Homeಅಂತರಾಷ್ಟ್ರೀಯಗಾಝಾ ನೆಲದ ವಾಸ್ತವತೆ ಜಗತ್ತಿನ ಮುಂದೆ ಬಿಚ್ಚಿಟ್ಟಿದ್ದ 'ಅಲ್‌ ಜಝೀರಾ'ಗೆ ನಿರ್ಬಂಧ ವಿಧಿಸಿದ ಇಸ್ರೇಲ್‌

ಗಾಝಾ ನೆಲದ ವಾಸ್ತವತೆ ಜಗತ್ತಿನ ಮುಂದೆ ಬಿಚ್ಚಿಟ್ಟಿದ್ದ ‘ಅಲ್‌ ಜಝೀರಾ’ಗೆ ನಿರ್ಬಂಧ ವಿಧಿಸಿದ ಇಸ್ರೇಲ್‌

- Advertisement -
- Advertisement -

ಇಸ್ರೇಲ್‌ ಗಾಝಾದಲ್ಲಿ ನಡೆಸಿದ್ದ ಹತ್ಯಾಕಾಂಡವನ್ನು ಇಡೀ ಜಗತ್ತಿಗೆ ತಿಳಿಸಿ ಕಣ್ಣು ತೆರೆಯುವಂತೆ ಮಾಡಿದ್ದ ಅಲ್‌ ಜಝೀರಾ ಮಾಧ್ಯಮವನ್ನು ಇಸ್ರೇಲ್‌ ಪ್ರಧಾನಿ ಬೆಂಜಮನ್ ನೆತನ್ಯಾಹು “ಭಯೋತ್ಪಾದನಾ ಚಾನಲ್” ಎಂದು ಕರೆದು ದೇಶದಲ್ಲಿ ನಿರ್ಬಂಧಿಸಿದ್ದಾರೆ ಮತ್ತು ಪ್ರಧಾನಿ ಬೆಂಜಮನ್ ನೆತನ್ಯಾಹು ನೇತೃತ್ವದಲ್ಲಿ ಅದಕ್ಕೆ ಬೇಕಾಗಿರುವ ಕಾನೂನನ್ನು ಸಂಸತ್ತಿನಲ್ಲಿ ಅಂಗೀಕರಿಸಲಾಗಿದೆ.

ನೆತನ್ಯಾಹು ಅವರ ಈ ನಿರ್ಧಾರವು ಅಲ್ ಜಝೀರಾ ವಿರುದ್ಧ ಇಸ್ರೇಲ್‌ನ ದೀರ್ಘಕಾಲದ ದ್ವೇಷವನ್ನು ಬಹಿರಂಗಪಡಿಸುತ್ತದೆ, ಚಾನಲ್‌ನ ಮಾಲಕತ್ವ ಹೊಂದಿರುವ ಕತಾರ್‌ನೊಂದಿಗೆ ಇಸ್ರೇಲ್‌ನ ಉದ್ವಿಗ್ನತೆಯ ಭೀತಿಯನ್ನು ಹೆಚ್ಚಿಸಿದೆ.

ಕತಾರ್ ಈ ಬಗ್ಗೆ ತಕ್ಷಣಕ್ಕೆ ಯಾವುದೇ ಪ್ರತಿಕ್ರಿಯೆಯನ್ನು ನೀಡಿಲ್ಲ. ಇಸ್ರೇಲ್ ಅಲ್ ಜಝೀರಾದ ಸಂಬಂಧ ಮೊದಲಿನಿಂದಲೂ ಹಳಸಿತ್ತು. ಇಸ್ರೇಲ್‌ ಅಲ್ ಜಝೀರಾ ವಿರುದ್ಧ ಪಕ್ಷಪಾತದ ಆರೋಪವನ್ನು ಮಾಡಿತ್ತು.

ವೆಸ್ಟ್‌ಬ್ಯಾಂಕ್‌ನಲ್ಲಿ ಇಸ್ರೇಲ್‌ ಮಿಲಿಟರಿ ದಾಳಿಯ ಸಮಯದಲ್ಲಿ ಅಲ್ ಜಝೀರಾ ವರದಿಗಾರ ಶಿರೀನ್ ಅಬು ಅಕ್ಲೆಹ್ ಕೊಲ್ಲಲ್ಪಟ್ಟಾಗ ಇಸ್ರೇಲ್‌ ಮತ್ತು ಅಲ್ ಜಝೀರಾ ನಡುವಿನ ಸಂಬಂಧ ಕುಸಿದಿತ್ತು.

ಪ್ಯಾಲೆಸ್ತೀನ್‌-ಅಮೇರಿಕನ್ ಪತ್ರಕರ್ತೆ ಶಿರೀನ್ ಅಬು ಅಕ್ಲೆಹ್ ಇಸ್ರೇಲ್‌ ಬಗ್ಗೆ ವಿಮರ್ಶಾತ್ಮಕ ವರದಿಗಾಗಿ ಅರಬ್ ಪ್ರಪಂಚದಾದ್ಯಂತ ಚಿರಪರಿಚಿತರಾಗಿದ್ದರು ಮತ್ತು ಇಸ್ರೇಲ್ ಉದ್ದೇಶಪೂರ್ವಕವಾಗಿ ಅವಳನ್ನು ಕೊಂದಿದೆ ಎಂದು ಚಾನಲ್ ಆರೋಪಿಸಿತ್ತು. ಇಸ್ರೇಲ್‌ ಈ ಆರೋಪವನ್ನು ತಳ್ಳಿ ಹಾಕಿತ್ತು. ಇದು ಆಕಸ್ಮಿಕ ಘಟನೆ ಎಂದು ಹೇಳಿತ್ತು.

