Homeಕರ್ನಾಟಕಮಕ್ಕಳ ಎದೆಗೆ ಬೀಳುವ ಅಕ್ಷರ ತಮ್ಮ ಸಹಜೀವಿಗಳ ಬಗೆಗೆ ಅಂತಃಕರಣ ಹಾಗೂ ಪ್ರೀತಿಯನ್ನಷ್ಟೇ ಕಲಿಸುವಂತಾಗಬೇಕು..

ಮಕ್ಕಳ ಎದೆಗೆ ಬೀಳುವ ಅಕ್ಷರ ತಮ್ಮ ಸಹಜೀವಿಗಳ ಬಗೆಗೆ ಅಂತಃಕರಣ ಹಾಗೂ ಪ್ರೀತಿಯನ್ನಷ್ಟೇ ಕಲಿಸುವಂತಾಗಬೇಕು..

- Advertisement -
- Advertisement -

ರಾಜ್ಯದ ಶಾಲಾ ಪಠ್ಯಪುಸ್ತಕಗಳ ಪರಿಷ್ಕರಣೆಗೆ ಸಂಬಂಧಿಸಿದಂತೆ ನಡೆಯುತ್ತಿರುವ ಚರ್ಚೆಗಳನ್ನು ರಾಜ್ಯದ ಜನ ಗಂಭೀರವಾಗಿ ಗಮನಿಸುತ್ತಿದ್ದಾರೆ. ಪಠ್ಯಗಳನ್ನು ಕುರಿತ ಚರ್ಚೆಗಳು ಆರೋಗ್ಯಕರ ನೆಲೆಯಲ್ಲಿ ನಡೆದು ವಿದ್ಯಾರ್ಥಿಗಳ ಜ್ಞಾನವಿಕಾಸಕ್ಕೆ ಕಾರಣವಾಗುವ ಉತ್ತಮ ಗುಣಮಟ್ಟದ ಪಠ್ಯಪುಸ್ತಕಗಳು ದೊರಕುವಂತಾದರೆ ಎಲ್ಲರಿಗೂ ಸಂತೋಷ. ಆದರೆ ಚರ್ಚೆಗಳು ಆ ನಿಟ್ಟಿನಲ್ಲಿ ಸಾಗದೆ ಸೈದ್ಧಾಂತಿಕ ದ್ವೇಷ, ವೈಯಕ್ತಿಕ ನಿಂದನೆಯ ಮಟ್ಟಕ್ಕೆ ತಲುಪಿರುವುದು ಆಘಾತಕಾರಿ ಬೆಳವಣಿಗೆ. ಅದರಲ್ಲೂ ಪಠ್ಯಪುಸ್ತಕ ಪರಿಷ್ಕರಣಾ ಸಮಿತಿಯ ನಿಕಟಪೂರ್ವ ಅಧ್ಯಕ್ಷರಾಗಿದ್ದ ಹಿರಿಯ ಸಾಹಿತಿ ಬರಗೂರು ರಾಮಚಂದ್ರಪ್ಪನವರ ಬಗೆಗೆ ಕೆಲವರು ಮಾಡುತ್ತಿರುವ ಟೀಕೆಗಳು, ಬಳಸುತ್ತಿರುವ ಭಾಷೆ ಸಜ್ಜನ ಸಂಸ್ಕೃತಿಯದ್ದಲ್ಲ. ನಾಡಿನ ನೆಲ-ಜಲ-ನುಡಿ-ಸಾಮಾಜಿಕ ನ್ಯಾಯ-ಸಾಮಾಜಿಕ ಸ್ವಾಸ್ಥ್ಯಕ್ಕಾಗಿ ಸದಾ ಚಿಂತಿಸುವ ದೇವನೂರ ಮಹಾದೇವ, ಬರಗೂರರಂತಹ ಹಿರಿಯರ ಬಗೆಗೆ ಮಾತನಾಡುವಾಗ ಅವರೊಂದಿಗೆ ಎಷ್ಟೇ ತಾತ್ವಿಕ ಭಿನ್ನಾಭಿಪ್ರಾಯಗಳಿದ್ದರೂ, ಗೌರವದಿಂದ ಮಾತನಾಡಬೇಕು ಎನ್ನುವ ಸಾಮಾನ್ಯ ವಿವೇಕ ಅವರನ್ನು ಟೀಕಿಸುವವರಿಗೆ ಇರಬೇಕಾಗಿದೆ.

ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಎಂತಹುದೇ ಭಿನ್ನಾಭಿಪ್ರಾಯಗಳನ್ನೂ ಪರಸ್ಪರ ಚರ್ಚೆಯ ಮೂಲಕ ಬಗೆಹರಿಸಿಕೊಳ್ಳುವ ಅವಕಾಶ ಇರುವಾಗ ದ್ವೇಷ ಕಾರುವ ಮಾತುಗಳ ಅವಶ್ಯಕತೆ ಇಲ್ಲ. ಆದರೆ, ಜವಾಬ್ದಾರಿಯುತ ಸ್ಥಾನಗಳಲ್ಲಿ ಇರುವವರೇ ಬಾಯಿಗೆ ಬಂದಂತೆ ಮಾತನಾಡುತ್ತಿರುವುದರಿಂದ ಮನಸ್ಸುಗಳನ್ನು ಬೆಸೆಯಬೇಕಾದ ಮಾತು ತನ್ನ ಮೂಲೋದ್ದೇಶದಿಂದ ವಿಮುಖಗೊಂಡು ದ್ವೇಷ, ತಿರಸ್ಕಾರದ ಅಸ್ತ್ರವಾಗಿ ಬದಲಾಗಿದೆ. ಕೆಲವು ಮಾಧ್ಯಮಗಳು ಹಾಗೂ ಸಾಮಾಜಿಕ ಜಾಲತಾಣಗಳಂತೂ ದ್ವೇಷ ಬಿತ್ತುವ ಅಂಕಣಗಳಾಗಿ ಬದಲಾಗಿವೆ. ಈ ಅಸಹನೆ, ದ್ವೇಷ, ಪೂರ್ವಾಗ್ರಹಗಳು ಕನ್ನಡದ ಮನಸ್ಸಾಕ್ಷಿಯಂತಿರುವ ರಾಷ್ಟ್ರಕವಿ ಕುವೆಂಪುರವರನ್ನು ಹಾಗೂ ನಮ್ಮೆಲ್ಲರ ಹೆಮ್ಮೆಯ ನಾಡಗೀತೆಯನ್ನೂ ಬಿಡದೆ ಅವಹೇಳನ ಮಾಡುವ ಮಟ್ಟಕ್ಕೆ ತಲುಪಿದೆ ಎಂದರೆ, ಖಂಡಿತವಾಗಿಯೂ ಇದು ನಾಡಿನ ಹಿತದೃಷ್ಟಿಯಿಂದ ಅತ್ಯಂತ ಅಪಾಯಕಾರಿಯಾದುದು. ಕನ್ನಡದ ಸೌಹಾರ್ದ ಸಂಸ್ಕೃತಿಯ ಅಡಿಪಾಯವನ್ನೇ ನಾಶ ಮಾಡುವಂತಹ ಈ ಅಪಾಯದಿಂದ ಪಾರಾಗಬೇಕಾದರೆ, ಯಾರೂ ಯಾರನ್ನೂ ಶತ್ರುಗಳೆನ್ನುವಂತೆ ನೋಡಬಾರದೆನ್ನುವ ಸರಳ ತತ್ವವನ್ನು ಎಲ್ಲ ಪಂಥೀಯರೂ ಅರ್ಥಮಾಡಿಕೊಳ್ಳಲೇಬೇಕಾಗಿದೆ.

ಹಾಗೆಯೇ, ಈ ನಾಡಿನ ಶತಮಾನಗಳ ಕಾಲದ ಕೂಡಿ ಬಾಳುವ ಪರಂಪರೆಗೆ ಹಾಗೂ ಪ್ರಜಾಸತ್ತಾತ್ಮಕ ಮೌಲ್ಯಗಳ ಉಳಿವಿಗೆ ಯಾವುದು ಸೂಕ್ತವೋ ಅಂತಹ ಪಠ್ಯಪುಸ್ತಕಗಳು ಮಕ್ಕಳಿಗೆ ದೊರಕುವಂತಾಗಬೇಕು. ಆ ಮಕ್ಕಳ ಎದೆಗೆ ಬೀಳುವ ಅಕ್ಷರ ತಮ್ಮ ಸಹಜೀವಿಗಳ ಬಗೆಗೆ ಅಂತಃಕರಣ ಹಾಗೂ ಪ್ರೀತಿಯನ್ನಷ್ಟೇ ಕಲಿಸುವಂತಾಗಬೇಕು. ಇಲ್ಲದಿದ್ದರೆ ಯಾರೂ ನೆಮ್ಮದಿಯಿಂದ ಇರಲಾಗದ ಸಮಾಜವೊಂದು ಸೃಷ್ಟಿಯಾಗುವ ಅಪಾಯವಿದೆ ಎನ್ನುವುದನ್ನು ಎಲ್ಲರೂ ಮನಗಾಣಬೇಕಾಗಿದೆ.

