Homeಕರ್ನಾಟಕ2 ತಿಂಗಳಿನಿಂದ ವೇತನವಿಲ್ಲ: ಎಐಸಿಸಿಟಿಯು ನೇತೃತ್ವದಲ್ಲಿ ವಿಕ್ಟೋರಿಯಾ ಆಸ್ಪತ್ರೆ ಕಾರ್ಮಿಕರ ಪ್ರತಿಭಟನೆ

2 ತಿಂಗಳಿನಿಂದ ವೇತನವಿಲ್ಲ: ಎಐಸಿಸಿಟಿಯು ನೇತೃತ್ವದಲ್ಲಿ ವಿಕ್ಟೋರಿಯಾ ಆಸ್ಪತ್ರೆ ಕಾರ್ಮಿಕರ ಪ್ರತಿಭಟನೆ

- Advertisement -
- Advertisement -

ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಕೆಲಸ ನಿರ್ವಹಿಸುತ್ತಿರುವ ಹೌಸ್ ಕೀಪಿಂಗ್, ವಾರ್ಡ್ ಅಟೆಂಡರ್, ಲಿಫ್ಟ್ ಆಪರೇಟರ್, ಡಾಟಾ ಎಂಟ್ರಿ ಆಪರೇಟರ್ ಮತ್ತು ಸೆಕ್ಯುರಿಟಿ ಕಾರ್ಮಿಕರಿಗೆ ಕಳೆದ ಅಕ್ಟೋಬರ್ ತಿಂಗಳಿನಿಂದ ವೇತನವನ್ನು ಪಾವತಿ ಮಾಡಿರದ ಹಿನ್ನೆಲೆ ಸೋಮವಾರ (ನ.29) ಎಲ್ಲಾ ಕಾರ್ಮಿಕರು ಆಸ್ಪತ್ರೆ ಆವರಣದಲ್ಲಿ ಪ್ರತಿಭಟನೆ ನಡೆಸಿದ್ದಾರೆ.

ಕಾರ್ಮಿಕರಿಗೆ ತಕ್ಷಣ ಎರಡು ತಿಂಗಳ ವೇತನ ಪಾವತಿ ಮಾಡಬೇಕು ಮತ್ತು ಪ್ರತಿ ತಿಂಗಳ 7ನೇ ತಾರೀಖಿನೊಳಗೆ ವೇತನವನ್ನು ನೀಡಬೇಕು ಎಂಬ ಹಕ್ಕೋತ್ತಾಯದೊಂದಿಗೆ ಬಿಎಂಸಿಆರ್‌ಐ (ವಿಕ್ಟೋರಿಯಾ ಆಸ್ಪತ್ರೆ) ಆಡಳಿತ ಮಂಡಳಿಯ ವಿರುದ್ಧ ಎಐಸಿಸಿಟಿಯು ಸಂಘಟನೆಯ ವತಿಯಿಂದ ಸೋಮವಾರ (ನ.29) ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು.

ಕಾರ್ಮಿಕ ಕಾನೂನುಗಳ ಅನ್ವಯ ಪ್ರತಿ ತಿಂಗಳು 7ನೇ ತಾರೀಖಿನೊಳಗೆ ವೇತವನ್ನು ಕಡ್ಡಾಯವಾಗಿ ಪಾವತಿಸಬೇಕಾಗಿರುತ್ತದೆ. ಆದರೆ ವಿಕ್ಟೋರಿಯಾ ಆಸ್ಪತ್ರೆಯ ಆಡಳಿತ ಮಂಡಳಿಯಾದ ಬಿಎಂಸಿಆರ್‌ಐ ಈ ಕಾರ್ಮಿಕರಿಗೆ ಸರಿಯಾದ ಸಮಯಕ್ಕೆ ವೇತನ ನೀಡದೆ ಕಾನೂನುಗಳನ್ನು ಗಾಳಿಗೆ ತೂರಿದ್ದಾರೆ ಎಂದು ಪ್ರತಿಭಟನಾಕಾರರು ಆರೋಪಿಸಿದ್ದಾರೆ.

