Homeಕರ್ನಾಟಕಮಕ್ಕಳ ಎದೆಗೆ ಬೀಳುವ ಅಕ್ಷರ ತಮ್ಮ ಸಹಜೀವಿಗಳ ಬಗೆಗೆ ಅಂತಃಕರಣ ಹಾಗೂ ಪ್ರೀತಿಯನ್ನಷ್ಟೇ ಕಲಿಸುವಂತಾಗಬೇಕು..

ಮಕ್ಕಳ ಎದೆಗೆ ಬೀಳುವ ಅಕ್ಷರ ತಮ್ಮ ಸಹಜೀವಿಗಳ ಬಗೆಗೆ ಅಂತಃಕರಣ ಹಾಗೂ ಪ್ರೀತಿಯನ್ನಷ್ಟೇ ಕಲಿಸುವಂತಾಗಬೇಕು..

- Advertisement -
- Advertisement -

ರಾಜ್ಯದ ಶಾಲಾ ಪಠ್ಯಪುಸ್ತಕಗಳ ಪರಿಷ್ಕರಣೆಗೆ ಸಂಬಂಧಿಸಿದಂತೆ ನಡೆಯುತ್ತಿರುವ ಚರ್ಚೆಗಳನ್ನು ರಾಜ್ಯದ ಜನ ಗಂಭೀರವಾಗಿ ಗಮನಿಸುತ್ತಿದ್ದಾರೆ. ಪಠ್ಯಗಳನ್ನು ಕುರಿತ ಚರ್ಚೆಗಳು ಆರೋಗ್ಯಕರ ನೆಲೆಯಲ್ಲಿ ನಡೆದು ವಿದ್ಯಾರ್ಥಿಗಳ ಜ್ಞಾನವಿಕಾಸಕ್ಕೆ ಕಾರಣವಾಗುವ ಉತ್ತಮ ಗುಣಮಟ್ಟದ ಪಠ್ಯಪುಸ್ತಕಗಳು ದೊರಕುವಂತಾದರೆ ಎಲ್ಲರಿಗೂ ಸಂತೋಷ. ಆದರೆ ಚರ್ಚೆಗಳು ಆ ನಿಟ್ಟಿನಲ್ಲಿ ಸಾಗದೆ ಸೈದ್ಧಾಂತಿಕ ದ್ವೇಷ, ವೈಯಕ್ತಿಕ ನಿಂದನೆಯ ಮಟ್ಟಕ್ಕೆ ತಲುಪಿರುವುದು ಆಘಾತಕಾರಿ ಬೆಳವಣಿಗೆ. ಅದರಲ್ಲೂ ಪಠ್ಯಪುಸ್ತಕ ಪರಿಷ್ಕರಣಾ ಸಮಿತಿಯ ನಿಕಟಪೂರ್ವ ಅಧ್ಯಕ್ಷರಾಗಿದ್ದ ಹಿರಿಯ ಸಾಹಿತಿ ಬರಗೂರು ರಾಮಚಂದ್ರಪ್ಪನವರ ಬಗೆಗೆ ಕೆಲವರು ಮಾಡುತ್ತಿರುವ ಟೀಕೆಗಳು, ಬಳಸುತ್ತಿರುವ ಭಾಷೆ ಸಜ್ಜನ ಸಂಸ್ಕೃತಿಯದ್ದಲ್ಲ. ನಾಡಿನ ನೆಲ-ಜಲ-ನುಡಿ-ಸಾಮಾಜಿಕ ನ್ಯಾಯ-ಸಾಮಾಜಿಕ ಸ್ವಾಸ್ಥ್ಯಕ್ಕಾಗಿ ಸದಾ ಚಿಂತಿಸುವ ದೇವನೂರ ಮಹಾದೇವ, ಬರಗೂರರಂತಹ ಹಿರಿಯರ ಬಗೆಗೆ ಮಾತನಾಡುವಾಗ ಅವರೊಂದಿಗೆ ಎಷ್ಟೇ ತಾತ್ವಿಕ ಭಿನ್ನಾಭಿಪ್ರಾಯಗಳಿದ್ದರೂ, ಗೌರವದಿಂದ ಮಾತನಾಡಬೇಕು ಎನ್ನುವ ಸಾಮಾನ್ಯ ವಿವೇಕ ಅವರನ್ನು ಟೀಕಿಸುವವರಿಗೆ ಇರಬೇಕಾಗಿದೆ.

ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಎಂತಹುದೇ ಭಿನ್ನಾಭಿಪ್ರಾಯಗಳನ್ನೂ ಪರಸ್ಪರ ಚರ್ಚೆಯ ಮೂಲಕ ಬಗೆಹರಿಸಿಕೊಳ್ಳುವ ಅವಕಾಶ ಇರುವಾಗ ದ್ವೇಷ ಕಾರುವ ಮಾತುಗಳ ಅವಶ್ಯಕತೆ ಇಲ್ಲ. ಆದರೆ, ಜವಾಬ್ದಾರಿಯುತ ಸ್ಥಾನಗಳಲ್ಲಿ ಇರುವವರೇ ಬಾಯಿಗೆ ಬಂದಂತೆ ಮಾತನಾಡುತ್ತಿರುವುದರಿಂದ ಮನಸ್ಸುಗಳನ್ನು ಬೆಸೆಯಬೇಕಾದ ಮಾತು ತನ್ನ ಮೂಲೋದ್ದೇಶದಿಂದ ವಿಮುಖಗೊಂಡು ದ್ವೇಷ, ತಿರಸ್ಕಾರದ ಅಸ್ತ್ರವಾಗಿ ಬದಲಾಗಿದೆ. ಕೆಲವು ಮಾಧ್ಯಮಗಳು ಹಾಗೂ ಸಾಮಾಜಿಕ ಜಾಲತಾಣಗಳಂತೂ ದ್ವೇಷ ಬಿತ್ತುವ ಅಂಕಣಗಳಾಗಿ ಬದಲಾಗಿವೆ. ಈ ಅಸಹನೆ, ದ್ವೇಷ, ಪೂರ್ವಾಗ್ರಹಗಳು ಕನ್ನಡದ ಮನಸ್ಸಾಕ್ಷಿಯಂತಿರುವ ರಾಷ್ಟ್ರಕವಿ ಕುವೆಂಪುರವರನ್ನು ಹಾಗೂ ನಮ್ಮೆಲ್ಲರ ಹೆಮ್ಮೆಯ ನಾಡಗೀತೆಯನ್ನೂ ಬಿಡದೆ ಅವಹೇಳನ ಮಾಡುವ ಮಟ್ಟಕ್ಕೆ ತಲುಪಿದೆ ಎಂದರೆ, ಖಂಡಿತವಾಗಿಯೂ ಇದು ನಾಡಿನ ಹಿತದೃಷ್ಟಿಯಿಂದ ಅತ್ಯಂತ ಅಪಾಯಕಾರಿಯಾದುದು. ಕನ್ನಡದ ಸೌಹಾರ್ದ ಸಂಸ್ಕೃತಿಯ ಅಡಿಪಾಯವನ್ನೇ ನಾಶ ಮಾಡುವಂತಹ ಈ ಅಪಾಯದಿಂದ ಪಾರಾಗಬೇಕಾದರೆ, ಯಾರೂ ಯಾರನ್ನೂ ಶತ್ರುಗಳೆನ್ನುವಂತೆ ನೋಡಬಾರದೆನ್ನುವ ಸರಳ ತತ್ವವನ್ನು ಎಲ್ಲ ಪಂಥೀಯರೂ ಅರ್ಥಮಾಡಿಕೊಳ್ಳಲೇಬೇಕಾಗಿದೆ.

