Homeಕರ್ನಾಟಕಮಕ್ಕಳ ಎದೆಗೆ ಬೀಳುವ ಅಕ್ಷರ ತಮ್ಮ ಸಹಜೀವಿಗಳ ಬಗೆಗೆ ಅಂತಃಕರಣ ಹಾಗೂ ಪ್ರೀತಿಯನ್ನಷ್ಟೇ ಕಲಿಸುವಂತಾಗಬೇಕು..

ಮಕ್ಕಳ ಎದೆಗೆ ಬೀಳುವ ಅಕ್ಷರ ತಮ್ಮ ಸಹಜೀವಿಗಳ ಬಗೆಗೆ ಅಂತಃಕರಣ ಹಾಗೂ ಪ್ರೀತಿಯನ್ನಷ್ಟೇ ಕಲಿಸುವಂತಾಗಬೇಕು..

- Advertisement -
- Advertisement -

ರಾಜ್ಯದ ಶಾಲಾ ಪಠ್ಯಪುಸ್ತಕಗಳ ಪರಿಷ್ಕರಣೆಗೆ ಸಂಬಂಧಿಸಿದಂತೆ ನಡೆಯುತ್ತಿರುವ ಚರ್ಚೆಗಳನ್ನು ರಾಜ್ಯದ ಜನ ಗಂಭೀರವಾಗಿ ಗಮನಿಸುತ್ತಿದ್ದಾರೆ. ಪಠ್ಯಗಳನ್ನು ಕುರಿತ ಚರ್ಚೆಗಳು ಆರೋಗ್ಯಕರ ನೆಲೆಯಲ್ಲಿ ನಡೆದು ವಿದ್ಯಾರ್ಥಿಗಳ ಜ್ಞಾನವಿಕಾಸಕ್ಕೆ ಕಾರಣವಾಗುವ ಉತ್ತಮ ಗುಣಮಟ್ಟದ ಪಠ್ಯಪುಸ್ತಕಗಳು ದೊರಕುವಂತಾದರೆ ಎಲ್ಲರಿಗೂ ಸಂತೋಷ. ಆದರೆ ಚರ್ಚೆಗಳು ಆ ನಿಟ್ಟಿನಲ್ಲಿ ಸಾಗದೆ ಸೈದ್ಧಾಂತಿಕ ದ್ವೇಷ, ವೈಯಕ್ತಿಕ ನಿಂದನೆಯ ಮಟ್ಟಕ್ಕೆ ತಲುಪಿರುವುದು ಆಘಾತಕಾರಿ ಬೆಳವಣಿಗೆ. ಅದರಲ್ಲೂ ಪಠ್ಯಪುಸ್ತಕ ಪರಿಷ್ಕರಣಾ ಸಮಿತಿಯ ನಿಕಟಪೂರ್ವ ಅಧ್ಯಕ್ಷರಾಗಿದ್ದ ಹಿರಿಯ ಸಾಹಿತಿ ಬರಗೂರು ರಾಮಚಂದ್ರಪ್ಪನವರ ಬಗೆಗೆ ಕೆಲವರು ಮಾಡುತ್ತಿರುವ ಟೀಕೆಗಳು, ಬಳಸುತ್ತಿರುವ ಭಾಷೆ ಸಜ್ಜನ ಸಂಸ್ಕೃತಿಯದ್ದಲ್ಲ. ನಾಡಿನ ನೆಲ-ಜಲ-ನುಡಿ-ಸಾಮಾಜಿಕ ನ್ಯಾಯ-ಸಾಮಾಜಿಕ ಸ್ವಾಸ್ಥ್ಯಕ್ಕಾಗಿ ಸದಾ ಚಿಂತಿಸುವ ದೇವನೂರ ಮಹಾದೇವ, ಬರಗೂರರಂತಹ ಹಿರಿಯರ ಬಗೆಗೆ ಮಾತನಾಡುವಾಗ ಅವರೊಂದಿಗೆ ಎಷ್ಟೇ ತಾತ್ವಿಕ ಭಿನ್ನಾಭಿಪ್ರಾಯಗಳಿದ್ದರೂ, ಗೌರವದಿಂದ ಮಾತನಾಡಬೇಕು ಎನ್ನುವ ಸಾಮಾನ್ಯ ವಿವೇಕ ಅವರನ್ನು ಟೀಕಿಸುವವರಿಗೆ ಇರಬೇಕಾಗಿದೆ.

ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಎಂತಹುದೇ ಭಿನ್ನಾಭಿಪ್ರಾಯಗಳನ್ನೂ ಪರಸ್ಪರ ಚರ್ಚೆಯ ಮೂಲಕ ಬಗೆಹರಿಸಿಕೊಳ್ಳುವ ಅವಕಾಶ ಇರುವಾಗ ದ್ವೇಷ ಕಾರುವ ಮಾತುಗಳ ಅವಶ್ಯಕತೆ ಇಲ್ಲ. ಆದರೆ, ಜವಾಬ್ದಾರಿಯುತ ಸ್ಥಾನಗಳಲ್ಲಿ ಇರುವವರೇ ಬಾಯಿಗೆ ಬಂದಂತೆ ಮಾತನಾಡುತ್ತಿರುವುದರಿಂದ ಮನಸ್ಸುಗಳನ್ನು ಬೆಸೆಯಬೇಕಾದ ಮಾತು ತನ್ನ ಮೂಲೋದ್ದೇಶದಿಂದ ವಿಮುಖಗೊಂಡು ದ್ವೇಷ, ತಿರಸ್ಕಾರದ ಅಸ್ತ್ರವಾಗಿ ಬದಲಾಗಿದೆ. ಕೆಲವು ಮಾಧ್ಯಮಗಳು ಹಾಗೂ ಸಾಮಾಜಿಕ ಜಾಲತಾಣಗಳಂತೂ ದ್ವೇಷ ಬಿತ್ತುವ ಅಂಕಣಗಳಾಗಿ ಬದಲಾಗಿವೆ. ಈ ಅಸಹನೆ, ದ್ವೇಷ, ಪೂರ್ವಾಗ್ರಹಗಳು ಕನ್ನಡದ ಮನಸ್ಸಾಕ್ಷಿಯಂತಿರುವ ರಾಷ್ಟ್ರಕವಿ ಕುವೆಂಪುರವರನ್ನು ಹಾಗೂ ನಮ್ಮೆಲ್ಲರ ಹೆಮ್ಮೆಯ ನಾಡಗೀತೆಯನ್ನೂ ಬಿಡದೆ ಅವಹೇಳನ ಮಾಡುವ ಮಟ್ಟಕ್ಕೆ ತಲುಪಿದೆ ಎಂದರೆ, ಖಂಡಿತವಾಗಿಯೂ ಇದು ನಾಡಿನ ಹಿತದೃಷ್ಟಿಯಿಂದ ಅತ್ಯಂತ ಅಪಾಯಕಾರಿಯಾದುದು. ಕನ್ನಡದ ಸೌಹಾರ್ದ ಸಂಸ್ಕೃತಿಯ ಅಡಿಪಾಯವನ್ನೇ ನಾಶ ಮಾಡುವಂತಹ ಈ ಅಪಾಯದಿಂದ ಪಾರಾಗಬೇಕಾದರೆ, ಯಾರೂ ಯಾರನ್ನೂ ಶತ್ರುಗಳೆನ್ನುವಂತೆ ನೋಡಬಾರದೆನ್ನುವ ಸರಳ ತತ್ವವನ್ನು ಎಲ್ಲ ಪಂಥೀಯರೂ ಅರ್ಥಮಾಡಿಕೊಳ್ಳಲೇಬೇಕಾಗಿದೆ.

ಹಾಗೆಯೇ, ಈ ನಾಡಿನ ಶತಮಾನಗಳ ಕಾಲದ ಕೂಡಿ ಬಾಳುವ ಪರಂಪರೆಗೆ ಹಾಗೂ ಪ್ರಜಾಸತ್ತಾತ್ಮಕ ಮೌಲ್ಯಗಳ ಉಳಿವಿಗೆ ಯಾವುದು ಸೂಕ್ತವೋ ಅಂತಹ ಪಠ್ಯಪುಸ್ತಕಗಳು ಮಕ್ಕಳಿಗೆ ದೊರಕುವಂತಾಗಬೇಕು. ಆ ಮಕ್ಕಳ ಎದೆಗೆ ಬೀಳುವ ಅಕ್ಷರ ತಮ್ಮ ಸಹಜೀವಿಗಳ ಬಗೆಗೆ ಅಂತಃಕರಣ ಹಾಗೂ ಪ್ರೀತಿಯನ್ನಷ್ಟೇ ಕಲಿಸುವಂತಾಗಬೇಕು. ಇಲ್ಲದಿದ್ದರೆ ಯಾರೂ ನೆಮ್ಮದಿಯಿಂದ ಇರಲಾಗದ ಸಮಾಜವೊಂದು ಸೃಷ್ಟಿಯಾಗುವ ಅಪಾಯವಿದೆ ಎನ್ನುವುದನ್ನು ಎಲ್ಲರೂ ಮನಗಾಣಬೇಕಾಗಿದೆ.

