Homeಕರ್ನಾಟಕ2 ತಿಂಗಳಿನಿಂದ ವೇತನವಿಲ್ಲ: ಎಐಸಿಸಿಟಿಯು ನೇತೃತ್ವದಲ್ಲಿ ವಿಕ್ಟೋರಿಯಾ ಆಸ್ಪತ್ರೆ ಕಾರ್ಮಿಕರ ಪ್ರತಿಭಟನೆ

2 ತಿಂಗಳಿನಿಂದ ವೇತನವಿಲ್ಲ: ಎಐಸಿಸಿಟಿಯು ನೇತೃತ್ವದಲ್ಲಿ ವಿಕ್ಟೋರಿಯಾ ಆಸ್ಪತ್ರೆ ಕಾರ್ಮಿಕರ ಪ್ರತಿಭಟನೆ

- Advertisement -
- Advertisement -

ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಕೆಲಸ ನಿರ್ವಹಿಸುತ್ತಿರುವ ಹೌಸ್ ಕೀಪಿಂಗ್, ವಾರ್ಡ್ ಅಟೆಂಡರ್, ಲಿಫ್ಟ್ ಆಪರೇಟರ್, ಡಾಟಾ ಎಂಟ್ರಿ ಆಪರೇಟರ್ ಮತ್ತು ಸೆಕ್ಯುರಿಟಿ ಕಾರ್ಮಿಕರಿಗೆ ಕಳೆದ ಅಕ್ಟೋಬರ್ ತಿಂಗಳಿನಿಂದ ವೇತನವನ್ನು ಪಾವತಿ ಮಾಡಿರದ ಹಿನ್ನೆಲೆ ಸೋಮವಾರ (ನ.29) ಎಲ್ಲಾ ಕಾರ್ಮಿಕರು ಆಸ್ಪತ್ರೆ ಆವರಣದಲ್ಲಿ ಪ್ರತಿಭಟನೆ ನಡೆಸಿದ್ದಾರೆ.

ಕಾರ್ಮಿಕರಿಗೆ ತಕ್ಷಣ ಎರಡು ತಿಂಗಳ ವೇತನ ಪಾವತಿ ಮಾಡಬೇಕು ಮತ್ತು ಪ್ರತಿ ತಿಂಗಳ 7ನೇ ತಾರೀಖಿನೊಳಗೆ ವೇತನವನ್ನು ನೀಡಬೇಕು ಎಂಬ ಹಕ್ಕೋತ್ತಾಯದೊಂದಿಗೆ ಬಿಎಂಸಿಆರ್‌ಐ (ವಿಕ್ಟೋರಿಯಾ ಆಸ್ಪತ್ರೆ) ಆಡಳಿತ ಮಂಡಳಿಯ ವಿರುದ್ಧ ಎಐಸಿಸಿಟಿಯು ಸಂಘಟನೆಯ ವತಿಯಿಂದ ಸೋಮವಾರ (ನ.29) ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು.

ಕಾರ್ಮಿಕ ಕಾನೂನುಗಳ ಅನ್ವಯ ಪ್ರತಿ ತಿಂಗಳು 7ನೇ ತಾರೀಖಿನೊಳಗೆ ವೇತವನ್ನು ಕಡ್ಡಾಯವಾಗಿ ಪಾವತಿಸಬೇಕಾಗಿರುತ್ತದೆ. ಆದರೆ ವಿಕ್ಟೋರಿಯಾ ಆಸ್ಪತ್ರೆಯ ಆಡಳಿತ ಮಂಡಳಿಯಾದ ಬಿಎಂಸಿಆರ್‌ಐ ಈ ಕಾರ್ಮಿಕರಿಗೆ ಸರಿಯಾದ ಸಮಯಕ್ಕೆ ವೇತನ ನೀಡದೆ ಕಾನೂನುಗಳನ್ನು ಗಾಳಿಗೆ ತೂರಿದ್ದಾರೆ ಎಂದು ಪ್ರತಿಭಟನಾಕಾರರು ಆರೋಪಿಸಿದ್ದಾರೆ.

