Homeಕರ್ನಾಟಕಬೆಂಗಳೂರು | ಯುಜಿಸಿ ನೂತನ ನಿಯಮ ವಿರೋಧಿಸಿ ಏಳು ರಾಜ್ಯಗಳ ಶಿಕ್ಷಣ ಸಚಿವರ ಸಮಾವೇಶ

ಬೆಂಗಳೂರು | ಯುಜಿಸಿ ನೂತನ ನಿಯಮ ವಿರೋಧಿಸಿ ಏಳು ರಾಜ್ಯಗಳ ಶಿಕ್ಷಣ ಸಚಿವರ ಸಮಾವೇಶ

- Advertisement -
- Advertisement -

ವಿಶ್ವವಿದ್ಯಾಲಯ ಅನುದಾನ ಆಯೋಗವು (ಯುಜಿಸಿ) ಕುಲಪತಿಗಳ ನೇಮಕ ಹಾಗೂ ಉನ್ನತ ಶಿಕ್ಷಣ ಸಂಸ್ಥೆಗಳ ಸಂಬಂಧಪಟ್ಟಂತೆ ಹೊರಡಿಸಿರುವ ಕರಡು ನಿಯಮಾವಳಿಗಳ ಕುರಿತು ಚರ್ಚಿಸಲು ಫೆಬ್ರವರಿ 05 ರಂದು ಬೆಂಗಳೂರಿನಲ್ಲಿ ಕರೆಯಲಾಗಿರುವ ಒಂದು ದಿನದ ಉನ್ನತ ಶಿಕ್ಷಣ ಸಚಿವರ ರಾಷ್ಟ್ರೀಯ ಮಟ್ಟದ ಸಮಾವೇಶದಲ್ಲಿ ದೇಶದ ಏಳು ರಾಜ್ಯಗಳ ಸಚಿವರು ಪಾಲ್ಗೊಳ್ಳುತ್ತಿದ್ದಾರೆ ಎಂದು ಉನ್ನತ ಶಿಕ್ಷಣ ಸಚಿವರಾದ ಡಾ. ಎಂ.ಸಿ. ಸುಧಾಕರ್ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಬೆಂಗಳೂರು

ದೇಶದ ಕೆಲವು ರಾಜ್ಯಗಳ ಪ್ರಾದೇಶಿಕ ಪಕ್ಷಗಳು ಎನ್‌ಡಿಎ ಜೊತೆ ಹೊಂದಾಣಿಕೆ ಮಾಡಿಕೊಂಡಿರುವುದರಿಂದ ಬಹಿರಂಗವಾಗಿ ತಮ್ಮ ವಿರೋಧವನ್ನು ವ್ಯಕ್ತಪಡಿಸಲಾರದಂತ ಸ್ಥಿತಿಯಲ್ಲಿವೆ. ಎನ್‌ಡಿಎ ಮೈತ್ರಿಕೂಟದಲ್ಲಿರುವ ಜೆಡಿಯು, ಟಿಡಿಪಿ ಹಾಗೂ ಎಲ್‌ಜೆಪಿ (ರಾಮ್ ವಿಲಾಸ್) ಪಕ್ಷಗಳು ಈಗಾಗಲೇ ಈ ಸಂಬಂಧ ಅತೃಪ್ತಿ ವ್ಯಕ್ತಪಡಿಸಿ ಪತ್ರಿಕಾ ಹೇಳಿಕೆ ನೀಡಿರುವುದು ಬಹಿರಂಗಗೊಂಡಿದೆ. ಬೆಂಗಳೂರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ದೆಹಲಿಯಲ್ಲಿ ಚುನಾವಣೆ ಇರುವುದರಿಂದ ದೆಹಲಿಯ ಉನ್ನತ ಶಿಕ್ಷಣ ಸಚಿವರು ಪಾಲ್ಗೊಳ್ಳುತ್ತಿಲ್ಲ. ಉಳಿದಂತೆ ಆತಿಥ್ಯ ವಹಿಸಿರುವ ಕರ್ನಾಟಕವೂ ಸೇರಿದಂತೆ ಜಮ್ಮು ಕಾಶ್ಮೀರ, ಹಿಮಾಚಲ್ ಪ್ರದೇಶ, ಜಾರ್ಖಂಡ್, ತೆಲಂಗಾಣ, ತಮಿಳುನಾಡು ಹಾಗೂ ಕೇರಳದ ಉನ್ನತ ಶಿಕ್ಷಣ ಸಚಿವರು ಈ ಸಮಾವೇಶದಲ್ಲಿ ಪಾಲ್ಗೊಳ್ಳುತ್ತಿದ್ದಾರೆ.

