Homeಕರ್ನಾಟಕಮಕ್ಕಳ ಎದೆಗೆ ಬೀಳುವ ಅಕ್ಷರ ತಮ್ಮ ಸಹಜೀವಿಗಳ ಬಗೆಗೆ ಅಂತಃಕರಣ ಹಾಗೂ ಪ್ರೀತಿಯನ್ನಷ್ಟೇ ಕಲಿಸುವಂತಾಗಬೇಕು..

ಮಕ್ಕಳ ಎದೆಗೆ ಬೀಳುವ ಅಕ್ಷರ ತಮ್ಮ ಸಹಜೀವಿಗಳ ಬಗೆಗೆ ಅಂತಃಕರಣ ಹಾಗೂ ಪ್ರೀತಿಯನ್ನಷ್ಟೇ ಕಲಿಸುವಂತಾಗಬೇಕು..

- Advertisement -
- Advertisement -

ರಾಜ್ಯದ ಶಾಲಾ ಪಠ್ಯಪುಸ್ತಕಗಳ ಪರಿಷ್ಕರಣೆಗೆ ಸಂಬಂಧಿಸಿದಂತೆ ನಡೆಯುತ್ತಿರುವ ಚರ್ಚೆಗಳನ್ನು ರಾಜ್ಯದ ಜನ ಗಂಭೀರವಾಗಿ ಗಮನಿಸುತ್ತಿದ್ದಾರೆ. ಪಠ್ಯಗಳನ್ನು ಕುರಿತ ಚರ್ಚೆಗಳು ಆರೋಗ್ಯಕರ ನೆಲೆಯಲ್ಲಿ ನಡೆದು ವಿದ್ಯಾರ್ಥಿಗಳ ಜ್ಞಾನವಿಕಾಸಕ್ಕೆ ಕಾರಣವಾಗುವ ಉತ್ತಮ ಗುಣಮಟ್ಟದ ಪಠ್ಯಪುಸ್ತಕಗಳು ದೊರಕುವಂತಾದರೆ ಎಲ್ಲರಿಗೂ ಸಂತೋಷ. ಆದರೆ ಚರ್ಚೆಗಳು ಆ ನಿಟ್ಟಿನಲ್ಲಿ ಸಾಗದೆ ಸೈದ್ಧಾಂತಿಕ ದ್ವೇಷ, ವೈಯಕ್ತಿಕ ನಿಂದನೆಯ ಮಟ್ಟಕ್ಕೆ ತಲುಪಿರುವುದು ಆಘಾತಕಾರಿ ಬೆಳವಣಿಗೆ. ಅದರಲ್ಲೂ ಪಠ್ಯಪುಸ್ತಕ ಪರಿಷ್ಕರಣಾ ಸಮಿತಿಯ ನಿಕಟಪೂರ್ವ ಅಧ್ಯಕ್ಷರಾಗಿದ್ದ ಹಿರಿಯ ಸಾಹಿತಿ ಬರಗೂರು ರಾಮಚಂದ್ರಪ್ಪನವರ ಬಗೆಗೆ ಕೆಲವರು ಮಾಡುತ್ತಿರುವ ಟೀಕೆಗಳು, ಬಳಸುತ್ತಿರುವ ಭಾಷೆ ಸಜ್ಜನ ಸಂಸ್ಕೃತಿಯದ್ದಲ್ಲ. ನಾಡಿನ ನೆಲ-ಜಲ-ನುಡಿ-ಸಾಮಾಜಿಕ ನ್ಯಾಯ-ಸಾಮಾಜಿಕ ಸ್ವಾಸ್ಥ್ಯಕ್ಕಾಗಿ ಸದಾ ಚಿಂತಿಸುವ ದೇವನೂರ ಮಹಾದೇವ, ಬರಗೂರರಂತಹ ಹಿರಿಯರ ಬಗೆಗೆ ಮಾತನಾಡುವಾಗ ಅವರೊಂದಿಗೆ ಎಷ್ಟೇ ತಾತ್ವಿಕ ಭಿನ್ನಾಭಿಪ್ರಾಯಗಳಿದ್ದರೂ, ಗೌರವದಿಂದ ಮಾತನಾಡಬೇಕು ಎನ್ನುವ ಸಾಮಾನ್ಯ ವಿವೇಕ ಅವರನ್ನು ಟೀಕಿಸುವವರಿಗೆ ಇರಬೇಕಾಗಿದೆ.

ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಎಂತಹುದೇ ಭಿನ್ನಾಭಿಪ್ರಾಯಗಳನ್ನೂ ಪರಸ್ಪರ ಚರ್ಚೆಯ ಮೂಲಕ ಬಗೆಹರಿಸಿಕೊಳ್ಳುವ ಅವಕಾಶ ಇರುವಾಗ ದ್ವೇಷ ಕಾರುವ ಮಾತುಗಳ ಅವಶ್ಯಕತೆ ಇಲ್ಲ. ಆದರೆ, ಜವಾಬ್ದಾರಿಯುತ ಸ್ಥಾನಗಳಲ್ಲಿ ಇರುವವರೇ ಬಾಯಿಗೆ ಬಂದಂತೆ ಮಾತನಾಡುತ್ತಿರುವುದರಿಂದ ಮನಸ್ಸುಗಳನ್ನು ಬೆಸೆಯಬೇಕಾದ ಮಾತು ತನ್ನ ಮೂಲೋದ್ದೇಶದಿಂದ ವಿಮುಖಗೊಂಡು ದ್ವೇಷ, ತಿರಸ್ಕಾರದ ಅಸ್ತ್ರವಾಗಿ ಬದಲಾಗಿದೆ. ಕೆಲವು ಮಾಧ್ಯಮಗಳು ಹಾಗೂ ಸಾಮಾಜಿಕ ಜಾಲತಾಣಗಳಂತೂ ದ್ವೇಷ ಬಿತ್ತುವ ಅಂಕಣಗಳಾಗಿ ಬದಲಾಗಿವೆ. ಈ ಅಸಹನೆ, ದ್ವೇಷ, ಪೂರ್ವಾಗ್ರಹಗಳು ಕನ್ನಡದ ಮನಸ್ಸಾಕ್ಷಿಯಂತಿರುವ ರಾಷ್ಟ್ರಕವಿ ಕುವೆಂಪುರವರನ್ನು ಹಾಗೂ ನಮ್ಮೆಲ್ಲರ ಹೆಮ್ಮೆಯ ನಾಡಗೀತೆಯನ್ನೂ ಬಿಡದೆ ಅವಹೇಳನ ಮಾಡುವ ಮಟ್ಟಕ್ಕೆ ತಲುಪಿದೆ ಎಂದರೆ, ಖಂಡಿತವಾಗಿಯೂ ಇದು ನಾಡಿನ ಹಿತದೃಷ್ಟಿಯಿಂದ ಅತ್ಯಂತ ಅಪಾಯಕಾರಿಯಾದುದು. ಕನ್ನಡದ ಸೌಹಾರ್ದ ಸಂಸ್ಕೃತಿಯ ಅಡಿಪಾಯವನ್ನೇ ನಾಶ ಮಾಡುವಂತಹ ಈ ಅಪಾಯದಿಂದ ಪಾರಾಗಬೇಕಾದರೆ, ಯಾರೂ ಯಾರನ್ನೂ ಶತ್ರುಗಳೆನ್ನುವಂತೆ ನೋಡಬಾರದೆನ್ನುವ ಸರಳ ತತ್ವವನ್ನು ಎಲ್ಲ ಪಂಥೀಯರೂ ಅರ್ಥಮಾಡಿಕೊಳ್ಳಲೇಬೇಕಾಗಿದೆ.

ಹಾಗೆಯೇ, ಈ ನಾಡಿನ ಶತಮಾನಗಳ ಕಾಲದ ಕೂಡಿ ಬಾಳುವ ಪರಂಪರೆಗೆ ಹಾಗೂ ಪ್ರಜಾಸತ್ತಾತ್ಮಕ ಮೌಲ್ಯಗಳ ಉಳಿವಿಗೆ ಯಾವುದು ಸೂಕ್ತವೋ ಅಂತಹ ಪಠ್ಯಪುಸ್ತಕಗಳು ಮಕ್ಕಳಿಗೆ ದೊರಕುವಂತಾಗಬೇಕು. ಆ ಮಕ್ಕಳ ಎದೆಗೆ ಬೀಳುವ ಅಕ್ಷರ ತಮ್ಮ ಸಹಜೀವಿಗಳ ಬಗೆಗೆ ಅಂತಃಕರಣ ಹಾಗೂ ಪ್ರೀತಿಯನ್ನಷ್ಟೇ ಕಲಿಸುವಂತಾಗಬೇಕು. ಇಲ್ಲದಿದ್ದರೆ ಯಾರೂ ನೆಮ್ಮದಿಯಿಂದ ಇರಲಾಗದ ಸಮಾಜವೊಂದು ಸೃಷ್ಟಿಯಾಗುವ ಅಪಾಯವಿದೆ ಎನ್ನುವುದನ್ನು ಎಲ್ಲರೂ ಮನಗಾಣಬೇಕಾಗಿದೆ.