ಇದನ್ನೂ ಓದಿ: ಗೌರವದಿಂದ ವರ್ತಿಸಿ; ಘನತೆಯುತ್ತ ಕೆಲಸದ ವಾತಾವರಣ ನಿರ್ಮಿಸಿ: ಬೆಂಗಳೂರು ಪೌರ ಕಾರ್ಮಿಕರ ಆಕ್ರೋಶ

ವಿಕ್ಟೋರಿಯಾ ಆಸ್ಪತ್ರೆಯ ಆಡಳಿತ ಮಂಡಳಿಯಾದ ಬಿಎಂಸಿಆರ್‌ಐ ಈ ಕಾರ್ಮಿಕರಿಗೆ ಸರಿಯಾದ ಸಮಯಕ್ಕೆ ವೇತನ ನೀಡದೆ ಇರುವ ಕಾರಣ, ಮನೆ ಬಾಡಿಗೆ, ಊಟ-ಬಟ್ಟೆ, ಅನಾರೋಗ್ಯಕ್ಕೆ ಚಿಕಿತ್ಸೆ ಮತ್ತು ಮಕ್ಕಳ ಸ್ಕೂಲ್ ಫೀ ಸೇರಿದಂತೆ ಇತರೆ ಮೂಲಭೂತ ಅವಶ್ಯಕತೆಗಳನ್ನು ಪೂರೈಸಿಕೊಳ್ಳಲು ಈ ಕಾರ್ಮಿಕರು ಬಡ್ಡಿ ಸಾಲದ ಸುಳಿಯಲ್ಲಿ ಸಿಲುಕಬೇಕಾಗಿದೆ. ದಿನನಿತ್ಯದ ಅವಶ್ಯಕ ವಸ್ತುಗಳ ಬೆಲೆ ಗಗನಕ್ಕೇರುತ್ತೀರುವ ಈ ಸಂಧರ್ಭದಲ್ಲಿ ಬಿಎಂಸಿಆರ್‌ಐ ಆಡಳಿತ ಮಂಡಳಿಯು ಕಾರ್ಮಿಕರಿಗೆ ವೇತನ ನೀಡದೆ ದುಡಿಸಿಕೊಳ್ಳುತ್ತಿರುವುದರಿಂದ ಕಾರ್ಮಿಕರು ಬೀದಿಪಾಲಾಗುವ ಸಂಭವವಿದೆ ಎಂದು ಪ್ರತಿಭಟನೆಯ ನೇತೃತ್ವ ವಹಿಸಿದ್ದ ಎಐಸಿಸಿಟಿಯು ಆಕ್ರೋಶ ವ್ಯಕ್ತಪಡಿಸಿದೆ.

ಸರಿಯಾದ ಸಮಯಕ್ಕೆ ವೇತನ ನೀಡದೆ ದುಡಿಸಿಕೊಳ್ಳುವುದು ಕಾರ್ಮಿಕ ಶೋಷಣೆ ಮತ್ತು ಗುಲಾಮಿ ಪದ್ಧತಿಗೆ ಸಮ ಎಂದು ಹಲವಾರು ಪ್ರಕರಣಗಳಲ್ಲಿ ಸರ್ವೋಚ್ಛ ನ್ಯಾಯಾಲಯ ಆದೇಶ ನೀಡಿದೆ. ಹೀಗಿದ್ದರು ಬಿಎಂಸಿಆರ್‌ಐ ಕಾರ್ಮಿಕರಿಗೆ ವೇತನ ನೀಡದೆ ದುಡಿಸಿಕೊಳ್ಳುತ್ತಿರುವುದು ಕಾರ್ಮಿಕ ಕಾನೂನುಗಳು ಮತ್ತು ಸರ್ವೋಚ್ಛ ನ್ಯಾಯಾಲಯದ ಆದೇಶಗಳ ಉಲ್ಲಂಘನೆಯಾಗಿರುತ್ತದೆ ಎಂದು ಸಂಘಟನೆ ತಿಳಿಸಿದೆ.


