Homeಕರ್ನಾಟಕಬೆಂಗಳೂರು | ದೇವಸ್ಥಾನದಲ್ಲಿ ಮಗಳ ಹತ್ಯೆಗೆ ಯತ್ನಿಸಿದ ತಾಯಿ; ನರಬಲಿ ಶಂಕೆ ವ್ಯಕ್ತಪಡಿಸಿದ ವರದಿಗಳು

ಬೆಂಗಳೂರು | ದೇವಸ್ಥಾನದಲ್ಲಿ ಮಗಳ ಹತ್ಯೆಗೆ ಯತ್ನಿಸಿದ ತಾಯಿ; ನರಬಲಿ ಶಂಕೆ ವ್ಯಕ್ತಪಡಿಸಿದ ವರದಿಗಳು

- Advertisement -
- Advertisement -

ಪೂಜೆಗೆಂದು ಮಗಳನ್ನು ದೇವಸ್ಥಾನಕ್ಕೆ ಕರೆದೊಯ್ದ ತಾಯಿ, ಅಲ್ಲಿ ಆಕೆಯ ಹತ್ಯೆಗೆ ಯತ್ನಿಸಿ, ನಂತರ ತಾನೂ ಆತ್ಮಹತ್ಯೆಗೆ ಮುಂದಾದ ಘಟನೆ ಬೆಂಗಳೂರಿನ ಸಂಪಿಗೆಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬುಧವಾರ (ನವೆಂಬರ್ 19) ಮುಂಜಾನೆ ನಡೆದಿದೆ.

ಆನೇಕಲ್ ನಿವಾಸಿ ರಮ್ಯಾ (25) ಪ್ರಾಣಾಪಾಯದಿಂದ ಪಾರಾದ ಯುವತಿ. ಈಕೆಯ ಮೇಲೆ ದಾಳಿ ನಡೆಸಿದ ತಾಯಿ ಸುಜಾತಾ (49) ಆತ್ಮಹತ್ಯೆ ಯತ್ನಿಸಿದ್ದರು. ಅವರನ್ನು ರಕ್ಷಿಸಲಾಗಿದೆ ಎಂದು ವರದಿಯಾಗಿದೆ.

ಪ್ರಸ್ತುತ ತಾಯಿ ಮಗಳನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗ್ತಿದೆ. ಸುಜಾತಾ ಚೇತರಿಸಿಕೊಂಡ ಬಳಿಕ ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

ಆರೋಪಿ ಸುಜಾತ ಮಗಳು ರಮ್ಯಾ ಅವರೊಂದಿಗೆ ನಗರದ ಅಗ್ರಹಾರ ಲೇಔಟ್‌ನಲ್ಲಿ ನೆಲೆಸಿದ್ದರು. ಐದು ವರ್ಷಗಳ ಹಿಂದೆ ರಮ್ಯಾ ಅವರಿಗೆ ಆನೇಕಲ್ ನಿವಾಸಿ ಸೋಮಶೇಖರ್ ಅವರ ಜೊತೆ ಮದುವೆಯಾಗಿತ್ತು. ದಂಪತಿಗೆ ಇಬ್ಬರು ಮಕ್ಕಳು ಜನಿಸಿದ್ದು, ಇಬ್ಬರೂ ಸಾವಿಗೀಡಾಗಿದ್ದರು. ಅಲ್ಲದೆ, ಗಂಡನಿಂದಲೂ ದೂರ ಆಗಿದ್ದರು. ಇದರಿಂದ ರಮ್ಯಾ ಮಾನಸಿಕವಾಗಿ ನೊಂದಿದ್ದರು ಎಂದು ವರದಿಯಾಗಿದೆ.

