Homeಕರ್ನಾಟಕಮಕ್ಕಳ ಎದೆಗೆ ಬೀಳುವ ಅಕ್ಷರ ತಮ್ಮ ಸಹಜೀವಿಗಳ ಬಗೆಗೆ ಅಂತಃಕರಣ ಹಾಗೂ ಪ್ರೀತಿಯನ್ನಷ್ಟೇ ಕಲಿಸುವಂತಾಗಬೇಕು..

ಮಕ್ಕಳ ಎದೆಗೆ ಬೀಳುವ ಅಕ್ಷರ ತಮ್ಮ ಸಹಜೀವಿಗಳ ಬಗೆಗೆ ಅಂತಃಕರಣ ಹಾಗೂ ಪ್ರೀತಿಯನ್ನಷ್ಟೇ ಕಲಿಸುವಂತಾಗಬೇಕು..

- Advertisement -
- Advertisement -

ರಾಜ್ಯದ ಶಾಲಾ ಪಠ್ಯಪುಸ್ತಕಗಳ ಪರಿಷ್ಕರಣೆಗೆ ಸಂಬಂಧಿಸಿದಂತೆ ನಡೆಯುತ್ತಿರುವ ಚರ್ಚೆಗಳನ್ನು ರಾಜ್ಯದ ಜನ ಗಂಭೀರವಾಗಿ ಗಮನಿಸುತ್ತಿದ್ದಾರೆ. ಪಠ್ಯಗಳನ್ನು ಕುರಿತ ಚರ್ಚೆಗಳು ಆರೋಗ್ಯಕರ ನೆಲೆಯಲ್ಲಿ ನಡೆದು ವಿದ್ಯಾರ್ಥಿಗಳ ಜ್ಞಾನವಿಕಾಸಕ್ಕೆ ಕಾರಣವಾಗುವ ಉತ್ತಮ ಗುಣಮಟ್ಟದ ಪಠ್ಯಪುಸ್ತಕಗಳು ದೊರಕುವಂತಾದರೆ ಎಲ್ಲರಿಗೂ ಸಂತೋಷ. ಆದರೆ ಚರ್ಚೆಗಳು ಆ ನಿಟ್ಟಿನಲ್ಲಿ ಸಾಗದೆ ಸೈದ್ಧಾಂತಿಕ ದ್ವೇಷ, ವೈಯಕ್ತಿಕ ನಿಂದನೆಯ ಮಟ್ಟಕ್ಕೆ ತಲುಪಿರುವುದು ಆಘಾತಕಾರಿ ಬೆಳವಣಿಗೆ. ಅದರಲ್ಲೂ ಪಠ್ಯಪುಸ್ತಕ ಪರಿಷ್ಕರಣಾ ಸಮಿತಿಯ ನಿಕಟಪೂರ್ವ ಅಧ್ಯಕ್ಷರಾಗಿದ್ದ ಹಿರಿಯ ಸಾಹಿತಿ ಬರಗೂರು ರಾಮಚಂದ್ರಪ್ಪನವರ ಬಗೆಗೆ ಕೆಲವರು ಮಾಡುತ್ತಿರುವ ಟೀಕೆಗಳು, ಬಳಸುತ್ತಿರುವ ಭಾಷೆ ಸಜ್ಜನ ಸಂಸ್ಕೃತಿಯದ್ದಲ್ಲ. ನಾಡಿನ ನೆಲ-ಜಲ-ನುಡಿ-ಸಾಮಾಜಿಕ ನ್ಯಾಯ-ಸಾಮಾಜಿಕ ಸ್ವಾಸ್ಥ್ಯಕ್ಕಾಗಿ ಸದಾ ಚಿಂತಿಸುವ ದೇವನೂರ ಮಹಾದೇವ, ಬರಗೂರರಂತಹ ಹಿರಿಯರ ಬಗೆಗೆ ಮಾತನಾಡುವಾಗ ಅವರೊಂದಿಗೆ ಎಷ್ಟೇ ತಾತ್ವಿಕ ಭಿನ್ನಾಭಿಪ್ರಾಯಗಳಿದ್ದರೂ, ಗೌರವದಿಂದ ಮಾತನಾಡಬೇಕು ಎನ್ನುವ ಸಾಮಾನ್ಯ ವಿವೇಕ ಅವರನ್ನು ಟೀಕಿಸುವವರಿಗೆ ಇರಬೇಕಾಗಿದೆ.

ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಎಂತಹುದೇ ಭಿನ್ನಾಭಿಪ್ರಾಯಗಳನ್ನೂ ಪರಸ್ಪರ ಚರ್ಚೆಯ ಮೂಲಕ ಬಗೆಹರಿಸಿಕೊಳ್ಳುವ ಅವಕಾಶ ಇರುವಾಗ ದ್ವೇಷ ಕಾರುವ ಮಾತುಗಳ ಅವಶ್ಯಕತೆ ಇಲ್ಲ. ಆದರೆ, ಜವಾಬ್ದಾರಿಯುತ ಸ್ಥಾನಗಳಲ್ಲಿ ಇರುವವರೇ ಬಾಯಿಗೆ ಬಂದಂತೆ ಮಾತನಾಡುತ್ತಿರುವುದರಿಂದ ಮನಸ್ಸುಗಳನ್ನು ಬೆಸೆಯಬೇಕಾದ ಮಾತು ತನ್ನ ಮೂಲೋದ್ದೇಶದಿಂದ ವಿಮುಖಗೊಂಡು ದ್ವೇಷ, ತಿರಸ್ಕಾರದ ಅಸ್ತ್ರವಾಗಿ ಬದಲಾಗಿದೆ. ಕೆಲವು ಮಾಧ್ಯಮಗಳು ಹಾಗೂ ಸಾಮಾಜಿಕ ಜಾಲತಾಣಗಳಂತೂ ದ್ವೇಷ ಬಿತ್ತುವ ಅಂಕಣಗಳಾಗಿ ಬದಲಾಗಿವೆ. ಈ ಅಸಹನೆ, ದ್ವೇಷ, ಪೂರ್ವಾಗ್ರಹಗಳು ಕನ್ನಡದ ಮನಸ್ಸಾಕ್ಷಿಯಂತಿರುವ ರಾಷ್ಟ್ರಕವಿ ಕುವೆಂಪುರವರನ್ನು ಹಾಗೂ ನಮ್ಮೆಲ್ಲರ ಹೆಮ್ಮೆಯ ನಾಡಗೀತೆಯನ್ನೂ ಬಿಡದೆ ಅವಹೇಳನ ಮಾಡುವ ಮಟ್ಟಕ್ಕೆ ತಲುಪಿದೆ ಎಂದರೆ, ಖಂಡಿತವಾಗಿಯೂ ಇದು ನಾಡಿನ ಹಿತದೃಷ್ಟಿಯಿಂದ ಅತ್ಯಂತ ಅಪಾಯಕಾರಿಯಾದುದು. ಕನ್ನಡದ ಸೌಹಾರ್ದ ಸಂಸ್ಕೃತಿಯ ಅಡಿಪಾಯವನ್ನೇ ನಾಶ ಮಾಡುವಂತಹ ಈ ಅಪಾಯದಿಂದ ಪಾರಾಗಬೇಕಾದರೆ, ಯಾರೂ ಯಾರನ್ನೂ ಶತ್ರುಗಳೆನ್ನುವಂತೆ ನೋಡಬಾರದೆನ್ನುವ ಸರಳ ತತ್ವವನ್ನು ಎಲ್ಲ ಪಂಥೀಯರೂ ಅರ್ಥಮಾಡಿಕೊಳ್ಳಲೇಬೇಕಾಗಿದೆ.