ವಂದನೆಗಳೊಂದಿಗೆ,

ಬೆಂಗಳೂರು ವಿಶ್ವವಿದ್ಯಾಲಯ ಕಾಲೇಜು ಕನ್ನಡ ಅಧ್ಯಾಪಕರ ಸಂಘ(ರಿ).
ಡಾ. ಅಮರೇಂದ್ರ ಶೆಟ್ಟಿ ಆರ್(ಅಮರೇಂದ್ರ ಹೊಲ್ಲಂಬಳ್ಳಿ) – ಅಧ್ಯಕ್ಷರು
ಡಾ.ಎ.ವಿ.ಲಕ್ಷ್ಮೀನಾರಾಯಣ- ಪ್ರಧಾನ ಕಾರ್‍ಯದರ್ಶಿ
ಡಾ.ಕೆ.ಎನ್.ಹೊಯ್ಸಳಾದಿತ್ಯ- ಉಪಾಧ್ಯಕ್ಷರು
ಡಾ. ಎ.ಸಿ.ಸುಧಾ- ಖಜಾಂಚಿ
ಡಾ. ಕೆ.ಪಿ.ಪುಟ್ಟಮಾರಯ್ಯ- ಸಹ ಕಾರ್‍ಯದರ್ಶಿ


ಇದನ್ನೂ ಓದಿ: ಪಠ್ಯ ಪರಿಶೀಲಿಸಿದ ಸಮಿತಿಯ ಸದಸ್ಯರ್‍ಯಾರೂ ಪ್ರತಿಕ್ರಿಯೆಗೆ ಸಿದ್ಧರಿಲ್ಲ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಾವೇರಿ: ರೈತರ ಹಿತ ಕಾಯುವುದು ನನ್ನ ಮೊದಲ ಕರ್ತವ್ಯ ಡಿ.ಕೆ.ಶಿವಕುಮಾರ್

ರಾಜ್ಯದ ಜಲಾಶಯಗಳಲ್ಲಿ ನೀರಿನ ಲಭ್ಯತೆ ಕಡಿಮೆಯಿರುವಾಗ ನಮ್ಮ ರೈತರನ್ನು ಬದುಕಿಸುವ ಸವಾಲಿನ ಜೊತೆಗೆ ಕಾನೂನನ್ನೂ ಕಾಪಾಡಬೇಕಾದ ಹೊಣೆಗಾರಿಕೆ ಇದೆ. ಕಾವೇರಿ ವಿಚಾರದಲ್ಲಿ ನಮ್ಮ ರೈತರ ಹಿತ ಕಾಯುವುದು ನನ್ನ ಮೊದಲ ಕರ್ತವ್ಯ ಎಂದು...

‘ಅಸ್ತಿತ್ವದ ಸಮಸ್ಯೆಯಲ್ಲ, ಹೊಣೆಗಾರಿಕೆಯೇ ಮುಖ್ಯ’: ಆರ್‌ಎಸ್‌ಎಸ್ ನೋಂದಣಿ ಕುರಿತು ಬಿ.ಎಲ್. ಸಂತೋಷ್ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ನೋಂದಣಿ ಹಾಗೂ ಅದರ ಕಾನೂನಾತ್ಮಕ ಅಸ್ತಿತ್ವಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ (ಸಂಘಟನೆ) ಬಿ.ಎಲ್. ಸಂತೋಷ್ ಹಾಗೂ ಕರ್ನಾಟಕದ ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್...

ನಾನು ‘ದಿಮಾಗಿ ನಕ್ಸಲ್’ ಆಗಿದ್ದರೆ ಅದಕ್ಕೆ ಹೆಮ್ಮೆ ಇದೆ: ಮೋದಿ-ರಿಜಿಜು ವಿರುದ್ಧ ಚಿದಂಬರಂ ತಿರುಗೇಟು

ಸ್ವಾತಂತ್ರ್ಯ ದಿನಾಚರಣೆಯ ಭಾಷಣದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಬಳಸಿದ್ದ ‘ದಿಮಾಗಿ ನಕ್ಸಲರು’ (ವೈಚಾರಿಕ ನಕ್ಸಲರು) ಎಂಬ ಪದ ಬಳಕೆ ದೇಶದ ರಾಜಕೀಯ ವಲಯದಲ್ಲಿ ಹೊಸ ಸಂಚಲನ ಸೃಷ್ಟಿಸಿದೆ. ಪ್ರಧಾನಿಯವರ ಈ...