ಮಾನಸಿಕವಾಗಿ ನೊಂದಿದ್ದ ಮಗಳನ್ನು ತಾಯಿ ಸುಜಾತಾ ಅಗ್ರಹಾರ ಲೇಔಟ್‌ನಲ್ಲಿರುವ ಹರಿಹರೇಶ್ವರ ದೇವಸ್ಥಾನಕ್ಕೆ ಕರೆದೊಯ್ದು ಪೂಜೆ ಮಾಡಿಸುತ್ತಿದ್ದರು. ಬುಧವಾರ ಮುಂಜಾನೆ 4 ಗಂಟೆಯ ಹೊತ್ತಿಗೆ ತಾಯಿ ಮಗಳು ಇಬ್ಬರೇ ದೇವಸ್ಥಾನಕ್ಕೆ ಪೂಜೆಗೆ ತೆರಳಿದ್ದರು. ದೇವಸ್ಥಾನದಲ್ಲಿ ಸುಜಾತಾ ತಾನು ತಂದಿದ್ದ ಮಾರಾಕಾಸ್ತ್ರದಿಂದ ಮಗಳು ರಮ್ಯಾ ಅವರ ಕುತ್ತಿಗೆ ಕೊಯ್ದು ಹತ್ಯೆಗೆ ಯತ್ನಿಸಿದ್ದಾರೆ. ಮಗಳ ಕುತ್ತಿಗೆ ಭಾಗದಲ್ಲಿ ರಕ್ತ ಬರುತ್ತಿದ್ದಂತೆ ಹೆದರಿದ ಸುಜಾತಾ, ತಾನೂ ಕತ್ತು ಕೊಯ್ದುಕೊಂಡು ಸ್ಥಳದಿಂದ ಓಡಿದ್ದಾರೆ. ನಂತರ ದೇವಸ್ಥಾನದ ಪಕ್ಕದಲ್ಲೇ ಅರೆ ಪ್ರಜ್ಞಾವಸ್ಥೆಯಲ್ಲಿ ಬಿದ್ದಿದ್ದಾರೆ ಎಂದು ವರದಿಗಳು ವಿವರಿಸಿವೆ.

ಸ್ಥಳೀಯರು ಇಬ್ಬರನ್ನೂ ರಕ್ಷಿಸಿ ಆಸ್ಪತ್ರೆಗೆ ದಾಖಲಿಸಿದ್ದಾರೆ.

ನರಬಲಿ ಶಂಕೆ ವ್ಯಕ್ತಪಡಿಸಿದ ವರದಿಗಳು

“ಮಗಳ ಜೀವನದ ಏರುಪೇರುಗಳಿಂದ ಖಿನ್ನತೆಗೆ ಒಳಗಾಗಿದ್ದ ಸುಜಾತಾ ದೇವಸ್ಥಾನದಲ್ಲಿ ನರಬಲಿ ನೀಡಲು ಯತ್ನಿಸಿರಬಹುದು ಎಂಬ ಶಂಕೆಯಿದೆ. ಆದರೂ, ಘಟನೆಯ ಕಾರಣ ಸ್ಪಷ್ಟವಾಗಿಲ್ಲ. ಇಬ್ಬರೂ ಆಸ್ಪತ್ರೆಯಿಂದ ಬಿಡುಗಡೆಯಾದ ನಂತರವೇ ಸ್ಪಷ್ಟ ಚಿತ್ರಣ ಸಿಗಲಿದೆ. ಆನಂತರ ನಾವು ವಿವರವಾದ ಹೇಳಿಕೆಗಳನ್ನು ದಾಖಲಿಸಬೇಕಿದೆ” ಎಂದು ಪೊಲೀಸ್ ಅಧಿಕಾರಿಯೊಬ್ಬರು ಹೇಳಿದ್ದಾರೆ ಎಂದು ದಿ ನ್ಯೂ ಇಂಡಿಯನ್‌ ಎಕ್ಸ್‌ಪ್ರೆಸ್ ವರದಿ ತಿಳಿಸಿದೆ.

ಕನ್ನಡದ ಹಲವು ಮುಖ್ಯವಾಹಿನಿ ಮಾಧ್ಯಮ ವರದಿಗಳು ಕೂಡ ನರಬಲಿಯ ಶಂಕೆಯನ್ನು ವ್ಯಕ್ತಪಡಿಸಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿವಾಹಿತೆ ಮೇಲೆ ಅತ್ಯಾಚಾರ ಆರೋಪ : ಬಿಜೆಪಿ ಮಾಜಿ ಶಾಸಕನ ವಿರುದ್ಧ ಎಫ್‌ಐಆರ್

ಗನ್‌ ಪಾಯಿಂಟ್‌ ಇಟ್ಟು ಬೆದರಿಸಿ 22 ವರ್ಷದ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಮಹಾರಾಷ್ಟ್ರದ ಬಿಜೆಪಿ ಮಾಜಿ ಶಾಸಕ ಮತ್ತು ವಜಾಗೊಂಡಿರುವ ಪೊಲೀಸ್ ಸಿಬ್ಬಂದಿಯೊಬ್ಬರ ವಿರುದ್ಧ ಗುರುವಾರ (ಸೆ.17)...

