Homeಕರ್ನಾಟಕಮಕ್ಕಳ ಎದೆಗೆ ಬೀಳುವ ಅಕ್ಷರ ತಮ್ಮ ಸಹಜೀವಿಗಳ ಬಗೆಗೆ ಅಂತಃಕರಣ ಹಾಗೂ ಪ್ರೀತಿಯನ್ನಷ್ಟೇ ಕಲಿಸುವಂತಾಗಬೇಕು..

ಮಕ್ಕಳ ಎದೆಗೆ ಬೀಳುವ ಅಕ್ಷರ ತಮ್ಮ ಸಹಜೀವಿಗಳ ಬಗೆಗೆ ಅಂತಃಕರಣ ಹಾಗೂ ಪ್ರೀತಿಯನ್ನಷ್ಟೇ ಕಲಿಸುವಂತಾಗಬೇಕು..

- Advertisement -
- Advertisement -

ರಾಜ್ಯದ ಶಾಲಾ ಪಠ್ಯಪುಸ್ತಕಗಳ ಪರಿಷ್ಕರಣೆಗೆ ಸಂಬಂಧಿಸಿದಂತೆ ನಡೆಯುತ್ತಿರುವ ಚರ್ಚೆಗಳನ್ನು ರಾಜ್ಯದ ಜನ ಗಂಭೀರವಾಗಿ ಗಮನಿಸುತ್ತಿದ್ದಾರೆ. ಪಠ್ಯಗಳನ್ನು ಕುರಿತ ಚರ್ಚೆಗಳು ಆರೋಗ್ಯಕರ ನೆಲೆಯಲ್ಲಿ ನಡೆದು ವಿದ್ಯಾರ್ಥಿಗಳ ಜ್ಞಾನವಿಕಾಸಕ್ಕೆ ಕಾರಣವಾಗುವ ಉತ್ತಮ ಗುಣಮಟ್ಟದ ಪಠ್ಯಪುಸ್ತಕಗಳು ದೊರಕುವಂತಾದರೆ ಎಲ್ಲರಿಗೂ ಸಂತೋಷ. ಆದರೆ ಚರ್ಚೆಗಳು ಆ ನಿಟ್ಟಿನಲ್ಲಿ ಸಾಗದೆ ಸೈದ್ಧಾಂತಿಕ ದ್ವೇಷ, ವೈಯಕ್ತಿಕ ನಿಂದನೆಯ ಮಟ್ಟಕ್ಕೆ ತಲುಪಿರುವುದು ಆಘಾತಕಾರಿ ಬೆಳವಣಿಗೆ. ಅದರಲ್ಲೂ ಪಠ್ಯಪುಸ್ತಕ ಪರಿಷ್ಕರಣಾ ಸಮಿತಿಯ ನಿಕಟಪೂರ್ವ ಅಧ್ಯಕ್ಷರಾಗಿದ್ದ ಹಿರಿಯ ಸಾಹಿತಿ ಬರಗೂರು ರಾಮಚಂದ್ರಪ್ಪನವರ ಬಗೆಗೆ ಕೆಲವರು ಮಾಡುತ್ತಿರುವ ಟೀಕೆಗಳು, ಬಳಸುತ್ತಿರುವ ಭಾಷೆ ಸಜ್ಜನ ಸಂಸ್ಕೃತಿಯದ್ದಲ್ಲ. ನಾಡಿನ ನೆಲ-ಜಲ-ನುಡಿ-ಸಾಮಾಜಿಕ ನ್ಯಾಯ-ಸಾಮಾಜಿಕ ಸ್ವಾಸ್ಥ್ಯಕ್ಕಾಗಿ ಸದಾ ಚಿಂತಿಸುವ ದೇವನೂರ ಮಹಾದೇವ, ಬರಗೂರರಂತಹ ಹಿರಿಯರ ಬಗೆಗೆ ಮಾತನಾಡುವಾಗ ಅವರೊಂದಿಗೆ ಎಷ್ಟೇ ತಾತ್ವಿಕ ಭಿನ್ನಾಭಿಪ್ರಾಯಗಳಿದ್ದರೂ, ಗೌರವದಿಂದ ಮಾತನಾಡಬೇಕು ಎನ್ನುವ ಸಾಮಾನ್ಯ ವಿವೇಕ ಅವರನ್ನು ಟೀಕಿಸುವವರಿಗೆ ಇರಬೇಕಾಗಿದೆ.

ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಎಂತಹುದೇ ಭಿನ್ನಾಭಿಪ್ರಾಯಗಳನ್ನೂ ಪರಸ್ಪರ ಚರ್ಚೆಯ ಮೂಲಕ ಬಗೆಹರಿಸಿಕೊಳ್ಳುವ ಅವಕಾಶ ಇರುವಾಗ ದ್ವೇಷ ಕಾರುವ ಮಾತುಗಳ ಅವಶ್ಯಕತೆ ಇಲ್ಲ. ಆದರೆ, ಜವಾಬ್ದಾರಿಯುತ ಸ್ಥಾನಗಳಲ್ಲಿ ಇರುವವರೇ ಬಾಯಿಗೆ ಬಂದಂತೆ ಮಾತನಾಡುತ್ತಿರುವುದರಿಂದ ಮನಸ್ಸುಗಳನ್ನು ಬೆಸೆಯಬೇಕಾದ ಮಾತು ತನ್ನ ಮೂಲೋದ್ದೇಶದಿಂದ ವಿಮುಖಗೊಂಡು ದ್ವೇಷ, ತಿರಸ್ಕಾರದ ಅಸ್ತ್ರವಾಗಿ ಬದಲಾಗಿದೆ. ಕೆಲವು ಮಾಧ್ಯಮಗಳು ಹಾಗೂ ಸಾಮಾಜಿಕ ಜಾಲತಾಣಗಳಂತೂ ದ್ವೇಷ ಬಿತ್ತುವ ಅಂಕಣಗಳಾಗಿ ಬದಲಾಗಿವೆ. ಈ ಅಸಹನೆ, ದ್ವೇಷ, ಪೂರ್ವಾಗ್ರಹಗಳು ಕನ್ನಡದ ಮನಸ್ಸಾಕ್ಷಿಯಂತಿರುವ ರಾಷ್ಟ್ರಕವಿ ಕುವೆಂಪುರವರನ್ನು ಹಾಗೂ ನಮ್ಮೆಲ್ಲರ ಹೆಮ್ಮೆಯ ನಾಡಗೀತೆಯನ್ನೂ ಬಿಡದೆ ಅವಹೇಳನ ಮಾಡುವ ಮಟ್ಟಕ್ಕೆ ತಲುಪಿದೆ ಎಂದರೆ, ಖಂಡಿತವಾಗಿಯೂ ಇದು ನಾಡಿನ ಹಿತದೃಷ್ಟಿಯಿಂದ ಅತ್ಯಂತ ಅಪಾಯಕಾರಿಯಾದುದು. ಕನ್ನಡದ ಸೌಹಾರ್ದ ಸಂಸ್ಕೃತಿಯ ಅಡಿಪಾಯವನ್ನೇ ನಾಶ ಮಾಡುವಂತಹ ಈ ಅಪಾಯದಿಂದ ಪಾರಾಗಬೇಕಾದರೆ, ಯಾರೂ ಯಾರನ್ನೂ ಶತ್ರುಗಳೆನ್ನುವಂತೆ ನೋಡಬಾರದೆನ್ನುವ ಸರಳ ತತ್ವವನ್ನು ಎಲ್ಲ ಪಂಥೀಯರೂ ಅರ್ಥಮಾಡಿಕೊಳ್ಳಲೇಬೇಕಾಗಿದೆ.

ಹಾಗೆಯೇ, ಈ ನಾಡಿನ ಶತಮಾನಗಳ ಕಾಲದ ಕೂಡಿ ಬಾಳುವ ಪರಂಪರೆಗೆ ಹಾಗೂ ಪ್ರಜಾಸತ್ತಾತ್ಮಕ ಮೌಲ್ಯಗಳ ಉಳಿವಿಗೆ ಯಾವುದು ಸೂಕ್ತವೋ ಅಂತಹ ಪಠ್ಯಪುಸ್ತಕಗಳು ಮಕ್ಕಳಿಗೆ ದೊರಕುವಂತಾಗಬೇಕು. ಆ ಮಕ್ಕಳ ಎದೆಗೆ ಬೀಳುವ ಅಕ್ಷರ ತಮ್ಮ ಸಹಜೀವಿಗಳ ಬಗೆಗೆ ಅಂತಃಕರಣ ಹಾಗೂ ಪ್ರೀತಿಯನ್ನಷ್ಟೇ ಕಲಿಸುವಂತಾಗಬೇಕು. ಇಲ್ಲದಿದ್ದರೆ ಯಾರೂ ನೆಮ್ಮದಿಯಿಂದ ಇರಲಾಗದ ಸಮಾಜವೊಂದು ಸೃಷ್ಟಿಯಾಗುವ ಅಪಾಯವಿದೆ ಎನ್ನುವುದನ್ನು ಎಲ್ಲರೂ ಮನಗಾಣಬೇಕಾಗಿದೆ.

