Homeಕರ್ನಾಟಕಮಕ್ಕಳ ಎದೆಗೆ ಬೀಳುವ ಅಕ್ಷರ ತಮ್ಮ ಸಹಜೀವಿಗಳ ಬಗೆಗೆ ಅಂತಃಕರಣ ಹಾಗೂ ಪ್ರೀತಿಯನ್ನಷ್ಟೇ ಕಲಿಸುವಂತಾಗಬೇಕು..

ಮಕ್ಕಳ ಎದೆಗೆ ಬೀಳುವ ಅಕ್ಷರ ತಮ್ಮ ಸಹಜೀವಿಗಳ ಬಗೆಗೆ ಅಂತಃಕರಣ ಹಾಗೂ ಪ್ರೀತಿಯನ್ನಷ್ಟೇ ಕಲಿಸುವಂತಾಗಬೇಕು..

- Advertisement -
- Advertisement -

ರಾಜ್ಯದ ಶಾಲಾ ಪಠ್ಯಪುಸ್ತಕಗಳ ಪರಿಷ್ಕರಣೆಗೆ ಸಂಬಂಧಿಸಿದಂತೆ ನಡೆಯುತ್ತಿರುವ ಚರ್ಚೆಗಳನ್ನು ರಾಜ್ಯದ ಜನ ಗಂಭೀರವಾಗಿ ಗಮನಿಸುತ್ತಿದ್ದಾರೆ. ಪಠ್ಯಗಳನ್ನು ಕುರಿತ ಚರ್ಚೆಗಳು ಆರೋಗ್ಯಕರ ನೆಲೆಯಲ್ಲಿ ನಡೆದು ವಿದ್ಯಾರ್ಥಿಗಳ ಜ್ಞಾನವಿಕಾಸಕ್ಕೆ ಕಾರಣವಾಗುವ ಉತ್ತಮ ಗುಣಮಟ್ಟದ ಪಠ್ಯಪುಸ್ತಕಗಳು ದೊರಕುವಂತಾದರೆ ಎಲ್ಲರಿಗೂ ಸಂತೋಷ. ಆದರೆ ಚರ್ಚೆಗಳು ಆ ನಿಟ್ಟಿನಲ್ಲಿ ಸಾಗದೆ ಸೈದ್ಧಾಂತಿಕ ದ್ವೇಷ, ವೈಯಕ್ತಿಕ ನಿಂದನೆಯ ಮಟ್ಟಕ್ಕೆ ತಲುಪಿರುವುದು ಆಘಾತಕಾರಿ ಬೆಳವಣಿಗೆ. ಅದರಲ್ಲೂ ಪಠ್ಯಪುಸ್ತಕ ಪರಿಷ್ಕರಣಾ ಸಮಿತಿಯ ನಿಕಟಪೂರ್ವ ಅಧ್ಯಕ್ಷರಾಗಿದ್ದ ಹಿರಿಯ ಸಾಹಿತಿ ಬರಗೂರು ರಾಮಚಂದ್ರಪ್ಪನವರ ಬಗೆಗೆ ಕೆಲವರು ಮಾಡುತ್ತಿರುವ ಟೀಕೆಗಳು, ಬಳಸುತ್ತಿರುವ ಭಾಷೆ ಸಜ್ಜನ ಸಂಸ್ಕೃತಿಯದ್ದಲ್ಲ. ನಾಡಿನ ನೆಲ-ಜಲ-ನುಡಿ-ಸಾಮಾಜಿಕ ನ್ಯಾಯ-ಸಾಮಾಜಿಕ ಸ್ವಾಸ್ಥ್ಯಕ್ಕಾಗಿ ಸದಾ ಚಿಂತಿಸುವ ದೇವನೂರ ಮಹಾದೇವ, ಬರಗೂರರಂತಹ ಹಿರಿಯರ ಬಗೆಗೆ ಮಾತನಾಡುವಾಗ ಅವರೊಂದಿಗೆ ಎಷ್ಟೇ ತಾತ್ವಿಕ ಭಿನ್ನಾಭಿಪ್ರಾಯಗಳಿದ್ದರೂ, ಗೌರವದಿಂದ ಮಾತನಾಡಬೇಕು ಎನ್ನುವ ಸಾಮಾನ್ಯ ವಿವೇಕ ಅವರನ್ನು ಟೀಕಿಸುವವರಿಗೆ ಇರಬೇಕಾಗಿದೆ.

ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಎಂತಹುದೇ ಭಿನ್ನಾಭಿಪ್ರಾಯಗಳನ್ನೂ ಪರಸ್ಪರ ಚರ್ಚೆಯ ಮೂಲಕ ಬಗೆಹರಿಸಿಕೊಳ್ಳುವ ಅವಕಾಶ ಇರುವಾಗ ದ್ವೇಷ ಕಾರುವ ಮಾತುಗಳ ಅವಶ್ಯಕತೆ ಇಲ್ಲ. ಆದರೆ, ಜವಾಬ್ದಾರಿಯುತ ಸ್ಥಾನಗಳಲ್ಲಿ ಇರುವವರೇ ಬಾಯಿಗೆ ಬಂದಂತೆ ಮಾತನಾಡುತ್ತಿರುವುದರಿಂದ ಮನಸ್ಸುಗಳನ್ನು ಬೆಸೆಯಬೇಕಾದ ಮಾತು ತನ್ನ ಮೂಲೋದ್ದೇಶದಿಂದ ವಿಮುಖಗೊಂಡು ದ್ವೇಷ, ತಿರಸ್ಕಾರದ ಅಸ್ತ್ರವಾಗಿ ಬದಲಾಗಿದೆ. ಕೆಲವು ಮಾಧ್ಯಮಗಳು ಹಾಗೂ ಸಾಮಾಜಿಕ ಜಾಲತಾಣಗಳಂತೂ ದ್ವೇಷ ಬಿತ್ತುವ ಅಂಕಣಗಳಾಗಿ ಬದಲಾಗಿವೆ. ಈ ಅಸಹನೆ, ದ್ವೇಷ, ಪೂರ್ವಾಗ್ರಹಗಳು ಕನ್ನಡದ ಮನಸ್ಸಾಕ್ಷಿಯಂತಿರುವ ರಾಷ್ಟ್ರಕವಿ ಕುವೆಂಪುರವರನ್ನು ಹಾಗೂ ನಮ್ಮೆಲ್ಲರ ಹೆಮ್ಮೆಯ ನಾಡಗೀತೆಯನ್ನೂ ಬಿಡದೆ ಅವಹೇಳನ ಮಾಡುವ ಮಟ್ಟಕ್ಕೆ ತಲುಪಿದೆ ಎಂದರೆ, ಖಂಡಿತವಾಗಿಯೂ ಇದು ನಾಡಿನ ಹಿತದೃಷ್ಟಿಯಿಂದ ಅತ್ಯಂತ ಅಪಾಯಕಾರಿಯಾದುದು. ಕನ್ನಡದ ಸೌಹಾರ್ದ ಸಂಸ್ಕೃತಿಯ ಅಡಿಪಾಯವನ್ನೇ ನಾಶ ಮಾಡುವಂತಹ ಈ ಅಪಾಯದಿಂದ ಪಾರಾಗಬೇಕಾದರೆ, ಯಾರೂ ಯಾರನ್ನೂ ಶತ್ರುಗಳೆನ್ನುವಂತೆ ನೋಡಬಾರದೆನ್ನುವ ಸರಳ ತತ್ವವನ್ನು ಎಲ್ಲ ಪಂಥೀಯರೂ ಅರ್ಥಮಾಡಿಕೊಳ್ಳಲೇಬೇಕಾಗಿದೆ.

