Homeಕರ್ನಾಟಕಬೆಂಗಳೂರು | ದೇವಸ್ಥಾನದಲ್ಲಿ ಮಗಳ ಹತ್ಯೆಗೆ ಯತ್ನಿಸಿದ ತಾಯಿ; ನರಬಲಿ ಶಂಕೆ ವ್ಯಕ್ತಪಡಿಸಿದ ವರದಿಗಳು

ಬೆಂಗಳೂರು | ದೇವಸ್ಥಾನದಲ್ಲಿ ಮಗಳ ಹತ್ಯೆಗೆ ಯತ್ನಿಸಿದ ತಾಯಿ; ನರಬಲಿ ಶಂಕೆ ವ್ಯಕ್ತಪಡಿಸಿದ ವರದಿಗಳು

- Advertisement -
- Advertisement -

ಪೂಜೆಗೆಂದು ಮಗಳನ್ನು ದೇವಸ್ಥಾನಕ್ಕೆ ಕರೆದೊಯ್ದ ತಾಯಿ, ಅಲ್ಲಿ ಆಕೆಯ ಹತ್ಯೆಗೆ ಯತ್ನಿಸಿ, ನಂತರ ತಾನೂ ಆತ್ಮಹತ್ಯೆಗೆ ಮುಂದಾದ ಘಟನೆ ಬೆಂಗಳೂರಿನ ಸಂಪಿಗೆಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬುಧವಾರ (ನವೆಂಬರ್ 19) ಮುಂಜಾನೆ ನಡೆದಿದೆ.

ಆನೇಕಲ್ ನಿವಾಸಿ ರಮ್ಯಾ (25) ಪ್ರಾಣಾಪಾಯದಿಂದ ಪಾರಾದ ಯುವತಿ. ಈಕೆಯ ಮೇಲೆ ದಾಳಿ ನಡೆಸಿದ ತಾಯಿ ಸುಜಾತಾ (49) ಆತ್ಮಹತ್ಯೆ ಯತ್ನಿಸಿದ್ದರು. ಅವರನ್ನು ರಕ್ಷಿಸಲಾಗಿದೆ ಎಂದು ವರದಿಯಾಗಿದೆ.

ಪ್ರಸ್ತುತ ತಾಯಿ ಮಗಳನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗ್ತಿದೆ. ಸುಜಾತಾ ಚೇತರಿಸಿಕೊಂಡ ಬಳಿಕ ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

ಆರೋಪಿ ಸುಜಾತ ಮಗಳು ರಮ್ಯಾ ಅವರೊಂದಿಗೆ ನಗರದ ಅಗ್ರಹಾರ ಲೇಔಟ್‌ನಲ್ಲಿ ನೆಲೆಸಿದ್ದರು. ಐದು ವರ್ಷಗಳ ಹಿಂದೆ ರಮ್ಯಾ ಅವರಿಗೆ ಆನೇಕಲ್ ನಿವಾಸಿ ಸೋಮಶೇಖರ್ ಅವರ ಜೊತೆ ಮದುವೆಯಾಗಿತ್ತು. ದಂಪತಿಗೆ ಇಬ್ಬರು ಮಕ್ಕಳು ಜನಿಸಿದ್ದು, ಇಬ್ಬರೂ ಸಾವಿಗೀಡಾಗಿದ್ದರು. ಅಲ್ಲದೆ, ಗಂಡನಿಂದಲೂ ದೂರ ಆಗಿದ್ದರು. ಇದರಿಂದ ರಮ್ಯಾ ಮಾನಸಿಕವಾಗಿ ನೊಂದಿದ್ದರು ಎಂದು ವರದಿಯಾಗಿದೆ.