ಫೆಬ್ರವರಿ 5 ರಂದು ಬೆಳಗ್ಗೆ 10:30ಕ್ಕೆ ಸಮಾವೇಶವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಲಿದ್ದಾರೆ. ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ವಿಶೇಷ ಆಹ್ವಾನಿತರಾಗಿ ಪಾಲ್ಗೊಳ್ಳುತ್ತಿದ್ದಾರೆ ಎಂದು ಡಾ.ಎಂ.ಸಿ. ಸುಧಾಕರ್ ತಿಳಿಸಿದ್ದಾರೆ.

ಯುಜಿಸಿ ಕರಡು ನಿಯಮಾವಳಿಗಳಿಂದ ದೇಶದ ಉನ್ನತ ಶಿಕ್ಷಣ ವ್ಯವಸ್ಥೆ ಮೇಲೆ ಕೇಂದ್ರ ಸರ್ಕಾರ ರಾಜ್ಯಗಳಿಗಿದ್ದ ಅಧಿಕಾರವನ್ನು ಮೊಟಕು ಗೊಳಿಸುವುದು ಮಾತ್ರವಲ್ಲದೆ ರಾಜ್ಯ ಸರ್ಕಾರಗಳ ಸಂವಿಧಾನಾತ್ಮಕ ಕರ್ತವ್ಯ ಮತ್ತು ಜವಾಬ್ದಾರಿಯನ್ನು ನಿಗ್ರಹಿಸ ಹೊರಟಿರುವುದು ಒಕ್ಕೂಟ ವ್ಯವಸ್ಥೆಯಲ್ಲಿ ಸರಿಯಲ್ಲ ಎಂದು ಅವರು ಹೇಳಿದ್ದಾರೆ.

ಇಷ್ಟೇ ಅಲ್ಲದೆ ಉನ್ನತ ಶಿಕ್ಷಣದ ಹಲವಾರು ಹಂತಗಳಲ್ಲಿ ಒತ್ತಾಯಪೂರ್ವಕವಾಗಿ ಕೆಲವು ನಿಯಮಾವಳಿಗಳನ್ನು ಹೇರಲಾಗುತ್ತಿದೆ. ಹಾಗಾಗಿ ಎಲ್ಲಾ ರಾಜ್ಯಗಳ ಒಕ್ಕೊರಲಿನ ಧ್ವನಿಯಾಗಿ ಕೇಂದ್ರಕ್ಕೆ ತಿಳಿಸಲು ಈ ಸಮಾವೇಶ ನಡೆಯುತ್ತಿದೆ. ಸಮಾವೇಶದಲ್ಲಿ ಉನ್ನತ ಶಿಕ್ಷಣಕ್ಕೆ ಸಂಬಂಧಪಟ್ಟಂತೆ ಕೇಂದ್ರ ಸರ್ಕಾರದ ಧೋರಣೆಯ ಬಗ್ಗೆ ಸಮಗ್ರವಾಗಿ ಚರ್ಚಿಸಲಾಗುವುದು. ಸಮಾವೇಶದ ನಿರ್ಣಯಗಳನ್ನು ಕೇಂದ್ರ ಸರ್ಕಾರ ಹಾಗೂ ಯು.ಜಿ.ಸಿ ಗೆ ಕಳುಹಿಸಿ ಕೊಡಲಾಗುವುದು ಎಂದು ಡಾ. ಎಂ.ಸಿ. ಸುಧಾಕರ್ ಅವರು ತಿಳಿಸಿದ್ದಾರೆ.

