Homeಕರ್ನಾಟಕಮಕ್ಕಳ ಎದೆಗೆ ಬೀಳುವ ಅಕ್ಷರ ತಮ್ಮ ಸಹಜೀವಿಗಳ ಬಗೆಗೆ ಅಂತಃಕರಣ ಹಾಗೂ ಪ್ರೀತಿಯನ್ನಷ್ಟೇ ಕಲಿಸುವಂತಾಗಬೇಕು..

ಮಕ್ಕಳ ಎದೆಗೆ ಬೀಳುವ ಅಕ್ಷರ ತಮ್ಮ ಸಹಜೀವಿಗಳ ಬಗೆಗೆ ಅಂತಃಕರಣ ಹಾಗೂ ಪ್ರೀತಿಯನ್ನಷ್ಟೇ ಕಲಿಸುವಂತಾಗಬೇಕು..

- Advertisement -
- Advertisement -

ರಾಜ್ಯದ ಶಾಲಾ ಪಠ್ಯಪುಸ್ತಕಗಳ ಪರಿಷ್ಕರಣೆಗೆ ಸಂಬಂಧಿಸಿದಂತೆ ನಡೆಯುತ್ತಿರುವ ಚರ್ಚೆಗಳನ್ನು ರಾಜ್ಯದ ಜನ ಗಂಭೀರವಾಗಿ ಗಮನಿಸುತ್ತಿದ್ದಾರೆ. ಪಠ್ಯಗಳನ್ನು ಕುರಿತ ಚರ್ಚೆಗಳು ಆರೋಗ್ಯಕರ ನೆಲೆಯಲ್ಲಿ ನಡೆದು ವಿದ್ಯಾರ್ಥಿಗಳ ಜ್ಞಾನವಿಕಾಸಕ್ಕೆ ಕಾರಣವಾಗುವ ಉತ್ತಮ ಗುಣಮಟ್ಟದ ಪಠ್ಯಪುಸ್ತಕಗಳು ದೊರಕುವಂತಾದರೆ ಎಲ್ಲರಿಗೂ ಸಂತೋಷ. ಆದರೆ ಚರ್ಚೆಗಳು ಆ ನಿಟ್ಟಿನಲ್ಲಿ ಸಾಗದೆ ಸೈದ್ಧಾಂತಿಕ ದ್ವೇಷ, ವೈಯಕ್ತಿಕ ನಿಂದನೆಯ ಮಟ್ಟಕ್ಕೆ ತಲುಪಿರುವುದು ಆಘಾತಕಾರಿ ಬೆಳವಣಿಗೆ. ಅದರಲ್ಲೂ ಪಠ್ಯಪುಸ್ತಕ ಪರಿಷ್ಕರಣಾ ಸಮಿತಿಯ ನಿಕಟಪೂರ್ವ ಅಧ್ಯಕ್ಷರಾಗಿದ್ದ ಹಿರಿಯ ಸಾಹಿತಿ ಬರಗೂರು ರಾಮಚಂದ್ರಪ್ಪನವರ ಬಗೆಗೆ ಕೆಲವರು ಮಾಡುತ್ತಿರುವ ಟೀಕೆಗಳು, ಬಳಸುತ್ತಿರುವ ಭಾಷೆ ಸಜ್ಜನ ಸಂಸ್ಕೃತಿಯದ್ದಲ್ಲ. ನಾಡಿನ ನೆಲ-ಜಲ-ನುಡಿ-ಸಾಮಾಜಿಕ ನ್ಯಾಯ-ಸಾಮಾಜಿಕ ಸ್ವಾಸ್ಥ್ಯಕ್ಕಾಗಿ ಸದಾ ಚಿಂತಿಸುವ ದೇವನೂರ ಮಹಾದೇವ, ಬರಗೂರರಂತಹ ಹಿರಿಯರ ಬಗೆಗೆ ಮಾತನಾಡುವಾಗ ಅವರೊಂದಿಗೆ ಎಷ್ಟೇ ತಾತ್ವಿಕ ಭಿನ್ನಾಭಿಪ್ರಾಯಗಳಿದ್ದರೂ, ಗೌರವದಿಂದ ಮಾತನಾಡಬೇಕು ಎನ್ನುವ ಸಾಮಾನ್ಯ ವಿವೇಕ ಅವರನ್ನು ಟೀಕಿಸುವವರಿಗೆ ಇರಬೇಕಾಗಿದೆ.

ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಎಂತಹುದೇ ಭಿನ್ನಾಭಿಪ್ರಾಯಗಳನ್ನೂ ಪರಸ್ಪರ ಚರ್ಚೆಯ ಮೂಲಕ ಬಗೆಹರಿಸಿಕೊಳ್ಳುವ ಅವಕಾಶ ಇರುವಾಗ ದ್ವೇಷ ಕಾರುವ ಮಾತುಗಳ ಅವಶ್ಯಕತೆ ಇಲ್ಲ. ಆದರೆ, ಜವಾಬ್ದಾರಿಯುತ ಸ್ಥಾನಗಳಲ್ಲಿ ಇರುವವರೇ ಬಾಯಿಗೆ ಬಂದಂತೆ ಮಾತನಾಡುತ್ತಿರುವುದರಿಂದ ಮನಸ್ಸುಗಳನ್ನು ಬೆಸೆಯಬೇಕಾದ ಮಾತು ತನ್ನ ಮೂಲೋದ್ದೇಶದಿಂದ ವಿಮುಖಗೊಂಡು ದ್ವೇಷ, ತಿರಸ್ಕಾರದ ಅಸ್ತ್ರವಾಗಿ ಬದಲಾಗಿದೆ. ಕೆಲವು ಮಾಧ್ಯಮಗಳು ಹಾಗೂ ಸಾಮಾಜಿಕ ಜಾಲತಾಣಗಳಂತೂ ದ್ವೇಷ ಬಿತ್ತುವ ಅಂಕಣಗಳಾಗಿ ಬದಲಾಗಿವೆ. ಈ ಅಸಹನೆ, ದ್ವೇಷ, ಪೂರ್ವಾಗ್ರಹಗಳು ಕನ್ನಡದ ಮನಸ್ಸಾಕ್ಷಿಯಂತಿರುವ ರಾಷ್ಟ್ರಕವಿ ಕುವೆಂಪುರವರನ್ನು ಹಾಗೂ ನಮ್ಮೆಲ್ಲರ ಹೆಮ್ಮೆಯ ನಾಡಗೀತೆಯನ್ನೂ ಬಿಡದೆ ಅವಹೇಳನ ಮಾಡುವ ಮಟ್ಟಕ್ಕೆ ತಲುಪಿದೆ ಎಂದರೆ, ಖಂಡಿತವಾಗಿಯೂ ಇದು ನಾಡಿನ ಹಿತದೃಷ್ಟಿಯಿಂದ ಅತ್ಯಂತ ಅಪಾಯಕಾರಿಯಾದುದು. ಕನ್ನಡದ ಸೌಹಾರ್ದ ಸಂಸ್ಕೃತಿಯ ಅಡಿಪಾಯವನ್ನೇ ನಾಶ ಮಾಡುವಂತಹ ಈ ಅಪಾಯದಿಂದ ಪಾರಾಗಬೇಕಾದರೆ, ಯಾರೂ ಯಾರನ್ನೂ ಶತ್ರುಗಳೆನ್ನುವಂತೆ ನೋಡಬಾರದೆನ್ನುವ ಸರಳ ತತ್ವವನ್ನು ಎಲ್ಲ ಪಂಥೀಯರೂ ಅರ್ಥಮಾಡಿಕೊಳ್ಳಲೇಬೇಕಾಗಿದೆ.

ಹಾಗೆಯೇ, ಈ ನಾಡಿನ ಶತಮಾನಗಳ ಕಾಲದ ಕೂಡಿ ಬಾಳುವ ಪರಂಪರೆಗೆ ಹಾಗೂ ಪ್ರಜಾಸತ್ತಾತ್ಮಕ ಮೌಲ್ಯಗಳ ಉಳಿವಿಗೆ ಯಾವುದು ಸೂಕ್ತವೋ ಅಂತಹ ಪಠ್ಯಪುಸ್ತಕಗಳು ಮಕ್ಕಳಿಗೆ ದೊರಕುವಂತಾಗಬೇಕು. ಆ ಮಕ್ಕಳ ಎದೆಗೆ ಬೀಳುವ ಅಕ್ಷರ ತಮ್ಮ ಸಹಜೀವಿಗಳ ಬಗೆಗೆ ಅಂತಃಕರಣ ಹಾಗೂ ಪ್ರೀತಿಯನ್ನಷ್ಟೇ ಕಲಿಸುವಂತಾಗಬೇಕು. ಇಲ್ಲದಿದ್ದರೆ ಯಾರೂ ನೆಮ್ಮದಿಯಿಂದ ಇರಲಾಗದ ಸಮಾಜವೊಂದು ಸೃಷ್ಟಿಯಾಗುವ ಅಪಾಯವಿದೆ ಎನ್ನುವುದನ್ನು ಎಲ್ಲರೂ ಮನಗಾಣಬೇಕಾಗಿದೆ.

