Homeಕರ್ನಾಟಕಮಕ್ಕಳ ಎದೆಗೆ ಬೀಳುವ ಅಕ್ಷರ ತಮ್ಮ ಸಹಜೀವಿಗಳ ಬಗೆಗೆ ಅಂತಃಕರಣ ಹಾಗೂ ಪ್ರೀತಿಯನ್ನಷ್ಟೇ ಕಲಿಸುವಂತಾಗಬೇಕು..

ಮಕ್ಕಳ ಎದೆಗೆ ಬೀಳುವ ಅಕ್ಷರ ತಮ್ಮ ಸಹಜೀವಿಗಳ ಬಗೆಗೆ ಅಂತಃಕರಣ ಹಾಗೂ ಪ್ರೀತಿಯನ್ನಷ್ಟೇ ಕಲಿಸುವಂತಾಗಬೇಕು..

- Advertisement -
- Advertisement -

ರಾಜ್ಯದ ಶಾಲಾ ಪಠ್ಯಪುಸ್ತಕಗಳ ಪರಿಷ್ಕರಣೆಗೆ ಸಂಬಂಧಿಸಿದಂತೆ ನಡೆಯುತ್ತಿರುವ ಚರ್ಚೆಗಳನ್ನು ರಾಜ್ಯದ ಜನ ಗಂಭೀರವಾಗಿ ಗಮನಿಸುತ್ತಿದ್ದಾರೆ. ಪಠ್ಯಗಳನ್ನು ಕುರಿತ ಚರ್ಚೆಗಳು ಆರೋಗ್ಯಕರ ನೆಲೆಯಲ್ಲಿ ನಡೆದು ವಿದ್ಯಾರ್ಥಿಗಳ ಜ್ಞಾನವಿಕಾಸಕ್ಕೆ ಕಾರಣವಾಗುವ ಉತ್ತಮ ಗುಣಮಟ್ಟದ ಪಠ್ಯಪುಸ್ತಕಗಳು ದೊರಕುವಂತಾದರೆ ಎಲ್ಲರಿಗೂ ಸಂತೋಷ. ಆದರೆ ಚರ್ಚೆಗಳು ಆ ನಿಟ್ಟಿನಲ್ಲಿ ಸಾಗದೆ ಸೈದ್ಧಾಂತಿಕ ದ್ವೇಷ, ವೈಯಕ್ತಿಕ ನಿಂದನೆಯ ಮಟ್ಟಕ್ಕೆ ತಲುಪಿರುವುದು ಆಘಾತಕಾರಿ ಬೆಳವಣಿಗೆ. ಅದರಲ್ಲೂ ಪಠ್ಯಪುಸ್ತಕ ಪರಿಷ್ಕರಣಾ ಸಮಿತಿಯ ನಿಕಟಪೂರ್ವ ಅಧ್ಯಕ್ಷರಾಗಿದ್ದ ಹಿರಿಯ ಸಾಹಿತಿ ಬರಗೂರು ರಾಮಚಂದ್ರಪ್ಪನವರ ಬಗೆಗೆ ಕೆಲವರು ಮಾಡುತ್ತಿರುವ ಟೀಕೆಗಳು, ಬಳಸುತ್ತಿರುವ ಭಾಷೆ ಸಜ್ಜನ ಸಂಸ್ಕೃತಿಯದ್ದಲ್ಲ. ನಾಡಿನ ನೆಲ-ಜಲ-ನುಡಿ-ಸಾಮಾಜಿಕ ನ್ಯಾಯ-ಸಾಮಾಜಿಕ ಸ್ವಾಸ್ಥ್ಯಕ್ಕಾಗಿ ಸದಾ ಚಿಂತಿಸುವ ದೇವನೂರ ಮಹಾದೇವ, ಬರಗೂರರಂತಹ ಹಿರಿಯರ ಬಗೆಗೆ ಮಾತನಾಡುವಾಗ ಅವರೊಂದಿಗೆ ಎಷ್ಟೇ ತಾತ್ವಿಕ ಭಿನ್ನಾಭಿಪ್ರಾಯಗಳಿದ್ದರೂ, ಗೌರವದಿಂದ ಮಾತನಾಡಬೇಕು ಎನ್ನುವ ಸಾಮಾನ್ಯ ವಿವೇಕ ಅವರನ್ನು ಟೀಕಿಸುವವರಿಗೆ ಇರಬೇಕಾಗಿದೆ.

ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಎಂತಹುದೇ ಭಿನ್ನಾಭಿಪ್ರಾಯಗಳನ್ನೂ ಪರಸ್ಪರ ಚರ್ಚೆಯ ಮೂಲಕ ಬಗೆಹರಿಸಿಕೊಳ್ಳುವ ಅವಕಾಶ ಇರುವಾಗ ದ್ವೇಷ ಕಾರುವ ಮಾತುಗಳ ಅವಶ್ಯಕತೆ ಇಲ್ಲ. ಆದರೆ, ಜವಾಬ್ದಾರಿಯುತ ಸ್ಥಾನಗಳಲ್ಲಿ ಇರುವವರೇ ಬಾಯಿಗೆ ಬಂದಂತೆ ಮಾತನಾಡುತ್ತಿರುವುದರಿಂದ ಮನಸ್ಸುಗಳನ್ನು ಬೆಸೆಯಬೇಕಾದ ಮಾತು ತನ್ನ ಮೂಲೋದ್ದೇಶದಿಂದ ವಿಮುಖಗೊಂಡು ದ್ವೇಷ, ತಿರಸ್ಕಾರದ ಅಸ್ತ್ರವಾಗಿ ಬದಲಾಗಿದೆ. ಕೆಲವು ಮಾಧ್ಯಮಗಳು ಹಾಗೂ ಸಾಮಾಜಿಕ ಜಾಲತಾಣಗಳಂತೂ ದ್ವೇಷ ಬಿತ್ತುವ ಅಂಕಣಗಳಾಗಿ ಬದಲಾಗಿವೆ. ಈ ಅಸಹನೆ, ದ್ವೇಷ, ಪೂರ್ವಾಗ್ರಹಗಳು ಕನ್ನಡದ ಮನಸ್ಸಾಕ್ಷಿಯಂತಿರುವ ರಾಷ್ಟ್ರಕವಿ ಕುವೆಂಪುರವರನ್ನು ಹಾಗೂ ನಮ್ಮೆಲ್ಲರ ಹೆಮ್ಮೆಯ ನಾಡಗೀತೆಯನ್ನೂ ಬಿಡದೆ ಅವಹೇಳನ ಮಾಡುವ ಮಟ್ಟಕ್ಕೆ ತಲುಪಿದೆ ಎಂದರೆ, ಖಂಡಿತವಾಗಿಯೂ ಇದು ನಾಡಿನ ಹಿತದೃಷ್ಟಿಯಿಂದ ಅತ್ಯಂತ ಅಪಾಯಕಾರಿಯಾದುದು. ಕನ್ನಡದ ಸೌಹಾರ್ದ ಸಂಸ್ಕೃತಿಯ ಅಡಿಪಾಯವನ್ನೇ ನಾಶ ಮಾಡುವಂತಹ ಈ ಅಪಾಯದಿಂದ ಪಾರಾಗಬೇಕಾದರೆ, ಯಾರೂ ಯಾರನ್ನೂ ಶತ್ರುಗಳೆನ್ನುವಂತೆ ನೋಡಬಾರದೆನ್ನುವ ಸರಳ ತತ್ವವನ್ನು ಎಲ್ಲ ಪಂಥೀಯರೂ ಅರ್ಥಮಾಡಿಕೊಳ್ಳಲೇಬೇಕಾಗಿದೆ.

ಹಾಗೆಯೇ, ಈ ನಾಡಿನ ಶತಮಾನಗಳ ಕಾಲದ ಕೂಡಿ ಬಾಳುವ ಪರಂಪರೆಗೆ ಹಾಗೂ ಪ್ರಜಾಸತ್ತಾತ್ಮಕ ಮೌಲ್ಯಗಳ ಉಳಿವಿಗೆ ಯಾವುದು ಸೂಕ್ತವೋ ಅಂತಹ ಪಠ್ಯಪುಸ್ತಕಗಳು ಮಕ್ಕಳಿಗೆ ದೊರಕುವಂತಾಗಬೇಕು. ಆ ಮಕ್ಕಳ ಎದೆಗೆ ಬೀಳುವ ಅಕ್ಷರ ತಮ್ಮ ಸಹಜೀವಿಗಳ ಬಗೆಗೆ ಅಂತಃಕರಣ ಹಾಗೂ ಪ್ರೀತಿಯನ್ನಷ್ಟೇ ಕಲಿಸುವಂತಾಗಬೇಕು. ಇಲ್ಲದಿದ್ದರೆ ಯಾರೂ ನೆಮ್ಮದಿಯಿಂದ ಇರಲಾಗದ ಸಮಾಜವೊಂದು ಸೃಷ್ಟಿಯಾಗುವ ಅಪಾಯವಿದೆ ಎನ್ನುವುದನ್ನು ಎಲ್ಲರೂ ಮನಗಾಣಬೇಕಾಗಿದೆ.