ವಂದನೆಗಳೊಂದಿಗೆ,

ಬೆಂಗಳೂರು ವಿಶ್ವವಿದ್ಯಾಲಯ ಕಾಲೇಜು ಕನ್ನಡ ಅಧ್ಯಾಪಕರ ಸಂಘ(ರಿ).
ಡಾ. ಅಮರೇಂದ್ರ ಶೆಟ್ಟಿ ಆರ್(ಅಮರೇಂದ್ರ ಹೊಲ್ಲಂಬಳ್ಳಿ) – ಅಧ್ಯಕ್ಷರು
ಡಾ.ಎ.ವಿ.ಲಕ್ಷ್ಮೀನಾರಾಯಣ- ಪ್ರಧಾನ ಕಾರ್‍ಯದರ್ಶಿ
ಡಾ.ಕೆ.ಎನ್.ಹೊಯ್ಸಳಾದಿತ್ಯ- ಉಪಾಧ್ಯಕ್ಷರು
ಡಾ. ಎ.ಸಿ.ಸುಧಾ- ಖಜಾಂಚಿ
ಡಾ. ಕೆ.ಪಿ.ಪುಟ್ಟಮಾರಯ್ಯ- ಸಹ ಕಾರ್‍ಯದರ್ಶಿ


ಇದನ್ನೂ ಓದಿ: ಪಠ್ಯ ಪರಿಶೀಲಿಸಿದ ಸಮಿತಿಯ ಸದಸ್ಯರ್‍ಯಾರೂ ಪ್ರತಿಕ್ರಿಯೆಗೆ ಸಿದ್ಧರಿಲ್ಲ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾರ್ಖಂಡ್‌ ಸಿಎಂಗೆ ರಾಹುಲ್ ಗಾಂಧಿ ಪತ್ರ, ಉದ್ಯೋಗಾಕಾಂಕ್ಷಿಗಳ ಬೆಂಬಲಕ್ಕೆ ಆಗ್ರಹ

ಜಾರ್ಖಂಡ್‌ನಲ್ಲಿ ರಾಜ್ಯ ಸರ್ಕಾರಿ ನೇಮಕಾತಿ ಪರೀಕ್ಷೆಗಳಲ್ಲಿ ನಡೆದಿವೆ ಎನ್ನಲಾದ ಅಕ್ರಮಗಳ ವಿರುದ್ಧ ಉದ್ಯೋಗಾಕಾಂಕ್ಷಿಗಳು ನಡೆಸುತ್ತಿರುವ ಹೋರಾಟದ ಬೆನ್ನಲ್ಲೇ, ಕಾಂಗ್ರೆಸ್ ಸಂಸದ ಹಾಗೂ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರು ಮುಖ್ಯಮಂತ್ರಿ ಹೇಮಂತ್ ಸೋರೆನ್...

“NTA ಮಾಡಿದ ತಪ್ಪಿಗೆ ವಿದ್ಯಾರ್ಥಿಗಳಿಗೆ ಶಿಕ್ಷೆ”: UGC-NET ಇಂಗ್ಲಿಷ್, ವಾಣಿಜ್ಯ ಮತ್ತು ಸಮಾಜಶಾಸ್ತ್ರ ಪತ್ರಿಕೆಗಳ ಮರುಪರೀಕ್ಷೆ ನಿರ್ಧಾರಕ್ಕೆ ದೇಶಾದ್ಯಂತ ಆಕ್ರೋಶ

ನವದೆಹಲಿ: ಕಳೆದ ಜೂನ್ ತಿಂಗಳಿನಲ್ಲಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) ನಡೆಸಿದ್ದ ಯುಜಿಸಿ-ನೆಟ್ (UGC-NET) ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳಲ್ಲಿ ಸಾಲು ಸಾಲು ಗಂಭೀರ ದೋಷಗಳು ಕಂಡುಬಂದ ಹಿನ್ನೆಲೆಯಲ್ಲಿ, ಇಂಗ್ಲಿಷ್, ವಾಣಿಜ್ಯ ಮತ್ತು ಸಮಾಜಶಾಸ್ತ್ರ...