ವಂದನೆಗಳೊಂದಿಗೆ,

ಬೆಂಗಳೂರು ವಿಶ್ವವಿದ್ಯಾಲಯ ಕಾಲೇಜು ಕನ್ನಡ ಅಧ್ಯಾಪಕರ ಸಂಘ(ರಿ).
ಡಾ. ಅಮರೇಂದ್ರ ಶೆಟ್ಟಿ ಆರ್(ಅಮರೇಂದ್ರ ಹೊಲ್ಲಂಬಳ್ಳಿ) – ಅಧ್ಯಕ್ಷರು
ಡಾ.ಎ.ವಿ.ಲಕ್ಷ್ಮೀನಾರಾಯಣ- ಪ್ರಧಾನ ಕಾರ್‍ಯದರ್ಶಿ
ಡಾ.ಕೆ.ಎನ್.ಹೊಯ್ಸಳಾದಿತ್ಯ- ಉಪಾಧ್ಯಕ್ಷರು
ಡಾ. ಎ.ಸಿ.ಸುಧಾ- ಖಜಾಂಚಿ
ಡಾ. ಕೆ.ಪಿ.ಪುಟ್ಟಮಾರಯ್ಯ- ಸಹ ಕಾರ್‍ಯದರ್ಶಿ


ಇದನ್ನೂ ಓದಿ: ಪಠ್ಯ ಪರಿಶೀಲಿಸಿದ ಸಮಿತಿಯ ಸದಸ್ಯರ್‍ಯಾರೂ ಪ್ರತಿಕ್ರಿಯೆಗೆ ಸಿದ್ಧರಿಲ್ಲ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಫೇಕ್ ಮದುವೆ ಜಾಲಕ್ಕೆ ಬಿದ್ದ ಫೇಮಸ್ ಗೋರಕ್ಷಕ ‘ಬಿಟ್ಟು ಬಜರಂಗಿ’

ಹರಿಯಾಣದಲ್ಲಿ "ಲವ್ ಜಿಹಾದ್" ಮತ್ತು ಅಂತರ್ಧರ್ಮೀಯ ವಿವಾಹಗಳ ವಿರುದ್ಧ ನಿರಂತರವಾಗಿ ಹೋರಾಡುತ್ತಾ, ತನ್ನದೇ ಆದ ಸಾರ್ವಜನಿಕ ಪ್ರಭಾವ ಬೆಳೆಸಿಕೊಂಡಿದ್ದ ರಾಜ್ ಕುಮಾರ್ ಅಲಿಯಾಸ್ ಬಿಟ್ಟು ಬಜರಂಗಿಗೆ ತನಗೆ ಇಂತಹದ್ದೊಂದು ಪರಿಸ್ಥಿತಿ ಎದುರಾಗಬಹುದು ಎಂಬ...

ಕರ್ನಾಟಕದ ಎಸ್‌ಐಆರ್ ಪ್ರಕ್ರಿಯೆಯಲ್ಲಿ ‘ಸಾಮೂಹಿಕ ಅಕ್ರಮ’ ಆರೋಪ: ರಾಜ್ಯ ಮುಖ್ಯ ಚುನಾವಣಾಧಿಕಾರಿಗೆ ದೂರು ನೀಡಿದ ಎನ್‌ಡಿಎ ನಿಯೋಗ

ಬೆಂಗಳೂರು: ಕರ್ನಾಟಕದಲ್ಲಿ ಸದ್ಯ ಚಾಲ್ತಿಯಲ್ಲಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ಸಾಂಸ್ಥಿಕ ಅಕ್ರಮಗಳು ನಡೆಯುತ್ತಿವೆ ಎಂದು ಆರೋಪಿಸಿ, ರಾಜ್ಯದ ಪ್ರಮುಖ ವಿರೋಧ ಪಕ್ಷಗಳಾದ ಬಿಜೆಪಿ ಮತ್ತು...