ಹಾಗೆಯೇ, ಈ ನಾಡಿನ ಶತಮಾನಗಳ ಕಾಲದ ಕೂಡಿ ಬಾಳುವ ಪರಂಪರೆಗೆ ಹಾಗೂ ಪ್ರಜಾಸತ್ತಾತ್ಮಕ ಮೌಲ್ಯಗಳ ಉಳಿವಿಗೆ ಯಾವುದು ಸೂಕ್ತವೋ ಅಂತಹ ಪಠ್ಯಪುಸ್ತಕಗಳು ಮಕ್ಕಳಿಗೆ ದೊರಕುವಂತಾಗಬೇಕು. ಆ ಮಕ್ಕಳ ಎದೆಗೆ ಬೀಳುವ ಅಕ್ಷರ ತಮ್ಮ ಸಹಜೀವಿಗಳ ಬಗೆಗೆ ಅಂತಃಕರಣ ಹಾಗೂ ಪ್ರೀತಿಯನ್ನಷ್ಟೇ ಕಲಿಸುವಂತಾಗಬೇಕು. ಇಲ್ಲದಿದ್ದರೆ ಯಾರೂ ನೆಮ್ಮದಿಯಿಂದ ಇರಲಾಗದ ಸಮಾಜವೊಂದು ಸೃಷ್ಟಿಯಾಗುವ ಅಪಾಯವಿದೆ ಎನ್ನುವುದನ್ನು ಎಲ್ಲರೂ ಮನಗಾಣಬೇಕಾಗಿದೆ.

ವಂದನೆಗಳೊಂದಿಗೆ,

ಬೆಂಗಳೂರು ವಿಶ್ವವಿದ್ಯಾಲಯ ಕಾಲೇಜು ಕನ್ನಡ ಅಧ್ಯಾಪಕರ ಸಂಘ(ರಿ).
ಡಾ. ಅಮರೇಂದ್ರ ಶೆಟ್ಟಿ ಆರ್(ಅಮರೇಂದ್ರ ಹೊಲ್ಲಂಬಳ್ಳಿ) – ಅಧ್ಯಕ್ಷರು
ಡಾ.ಎ.ವಿ.ಲಕ್ಷ್ಮೀನಾರಾಯಣ- ಪ್ರಧಾನ ಕಾರ್‍ಯದರ್ಶಿ
ಡಾ.ಕೆ.ಎನ್.ಹೊಯ್ಸಳಾದಿತ್ಯ- ಉಪಾಧ್ಯಕ್ಷರು
ಡಾ. ಎ.ಸಿ.ಸುಧಾ- ಖಜಾಂಚಿ
ಡಾ. ಕೆ.ಪಿ.ಪುಟ್ಟಮಾರಯ್ಯ- ಸಹ ಕಾರ್‍ಯದರ್ಶಿ


ಇದನ್ನೂ ಓದಿ: ಪಠ್ಯ ಪರಿಶೀಲಿಸಿದ ಸಮಿತಿಯ ಸದಸ್ಯರ್‍ಯಾರೂ ಪ್ರತಿಕ್ರಿಯೆಗೆ ಸಿದ್ಧರಿಲ್ಲ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...

SIR: 43ಲಕ್ಷದಲ್ಲಿ ನೋಟಿಸ್ ತಲುಪಿರುವುದು 25ಲಕ್ಷ ಜನರಿಗೆ ಮಾತ್ರ, ಬಾಕಿ 18ಲಕ್ಷ ಜನರಿಗೆ ಇನ್ನು ನೋಟಿಸ್ಸೇ ತಲುಪಿಲ್ಲ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಆಡಳಿತಾತ್ಮಕ ಗೊಂದಲ ಹಾಗೂ ಯಾಂತ್ರಿಕ ಲೋಪಗಳ ಜಾಲದಲ್ಲಿ ಸಿಲುಕಿಬಿದ್ದಿದೆ. ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ಬಿಡುಗಡೆ ಮಾಡಿರುವ ಇತ್ತೀಚಿನ ದತ್ತಾಂಶವೇ ಆಯೋಗದ...