ಇದನ್ನೂ ಓದಿ: ಕಾರ್ಮಿಕರಿಗೆ ಸರ್ಕಾರಿ ಆಸ್ಪತ್ರೆಗಳಲ್ಲೇ ಲಸಿಕೆ ನೀಡಲು ಒತ್ತಾಯಿಸಿ ರಾಜ್ಯವ್ಯಾಪಿ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಜೆಪಿ ಸೇರಲು ಸಿದ್ದರಾದ ಭೂಪೇನ್ ಬೋರಾ : ಪ್ರಿಯಾಂಕಾ, ಡಿಕೆಶಿ ಸೇರಿದಂತೆ ‘ಕೈ ಟ್ರಬಲ್ ಶೂಟರ್‌ಗಳು’ ಅಸ್ಸಾಂಗೆ ದೌಡು

ರಾಜ್ಯ ಕಾಂಗ್ರೆಸ್‌ ಘಟಕದ ಮಾಜಿ ಅಧ್ಯಕ್ಷ ಭೂಪೇನ್ ಬೋರಾ ಬಿಜೆಪಿಗೆ ಹಾರಲು ಸಿದ್ದರಾಗಿರುವ ನಡುವೆ ಪ್ರಿಯಾಂಕಾ ಗಾಂಧಿ, ಡಿ.ಕೆ ಶಿವಕುಮಾರ್ ಸೇರಿದಂತೆ ಕಾಂಗ್ರೆಸ್‌ನ ಟ್ರಬಲ್ ಶೂಟರ್‌ಗಳ ತಂಡ ಅಸ್ಸಾಂಗೆ ದೌಡಾಯಿಸಿದೆ. ಅಸ್ಸಾಂ ಕಾಂಗ್ರೆಸ್ ಅಭ್ಯರ್ಥಿಗಳ...

ಸರ್ಕಾರದ ಭರವಸೆಗೆ ಮಣಿಯದ ಸಾರಿಗೆ ಸಿಬ್ಬಂದಿ : ಮುಷ್ಕರ ಮುಂದುವರಿಸಲು ನಿರ್ಧಾರ

ಹಿಂಬಾಕಿ ಪಾವತಿ, ವೇತನ ಪರಿಷ್ಕರಣೆ ಸೇರಿದಂತೆ ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು ರಾಜ್ಯದ ನಾಲ್ಕು ಸಾರಿಗೆ ನಿಗಮಗಳಾದ ಕೆಎಸ್‌ಆರ್‌ಟಿಸಿ, ಕೆಕೆಆರ್‌ಟಿಸಿ, ಎನ್‌ಡಬ್ಲ್ಯುಕೆಆರ್‌ಟಿಸಿ ಹಾಗೂ ಬಿಎಂಟಿಸಿಯ ನೌಕರರು ಇಂದು (ಫೆ.19) ಮುಷ್ಕರಕ್ಕೆ ಕರೆ ಕೊಟ್ಟಿದ್ದಾರೆ. ನೌಕರರ ಪ್ರತಿಭಟನೆ...

ಬೆಂಗಳೂರಿನ ಅಪಾರ್ಟ್‌ಮೆಂಟ್‌ನಲ್ಲಿ ಪತ್ನಿಯ ಕತ್ತು ಹಿಸುಕಿ ಕೊಂದ ನಿವೃತ್ತ ಇಸ್ರೋ ಉದ್ಯೋಗಿ ಬಂಧನ

ಬೆಂಗಳೂರು: ಆಘಾತಕಾರಿ ಘಟನೆಯೊಂದರಲ್ಲಿ, 72 ವರ್ಷದ ನಿವೃತ್ತ ಇಸ್ರೋ ಉದ್ಯೋಗಿಯೊಬ್ಬರು ವೈಟ್‌ಫೀಲ್ಡ್ ವಿಭಾಗದ ಆವಲಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ತಮ್ಮ ಅಪಾರ್ಟ್‌ಮೆಂಟ್‌ನಲ್ಲಿ ಬುಧವಾರ ಪತ್ನಿಯನ್ನು ಕತ್ತು ಹಿಸುಕಿ ಕೊಂದಿರುವುದಾಗಿ ವರದಿಯಾಗಿದೆ.  ಬೊಮ್ಮನಹಳ್ಳಿಯ ಅಪಾರ್ಟ್‌ಮೆಂಟ್‌ನಲ್ಲಿ ಬೆಳಿಗ್ಗೆ...