SIR: ಮತದಾರರ ಹಕ್ಕು ರಕ್ಷಣೆಗೆ ಕಣಕ್ಕಿಳಿದ ‘ನಾಗರಿಕ ಮತ ಕಾವಲು ಸಮಿತಿ’

ರಾಜ್ಯದ ಶೋಷಿತ, ಹಿಂದುಳಿದ ಮತ್ತು ಅಂಚಿನಲ್ಲಿರುವ ಸಮುದಾಯಗಳ ಮತದಾನದ ಹಕ್ಕಿಗೆ ಯಾವುದೇ ಚ್ಯುತಿ ಬಾರದಂತೆ ತಡೆಯಲು ಬೂತ್ ಮಟ್ಟದಿಂದ ಹಿಡಿದು ರಾಜ್ಯ ಮಟ್ಟದವರೆಗೆ ‘ನಾಗರಿಕ ಮತ ಕಾವಲು ಸಮಿತಿ’ಯನ್ನು ಅಸ್ತಿತ್ವಕ್ಕೆ ತರಲಾಗಿದೆ. ಎಸ್‌ಐಆರ್...

ಮೋಹನ್‌ಲಾಲ್ ‘ದಂತ’ ಕಥೆ: ಅರಣ್ಯ ಇಲಾಖೆ ಮುಂದೆ 10 ಆನೆ ದಂತ, 13 ಮೂರ್ತಿಗಳ ಅಚ್ಚರಿಯ ಘೋಷಣೆ!

ನಟ ಮೋಹನ್‌ಲಾಲ್ ಅವರು ತಾವೇ ಕಾನೂನುಬಾಹಿರವಾಗಿ ವನ್ಯಜೀವಿ ವಸ್ತುಗಳನ್ನು ಹೊಂದಿರುವ ಆರೋಪದ ಮೇಲೆ ವಿಚಾರಣೆ ಎದುರಿಸುತ್ತಿದ್ದರೂ, ತಮ್ಮ ಬಳಿ 10 ಆನೆ ದಂತಗಳು ಮತ್ತು 13 ದಂತದ ಮೂರ್ತಿಗಳು ಇರುವುದಾಗಿ ಕೇರಳ ಅರಣ್ಯ...

ಅಯೋಧ್ಯೆ ರಾಮಮಂದಿರ ಹಗರಣ: ‘ಕದ್ದ ಹಣ’ ಹಂಚಿಕೆಯ ಮೊಬೈಲ್ ಚಾಟ್‌ಗಳು ಬಹಿರಂಗ; ತೀವ್ರಗೊಂಡ ತನಿಖೆ

ಲಕ್ನೋ: ಅಯೋಧ್ಯೆಯ ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ನಿಧಿ ದುರುಪಯೋಗ ಮತ್ತು ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಅತ್ಯಂತ ಸ್ಫೋಟಕ ಮಾಹಿತಿ ಹೊರಬಿದ್ದಿದ್ದು, ತನಿಖೆ ತೀವ್ರಗೊಂಡಿದೆ. ಪ್ರಕರಣದ ಪ್ರಮುಖ ಆರೋಪಿಗಳ ಮೊಬೈಲ್ ಫೋನ್‌ಗಳ...

ಅಪ್ರಾಪ್ತ ಬಾಲಕಿಯ ಅತ್ಯಾಚಾರ-ಕೊಲೆ ಆರೋಪ : ಪ. ಬಂಗಾಳದ ಬಾರುಯಿಪುರದಲ್ಲಿ ಹಿಂಸಾಚಾರ ; ಶಂಕಿತ ಆರೋಪಿಯ ಗುಂಪು ಹತ್ಯೆ

ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯ ಬಾರುಯಿಪುರದಲ್ಲಿ ಶನಿವಾರ (ಜು.4) ಮಧ್ಯಾಹ್ನದಿಂದ ನಾಪತ್ತೆಯಾಗಿದ್ದ ಅಪ್ರಾಪ್ತ ಬಾಲಕಿಯೊಬ್ಬಳ ಶವ ಭಾನುವಾರ (ಜು.5) ಬೆಳಿಗ್ಗೆ ಕೆರೆಯಲ್ಲಿ ಪತ್ತೆಯಾಗಿದ್ದು, ಆ ಬಳಿಕ ಅಲ್ಲಿ ತೀವ್ರ ಹಿಂಸಾತ್ಮಕ...