ಮಾನಸಿಕವಾಗಿ ನೊಂದಿದ್ದ ಮಗಳನ್ನು ತಾಯಿ ಸುಜಾತಾ ಅಗ್ರಹಾರ ಲೇಔಟ್‌ನಲ್ಲಿರುವ ಹರಿಹರೇಶ್ವರ ದೇವಸ್ಥಾನಕ್ಕೆ ಕರೆದೊಯ್ದು ಪೂಜೆ ಮಾಡಿಸುತ್ತಿದ್ದರು. ಬುಧವಾರ ಮುಂಜಾನೆ 4 ಗಂಟೆಯ ಹೊತ್ತಿಗೆ ತಾಯಿ ಮಗಳು ಇಬ್ಬರೇ ದೇವಸ್ಥಾನಕ್ಕೆ ಪೂಜೆಗೆ ತೆರಳಿದ್ದರು. ದೇವಸ್ಥಾನದಲ್ಲಿ ಸುಜಾತಾ ತಾನು ತಂದಿದ್ದ ಮಾರಾಕಾಸ್ತ್ರದಿಂದ ಮಗಳು ರಮ್ಯಾ ಅವರ ಕುತ್ತಿಗೆ ಕೊಯ್ದು ಹತ್ಯೆಗೆ ಯತ್ನಿಸಿದ್ದಾರೆ. ಮಗಳ ಕುತ್ತಿಗೆ ಭಾಗದಲ್ಲಿ ರಕ್ತ ಬರುತ್ತಿದ್ದಂತೆ ಹೆದರಿದ ಸುಜಾತಾ, ತಾನೂ ಕತ್ತು ಕೊಯ್ದುಕೊಂಡು ಸ್ಥಳದಿಂದ ಓಡಿದ್ದಾರೆ. ನಂತರ ದೇವಸ್ಥಾನದ ಪಕ್ಕದಲ್ಲೇ ಅರೆ ಪ್ರಜ್ಞಾವಸ್ಥೆಯಲ್ಲಿ ಬಿದ್ದಿದ್ದಾರೆ ಎಂದು ವರದಿಗಳು ವಿವರಿಸಿವೆ.

ಸ್ಥಳೀಯರು ಇಬ್ಬರನ್ನೂ ರಕ್ಷಿಸಿ ಆಸ್ಪತ್ರೆಗೆ ದಾಖಲಿಸಿದ್ದಾರೆ.

ನರಬಲಿ ಶಂಕೆ ವ್ಯಕ್ತಪಡಿಸಿದ ವರದಿಗಳು

“ಮಗಳ ಜೀವನದ ಏರುಪೇರುಗಳಿಂದ ಖಿನ್ನತೆಗೆ ಒಳಗಾಗಿದ್ದ ಸುಜಾತಾ ದೇವಸ್ಥಾನದಲ್ಲಿ ನರಬಲಿ ನೀಡಲು ಯತ್ನಿಸಿರಬಹುದು ಎಂಬ ಶಂಕೆಯಿದೆ. ಆದರೂ, ಘಟನೆಯ ಕಾರಣ ಸ್ಪಷ್ಟವಾಗಿಲ್ಲ. ಇಬ್ಬರೂ ಆಸ್ಪತ್ರೆಯಿಂದ ಬಿಡುಗಡೆಯಾದ ನಂತರವೇ ಸ್ಪಷ್ಟ ಚಿತ್ರಣ ಸಿಗಲಿದೆ. ಆನಂತರ ನಾವು ವಿವರವಾದ ಹೇಳಿಕೆಗಳನ್ನು ದಾಖಲಿಸಬೇಕಿದೆ” ಎಂದು ಪೊಲೀಸ್ ಅಧಿಕಾರಿಯೊಬ್ಬರು ಹೇಳಿದ್ದಾರೆ ಎಂದು ದಿ ನ್ಯೂ ಇಂಡಿಯನ್‌ ಎಕ್ಸ್‌ಪ್ರೆಸ್ ವರದಿ ತಿಳಿಸಿದೆ.

ಕನ್ನಡದ ಹಲವು ಮುಖ್ಯವಾಹಿನಿ ಮಾಧ್ಯಮ ವರದಿಗಳು ಕೂಡ ನರಬಲಿಯ ಶಂಕೆಯನ್ನು ವ್ಯಕ್ತಪಡಿಸಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸರ್ಕಾರಿ ಕಾರ್ಯಕ್ರಮದಲ್ಲಿ ಮಹಿಳಾ ವೈದ್ಯೆಯ ಹಿಜಾಬ್ ತೆಗೆಸಿದ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್

ಬಿಹಾರ ರಾಜಧಾನಿ ಪಾಟ್ನಾದಲ್ಲಿ ಸೋಮವಾರ (ಡಿ.15) ನಡೆದ ಸರ್ಕಾರಿ ಕಾರ್ಯಕ್ರಮದಲ್ಲಿ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ನೇಮಕಾತಿ ಪತ್ರಗಳನ್ನು ಹಸ್ತಾಂತರಿದ್ದು, ಇದೇ ಸಂದರ್ಭದಲ್ಲಿ ಮಹಿಳಾ ವೈದ್ಯೆಯೊಬ್ಬರ ಹಿಜಾಬ್ ಅನ್ನು ತೆಗೆದಿರುವ ವಿಡಿಯೋವೊಂದು ವೈರಲ್...

ಎಸ್‌ಐಆರ್ ಬಳಿಕ ಪಶ್ಚಿಮ ಬಂಗಾಳದ ಕರಡು ಮತದಾರರ ಪಟ್ಟಿ ಪ್ರಕಟ : 58 ಲಕ್ಷ ಹೆಸರು ಡಿಲೀಟ್!