ಮಧ್ಯಪ್ರದೇಶದಲ್ಲಿ ಶಾಸಕ ರಾಜಾ ಸಿಂಗ್‌ನಿಂದ ದ್ವೇಷ ಭಾಷಣ; ಪ್ರಚೋದನಕಾರಿ ‘ಶಿರಚ್ಛೇದನ’ ಹೇಳಿಕೆಗೆ ವಿರೋಧ

ತಮ್ಮ ಪ್ರಚೋದನಕಾರಿ ಹೇಳಿಕೆಗಳಿಂದಲೇ ಕುಖ್ಯಾತರಾಗಿರುವ ಹೈದರಾಬಾದ್‌ನ ಗೋಶಮಹಲ್ ಶಾಸಕ ಟಿ ರಾಜಾ ಸಿಂಗ್ ಸಾರ್ವಜನಿಕ ರ‍್ಯಾಲಿಯಲ್ಲಿ ಮತ್ತೊಮ್ಮೆ ಪ್ರಚೋದನಕಾರಿ ಹೇಳಿಕೆಗಳನ್ನು ನೀಡಿದ್ದಾರೆ. ಮಧ್ಯಪ್ರದೇಶದಲ್ಲಿ ಅವರು ಆಡಿದ ಮಾತುಗಳು ವಿವಾದಕ್ಕೆ ಕಾರಣವಾಗಿದೆ. "ಪ್ರತಿಯೊಬ್ಬ ಬಜರಂಗಿಗಳು...

ಪಂಜಾಬ್ ವಿಶ್ವವಿದ್ಯಾಲಯದಲ್ಲಿ ಜಾತಿ ಆಧಾರಿತ ತಾರತಮ್ಯ ಆರೋಪ; ‘ಬಡ್ತಿ ವಿಳಂಬವಾಗಿದೆ..’; ಎಂದ ದಲಿತ ಪ್ರಾಧ್ಯಾಪಕ

ಪಂಜಾಬ್ ವಿಶ್ವವಿದ್ಯಾಲಯದ ದಲಿತ ಸಹಾಯಕ ಪ್ರಾಧ್ಯಾಪಕ ಹರ್‌ಪ್ರೀತ್ ಸಿಂಗ್ ಅವರು ವಿಶ್ವವಿದ್ಯಾಲಯದಲ್ಲಿ ಜಾತಿ ಆಧಾರಿತ ತಾರತಮ್ಯ ಇದೆ ಎಂದು ಸಾರ್ವಜನಿಕವಾಗಿ ಆರೋಪಿಸಿದ್ದಾರೆ. ತನ್ನ ಜಾತಿಯ ಕಾರಣದಿಂದಾಗಿ ಉದ್ದೇಶಪೂರ್ವಕವಾಗಿ ಬಡ್ತಿ ವಿಳಂಬ ಮಾಡಲಾಗಿದೆ...

ಮಹಾರಾಷ್ಟ್ರ: ತಾಯಿ, ಸಹೋದರನ ಕಣ್ಣಿಗೆ ಮೆಣಸಿನ ಪುಡಿ ಎರೆಚಿ ಮದುವೆ ಸಿದ್ಧತೆಯಲ್ಲಿದ್ದ 21 ವರ್ಷದ ಯುವತಿಯ ಅಪಹರಣ

ಮುಂಬೈ: ಆಘಾತಕಾರಿ ಘಟನೆಯೊಂದರಲ್ಲಿ, ಮಹಾರಾಷ್ಟ್ರದ ಪುಣೆ ಜಿಲ್ಲೆಯ ಇಂದಾಪುರ ತಹಸಿಲ್‌ನ ಭಿಗ್ವಾನ್‌ನಲ್ಲಿ 21 ವರ್ಷದ ಯುವತಿಯನ್ನು ಆಕೆಯ ತಾಯಿ ಮತ್ತು ಸಹೋದರನ ಮುಂದೆಯೇ ಇಬ್ಬರು ವ್ಯಕ್ತಿಗಳು ಅಪಹರಿಸಿದ್ದಾರೆ ಎಂದು ಆರೋಪಿಸಲಾಗಿದೆ.ಮದುವೆ ಸಿದ್ಧತೆಯಲ್ಲಿದ್ದ ಯುವತಿ...

KERALA SIR | ಬಿಜೆಪಿ ಮುಖಂಡನ ದೂರು: ಪೌರತ್ವ ಸಾಬೀತುಪಡಿಸುವಂತೆ ಮುಸ್ಲಿಂ ವ್ಯಕ್ತಿಗೆ ನೋಟಿಸ್!