SIR ಬಳಿಕ ಒಡಿಶಾದ ಕರಡು ಮತದಾರರ ಪಟ್ಟಿ ಪ್ರಕಟ : 20 ಲಕ್ಷ ಹೆಸರುಗಳು ಡಿಲೀಟ್

ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್) ಗಣತಿ ಹಂತದ ಬಳಿಕ ಚುನಾವಣಾ ಆಯೋಗ ಭಾನುವಾರ (ಜು.5) ಒಡಿಶಾದ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಿದ್ದು, ಇದರಲ್ಲಿ 20 ಲಕ್ಷಕ್ಕೂ ಹೆಚ್ಚು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ...

SIR: ಟಾರ್ಗೆಟ್ ಮತ್ತು ಒತ್ತಡದ ಕೆಲಸದಿಂದ ಮೂವರು ಸಿಬ್ಬಂದಿ ಸಾವು

ಕರ್ನಾಟಕದಲ್ಲಿ ನಡೆಯುತ್ತಿರುವ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯು ಕೆಳಹಂತದ ನೌಕರರ ಪಾಲಿಗೆ ಮರಣಶಾಸನವಾಗುತ್ತಿದೆಯೇ ಎಂಬ ಗಂಭೀರ ಪ್ರಶ್ನೆಯೊಂದು ಎದ್ದಿದೆ. ಅಧಿಕಾರಿಗಳು ನೀಡುತ್ತಿರುವ ಅತಿಯಾದ ಒತ್ತಡ ಮತ್ತು ಟಾರ್ಗೆಟ್ ಬೆನ್ನತ್ತುವ ಧಾವಂತದಿಂದಾಗಿ...

ಖಮೇನಿ ಅಂತ್ಯಕ್ರಿಯೆ ವೇಳೆ ಟ್ರಂಪ್ ಉದ್ಧಟತನದ ಹೇಳಿಕೆ: “ಇತಿಹಾಸ, ಗೌರವವಿಲ್ಲದ ದೇಶ ಅಮೆರಿಕ” ಎಂದು ಇರಾನ್ ತೀಕ್ಷ್ಣ ತಿರುಗೇಟು

ಟೆಹ್ರಾನ್: ಇರಾನ್‌ನ ಮಾಜಿ ಸುಪ್ರೀಂ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ನಿಧನದ ನಂತರ ಜಾಗತಿಕ ರಾಜತಾಂತ್ರಿಕ ವಲಯದಲ್ಲಿ ಭಾರೀ ವಾಕ್ಸಮರ ಉಂಟಾಗಿದೆ. ಖಮೇನಿ ಅವರ ಅಂತ್ಯಕ್ರಿಯೆಯ ಸಂದರ್ಭದಲ್ಲಿ ಒಟ್ಟುಗೂಡಿರುವ ಇರಾನ್‌ನ ಇಡೀ...

ಮ್ಯಾಚ್ ಮಧ್ಯೆ ಕಾಂಡೊಮ್ ಜಾಹೀರಾತು: ಬಿಸಿಸಿಐ ವಿರುದ್ಧ ಕಿಡಿಕಾರಿದ ಮಾಜಿ ಕ್ರಿಕೆಟಿಗ, TMC ಸಂಸದ ಕೀರ್ತಿ ಆಜಾದ್

ಮ್ಯಾಂಚೆಸ್ಟರ್‌ನ ಓಲ್ಡ್ ಟ್ರಾಫರ್ಡ್‌ನಲ್ಲಿ ನಡೆದ ಭಾರತ ಮತ್ತು ಇಂಗ್ಲೆಂಡ್ ನಡುವಿನ ಟಿ20 ಅಂತರರಾಷ್ಟ್ರೀಯ ಪಂದ್ಯದ ನೇರ ಪ್ರಸಾರದ ವೇಳೆ ಕಾಂಡೊಮ್ ಜಾಹೀರಾತುಗಳನ್ನು ಪ್ರಸಾರ ಮಾಡಿದ್ದನ್ನು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಮತ್ತು ಮಾಜಿ...