ವಂದನೆಗಳೊಂದಿಗೆ,

ಬೆಂಗಳೂರು ವಿಶ್ವವಿದ್ಯಾಲಯ ಕಾಲೇಜು ಕನ್ನಡ ಅಧ್ಯಾಪಕರ ಸಂಘ(ರಿ).
ಡಾ. ಅಮರೇಂದ್ರ ಶೆಟ್ಟಿ ಆರ್(ಅಮರೇಂದ್ರ ಹೊಲ್ಲಂಬಳ್ಳಿ) – ಅಧ್ಯಕ್ಷರು
ಡಾ.ಎ.ವಿ.ಲಕ್ಷ್ಮೀನಾರಾಯಣ- ಪ್ರಧಾನ ಕಾರ್‍ಯದರ್ಶಿ
ಡಾ.ಕೆ.ಎನ್.ಹೊಯ್ಸಳಾದಿತ್ಯ- ಉಪಾಧ್ಯಕ್ಷರು
ಡಾ. ಎ.ಸಿ.ಸುಧಾ- ಖಜಾಂಚಿ
ಡಾ. ಕೆ.ಪಿ.ಪುಟ್ಟಮಾರಯ್ಯ- ಸಹ ಕಾರ್‍ಯದರ್ಶಿ


ಇದನ್ನೂ ಓದಿ: ಪಠ್ಯ ಪರಿಶೀಲಿಸಿದ ಸಮಿತಿಯ ಸದಸ್ಯರ್‍ಯಾರೂ ಪ್ರತಿಕ್ರಿಯೆಗೆ ಸಿದ್ಧರಿಲ್ಲ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್‌: 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ: ವಿಧಾನಸಭೆಗೆ ಮಾಹಿತಿ ನೀಡಿದ ಸರ್ಕಾರ

ಗಾಂಧಿನಗರ: ರಾಜ್ಯದ 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಮತ್ತು ಪರಿಸ್ಥಿತಿಯನ್ನು ಸುಧಾರಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಗುಜರಾತ್ ಸರ್ಕಾರ ಶನಿವಾರ ವಿಧಾನಸಭೆಗೆ...

‘ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆ ನಿವಾರಿಸಲು ಸರ್ಕಾರ ಬದ್ಧ’: ಮುಖ್ಯಮಂತ್ರಿ ಸಿದ್ದರಾಮಯ್ಯ

ಬಾಗಲಕೋಟೆ: ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆಯನ್ನು ನಿವಾರಿಸಲು ಸರ್ಕಾರ ಬದ್ಧವಾಗಿದ್ದು, ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುವ ಜನರ ಸರ್ಕಾರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದರು.  ಮಾರ್ಚ್ 14ರಂದು, ಬಾಗಲಕೋಟೆ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಸಂಶೋಧನಾ...

ಮಣಿಪುರ ಹಿಂಸಾಚಾರ: ಕಾಮ್ಜಾಂಗ್‌ನಲ್ಲಿ ಇಬ್ಬರು ಕುಕಿ ಪುರುಷರು ಶವವಾಗಿ ಪತ್ತೆ; ಹೆಚ್ಚಿದ ಉದ್ವಿಗ್ನತೆ 

ಮಣಿಪುರದ ಕಾಮ್ಜಾಂಗ್ ಜಿಲ್ಲೆಯಲ್ಲಿ ಬುಧವಾರದಿಂದ ನಾಪತ್ತೆಯಾಗಿದ್ದ ಇಬ್ಬರು ಕುಕಿ ಪುರುಷರು ಗುರುವಾರ ಥವಾಯ್ ಕುಕಿ ಗ್ರಾಮದ ಅರಣ್ಯ ಪ್ರದೇಶದಲ್ಲಿ ಶವವಾಗಿ ಪತ್ತೆಯಾಗಿದ್ದರಿಂದ ಉದ್ವಿಗ್ನತೆ ಹೆಚ್ಚಾಗಿದೆ. ಜಿಲ್ಲೆಯ ಥಾವಾಯಿ ಕುಕಿ ಗ್ರಾಮದ 42 ವರ್ಷದ ಥೇಂಗಿನ್...