ಇದನ್ನೂ ಓದಿ: ಗೌರವದಿಂದ ವರ್ತಿಸಿ; ಘನತೆಯುತ್ತ ಕೆಲಸದ ವಾತಾವರಣ ನಿರ್ಮಿಸಿ: ಬೆಂಗಳೂರು ಪೌರ ಕಾರ್ಮಿಕರ ಆಕ್ರೋಶ

ವಿಕ್ಟೋರಿಯಾ ಆಸ್ಪತ್ರೆಯ ಆಡಳಿತ ಮಂಡಳಿಯಾದ ಬಿಎಂಸಿಆರ್‌ಐ ಈ ಕಾರ್ಮಿಕರಿಗೆ ಸರಿಯಾದ ಸಮಯಕ್ಕೆ ವೇತನ ನೀಡದೆ ಇರುವ ಕಾರಣ, ಮನೆ ಬಾಡಿಗೆ, ಊಟ-ಬಟ್ಟೆ, ಅನಾರೋಗ್ಯಕ್ಕೆ ಚಿಕಿತ್ಸೆ ಮತ್ತು ಮಕ್ಕಳ ಸ್ಕೂಲ್ ಫೀ ಸೇರಿದಂತೆ ಇತರೆ ಮೂಲಭೂತ ಅವಶ್ಯಕತೆಗಳನ್ನು ಪೂರೈಸಿಕೊಳ್ಳಲು ಈ ಕಾರ್ಮಿಕರು ಬಡ್ಡಿ ಸಾಲದ ಸುಳಿಯಲ್ಲಿ ಸಿಲುಕಬೇಕಾಗಿದೆ. ದಿನನಿತ್ಯದ ಅವಶ್ಯಕ ವಸ್ತುಗಳ ಬೆಲೆ ಗಗನಕ್ಕೇರುತ್ತೀರುವ ಈ ಸಂಧರ್ಭದಲ್ಲಿ ಬಿಎಂಸಿಆರ್‌ಐ ಆಡಳಿತ ಮಂಡಳಿಯು ಕಾರ್ಮಿಕರಿಗೆ ವೇತನ ನೀಡದೆ ದುಡಿಸಿಕೊಳ್ಳುತ್ತಿರುವುದರಿಂದ ಕಾರ್ಮಿಕರು ಬೀದಿಪಾಲಾಗುವ ಸಂಭವವಿದೆ ಎಂದು ಪ್ರತಿಭಟನೆಯ ನೇತೃತ್ವ ವಹಿಸಿದ್ದ ಎಐಸಿಸಿಟಿಯು ಆಕ್ರೋಶ ವ್ಯಕ್ತಪಡಿಸಿದೆ.

ಸರಿಯಾದ ಸಮಯಕ್ಕೆ ವೇತನ ನೀಡದೆ ದುಡಿಸಿಕೊಳ್ಳುವುದು ಕಾರ್ಮಿಕ ಶೋಷಣೆ ಮತ್ತು ಗುಲಾಮಿ ಪದ್ಧತಿಗೆ ಸಮ ಎಂದು ಹಲವಾರು ಪ್ರಕರಣಗಳಲ್ಲಿ ಸರ್ವೋಚ್ಛ ನ್ಯಾಯಾಲಯ ಆದೇಶ ನೀಡಿದೆ. ಹೀಗಿದ್ದರು ಬಿಎಂಸಿಆರ್‌ಐ ಕಾರ್ಮಿಕರಿಗೆ ವೇತನ ನೀಡದೆ ದುಡಿಸಿಕೊಳ್ಳುತ್ತಿರುವುದು ಕಾರ್ಮಿಕ ಕಾನೂನುಗಳು ಮತ್ತು ಸರ್ವೋಚ್ಛ ನ್ಯಾಯಾಲಯದ ಆದೇಶಗಳ ಉಲ್ಲಂಘನೆಯಾಗಿರುತ್ತದೆ ಎಂದು ಸಂಘಟನೆ ತಿಳಿಸಿದೆ.


ಇದನ್ನೂ ಓದಿ: ಕಾರ್ಮಿಕರಿಗೆ ಸರ್ಕಾರಿ ಆಸ್ಪತ್ರೆಗಳಲ್ಲೇ ಲಸಿಕೆ ನೀಡಲು ಒತ್ತಾಯಿಸಿ ರಾಜ್ಯವ್ಯಾಪಿ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...