CAA ವಿರೋಧಿ ಪ್ರತಿಭಟನೆಗೆ ಕಾರಣವಾಗಿದ್ದ ಪ್ರಶ್ನೆಗಳು ಮತ್ತೆ ಜನಗಣತಿಯಲ್ಲಿ-ವರದಿ

ಶೀಘ್ರದಲ್ಲೇ ಪ್ರಾರಂಭವಾಗಲಿರುವ ಜನಗಣತಿಯ ಜನಸಂಖ್ಯಾ ಎಣಿಕೆ ಹಂತವು, 2011ರ ಜನಗಣತಿಗೆ ಹೋಲಿಸಿದರೆ 14 ಹೊಸ ಅಥವಾ ಮಾರ್ಪಡಿಸಿದ ಪ್ರಶ್ನೆಗಳನ್ನು ಒಳಗೊಂಡಿರುತ್ತದೆ. ಈ ಪೈಕಿ ಹಲವು ಪ್ರಶ್ನೆಗಳು 2020ರಲ್ಲಿ ಅಧಿಸೂಚನೆ ಹೊರಡಿಸಲಾಗಿದ್ದ ರಾಷ್ಟ್ರೀಯ ಜನಸಂಖ್ಯಾ ನೋಂದಣಿ...

ಹಿಂಗೋಲಿ ಶಾಲೆಯಲ್ಲಿ ಪ್ರಾಂಶುಪಾಲರ ಮದ್ಯಪಾನ, ಶಿಕ್ಷಕರ ಅಭಾವ: ಕ್ರಮ ಕೈಗೊಳ್ಳದಿದ್ದರೆ ಪ್ರತಿಭಟನೆಯ ಎಚ್ಚರಿಕೆ ನೀಡಿದ ಅಭಿಜೀತ್ ದೀಪ್ಕೆ

ಮಹಾರಾಷ್ಟ್ರದ ಹಿಂಗೋಲಿ ಜಿಲ್ಲೆಯ ಲಿಂಬಾಲಾ ಗ್ರಾಮದ ಸರ್ಕಾರಿ ಶಾಲೆಯೊಂದರಲ್ಲಿ ಶೈಕ್ಷಣಿಕ ವಾತಾವರಣ ಸಂಪೂರ್ಣವಾಗಿ ಕುಸಿದಿದ್ದು, ಶಾಲಾ ಪ್ರಾಂಶುಪಾಲರ ಹೊಣೆಗೇಡಿತನ ಮತ್ತು ಆಡಳಿತ ಮಂಡಳಿಯ ನಿರ್ಲಕ್ಷ್ಯದ ವಿರುದ್ಧ ಗ್ರಾಮಸ್ಥರ ಆಕ್ರೋಶ ಮುಗಿಲುಮುಟ್ಟಿದೆ. ಶಾಲೆಯ ಪ್ರಾಂಶುಪಾಲರು...

ರಾಜ್ಯಗಳಿಗೆ ನೀಡುವ ವಿಪತ್ತು ಪರಿಹಾರದಲ್ಲೂ ಕೇಂದ್ರದಿಂದ ವಂಚನೆ? CAG ವರದಿ

ದೇಶಾದ್ಯಂತ ನೆರೆ, ಬರ, ಭೂಕುಸಿತದಂತಹ ಭೀಕರ ಪ್ರಕೃತಿ ವಿಕೋಪಗಳಿಂದ ಕಂಗಾಲಾಗಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಸಿಗಬೇಕಾದ ವಿಪತ್ತು ಪರಿಹಾರ ಅನುದಾನದಲ್ಲಿ ಭಾರಿ ಪ್ರಮಾಣದ ಕಡಿತವಾಗುತ್ತಿರುವುದು ಈಗ ನಿರೂಪಿತವಾಗಿದೆ. ರಾಷ್ಟ್ರೀಯ ವಿಪತ್ತು ಸ್ಪಂದನಾ ನಿಧಿ...