ಉತ್ತರ ಪ್ರದೇಶ | ಮುಸ್ಲಿಮರೊಂದಿಗಿನ ಶಾಂತಿ ಸಭೆಯಲ್ಲಿ ‘ಇರಾನ್‌ಗೆ ಹೋಗಿ’ ಎಂದ ಪೊಲೀಸ್‌ ಅಧಿಕಾರಿ : ತೀವ್ರ ಆಕ್ರೋಶ

ಉತ್ತರ ಪ್ರದೇಶದಲ್ಲಿ ಈದುಲ್ ಫಿತರ್ (ರಂಝಾನ್) ಹಬ್ಬಕ್ಕೆ ಪೂರ್ವಭಾವಿಯಾಗಿ ನಡೆದ ಶಾಂತಿ ಸಭೆಯಲ್ಲಿ ಪೊಲೀಸ್ ಅಧಿಕಾರಿಯೊಬ್ಬರು ನೀಡಿದ ಹೇಳಿಕೆ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಸಂಭಾಲ್ ಜಿಲ್ಲೆಯ ಅಸ್ಮೋಲಿ ಪ್ರದೇಶದಲ್ಲಿ ರಂಝಾನ್ ತಿಂಗಳ ಕೊನೆಯ...

ಪಶ್ಚಿಮ ಏಷ್ಯಾ ಸಂಘರ್ಷ: ಲೆಬನಾನ್‌ನಲ್ಲಿ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ದಾಳಿ: ವೈದ್ಯರು, ದಾದಿಯರು ಸೇರಿ 12 ಮಂದಿ ಸಾವು

ದಕ್ಷಿಣ ಲೆಬನಾನ್‌ನಲ್ಲಿರುವ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ನಡೆಸಿದ ದಾಳಿಯಲ್ಲಿ 12 ವೈದ್ಯಕೀಯ ಕಾರ್ಯಕರ್ತರು ಸಾವನ್ನಪ್ಪಿದ್ದಾರೆ ಎಂದು ಲೆಬನಾನಿನ ಸಾರ್ವಜನಿಕ ಆರೋಗ್ಯ ಸಚಿವಾಲಯ ವರದಿ ಮಾಡಿದೆ.  ಲೆಬನಾನ್‌ನಾದ್ಯಂತ ಇಸ್ರೇಲಿ ದಾಳಿಯಲ್ಲಿ ಈವರೆಗೂ 103 ಮಕ್ಕಳು...

ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಪರ ತೀರ್ಮಾನಕ್ಕೆ ಎಲ್ಲರೂ ಸಹಕರಿಸಿ: ಒಳಮೀಸಲಾತಿ ಹೋರಾಟ ಸಮಿತಿ ಮನವಿ

ಬೆಂಗಳೂರು: ಒಳಮೀಸಲಾತಿ ಜಾರಿ ಮಾಡುವ ಪ್ರಕ್ರಿಯೆಯು ಕೊನೆಯ ಹಂತಕ್ಕೆ ತಲುಪಿದ್ದು, ಇದನ್ನು ಸುಲಲಿತವಾಗಿ ಬಗೆಹರಿಸಿ ಸಾಮಾಜಿಕ ನ್ಯಾಯವನ್ನು ಎತ್ತಿಹಿಡಿಯಲು ಆಗ್ರಹಿಸಿ ಇಂದು (14 ಮಾರ್ಚ್)‌ ನಗರದ ಪ್ರೆಸ್‌ ಕ್ಲಬ್‌ನಲ್ಲಿ ಒಳಮೀಸಲಾತಿ ಹೋರಾಟಗಾರರು...

ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಅಕ್ರಮ ನೇಮಕಾತಿ; ರೋಸ್ಟರ್ ಮೀಸಲು ಕ್ರಮ ಉಲ್ಲಂಘನೆ ಆರೋಪ: ನ್ಯಾಯಾಂಗ ತನಿಖೆಗೆ ಆಗ್ರಹ

ಕಲಬುರಗಿ: ಕಲಬುರಗಿ ಜಿಲ್ಲೆಯಲ್ಲಿರುವ Central University of Karnataka ದಲ್ಲಿ ಬೋಧಕ ಹುದ್ದೆಗಳ ನೇಮಕಾತಿಯಲ್ಲಿ ಮೀಸಲು ಕ್ರಮ ಉಲ್ಲಂಘನೆ ಹಾಗೂ ಅಕ್ರಮ ನೇಮಕಾತಿಗಳು ನಡೆದಿವೆ ಎಂಬ ಆರೋಪಗಳ ಹಿನ್ನೆಲೆಯಲ್ಲಿ ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ...