ಕಾಳಿಘಾಟ್‌ನಲ್ಲಿ ‘ಮೀನಿನ ಪ್ರಸಾದ’ ಸ್ವೀಕರಿಸಿದ ಸುವೇಂದು ಅಧಿಕಾರಿ; ಬಾಗೇಶ್ವರ್ ಬಾಬಾ ‘ಮಾಂಸಾಹಾರ’ ವಿವಾದಕ್ಕೆ ಹೊಸ ತಿರುವು!

ದುರ್ಗಾ ಪೂಜೆ ಸಂದರ್ಭದಲ್ಲಿ ಮೀನು–ಮಾಂಸ ಸೇವನೆ ಕುರಿತು ಬಾಗೇಶ್ವರ್ ಧಾಮದ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿರುವ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ವಿವಾದಕ್ಕೆ ಕಾರಣವಾಗಿರುವ ನಡುವೆಯೇ, ಮುಖ್ಯಮಂತ್ರಿ ಸುವೇಂದು ಅಧಿಕಾರಿ ಕಾಳಿಘಾಟ್ʼನ ಕಾಳಿ ದೇವಸ್ಥಾನದಲ್ಲಿ...

ಎಸ್‌ಐಆರ್‌: ಹೈದರಾಬಾದ್, ಸಿಕಂದರಾಬಾದ್‌ನಲ್ಲಿ ಲಕ್ಷಾಂತರ ಮತದಾರರ ಹೆಸರು ಅಳಿಸುವಿಕೆ; 2029ರ ಚುನಾವಣೆಗೂ ಮುನ್ನ ಗಂಭೀರ ಆತಂಕ

ಹೈದರಾಬಾದ್: ತೆಲಂಗಾಣದಲ್ಲಿ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಮತದಾರರ ಪಟ್ಟಿಯಿಂದ ಭಾರೀ ಪ್ರಮಾಣದಲ್ಲಿ ಹೆಸರುಗಳನ್ನು ತೆಗೆದುಹಾಕಲಾಗಿರುವುದು ಮುಂದಿನ ಚುನಾವಣೆಯ ರಾಜಕೀಯ ಲೆಕ್ಕಾಚಾರಗಳ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆಯನ್ನು ಹುಟ್ಟುಹಾಕಿದೆ....

9/11 ದಾಳಿಗೆ 25 ವರ್ಷ: ‘ಭಯೋತ್ಪಾದನೆ ವಿರುದ್ಧದ ಯುದ್ಧ’ ಮತ್ತು ಕುಸಿದ ಪ್ರಜಾಪ್ರಭುತ್ವದ ಮೌಲ್ಯಗಳು

ನ್ಯೂಯಾರ್ಕ್‌ನ ಪ್ರತಿಷ್ಠಿತ ವರ್ಲ್ಡ್ ಟ್ರೇಡ್ ಸೆಂಟರ್ ಅವಳಿ ಗೋಪುರಗಳ ಮೇಲೆ ನಡೆದ ಭೀಕರ ಭಯೋತ್ಪಾದನಾ ದಾಳಿಗೆ ಇಂದಿಗೆ ಭರ್ತಿ 25 ವರ್ಷಗಳು ತುಂಬಿವೆ. ಈ ಕಾಲು ಶತಮಾನದ ಅವಧಿಯಲ್ಲಿ 'ಭಯೋತ್ಪಾದನೆ ವಿರುದ್ಧದ ಜಾಗತಿಕ...

‘ಈ ಪ್ರಕ್ರಿಯೆಯೇ ಶಿಕ್ಷೆಯಾಗಿದೆ’: ಉಮರ್ ಖಾಲಿದ್ ದೀರ್ಘ ಜೈಲುವಾಸದ ಬಗ್ಗೆ ಮಾಜಿ ನ್ಯಾಯಮೂರ್ತಿ ದೀಪಕ್ ಗುಪ್ತಾ ತೀವ್ರ ಟೀಕೆ