ದೇಶದ ಒಕ್ಕೂಟ ವ್ಯವಸ್ಥೆಯನ್ನು ಬಲಗೊಳಿಸುವುದು ಅತಿ ಮುಖ್ಯವಾಗಿದೆ. ಭಾರತದ ಶೈಕ್ಷಣಿಕ ವ್ಯವಸ್ಥೆ ಅತ್ಯಂತ ಸುಭದ್ರವಾದಂತದ್ದು, ಅದನ್ನು ಯಾವುದೇ ರಾಜ್ಯಗಳೊಂದಿಗೆ ಸಮಾಲೋಚಿಸದೆ ಏಕಾಏಕಿ ಕೇಂದ್ರ ಸರ್ಕಾರ ತನ್ನ ನಿಲುವುಗಳನ್ನು ಬಲವಂತವಾಗಿ ಹೇರುತ್ತಿರುವುದು ಒಕ್ಕೂಟ ವ್ಯವಸ್ಥೆಯಲ್ಲಿ ಸೂಕ್ತವಲ್ಲ. ಇದೊಂದು ಸಂವಿಧಾನ ವಿರೋಧಿ ಧೋರಣೆ ಎಂದು ಅವರು ಹೇಳಿದ್ದಾರೆ.

ಸಮಾವೇಶದಲ್ಲಿ ಉನ್ನತ ಶಿಕ್ಷಣ ಸಚಿವರ ಅಭಿಪ್ರಾಯವನ್ನು ಕ್ರೂಡೀಕರಿಸಿ ನಿರ್ಣಯಗಳನ್ನು ಕೈಗೊಳ್ಳಲಾಗುವುದು. ಕೇಂದ್ರ ಸರ್ಕಾರ ಯು.ಜಿ.ಸಿ ಮಾಡಿರುವ ಮಾರ್ಪಾಡುಗಳನ್ನು ಪುನರ್ ಪರಿಶೀಲಿಸದಿದ್ದರೆ ಮುಂದೆ ಯಾವ ನಿರ್ಧಾರ ಕೈಗೊಳ್ಳಬೇಕು ಎಂಬುದರ ಬಗ್ಗೆಯೂ ಚರ್ಚಿಸಲಾಗುವುದು ಎಂದು ಡಾ. ಎಂ.ಸಿ. ಸುಧಾಕರ್ ಅವರು ತಿಳಿಸಿದ್ದಾರೆ.

ಇದನ್ನೂಓದಿ:  ಬಿರಿಯಾನಿ, ಚಿಕನ್ ಫ್ರೈಗೆ ಮನವಿ ಮಾಡಿದ ಮಗು ; ಅಂಗನವಾಡಿ ಮೆನು ಪರಿಷ್ಕರಣೆಗೆ ಮುಂದಾದ ಕೇರಳ ಸರ್ಕಾರ!

ಬಿರಿಯಾನಿ, ಚಿಕನ್ ಫ್ರೈಗೆ ಮನವಿ ಮಾಡಿದ ಮಗು ; ಅಂಗನವಾಡಿ ಮೆನು ಪರಿಷ್ಕರಣೆಗೆ ಮುಂದಾದ ಕೇರಳ ಸರ್ಕಾರ!

ಇದನ್ನೂಓದಿ:  ಬಿರಿಯಾನಿ, ಚಿಕನ್ ಫ್ರೈಗೆ ಮನವಿ ಮಾಡಿದ ಮಗು ; ಅಂಗನವಾಡಿ ಮೆನು ಪರಿಷ್ಕರಣೆಗೆ ಮುಂದಾದ ಕೇರಳ ಸರ್ಕಾರ!

ಬಿರಿಯಾನಿ, ಚಿಕನ್ ಫ್ರೈಗೆ ಮನವಿ ಮಾಡಿದ ಮಗು ; ಅಂಗನವಾಡಿ ಮೆನು ಪರಿಷ್ಕರಣೆಗೆ ಮುಂದಾದ ಕೇರಳ ಸರ್ಕಾರ!

ಇದನ್ನೂಓದಿ:  ಬಿರಿಯಾನಿ, ಚಿಕನ್ ಫ್ರೈಗೆ ಮನವಿ ಮಾಡಿದ ಮಗು ; ಅಂಗನವಾಡಿ ಮೆನು ಪರಿಷ್ಕರಣೆಗೆ ಮುಂದಾದ ಕೇರಳ ಸರ್ಕಾರ!

ಬಿರಿಯಾನಿ, ಚಿಕನ್ ಫ್ರೈಗೆ ಮನವಿ ಮಾಡಿದ ಮಗು ; ಅಂಗನವಾಡಿ ಮೆನು ಪರಿಷ್ಕರಣೆಗೆ ಮುಂದಾದ ಕೇರಳ ಸರ್ಕಾರ!

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...