ಸಂಭಾಲ್ | ಮಸೀದಿಯಲ್ಲಿ ನಮಾಝ್ ಮಾಡುವವರ ಸಂಖ್ಯೆ ಮಿತಿಗೊಳಿಸಲು ಸಾಧ್ಯವಿಲ್ಲ; ಕಾನೂನು ಸುವ್ಯವಸ್ಥೆ ಕಾಪಾಡಲು ಆಗದಿದ್ದರೆ ರಾಜೀನಾಮೆ ನೀಡಿ: ಅಧಿಕಾರಿಗಳಿಗೆ ಅಲಹಾಬಾದ್ ಹೈಕೋರ್ಟ್ ತರಾಟೆ

ಸಂಭಾಲ್ ಜಿಲ್ಲೆಯ ಮಸೀದಿಯೊಂದರಲ್ಲಿ ರಂಝಾನ್ ಸಮಯದಲ್ಲಿ ನಮಾಝ್ ಮಾಡುವವರ ಸಂಖ್ಯೆಯನ್ನು ಮಿತಿಗೊಳಿಸುವ ಉತ್ತರ ಪ್ರದೇಶ ಸರ್ಕಾರದ ನಿರ್ಧಾರವನ್ನು ಅಲಹಾಬಾದ್ ಹೈಕೋರ್ಟ್ ತಿರಸ್ಕರಿಸಿದೆ. ಕಾನೂನು ಸುವ್ಯವಸ್ಥೆ ಕಾಪಾಡುವುದು ಸರ್ಕಾರದ ಜವಾಬ್ದಾರಿ ಎಂದಿದೆ. ಫೆಬ್ರವರಿ 27ರಂದು...

ಇರಾನ್ ‘ಭಯೋತ್ಪಾದಕ ಆಡಳಿತ’ ಎಂದು ಕರೆದ NDTV ಹಿರಿಯ ಸಂಪಾದಕ: ವ್ಯಾಪಕ ಟೀಕೆಯ ನಂತರ ಪೋಸ್ಟ್ ಡಿಲಿಟ್ 

ಹೊಸದಿಲ್ಲಿ: ಅಮೆರಿಕ-ಇಸ್ರೇಲ್ ಮತ್ತು ಇರಾನ್ ನಡುವೆ ನಡೆಯುತ್ತಿರುವ ಯುದ್ಧದಿಂದಾಗಿ ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಹೆಚ್ಚುತ್ತಿರುವ ಸಂದರ್ಭದಲ್ಲಿ ಭಾರತದ ಮುಖ್ಯ ಮಾಧ್ಯಮ ಸಂಸ್ಥೆ NDTV ಹಿರಿಯ ಸಂಪಾದಕ ಆದಿತ್ಯ ರಾಜ್ ಕೌಲ್ ಅವರು ಇರಾನ್ “ಭಯೋತ್ಪಾದಕ...

ಎಲ್‌ಪಿಜಿ ಬಿಕ್ಕಟ್ಟು: ಹೋಟೆಲ್ ಮಾಲೀಕರಿಗೆ ವಿದ್ಯುತ್ ಒಲೆಗಳನ್ನು ಬಳಸಲು ಸೂಚಿಸಿದ ಸಚಿವ ಕೆ.ಎಚ್. ​​ಮುನಿಯಪ್ಪ

ಬೆಂಗಳೂರು: ಪಶ್ಚಿಮ ಏಷ್ಯಾ ಸಂಘರ್ಷದ ಪ್ರಭಾವ ಭಾರತೀಯರ ಅಡುಗೆ ಮನೆಯನ್ನು ಪ್ರವೇಶಿಸಿದ್ದು, ಎಲ್‌ಪಿಜಿ  ಬಿಕ್ಕಟ್ಟಿನಿಂದ ನಾಗರೀಕರು, ಸೇರಿದಂತೆ ಹೋಟೆಲ್ ಉಧ್ಯಮ ತೀವ್ರ ಸಂಕಷ್ಟಕ್ಕೆ ಸಿಲುಕಿವೆ. ಈ ನಡುವೆ ಯುದ್ಧದ ಪರಿಣಾಮ ಭಾರತದ ಮೇಲೆ...