EFLU ವಿದ್ಯಾರ್ಥಿ ಸಂಘದ ಮುಖಂಡರು, NSUI ಸದಸ್ಯರ ಮೇಲೆ ರಾಡ್ ಮತ್ತು ಬಿಯರ್ ಬಾಟಲಿಗಳಿಂದ ಹಲ್ಲೆ; ABVP ಸದಸ್ಯರ ವಿರುದ್ಧ ಪ್ರಕರಣ ದಾಖಲು

ಹೈದರಾಬಾದ್‌ನ ಪ್ರತಿಷ್ಠಿತ ಇಂಗ್ಲಿಷ್ ಮತ್ತು ವಿದೇಶಿ ಭಾಷಾ ವಿಶ್ವವಿದ್ಯಾಲಯ (ಇಎಫ್‌ಎಲ್‌ಯು - EFLU) ಕ್ಯಾಂಪಸ್‌ನಲ್ಲಿ ಭೀಕರ ಹಿಂಸಾಚಾರ ಸಂಭವಿಸಿದ್ದು, ವಿದ್ಯಾರ್ಥಿ ಸಂಘದ ಮುಖಂಡರು ಹಾಗೂ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟದ (NSUI) ಸದಸ್ಯರ ಮೇಲೆ...

NALSAR ವಿವಾದ : ಕಾನೂನು ವಿದ್ಯಾರ್ಥಿಗಳಲ್ಲಿ ಕ್ಷಮೆಯಾಚಿಸಿದ ಬಿಸಿಐ ಅಧ್ಯಕ್ಷ ಮನನ್ ಕುಮಾರ್ ಮಿಶ್ರಾ

ನಲ್ಸಾರ್ (NALSAR) ಕಾನೂನು ವಿಶ್ವವಿದ್ಯಾಲಯದ ವಿದ್ಯಾರ್ಥಿಗಳ ವಿರುದ್ಧ ಹೊರಡಿಸಿದ್ದ ನಿರ್ದೇಶನಗಳ ಕುರಿತು ತೀವ್ರ ಟೀಕೆಗಳು ವ್ಯಕ್ತವಾದ ಹಿನ್ನೆಲೆಯಲ್ಲಿ, ಬಾರ್ ಕೌನ್ಸಿಲ್ ಆಫ್ ಇಂಡಿಯಾ (ಬಿಸಿಥ) ಅಧ್ಯಕ್ಷ ಮನನ್ ಕುಮಾರ್ ಮಿಶ್ರಾ ಕ್ಷಮೆಯಾಚಿಸಿದ್ದಾರೆ. ಹೈದರಾಬಾದ್‌ನ ನಲ್ಸಾರ್...

ವಿಮಲ್ ‘ಏಲೈಚಿ’ ಜಾಹೀರಾತು ವಿವಾದ: ಶಾರುಖ್ ಖಾನ್, ಅಜಯ್ ದೇವಗನ್ ಮತ್ತು ಟೈಗರ್ ಶ್ರಾಫ್‌ಗೆ ಮಹಾರಾಷ್ಟ್ರ ಎಫ್‌ಡಿಎ ಶೋಕಾಸ್ ನೋಟಿಸ್

ಬಾಲಿವುಡ್‌ನ ಖ್ಯಾತ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರುಗಳು ಇದೀಗ ಕಾನೂನು ಸಂಕಷ್ಟಕ್ಕೆ ಸಿಲುಕಿದ್ದಾರೆ. 'ವಿಮಲ್ ಏಲೈಚಿ' ಜಾಹೀರಾತಿನಲ್ಲಿ ಕಾಣಿಸಿಕೊಂಡಿದ್ದಕ್ಕಾಗಿ ಮಹಾರಾಷ್ಟ್ರದ ಆಹಾರ ಮತ್ತು ಔಷಧ ಆಡಳಿತ...

ಹನೂರು ಶೂಟೌಟ್ ಪ್ರಕರಣ: ಅರಣ್ಯ ಇಲಾಖೆ ಸಿಬ್ಬಂದಿ ವಿರುದ್ಧ ಎಫ್‌ಐಆರ್‌ ದಾಖಲು

ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಶಾಗ್ಯ ಗ್ರಾಮ ಪಂಚಾಯತ್ ವಾಪ್ತಿಯ ಅರಣ್ಯ ಪ್ರದೇಶದಲ್ಲಿ ಮೂವರು ಗುಂಡೇಟಿಗೆ ಬಲಿಯಾದ ಪ್ರಕರಣ ಸಂಬಂಧ ಅರಣ್ಯ ಇಲಾಖೆ ಅಧಿಕಾರಿಗಳ ವಿರುದ್ಧ ಎಫ್​​​​ಐಆರ್ ದಾಖಲಾಗಿದೆ. ಅರಣ್ಯ ಸಿಬ್ಬಂದಿಯ ಗುಂಡೇಟಿಗೆ ಹನೂರು...