ಹಾಗೆಯೇ, ಈ ನಾಡಿನ ಶತಮಾನಗಳ ಕಾಲದ ಕೂಡಿ ಬಾಳುವ ಪರಂಪರೆಗೆ ಹಾಗೂ ಪ್ರಜಾಸತ್ತಾತ್ಮಕ ಮೌಲ್ಯಗಳ ಉಳಿವಿಗೆ ಯಾವುದು ಸೂಕ್ತವೋ ಅಂತಹ ಪಠ್ಯಪುಸ್ತಕಗಳು ಮಕ್ಕಳಿಗೆ ದೊರಕುವಂತಾಗಬೇಕು. ಆ ಮಕ್ಕಳ ಎದೆಗೆ ಬೀಳುವ ಅಕ್ಷರ ತಮ್ಮ ಸಹಜೀವಿಗಳ ಬಗೆಗೆ ಅಂತಃಕರಣ ಹಾಗೂ ಪ್ರೀತಿಯನ್ನಷ್ಟೇ ಕಲಿಸುವಂತಾಗಬೇಕು. ಇಲ್ಲದಿದ್ದರೆ ಯಾರೂ ನೆಮ್ಮದಿಯಿಂದ ಇರಲಾಗದ ಸಮಾಜವೊಂದು ಸೃಷ್ಟಿಯಾಗುವ ಅಪಾಯವಿದೆ ಎನ್ನುವುದನ್ನು ಎಲ್ಲರೂ ಮನಗಾಣಬೇಕಾಗಿದೆ.

ವಂದನೆಗಳೊಂದಿಗೆ,

ಬೆಂಗಳೂರು ವಿಶ್ವವಿದ್ಯಾಲಯ ಕಾಲೇಜು ಕನ್ನಡ ಅಧ್ಯಾಪಕರ ಸಂಘ(ರಿ).
ಡಾ. ಅಮರೇಂದ್ರ ಶೆಟ್ಟಿ ಆರ್(ಅಮರೇಂದ್ರ ಹೊಲ್ಲಂಬಳ್ಳಿ) – ಅಧ್ಯಕ್ಷರು
ಡಾ.ಎ.ವಿ.ಲಕ್ಷ್ಮೀನಾರಾಯಣ- ಪ್ರಧಾನ ಕಾರ್‍ಯದರ್ಶಿ
ಡಾ.ಕೆ.ಎನ್.ಹೊಯ್ಸಳಾದಿತ್ಯ- ಉಪಾಧ್ಯಕ್ಷರು
ಡಾ. ಎ.ಸಿ.ಸುಧಾ- ಖಜಾಂಚಿ
ಡಾ. ಕೆ.ಪಿ.ಪುಟ್ಟಮಾರಯ್ಯ- ಸಹ ಕಾರ್‍ಯದರ್ಶಿ


ಇದನ್ನೂ ಓದಿ: ಪಠ್ಯ ಪರಿಶೀಲಿಸಿದ ಸಮಿತಿಯ ಸದಸ್ಯರ್‍ಯಾರೂ ಪ್ರತಿಕ್ರಿಯೆಗೆ ಸಿದ್ಧರಿಲ್ಲ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...

ಚಲಿಸುತ್ತಿದ್ದ ಸ್ಲೀಪರ್ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : ಚಾಲಕ, ಕಂಡಕ್ಟರ್ ಬಂಧನ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 2012ರಲ್ಲಿ ನಡೆದ ನಿರ್ಭಯಾ ಪ್ರಕರಣವನ್ನು ನೆನಪಿಸುವಂತಹ ಆಘಾತಕಾರಿ ಘಟನೆಯೊಂದು ನಡೆದಿದೆ. ಸ್ಲೀಪರ್‌ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. indiatoday.in ವರದಿಯ ಪ್ರಕಾರ, ಈ ಘಟನೆಯು ಆಗಸ್ಟ್ 4ರ...

ಜಗತ್ತಿನ ಪ್ರತಿಯೊಬ್ಬರಿಗೂ ಲ್ಯಾಪ್‌ಟಾಪ್ ಕೊಳ್ಳುವಷ್ಟು ಕಪ್ಪು ಹಣ ಪ್ರಪಂಚದಲ್ಲಿದೆ: ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್

ಅಕ್ರಮ ಹಣ ವರ್ಗಾವಣೆ (Money Laundering) ಮತ್ತು 'ಡಿಜಿಟಲ್ ಅರೆಸ್ಟ್' ನಂತಹ ಆನ್‌ಲೈನ್ ವಂಚನೆಗಳ ಪ್ರಮಾಣದ ಕುರಿತು ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಈ ರೀತಿಯ...