ಬಿಹಾರದ ಅಶೋಕಧಾಮ ದೇಗುಲದಲ್ಲಿ ಕಾಲ್ತುಳಿತ: ಶ್ರಾವಣ ಸೋಮವಾರದ ಪೂಜೆ ವೇಳೆ 7 ಮಹಿಳೆಯರು ಸಾವು, 12 ಕ್ಕೂ ಹೆಚ್ಚು ಜನರಿಗೆ ಗಾಯ

ಪಾಟ್ನಾ/ಲಖಿಸರಾಯ್: ಶ್ರಾವಣ ಮಾಸದ ಪವಿತ್ರ ಸೋಮವಾರದಂದು ಧಾರ್ಮಿಕ ಕೇಂದ್ರವೊಂದರಲ್ಲಿ ಸಂಭವಿಸಿದ ಭೀಕರ ಅಪಘಾತ ಇಡೀ ರಾಜ್ಯವನ್ನೇ ದಿಗ್ಭ್ರಮೆಗೊಳಿಸಿದೆ. ಬಿಹಾರದ ಲಖಿಸರಾಯ್ ಜಿಲ್ಲೆಯಲ್ಲಿರುವ ಐತಿಹಾಸಿಕ ಅಶೋಕಧಾಮ ದೇವಾಲಯದ ಆವರಣದ ಬಳಿ ಮುಂಜಾನೆ ನಡೆದ ಭೀಕರ...

ಎಲ್ಲಾ ಯೋಜನೆಗಳೂ ಗುಜರಾತ್‌ಗೇ ಏಕೆ?: ಬಿಜೆಪಿ ಕೇಂದ್ರ ನಾಯಕತ್ವ ವಿರುದ್ಧವೇ ಬಹಿರಂಗವಾಗಿ ತಿರುಗಿಬಿದ್ದ ಅಣ್ಣಾಮಲೈ!

BJP ನಾಯಕತ್ವದ ನಿರ್ಧಾರಗಳು ‘ದೆಹಲಿ ಕೇಂದ್ರಿತ’ ಹಾಗೂ ದೇಶದ ಅಭಿವೃದ್ಧಿ ಮಾದರಿಯು ‘ಗುಜರಾತ್‌ ಕೇಂದ್ರಿತ’ವಾಗುತ್ತಿದೆ ಎಂದು ತಮಿಳುನಾಡು ಬಿಜೆಪಿಯ ನಿಕಟಪೂರ್ವ ರಾಜ್ಯಾಧ್ಯಕ್ಷ ಹಾಗೂ ‘ವಿ ದಿ ಲೀಡರ್ಸ್’ ಸಂಘಟನೆಯ ಸಂಸ್ಥಾಪಕ ಕೆ. ಅಣ್ಣಾಮಲೈ...

ಜಾರ್ಖಂಡ್ ವಿದ್ಯಾರ್ಥಿಗಳ ಹೋರಾಟ; ಹೇಮಂತ್ ಸೊರೇನ್ – ರಾಹುಲ್ ಗಾಂಧಿ ಪ್ರತಿಕೃತಿ ದಹಿಸಿದ ಪ್ರತಿಭಟನಾಕಾರರು

ಜಾರ್ಖಂಡ್ ನೇಮಕಾತಿ ಪರೀಕ್ಷೆಗಳಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿ ಆಗಸ್ಟ್ 16 ರಂದು (ಭಾನುವಾರ) ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆ ತೀವ್ರಗೊಂಡಿದೆ. ಮುಖ್ಯಮಂತ್ರಿ ಹೇಮಂತ್ ಸೊರೇನ್, ರಾಹುಲ್ ಗಾಂಧಿ ಮತ್ತು ಆರ್‌ಜೆಡಿ ನಾಯಕ ತೇಜಸ್ವಿ...