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಬಳಿಕ ಮಂಗಳವಾರ (ಡಿಸೆಂಬರ್ 16) ಚುನಾವಣಾ ಆಯೋಗ ಪಶ್ಚಿಮ ಬಂಗಾಳದ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಿದೆ. ಸಾವು, ವಲಸೆ ಮತ್ತು ಎಣಿಕೆ ನಮೂನೆಗಳನ್ನು ಸಲ್ಲಿಸದಿರುವುದು...

ನ್ಯಾಷನಲ್ ಹೆರಾಲ್ಡ್ ಪ್ರಕರಣ: ಸೋನಿಯಾ-ರಾಹುಲ್ ಗಾಂಧಿ ವಿರುದ್ಧದ ಇಡಿ ದೂರು ಪರಿಗಣಿಸಲು ದೆಹಲಿ ಕೋರ್ಟ್ ನಕಾರ

ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ ಮತ್ತು ಸೋನಿಯಾ ಗಾಂಧಿ ಭಾಗಿಯಾಗಿದ್ದಾರೆ ಎನ್ನಲಾದ ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ (ಇಡಿ)ದ ಹಣ ಅಕ್ರಮ ವರ್ಗಾವಣೆ ದೂರನ್ನು ಪರಿಗಣಿಸಲು ದೆಹಲಿ ನ್ಯಾಯಾಲಯ ಮಂಗಳವಾರ (ಡಿಸೆಂಬರ್...

ಕಾನೂನುಗಳಿಗೆ ಹಿಂದಿ ಬಳಸುವುದರಿಂದ ದಕ್ಷಿಣದ ರಾಜ್ಯಗಳಿಗೆ ಅನ್ಯಾಯ: ಪಿ.ಚಿದಂಬರಂ

ಸಂಸತ್ತಿನಲ್ಲಿ ಮಂಡಿಸಲಾದ ಮಸೂದೆಗಳ ಶೀರ್ಷಿಕೆಗಳಲ್ಲಿ ಇಂಗ್ಲಿಷ್ ಲಿಪಿಯಲ್ಲಿ ಬರೆಯಲಾದ ಹಿಂದಿ ಪದಗಳನ್ನು ಬಳಸುವ ಅಭ್ಯಾಸ ಹೆಚ್ಚುತ್ತಿದೆ. ಈ ಪ್ರವೃತ್ತಿಯಿಂದ ಹಿಂದಿ ಮಾತನಾಡದ ನಾಗರಿಕರು ಮತ್ತು ರಾಜ್ಯಗಳಿಗೆ ಅನ್ಯಾಯವಾಗಿದೆ ಕಾಂಗ್ರೆಸ್ ನಾಯಕ ಪಿ.ಚಿದಂಬರಂ ಹೇಳಿದರು. ಈ...

ಸಿಡ್ನಿ ಶೂಟೌಟ್‌: ಭಾರತೀಯ ಪಾಸ್‌ಪೋರ್ಟ್‌ ಬಳಸಿ ಫಿಲಿಪೈನ್ಸ್‌ಗೆ ಪ್ರಯಾಣಿಸಿದ್ದ ತಂದೆ-ಮಗ?

ಸಿಡ್ನಿಯಲ್ಲಿ ಹದಿನೈದು ಜನರನ್ನು ಗುಂಡಿಕ್ಕಿ ಕೊಂದ ತಂದೆ ಮತ್ತು ಮಗನನ್ನು ಪಾಕಿಸ್ತಾನಿ ಪ್ರಜೆಗಳು ಎಂದು ಈಗಾಗಲೇ ಗುರುತಿಸಲಾಗಿದೆ ಎಂಬ ಹಿಂದಿನ ವರದಿಗಳಿಗೆ ವಿರುದ್ಧವಾಗಿ, ಇಬ್ಬರೂ ಕಳೆದ ತಿಂಗಳು ನವೆಂಬರ್‌ನಲ್ಲಿ ಭಾರತೀಯ ಪಾಸ್‌ಪೋರ್ಟ್‌ಗಳನ್ನು ಬಳಸಿ...