ವಂದನೆಗಳೊಂದಿಗೆ,

ಬೆಂಗಳೂರು ವಿಶ್ವವಿದ್ಯಾಲಯ ಕಾಲೇಜು ಕನ್ನಡ ಅಧ್ಯಾಪಕರ ಸಂಘ(ರಿ).
ಡಾ. ಅಮರೇಂದ್ರ ಶೆಟ್ಟಿ ಆರ್(ಅಮರೇಂದ್ರ ಹೊಲ್ಲಂಬಳ್ಳಿ) – ಅಧ್ಯಕ್ಷರು
ಡಾ.ಎ.ವಿ.ಲಕ್ಷ್ಮೀನಾರಾಯಣ- ಪ್ರಧಾನ ಕಾರ್‍ಯದರ್ಶಿ
ಡಾ.ಕೆ.ಎನ್.ಹೊಯ್ಸಳಾದಿತ್ಯ- ಉಪಾಧ್ಯಕ್ಷರು
ಡಾ. ಎ.ಸಿ.ಸುಧಾ- ಖಜಾಂಚಿ
ಡಾ. ಕೆ.ಪಿ.ಪುಟ್ಟಮಾರಯ್ಯ- ಸಹ ಕಾರ್‍ಯದರ್ಶಿ


ಇದನ್ನೂ ಓದಿ: ಪಠ್ಯ ಪರಿಶೀಲಿಸಿದ ಸಮಿತಿಯ ಸದಸ್ಯರ್‍ಯಾರೂ ಪ್ರತಿಕ್ರಿಯೆಗೆ ಸಿದ್ಧರಿಲ್ಲ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...

SIR: ಸ್ವತಃ BLO ಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ತಾಂತ್ರಿಕ ಎಡವಟ್ಟುಗಳು ಮತ್ತು ಗೊಂದಲಗಳು ಪ್ರತಿದಿನವೂ ಒಂದಲ್ಲ ಒಂದು ವಿಲಕ್ಷಣ ಘಟನೆಗಳಿಗೆ ಕಾರಣವಾಗುತ್ತಿದ್ದು, ಇದೀಗ ಸ್ವತಃ ಮತದಾರರ ಪಟ್ಟಿ ಪರಿಷ್ಕರಣೆ...

‘ಎಸ್‌ಐಆರ್ ಪ್ರಜಾಪ್ರಭುತ್ವಕ್ಕೆ ವಂಚನೆ’: 2025ಕ್ಕೆ ಹೋಲಿಸಿದರೆ ದೆಹಲಿಯ 58.60 ಲಕ್ಷ ಮತದಾರರ ಹೆಸರುಗಳು ಮಾಯ: ನಾಗರೀಕ ಸಂಘಟನೆಗಳ ಆಕ್ರೋಶ

ನವದೆಹಲಿ: ದೆಹಲಿಯಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತದಾರರ ಪಟ್ಟಿಯ ಶುದ್ಧೀಕರಣದ ಸಾಮಾನ್ಯ ಆಡಳಿತಾತ್ಮಕ ಕ್ರಮವಲ್ಲ, ಬದಲಾಗಿ ನಾಗರಿಕರ ಮತದಾನದ ಹಕ್ಕಿನ ಮೇಲೆ ಗಂಭೀರ ಪರಿಣಾಮ ಬೀರುವ...

ತೆಲಂಗಾಣ| ಕೆಸಿಆರ್‌ ಮನೆ ಮುಂದೆ ದಲಿತ ಮುಖಂಡರಿಂದ ಪ್ರತಿಭಟನೆ; ಬಿಆರ್‌ಎಸ್‌ ಕಾರ್ಯಕರ್ತರಿಂದ ನೀರು-ಅರಿಶಿನ ಬಳಸಿ ರಸ್ತೆ ಶುದ್ಧೀಕರಣ

ತೆಲಂಗಾಣದ ಸಿದ್ಧಾಪೇಟೆ ಜಿಲ್ಲೆಯ ಎರ್ರವಳ್ಳಿಯಲ್ಲಿರುವ ಬಿಆರ್‌ಎಸ್ ಅಧ್ಯಕ್ಷ ಕೆ. ಚಂದ್ರಶೇಖರ ರಾವ್ (ಕೆಸಿಆರ್) ಅವರ ಫಾರ್ಮ್ ಹೌಸ್ ಬಳಿ ದಲಿತ ಮುಖಂಡರು ಮತ್ತು ಕಾಂಗ್ರೆಸ್ ನಡೆಸಿದ ಪ್ರತಿಭಟನೆಯ ನಂತರ, ಬಿಆರ್‌ಎಸ್ ನಾಯಕರು ನಡೆಸಿದ...