ಬ್ರಿಕ್ಸ್ ಶೃಂಗಸಭೆಯಲ್ಲಿ ಸಂಪೂರ್ಣ ಸಸ್ಯಹಾರಿ ಮೆನು; ಶಿವಸೇನೆ ತೀವ್ರ ವಾಗ್ದಾಳಿ

ದೆಹಲಿಯಲ್ಲಿ ನಡೆದ 18ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ವಿದೇಶಿ ಪ್ರತಿನಿಧಿಗಳಿಗೆ ಕೇವಲ ಸಸ್ಯಹಾರಿ ಆಹಾರವನ್ನು ಬಡಿಸಿರುವುದನ್ನು ಖಂಡಿಸಿರುವ ಶಿವಸೇನೆ (ಯುಬಿಟಿ) ಗುರುವಾರ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ. ಇದು ಅಂತರರಾಷ್ಟ್ರೀಯ ಅತಿಥಿಗಳ ಮೇಲೆ...

ದೆಹಲಿ ಎಸ್‌ಐಆರ್: ಮತದಾರರ ಪಟ್ಟಿಯಿಂದ ಹೆಸರುಗಳ ಡಿಲೀಟ್ ಪ್ರಶ್ನಿಸಿ ಅರ್ಜಿ; ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ

ದೆಹಲಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಅಭಿಯಾನದಡಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆಯನ್ನು ಸೆಪ್ಟೆಂಬರ್ 21ರಂದು ನಡೆಸಲು ಸುಪ್ರೀಂ ಕೋರ್ಟ್ ಗುರುವಾರ ಒಪ್ಪಿಗೆ ಸೂಚಿಸಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್...

ಕೇರಳ | ಮಿತಿಗಿಂತ ಹೆಚ್ಚು ಮದ್ಯ ಸಂಗ್ರಹ ಆರೋಪ : ರಿಪೋರ್ಟರ್ ಟಿವಿ ಎಂಡಿ ಆಂಟೋ ಆಗಸ್ಟಿನ್ ಬಂಧನ

ಕೇರಳ ಅಬಕಾರಿ ಇಲಾಖೆಯು ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ವ್ಯವಸ್ಥಾಪಕ ನಿರ್ದೇಶಕ (ಎಂಡಿ) ಆಂಟೋ ಆಗಸ್ಟಿನ್ ಅವರನ್ನು ಗುರುವಾರ (ಸೆ.17) ಮುಂಜಾನೆ ಬಂಧಿಸಿದೆ. ಎರ್ನಾಕುಲಂನಲ್ಲಿರುವ ಸುದ್ದಿ ವಾಹಿನಿಯ ಕಚೇರಿಯಿಂದ ಮುಂಜಾನೆ ಸುಮಾರು...

ದೆಹಲಿ: ಜಾಮೀನು ಸಿಕ್ಕ ಬೆನ್ನಲ್ಲೇ ಸ್ವತಂತ್ರ ಭಾರದ್ವಾಜ್ ವಿಡಿಯೋ ವೈರಲ್; ಷರತ್ತು ಉಲ್ಲಂಘನೆ ಆರೋಪ!

ಜಂತರ್ ಮಂತರ್‌ನಲ್ಲಿ ದಲಿತ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಜಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಬಂಧಿತರಾಗಿದ್ದ ಹಿಂದುತ್ವ ಪ್ರಭಾವಿ ಸ್ವತಂತ್ರ ಭಾರದ್ವಾಜ್ ಅವರಿಗೆ ದೆಹಲಿ ನ್ಯಾಯಾಲಯ ಮೂರು ವಾರಗಳ ಮಧ್ಯಂತರ...

ಸರ್ಕಾರದ ಹಸ್ತಕ್ಷೇಪದಿಂದ ಕ್ಯಾಂಪಸ್ ನಿರ್ಬಂಧದವರೆಗೆ: ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯದ ಕುಸಿತ ಬಯಲಿಗೆಳೆದ ಜಾಗತಿಕ ವರದಿ 

ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯವು ತೀವ್ರವಾಗಿ ನಿರ್ಬಂಧಿತವಾಗಿದ್ದು, ಉನ್ನತ ಶಿಕ್ಷಣ ಸಂಸ್ಥೆಗಳ ಮೇಲೆ ಸರ್ಕಾರದ ಹೆಚ್ಚುತ್ತಿರುವ ಹಸ್ತಕ್ಷೇಪ, ಕ್ಯಾಂಪಸ್‌ಗಳಲ್ಲಿ ಶೈಕ್ಷಣಿಕ ಮತ್ತು ರಾಜಕೀಯ ಅಭಿವ್ಯಕ್ತಿಯ ಮೇಲಿನ ನಿರ್ಬಂಧಗಳು, ವಿದ್ವಾಂಸರು ಹಾಗೂ ವಿದ್ಯಾರ್ಥಿಗಳ ವಿರುದ್ಧದ ಕ್ರಮಗಳು...

