ ದಾಳಿ ಘಟಕದ 10 ಕಾರ್ಯಕರ್ತರನ್ನು ಬಂಧಿಸಿದ್ದಾರೆ. ಅವರಿಂದ ಸ್ಪೋಟಕಗಳನ್ನು ವಶಕ್ಕೆ ಪಡೆದಿದ್ದಾರೆ.  ನವೆಂಬರ್...

ಗಾಜಾದಲ್ಲಿ ಮುಂದುವರೆದ ಪ್ಯಾಲೆಸ್ತೀನಿಯನ್ ಮಕ್ಕಳ ಕಾಣೆ ಪ್ರಕರಣ: ಮಕ್ಕಳ ಹಕ್ಕುಗಳ ಗುಂಪು

ಬುಧವಾರ ಪ್ಯಾಲೆಸ್ತೀನಿಯನ್ ಹಕ್ಕುಗಳ ಗುಂಪಿನ ವರದಿಯ ಪ್ರಕಾರ, ಇತ್ತೀಚಿನ ತಿಂಗಳುಗಳಲ್ಲಿ ಗಾಜಾದಿಂದ ಕನಿಷ್ಠ ಆರು ಮಕ್ಕಳು ಕಣ್ಮರೆಯಾಗಿದ್ದಾರೆ ಎಂದು 'ಮಕ್ತೂಬ್‌ ಮೀಡಿಯಾ' ವರದಿ ಮಾಡಿದೆ. ಕಾಣೆಯಾದ ಮಕ್ಕಳ ಕುಟುಂಬಗಳು ಈ ಪ್ರದೇಶದಲ್ಲಿನ ತನ್ನ ಮಿಲಿಟರಿ...

ರೂ. 15 ಲಕ್ಷ ಲಂಚ ಪಡೆದ ಪ್ರಕರಣ : ನ್ಯಾಯಾಧೀಶನ ಮೇಲೆ ಕೇಸ್, ಕೋರ್ಟ್ ಗುಮಾಸ್ತ ಅರೆಸ್ಟ್

ವಾಣಿಜ್ಯ ಮೊಕದ್ದಮೆಯೊಂದರಲ್ಲಿ ಅನುಕೂಲಕರ ಆದೇಶವನ್ನು ಪಡೆಯಲು 15 ಲಕ್ಷ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಮತ್ತು ಸ್ವೀಕರಿಸಿದ ಆರೋಪದ ಮೇಲೆ ಮುಂಬೈ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಮಜಗಾಂವ್ ಸಿವಿಲ್ ಮತ್ತು ಸೆಷನ್ಸ್...

ಅಲಿಘರ್| ಶಾಲೆಯಲ್ಲಿ ‘ವಂದೇ ಮಾತರಂ’ ಹಾಡುವುದಕ್ಕೆ ಆಕ್ಷೇಪಿಸಿದ ಶಿಕ್ಷಕನ ಅಮಾನತು

ಉತ್ತರ ಪ್ರದೇಶದ ಶಾಹಪುರ್ ಕುತುಬ್‌ನ ಸರ್ಕಾರಿ ಹೈಯರ್ ಸೆಕೆಂಡರಿ ಶಾಲೆಯಲ್ಲಿ 'ವಂದೇ ಮಾತರಂ' ಹಾಡುವುದನ್ನು ಆಕ್ಷೇಪಿಸಿದ ಆರೋಪದ ಮೇಲೆ ಸರ್ಕಾರಿ ಶಾಲಾ ಶಿಕ್ಷಕನನ್ನು ಅಮಾನತುಗೊಳಿಸಲಾಗಿದೆ ಎಂದು ಅಧಿಕಾರಿಗಳು ಗುರುವಾರ ತಿಳಿಸಿದ್ದಾರೆ. ರಾಷ್ಟ್ರಗೀತೆಯ ನಂತರ ವಂದೇಮಾತರಂ...

ಚಿತ್ತಾಪುರದಲ್ಲಿ RSS ಪಥಸಂಚಲನಕ್ಕೆ ಷರತ್ತುಬದ್ಧ ಅನುಮತಿ ನೀಡಿದ ಹೈಕೋರ್ಟ್

ಕಲಬುರಗಿ ಜಿಲ್ಲೆಯ ಚಿತ್ತಾಪುರದಲ್ಲಿ ಆರ್‌ಎಸ್ಎಸ್ ಪಥಸಂಚಲನಕ್ಕೆ ಕರ್ನಾಟಕ ಹೈಕೋರ್ಟ್ ನ ಕಲಬುರಗಿ ಪೀಠ ಷರತ್ತುಬದ್ಧ ಅನುಮತಿ ನೀಡಿದೆ. ಇದರಿಂದ ತೀವ್ರ ಪ್ರತಿಷ್ಠೆಯ ವಿಷಯವಾಗಿದ್ದ ಚಿತ್ತಾಪುರ ಆರ್‌ಎಸ್‌ಎಸ್ ಪಥಸಂಚಲನಕ್ಕೆ ದಿನಾಂಕ ನಿಗದಿಯಾಗಿದೆ. ನವೆಂಬರ್ 16ರ‌ ಭಾನುವಾರ...

ಯಡಿಯೂರಪ್ಪ ವಿರುದ್ದದ ಪೋಕ್ಸೋ ಪ್ರಕರಣ ರದ್ದುಗೊಳಿಸಲು ಹೈಕೋರ್ಟ್ ನಕಾರ

ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ವಿರುದ್ಧ ದಾಖಲಾಗಿರುವ ಪೋಕ್ಸೋ ಪ್ರಕರಣವನ್ನು ರದ್ದುಗೊಳಿಸಲು ಹೈಕೋರ್ಟ್ ನಿರಾಕರಿಸಿದೆ. ಈ ಮೂಲಕ ನ್ಯಾಯಮೂರ್ತಿ ಎಂ.ಐ ಅರುಣ್ ಅವರು, ವಿಚಾರಣಾ ನ್ಯಾಯಾಲಯ ಸಂಜ್ಞೇ (cognisance)ಪರಿಗಣಿಸಿ ಯಡಿಯೂರಪ್ಪ ಅವರಿಗೆ ಸಮನ್ಸ್ ಜಾರಿ...

ಗುಜರಾತ್| ಗೋಹತ್ಯೆ ಮಾಡಿದ್ದಕ್ಕಾಗಿ ಮೂವರಿಗೆ ಜೀವಾವಧಿ ಶಿಕ್ಷೆ ವಿಧಿಸಿದ ನ್ಯಾಯಾಲಯ; ರೂ.18 ಲಕ್ಷ ದಂಡ

ಗುಜರಾತ್‌ನ ಅಮ್ರೇಲಿಯಲ್ಲಿರುವ ಸೆಷನ್ಸ್ ನ್ಯಾಯಾಲಯವು, ಗುಜರಾತ್ ಪ್ರಾಣಿ ಸಂರಕ್ಷಣಾ ಕಾಯ್ದೆಯಡಿ ಗೋಹತ್ಯೆ ಮಾಡಿದ್ದಕ್ಕಾಗಿ ಮೂವರಿಗೆ ಜೀವಾವಧಿ ಶಿಕ್ಷೆ ವಿಧಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ರಾಜ್ಯದಲ್ಲಿ ಗೋ ಕುಟುಂಬಕ್ಕೆ ಸೇರಿದ ಪ್ರಾಣಿಗಳ ಹತ್ಯೆಯನ್ನು ಕಾನೂನು...