ಹಾಗೆಯೇ, ಈ ನಾಡಿನ ಶತಮಾನಗಳ ಕಾಲದ ಕೂಡಿ ಬಾಳುವ ಪರಂಪರೆಗೆ ಹಾಗೂ ಪ್ರಜಾಸತ್ತಾತ್ಮಕ ಮೌಲ್ಯಗಳ ಉಳಿವಿಗೆ ಯಾವುದು ಸೂಕ್ತವೋ ಅಂತಹ ಪಠ್ಯಪುಸ್ತಕಗಳು ಮಕ್ಕಳಿಗೆ ದೊರಕುವಂತಾಗಬೇಕು. ಆ ಮಕ್ಕಳ ಎದೆಗೆ ಬೀಳುವ ಅಕ್ಷರ ತಮ್ಮ ಸಹಜೀವಿಗಳ ಬಗೆಗೆ ಅಂತಃಕರಣ ಹಾಗೂ ಪ್ರೀತಿಯನ್ನಷ್ಟೇ ಕಲಿಸುವಂತಾಗಬೇಕು. ಇಲ್ಲದಿದ್ದರೆ ಯಾರೂ ನೆಮ್ಮದಿಯಿಂದ ಇರಲಾಗದ ಸಮಾಜವೊಂದು ಸೃಷ್ಟಿಯಾಗುವ ಅಪಾಯವಿದೆ ಎನ್ನುವುದನ್ನು ಎಲ್ಲರೂ ಮನಗಾಣಬೇಕಾಗಿದೆ.

ವಂದನೆಗಳೊಂದಿಗೆ,

ಬೆಂಗಳೂರು ವಿಶ್ವವಿದ್ಯಾಲಯ ಕಾಲೇಜು ಕನ್ನಡ ಅಧ್ಯಾಪಕರ ಸಂಘ(ರಿ).
ಡಾ. ಅಮರೇಂದ್ರ ಶೆಟ್ಟಿ ಆರ್(ಅಮರೇಂದ್ರ ಹೊಲ್ಲಂಬಳ್ಳಿ) – ಅಧ್ಯಕ್ಷರು
ಡಾ.ಎ.ವಿ.ಲಕ್ಷ್ಮೀನಾರಾಯಣ- ಪ್ರಧಾನ ಕಾರ್‍ಯದರ್ಶಿ
ಡಾ.ಕೆ.ಎನ್.ಹೊಯ್ಸಳಾದಿತ್ಯ- ಉಪಾಧ್ಯಕ್ಷರು
ಡಾ. ಎ.ಸಿ.ಸುಧಾ- ಖಜಾಂಚಿ
ಡಾ. ಕೆ.ಪಿ.ಪುಟ್ಟಮಾರಯ್ಯ- ಸಹ ಕಾರ್‍ಯದರ್ಶಿ


ಇದನ್ನೂ ಓದಿ: ಪಠ್ಯ ಪರಿಶೀಲಿಸಿದ ಸಮಿತಿಯ ಸದಸ್ಯರ್‍ಯಾರೂ ಪ್ರತಿಕ್ರಿಯೆಗೆ ಸಿದ್ಧರಿಲ್ಲ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...

ಬರೇಲಿ: ಮುಸ್ಲಿಂ ಯುವಕರ ಮೇಲೆ ಹಲ್ಲೆ, ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಬಲವಂತ; ಪ್ರಮುಖ ಆರೋಪಿ ಬಂಧನ

ಉತ್ತರ ಪ್ರದೇಶದ ಬರೇಲಿಯಲ್ಲಿ ಮುಸ್ಲಿಂ ಯುವಕನ ಮೇಲೆ ಹಲ್ಲೆ, ಅವಮಾನ ಮತ್ತು ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು ಆರೋಪಿಸಲಾಗಿದೆ. ಪ್ರಮುಖ ಆರೋಪಿ ರಿಷಭ್ ಠಾಕೂರ್ ನನ್ನು ಪೊಲೀಸರು ಬಂಧಿಸಿದ್ದು, ಮತ್ತಷ್ಟು ಬಂಧನಗಳು ನಡೆಯುವ...