ವಂದನೆಗಳೊಂದಿಗೆ,

ಬೆಂಗಳೂರು ವಿಶ್ವವಿದ್ಯಾಲಯ ಕಾಲೇಜು ಕನ್ನಡ ಅಧ್ಯಾಪಕರ ಸಂಘ(ರಿ).
ಡಾ. ಅಮರೇಂದ್ರ ಶೆಟ್ಟಿ ಆರ್(ಅಮರೇಂದ್ರ ಹೊಲ್ಲಂಬಳ್ಳಿ) – ಅಧ್ಯಕ್ಷರು
ಡಾ.ಎ.ವಿ.ಲಕ್ಷ್ಮೀನಾರಾಯಣ- ಪ್ರಧಾನ ಕಾರ್‍ಯದರ್ಶಿ
ಡಾ.ಕೆ.ಎನ್.ಹೊಯ್ಸಳಾದಿತ್ಯ- ಉಪಾಧ್ಯಕ್ಷರು
ಡಾ. ಎ.ಸಿ.ಸುಧಾ- ಖಜಾಂಚಿ
ಡಾ. ಕೆ.ಪಿ.ಪುಟ್ಟಮಾರಯ್ಯ- ಸಹ ಕಾರ್‍ಯದರ್ಶಿ


ಇದನ್ನೂ ಓದಿ: ಪಠ್ಯ ಪರಿಶೀಲಿಸಿದ ಸಮಿತಿಯ ಸದಸ್ಯರ್‍ಯಾರೂ ಪ್ರತಿಕ್ರಿಯೆಗೆ ಸಿದ್ಧರಿಲ್ಲ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...

ನಾವು ದಾಖಲೆಗಳನ್ನು ಕೊಟ್ಟರೂ ನಮ್ಮನ್ನು ಹಕ್ಕುಗಳಿಂದ ವಂಚಿಸಲಾಗುತ್ತದೆ ಎಚ್ಚರ- ಡಿ.ಹೆಚ್.ಕಂಬಳಿ

ಸಿಂಧನೂರು: SIR ವಿರೋಧಿಸಿ ನಡೆಸಲಾಗುತ್ತಿರುವ ಜಾಗೃತಿ ಜಾಥ ರಾಯಚೂರು ಜಿಲ್ಲೆಯ ಸಿಂಧನೂರು ಪ್ರವೇಶಿಸಿತ್ತು. ನಗರದ ಜಮಾತ್ ಎ ಇಸ್ಲಾಂ ಹಿಂದ್ ಕಚೇರಿಯಲ್ಲಿ ಹಲವು ಸಮುದಾಯದ ಮುಖಂಡರು ಹಾಗೂ ಹೋರಾಟಗಾರರು ಹಾಜರಿದ್ದರು. ಜಾಥಾದ ಭಾಗವಾಗಿ...

ಹುಬ್ಬಳ್ಳಿಯಲ್ಲಿ ಎಸ್‌ಐಆರ್ ವಿರೋಧಿ ಜನಜಾಗೃತಿ ಸಭೆ ; ಒಗ್ಗಟ್ಟಿನ ಹೋರಾಟಕ್ಕೆ ಕರೆ

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ ಹುಬ್ಬಳ್ಳಿಯ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಜ್ಞಾನ ಮಂಟಪದಲ್ಲಿ ಮಂಗಳವಾರ (ಜೂ.16) ಸಂಜೆ ವಿವಿಧ ಜನ ಸಂಘಟನೆಗಳು ಮತ್ತು...

ಎಸ್ಐಆರ್ ಮೂಲಕ ಮನುವಾದದ ಮರು ಜಾರಿಗೆ ಯತ್ನ : ಡಾ. ಗಣೇಶ್ ದೇವಿ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ಮೂಲಕ ಮನುವಾದದ ಮರು ಜಾರಿಗೆ ಪ್ರಯತ್ನಿಸಲಾಗುತ್ತಿದೆ ಎಂದು ಪದ್ಮಶ್ರೀ ಪುರಸ್ಕೃತ ಡಾ. ಗಣೇಶ್ ದೇವಿ ಹೇಳಿದರು. ಮಂಗಳವಾರ (ಜೂ.16) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಬಳಿಯ...