ಬಿಹಾರ| ದಲಿತ ಯುವಕನ ವಿವಾಹವಾದ ಯುವತಿ; ಮಗಳ ಸಾಂಕೇತಿಕ ಅಂತ್ಯಕ್ರಿಯೆ ನಡೆಸಿದ ಪೋಷಕರು

ತಮ್ಮ 18 ವರ್ಷದ ಮಗಳು ಅಂತರ್ಜಾತಿ ವಿವಾಹವಾಗಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಪೋಷಕರು, ಆಕೆಗೆ ಸಾಂಕೇತಿಕವಾಗಿ ಅಂತ್ಯಕ್ರಿಯೆ ನಡೆಸಿದ ಘಟನೆ ಬಿಹಾರದ ಪೂರ್ಣಿಯಾದಲ್ಲಿ ಬೆಳಕಿಗೆ ಬಂದಿದೆ. ಯುವತಿಯ ಫೋಟೋವಿರುವ ಪ್ರತಿಕೃತಿಯನ್ನು ಸಿದ್ಧಪಡಿಸಿ ಊರಿನಲ್ಲಿ ಶವಯಾತ್ರೆ...

ಸ್ವಇಚ್ಛೆಯಿಂದ ಇಸ್ಲಾಂ ಸ್ವೀಕಾರ : ಆಯುಷ್ ಮಲಿಕ್‌ರನ್ನು ಗೃಹಬಂಧನದಿಂದ ಬಿಡುಗಡೆಗೊಳಿಸಿದ ಅಲಹಾಬಾದ್ ಹೈಕೋರ್ಟ್

ತಾನು ಸ್ವಇಚ್ಛೆಯಿಂದ ಇಸ್ಲಾಂ ಧರ್ಮವನ್ನು ಸ್ವೀಕರಿಸಿರುವುದಾಗಿ ಮತ್ತು ಆ ನಂತರ ತನ್ನ ತಂದೆಯೇ ತನಗೆ ಬೆದರಿಕೆ ಹಾಕಿ, ಕಾನೂನುಬಾಹಿರವಾಗಿ ಗೃಹಬಂಧನದಲ್ಲಿ ಇರಿಸಿದ್ದರು ಎಂದು ಆರೋಪಿಸಿದ್ದ ಆಯುಷ್ ಮಲಿಕ್ ಎಂಬ 31 ವರ್ಷದ ಯುವಕನನ್ನು...

ಬಿಜ್ನೋರ್‌ನಲ್ಲಿ ಮುಸ್ಲಿಂ ಶಿಕ್ಷಕನ ಗುಂಡಿಕ್ಕಿ ಹತ್ಯೆ: ‘ಲವ್ ಜಿಹಾದ್’ ಆರೋಪ; ವೈಯಕ್ತಿಕ ದ್ವೇಷದ ಬಗ್ಗೆಯೂ ಪೊಲೀಸರಿಂದ ತನಿಖೆ 

ಬಿಜ್ನೋರ್: ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ 43 ವರ್ಷದ ಮುಸ್ಲಿಂ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕನೊಬ್ಬರನ್ನು ರೈತನೊಬ್ಬ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಶಿಕ್ಷಕ ನೌಶಾದ್ ಅಹ್ಮದ್ ಅವರು ‘ಲವ್ ಜಿಹಾದ್’...

ತುಳು ನುಡಿಗೆ ಹೆಚ್ಚುವರಿ ಅಧಿಕೃತ ಭಾಷೆಯ ಮಾನ್ಯತೆ ನೀಡಿ: ಕರವೇ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡ

"ಮಂಗಳೂರಿನಲ್ಲಿ ಶುಕ್ರವಾರ ಕರ್ನಾಟಕ ಸರ್ಕಾರದ ಸಚಿವ ಸಂಪುಟ ಸಭೆ ನಡೆಯಲಿದೆ; ಇದೊಂದು ಐತಿಹಾಸಿಕ ಸಂದರ್ಭ. ರಾಜ್ಯ ಸರ್ಕಾರ ತುಳು ನುಡಿಯನ್ನು ತುಳು ಮಾತನಾಡುವ ಪ್ರದೇಶಗಳಲ್ಲಿ ಹೆಚ್ಚುವರಿ ಅಧಿಕೃತ ಭಾಷೆಯಾಗಿ ಮಾನ್ಯತೆ ನೀಡುವ ನಿರ್ಧಾರವನ್ನು...