BJP ರಾಷ್ಟ್ರೀಯ ವಕ್ತಾರ ಹುದ್ದೆಗೆ ಮತ್ತೆ ರಾಜೀನಾಮೆ! ಕಾರಣ ಬಿಚ್ಚಿಟ್ಟ ಶೆಹಝಾದ್ ಪೂನಾವಾಲಾ

BJP ರಾಷ್ಟ್ರೀಯ ವಕ್ತಾರ ಶೆಹಝಾದ್ ಪೂನಾವಾಲಾ ಅವರು ಪಕ್ಷದ ಪ್ರಾಥಮಿಕ ಸದಸ್ಯತ್ವ ಹಾಗೂ ತಮ್ಮ ಹುದ್ದೆಗೆ ಮತ್ತೊಮ್ಮೆ ರಾಜೀನಾಮೆ ನೀಡಿದ್ದಾರೆ. ತಮ್ಮ ರಾಜೀನಾಮೆ ಪತ್ರವನ್ನು ತಕ್ಷಣವೇ ಅಂಗೀಕರಿಸುವಂತೆ ಅವರು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ...

NALSAR ಘಟಿಕೋತ್ಸವ ವಿವಾದ: ಆಹ್ವಾನ ತಿರಸ್ಕರಿಸಿದ ಸಿಜೆಐ ಸೂರ್ಯಕಾಂತ್!

ಹೈದರಾಬಾದ್‌ನ ಪ್ರತಿಷ್ಠಿತ NALSAR ಕಾನೂನು ವಿಶ್ವವಿದ್ಯಾಲಯದ ಘಟಿಕೋತ್ಸವಕ್ಕೆ ಮುಖ್ಯ ಅತಿಥಿಯಾಗಿ ಭಾಗವಹಿಸುವ ಕುರಿತು ಎದ್ದಿದ್ದ ವಿವಾದಕ್ಕೆ ಕೊನೆಗೂ ತೆರೆ ಬಿದ್ದಿದೆ. ತಾವು ಈ ಆಹ್ವಾನವನ್ನು ಸ್ವೀಕರಿಸಿಲ್ಲ, ಹೀಗಾಗಿ ಘಟಿಕೋತ್ಸವದಲ್ಲಿ ಭಾಗವಹಿಸುವ ಪ್ರಶ್ನೆಯೇ ಉದ್ಭವಿಸುವುದಿಲ್ಲ...

ಹೈದರಾಬಾದ್ : ಡಿಜಿಟಲೀಕರಣಗೊಂಡ ಶೇ. 21ರಷ್ಟು ಮತದಾರರಿಗೆ SIR ನೋಟಿಸ್

ಹೈದರಾಬಾದ್ ಜಿಲ್ಲಾ ಚುನಾವಣಾ ಪ್ರಾಧಿಕಾರವು (ಡಿಇಎ) ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) 2026ರ ಅಡಿಯಲ್ಲಿ ಸೋಮವಾರ (ಆ. 17) ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಿದ ನಂತರ, 5.82 ಲಕ್ಷ ಮತದಾರರಿಗೆ ನೋಟಿಸ್ ಜಾರಿ...

ಕಾವೇರಿ: ರೈತರ ಹಿತ ಕಾಯುವುದು ನನ್ನ ಮೊದಲ ಕರ್ತವ್ಯ ಡಿ.ಕೆ.ಶಿವಕುಮಾರ್

ರಾಜ್ಯದ ಜಲಾಶಯಗಳಲ್ಲಿ ನೀರಿನ ಲಭ್ಯತೆ ಕಡಿಮೆಯಿರುವಾಗ ನಮ್ಮ ರೈತರನ್ನು ಬದುಕಿಸುವ ಸವಾಲಿನ ಜೊತೆಗೆ ಕಾನೂನನ್ನೂ ಕಾಪಾಡಬೇಕಾದ ಹೊಣೆಗಾರಿಕೆ ಇದೆ. ಕಾವೇರಿ ವಿಚಾರದಲ್ಲಿ ನಮ್ಮ ರೈತರ ಹಿತ ಕಾಯುವುದು ನನ್ನ ಮೊದಲ ಕರ್ತವ್ಯ ಎಂದು...

‘ಅಸ್ತಿತ್ವದ ಸಮಸ್ಯೆಯಲ್ಲ, ಹೊಣೆಗಾರಿಕೆಯೇ ಮುಖ್ಯ’: ಆರ್‌ಎಸ್‌ಎಸ್ ನೋಂದಣಿ ಕುರಿತು ಬಿ.ಎಲ್. ಸಂತೋಷ್ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ನೋಂದಣಿ ಹಾಗೂ ಅದರ ಕಾನೂನಾತ್ಮಕ ಅಸ್ತಿತ್ವಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ (ಸಂಘಟನೆ) ಬಿ.ಎಲ್. ಸಂತೋಷ್ ಹಾಗೂ ಕರ್ನಾಟಕದ ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್...