ಅಕ್ಟೋಬರ್ 7, 2023ರಂದು ಹಮಾಸ್ ವಿರುದ್ಧ ಇಸ್ರೇಲ್‌ನ ಯುದ್ಧ ಘೋಷಿಸಿದ ಬಳಿಕ ಅಲ್‌ ಜಝೀರಾ ಮಾಧ್ಯಮ ಮತ್ತು ಇಸ್ರೇಲ್ ನಡುವಿನ ಸಂಬಂಧ ಮತ್ತಷ್ಟು ಹದೆಗೆಡಲು ಪ್ರಾರಂಭಿಸಿತು. ಇಸ್ರೇಲ್ ಗಾಝಾ ನೆಲದಲ್ಲಿ ನಡೆಸುತ್ತಿದ್ದ ಹತ್ಯಾಕಾಂಡವನ್ನು ಯಾವುದೇ ಭೀತಿಯಿಲ್ಲದೆ ಚಿತ್ರೀಕರಿಸಿ ಜಗತ್ತಿಗೆ ಅಲ್‌ ಜಝೀರಾ ಪ್ರಸಾರ ಮಾಡಿದೆ. ಗಾಝಾ ಯುದ್ಧ ಭೀಕರತೆಯ ಬಗ್ಗೆ ಬೇರೆ ಯಾವುದೇ ಮಾಧ್ಯಮಗಳಿಗಿಂತ ಹೆಚ್ಚಾಗಿ ನೆಲದ ವಾಸ್ತವತೆಯನ್ನು ಅಲ್‌ಜಝೀರಾ ವರದಿ ಮಾಡಿತ್ತು ಎನ್ನುವುದು ಗಮನಾರ್ಹ. ಕಳೆದ ಡಿಸೆಂಬರ್‌ನಲ್ಲಿ ದಕ್ಷಿಣ ಗಾಝಾದಲ್ಲಿ ವರದಿ ಮಾಡುತ್ತಿದ್ದ ಅಲ್ ಜಝೀರಾ ಕ್ಯಾಮೆರಾಮನ್‌ ಹತ್ಯೆ ನಡೆದಿದೆ. ಅದೇ  ದಾಳಿಯಲ್ಲಿ ಗಾಝಾದಲ್ಲಿ ಚಾನೆಲ್‌ನ ಬ್ಯೂರೋ ಮುಖ್ಯಸ್ಥ ವೇಲ್ ದಹದೌಹ್ ಗಾಯಗೊಂಡಿದ್ದರು.

ಜನವರಿಯಲ್ಲಿ ದಹದೌಹ್‌ ಅವರ ಪುತ್ರನನ್ನು ಕೊಂದಿದ್ದಕ್ಕಾಗಿ ನೆಟ್ವರ್ಕ್ ಇಸ್ರೇಲ್‌ನ್ನು ದೂಷಿಸಿದೆ. ಹಮ್ಜಾ ದಹದೌಹ್ ಅಲ್ ಜಝೀರಾದಲ್ಲಿ ಕೆಲಸ ಮಾಡುತ್ತಿದ್ದಾಗ ಇಸ್ರೇಲ್‌ ದಾಳಿಗೆ ಬಲಿಯಾಗಿದ್ದರು. ಕಳೆದ ಅಕ್ಟೋಬರ್‌ನಲ್ಲಿ ನಡೆದ ಮತ್ತೊಂದು ದಾಳಿಯಲ್ಲಿ ವೇಲ್ ದಹದೌಹ್ ಅವರ ಪತ್ನಿ, ಮಗಳು ಮತ್ತು ಇನ್ನೊಬ್ಬ ಮಗ ಮತ್ತು ಮೊಮ್ಮಗ ಕೊಲ್ಲಲ್ಪಟ್ಟಿದ್ದರು.

ಯುದ್ಧದ ವೇಳೆ ಗಾಝಾದಲ್ಲಿ ಉಳಿದುಕೊಂಡಿರುವ ಕೆಲವೇ ಕೆಲವು ಅಂತರಾಷ್ಟ್ರೀಯ ಮಾಧ್ಯಮಗಳಲ್ಲಿ ಅಲ್ ಜಝೀರಾ ಒಂದಾಗಿದೆ, ವೈಮಾನಿಕ ದಾಳಿ ಮತ್ತು ಕಿಕ್ಕಿರಿದ ಆಸ್ಪತ್ರೆಗಳ ರಕ್ತಸಿಕ್ತ ದೃಶ್ಯಗಳನ್ನು ಪ್ರಸಾರ ಮಾಡಿದ್ದ ಅಲ್‌ ಜಝೀರಾ ಇಸ್ರೇಲ್ ವಿರುದ್ಧ ಹತ್ಯಾಕಾಂಡದ ಆರೋಪವನ್ನು ಮಾಡಿತ್ತು. ಇಸ್ರೇಲ್, ಅಲ್ ಜಝೀರಾ ಹಮಾಸ್ ಜೊತೆ ಸಹಕರಿಸುತ್ತಿದೆ ಎಂದು ಆರೋಪಿಸಿತ್ತು.

ಇದನ್ನು ಓದಿ: ಅರುಣ್ ಪುರಿ, ರಾಜ್ ದೀಪ್ ಸರ್ದೇಸಾಯಿ, ಶಿವ್ ಅರೂರ್ ವಿರುದ್ಧದ ಮಾನಹಾನಿ ಪ್ರಕರಣಕ್ಕೆ ಸುಪ್ರೀಂಕೋರ್ಟ್‌ ತಡೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...