ವರದಕ್ಷಿಣೆ ನಿರ್ಮೂಲನೆ ತುರ್ತು ಸಾಂವಿಧಾನಿಕ, ಸಾಮಾಜಿಕ ಅಗತ್ಯ: ಸುಪ್ರೀಂ ಕೋರ್ಟ್

ನವದೆಹಲಿ: ವರದಕ್ಷಿಣೆ ನಿರ್ಮೂಲನೆ ತುರ್ತು ಸಾಂವಿಧಾನಿಕ ಮತ್ತು ಸಾಮಾಜಿಕ ಅಗತ್ಯವಾಗಿದೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಅಸ್ತಿತ್ವದಲ್ಲಿರುವ ಕಾನೂನುಗಳು "ನಿಷ್ಪರಿಣಾಮಕಾರಿತ್ವ" ಮತ್ತು "ದುರುಪಯೋಗ" ಎರಡರಿಂದಲೂ ಬಳಲುತ್ತಿವೆ ಮತ್ತು ದುಷ್ಟ ಪದ್ಧತಿ ಇನ್ನೂ ವ್ಯಾಪಕವಾಗಿ...

ಕೇರಳ ಚಲನಚಿತ್ರೋತ್ಸವ : ಪ್ಯಾಲೆಸ್ತೀನ್ ಕುರಿತ 4 ಸಿನಿಮಾಗಳು ಸೇರಿ 19 ಚಲನಚಿತ್ರಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿದ ಕೇಂದ್ರ

ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವಾಲಯ 2025ರ ಕೇರಳ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ 19 ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿದೆ ಎಂದು ರಾಜ್ಯದ ಆಡಳಿತಾರೂಢ ಭಾರತೀಯ ಕಮ್ಯುನಿಸ್ಟ್ ಪಕ್ಷ (ಮಾರ್ಕ್ಸ್‌ವಾದಿ) ಪ್ರಧಾನ ಕಾರ್ಯದರ್ಶಿ ಮರಿಯನ್...

ಮಣಿಪುರ ಹಿಂಸಾಚಾರ: ಸೋರಿಕೆಯಾದ ಸಂಪೂರ್ಣ ಆಡಿಯೋ ವಿಧಿವಿಜ್ಞಾನ ಪರೀಕ್ಷೆಗೆ ಏಕೆ ಕಳುಹಿಸಿಲ್ಲ ಎಂದು ಪ್ರಶ್ನಿಸಿದ ಸುಪ್ರೀಂ ಕೋರ್ಟ್

ನವದೆಹಲಿ: 2023ರ ಜನಾಂಗೀಯ ಹಿಂಸಾಚಾರದಲ್ಲಿ ಮಣಿಪುರದ ಮಾಜಿ ಮುಖ್ಯಮಂತ್ರಿ ಎನ್. ಬಿರೇನ್ ಸಿಂಗ್ ಅವರ ಪಾತ್ರವನ್ನು ಸೂಚಿಸಿರುವ ಅರ್ಜಿಯಲ್ಲಿ ಲಭ್ಯವಿರುವ ಸಂಪೂರ್ಣ ಸೋರಿಕೆಯಾದ ಆಡಿಯೋ ತುಣುಕುಗಳನ್ನು ವಿಧಿವಿಜ್ಞಾನ ಪರೀಕ್ಷೆಗೆ ಏಕೆ ಕಳುಹಿಸಲಿಲ್ಲ ಎಂದು...

ಎಸ್‌ಐಆರ್‌ ಭಯಕ್ಕೆ ಮತ್ತೊಂದು ಬಲಿ: ಬಂಗಾಳದಲ್ಲಿ ಆತ್ಮಹತ್ಯೆಗೆ ಶರಣಾದ ವ್ಯಕ್ತಿ

ಪಶ್ಚಿಮ ಬಂಗಾಳದ ನಾಡಿಯಾ ಜಿಲ್ಲೆಯಲ್ಲಿ, ಚುನಾವಣಾ ಆಯೋಗ ನಡೆಸುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಗೆ ಸಂಬಂಧಿಸಿದ ಭಯದಿಂದ ವೃದ್ಧನೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ಮೃತರನ್ನು ರಣಘಾಟ್‌ನ...

MGNREGA ಬದಲು VB-G Ram G : ರಾಜ್ಯಗಳ ಮೇಲೆ 40 ಶೇಕಡ ಆರ್ಥಿಕ ಹೊರೆ

ಕಾಂಗ್ರೆಸ್‌ ನೇತೃತ್ವದ ಯುಪಿಎ ಸರ್ಕಾರ 2005ರಲ್ಲಿ ಜಾರಿಗೆ ತಂದ ಮಹತ್ವಕಾಂಕ್ಷೆಯ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (ಎಂಜಿಎನ್‌ಆರ್‌ಇಜಿಎ) ಮತ್ತು ಅದರಡಿ ರೂಪಿಸಲಾದ ನರೇಗಾ ಯೋಜನೆಯ ಹೆಸರನ್ನು ಬದಲಿಸಲು ಕೇಂದ್ರ...