ಎಡದೊರೆಯ ನಾಡಿನಲ್ಲಿ ಮೊಳಗಿದ SIR ವಿರೋಧಿ ಕೂಗು

ಕರ್ನಾಟಕದಲ್ಲಿ ಅವೈಜ್ಞಾನಿಕವಾಗಿ ಜಾರಿಮಾಡಲು ಹೊರಟಿರುವ SIR ಅನ್ನು ವಿರೋಧಿಸಿ ಜನಜಾಗೃತಿ ಜಾಥಾವು ಇಂದು ಕಲ್ಯಾಣ ಕರ್ನಾಟಕ ಭಾಗದ ರಾಯಚೂರು ಜಿಲ್ಲೆಯನ್ನು ಪ್ರವೇಶಿಸಿತು. ಹೋರಾಟಗಳ ನೆಲ ರಾಯಚೂರಿನಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಹೋರಾಟಗಾರರು, ವಿವಿಧ ಸಮುದಾಯದ...

ಜೂನ್ 20ರ ಬೆಂಗಳೂರಿನ ‘SIR’ ವಿರೋಧಿ ಸಮಾವೇಶಕ್ಕೆ ಶಿವಮೊಗ್ಗದಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಹಿರಿಯ ವಕೀಲರಾದ ಶ್ರೀಪಾಲ್ ಕರೆ

ಜೂನ್ 20 ರಂದು ಬೆಂಗಳೂರಿನಲ್ಲಿ ಹಮ್ಮಿಕೊಳ್ಳಲಾಗಿರುವ ‘SIR’ ವಿರೋಧಿ ಜನಜಾಗೃತಿ ಸಮಾವೇಶಕ್ಕೆ ಶಿವಮೊಗ್ಗ ಜಿಲ್ಲೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸಬೇಕೆಂದು ಹಿರಿಯ ವಕೀಲರಾದ ಶ್ರೀಪಾಲ್ ಕರೆ ನೀಡಿದ್ದಾರೆ. ನಗರದ ಪತ್ರಿಕಾ ಭವನದಲ್ಲಿ ಪ್ರಗತಿಪರ ಸಂಘಟನೆಗಳ...

ಮತದಾನದ ಹಕ್ಕು ಪ್ರಜಾಪ್ರಭುತ್ವದ ಜೀವಾಳ: ತರೀಕೆರೆಯಲ್ಲಿ ಶಾಸಕ G.H ಶ್ರೀನಿವಾಸ್ ಅಭಿಮತ

ರಾಜ್ಯಾದ್ಯಂತ ನಡೆಯುತ್ತಿರುವ ಎಸ್‌ಐಆರ್ (SIR) ವಿರೋಧಿ ಜನಜಾಗೃತಿ ಜಾಥಾದ ನಾಲ್ಕನೇ ದಿನದ ಪಯಣ ಇಂದು ತರೀಕೆರೆಗೆ ತಲುಪಿತು. ಪ್ರಜಾಪ್ರಭುತ್ವದ ಅಡಿಪಾಯವಾಗಿರುವ ಮತದಾನದ ಹಕ್ಕನ್ನು ಉಳಿಸಿಕೊಳ್ಳುವ ನಿಟ್ಟಿನಲ್ಲಿ ಹಮ್ಮಿಕೊಂಡಿರುವ ಈ ಜಾಥಾವನ್ನು, ತರೀಕೆರೆಯ ಜಾಗೃತ...

ಬೆಳಗಾವಿಯ ವಿವಿದೆಡೆ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾ

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ಧ ಬೆಳಗಾವಿಯ ವಿವಿಧ ಭಾಗಗಳಲ್ಲಿ ಸೋಮವಾರ (ಜೂ.15) ಜನಜಾಗೃತಿ ಜಾಥಾ ನಡೆಯಿತು. ಬಾಗಲಕೋಟೆಯಿಂದ ಆಗಮಿಸಿದ ಜಾಥಾ ತಂಡವನ್ನು ಯರಗಟ್ಟಿ ಪಟ್ಟಣದಲ್ಲಿ...