ನವದೆಹಲಿ: ಮಾನವ ಹಕ್ಕುಗಳ ಕಾರ್ಯಕರ್ತ, ವಿದ್ಯಾರ್ಥಿ ನಾಯಕ ಉಮರ್ ಖಾಲಿದ್ ಅವರ ದೀರ್ಘಕಾಲದ ವಿಚಾರಣಾಪೂರ್ವ ಬಂಧನ, ಎಲ್ಗರ್ ಪರಿಷತ್ ಪ್ರಕರಣದ ಆರೋಪಿಗಳ ವರ್ಷಗಳ ಜೈಲುವಾಸ ಹಾಗೂ ವೈಯಕ್ತಿಕ ಸ್ವಾತಂತ್ರ್ಯಕ್ಕೆ ಸಂಬಂಧಿಸಿದ ಪ್ರಕರಣಗಳಲ್ಲಿ ನ್ಯಾಯಾಂಗದ...

‘ದೇಶವಿರೋಧಿ ಮನಸ್ಥಿತಿಯಲ್ಲ’: ಜಿ.ಎನ್. ಸಾಯಿಬಾಬಾ ಸ್ಮರಣೆ ಪ್ರಕರಣದಲ್ಲಿ ‘ಟಿಸ್’ ಮಾಜಿ ವಿದ್ಯಾರ್ಥಿಗೆ ಜಾಮೀನು!

ದೆಹಲಿ ವಿಶ್ವವಿದ್ಯಾಲಯದ ಮಾಜಿ ಪ್ರಾಧ್ಯಾಪಕ ದಿವಂಗತ ಜಿ.ಎನ್. ಸಾಯಿಬಾಬಾ ಅವರ ಸ್ಮರಣಾರ್ಥ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (TISS) ಕ್ಯಾಂಪಸ್‌ನಲ್ಲಿ ನಡೆದ ಅನುಮತಿರಹಿತ ಕಾರ್ಯಕ್ರಮಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಂಧಿತರಾಗಿದ್ದ ಮಾಜಿ ವಿದ್ಯಾರ್ಥಿ...

ಜನಾಕ್ರೋಶದ ನಡುವೆಯೇ ಎಸ್ಐಆರ್ ಸಮರ್ಥಿಸಿಕೊಂಡ ಮುಖ್ಯ ಚುನಾವಣಾ ಆಯುಕ್ತ: ‘ರಾಜಕೀಯ ದಾಳಿಗಳಿಂದ ಆಯೋಗ ವಿಚಲಿತವಾಗದು’ ಎಂದ ಜ್ಞಾನೇಶ್ ಕುಮಾರ್

ಅಹಮದಾಬಾದ್: ದೇಶದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (SIR) ಕುರಿತು ರಾಜಕೀಯ ಪಕ್ಷಗಳು, ನಾಗರಿಕ ಸಂಘಟನೆಗಳು ಹಾಗೂ ವಿವಿಧ ವಲಯಗಳಿಂದ ತೀವ್ರ ಟೀಕೆಗಳು ವ್ಯಕ್ತವಾಗುತ್ತಿರುವ ನಡುವೆಯೇ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್...

ಕರ್ನಾಟಕ ಎಸ್ಐಆರ್: ಹೆಸರಿನ ಸಣ್ಣ ವ್ಯತ್ಯಾಸಕ್ಕಾಗಿ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರಿಗೆ ನೋಟಿಸ್; ‘ಸುಳ್ಳು ಮಾಹಿತಿ ನೀಡಿದರೆ ಜೈಲು’ ಎಂಬ ಬೆದರಿಕೆ

ಮೈಸೂರು: ಸುಮಾರು ಮೂರೂವರೆ ದಶಕಗಳ ಕಾಲ ರಾಜ್ಯದ ಆಡಳಿತ ವ್ಯವಸ್ಥೆಯಲ್ಲಿ ಸೇವೆ ಸಲ್ಲಿಸಿ, ಸ್ವತಃ ಚುನಾವಣಾ ಪ್ರಕ್ರಿಯೆಯ ಜವಾಬ್ದಾರಿಯುತ ಹುದ್ದೆಯಲ್ಲಿ ಕಾರ್ಯನಿರ್ವಹಿಸಿದ್ದ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರೇ ಇದೀಗ ತಮ್ಮ...