ಬಿಜೆಪಿ ಕಾಸರಗೋಡು ಜಿಲ್ಲಾ ಕಾರ್ಯದರ್ಶಿ ಲೋಕೇಶ್ ನೋಂಡಾ ಎಂಬಾತನ ದೂರಿನ ಮೇರೆಗೆ ಹಿರಿಯ ವಯಸ್ಸಿನ ಮುಸ್ಲಿಂ ವ್ಯಕ್ತಿಯೊಬ್ಬರಿಗೆ ಭಾರತೀಯ ಪೌರತ್ವ ಸಾಬೀತುಪಡಿಸುವಂತೆ ಚುನಾವಣಾ ನೋಂದಣಿ ಅಧಿಕಾರಿ (ಇಆರ್‌ಒ) ನೋಟಿಸ್ ಜಾರಿ ಮಾಡಿದ್ದು, ಆ...

ಚೀನಾ ನಿರ್ಮಿತ ರೋಬೋ ಡಾಗ್ ತಾವೇ ಅಭಿವೃದ್ಧಿಪಡಿಸಿದ್ದಾಗಿ ಹೇಳಿಕೊಂಡಿದ್ದ ಗ್ಯಾಲ್ಗೋಟಿಯಾ ವಿವಿ AI ಸಮ್ಮಿಟ್ ಎಕ್ಸ್‌ಪೋದಿಂದ ತೆರವು

ನವದೆಹಲಿ: ಚೀನಾ ನಿರ್ಮಿತ ರೋಬೋ ಡಾಗ್ ತಮ್ಮದೇ ಎಂದು ಪ್ರದರ್ಶಿಸಿದ್ದಕ್ಕಾಗಿ ಟೀಕೆಗೆ ಗುರಿಯಾದ ನಂತರ ಮತ್ತು ಕೇಂದ್ರ ಸರ್ಕಾರವು ವಿರೋಧ ಪಕ್ಷಗಳಿಂದ ಟೀಕೆಗೆ ಗುರಿಯಾದ ನಂತರ ನೋಯ್ಡಾ ಮೂಲದ ಗ್ಯಾಲ್ಗೋಟಿಯಾಸ್ ವಿಶ್ವವಿದ್ಯಾಲಯವನ್ನು ಬುಧವಾರ...

ಉತ್ತರ ಪ್ರದೇಶ| ಅಹಮದಾಬಾದ್-ಗೋರಖ್‌ಪುರ ಎಕ್ಸ್‌ಪ್ರೆಸ್‌ನಲ್ಲಿ ಟಿಟಿಇಯಿಂದ ಸೇನಾ ಆಕಾಂಕ್ಷಿಯ ಮೇಲೆ ಅತ್ಯಾಚಾರ

ಉತ್ತರ ಪ್ರದೇಶದ ಅಹಮದಾಬಾದ್-ಗೋರಖ್‌ಪುರ ಎಕ್ಸ್‌ಪ್ರೆಸ್‌ನಲ್ಲಿ ಪ್ರಯಾಣಿಸುತ್ತಿದ್ದಾಗ ಟಿಕೆಟ್ ಪರೀಕ್ಷಕನೊಬ್ಬ (ಟಿಟಿಇ) ತನ್ನ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದು ಸೇನಾ ನೇಮಕಾತಿಗೆ ತಯಾರಿ ನಡೆಸುತ್ತಿದ್ದ ಯುವತಿ ಆರೋಪಿಸಿದ್ದಾರೆ. ಇಂದಾರಾ ಮತ್ತು ಡಿಯೋರಿಯಾ ರೈಲು ನಿಲ್ದಾಣಗಳ ನಡುವೆ...

ನಾನು ಭಾರತಕ್ಕೆ ಯಾವಾಗ ಹಿಂತಿರುಗುತ್ತೇನೆಂದು ಹೇಳಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಗೆ ತಿಳಿಸಿದ ಮಲ್ಯ

ವಂಚನೆ ಮತ್ತು ಹಣ ವರ್ಗಾವಣೆಯ ಹಲವಾರು ಪ್ರಕರಣಗಳನ್ನು ಎದುರಿಸುತ್ತಿರುವ, ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಯುಕೆ ತೊರೆಯುವುದನ್ನು ನನಗೆ ಕಾನೂನುಬದ್ಧವಾಗಿ ನಿಷೇಧಿಸಲಾಗಿರುವುದರಿಂದ ಯಾವಾಗ ಭಾರತಕ್ಕೆ ಹಿಂತಿರುಗುತ್ತೇನೆ ಎಂದು ಹೇಳಲು ಸಾಧ್ಯವಿಲ್ಲ" ಎಂದು...