Homeಅಂತರಾಷ್ಟ್ರೀಯಗಾಝಾ ನೆಲದ ವಾಸ್ತವತೆ ಜಗತ್ತಿನ ಮುಂದೆ ಬಿಚ್ಚಿಟ್ಟಿದ್ದ 'ಅಲ್‌ ಜಝೀರಾ'ಗೆ ನಿರ್ಬಂಧ ವಿಧಿಸಿದ ಇಸ್ರೇಲ್‌

ಗಾಝಾ ನೆಲದ ವಾಸ್ತವತೆ ಜಗತ್ತಿನ ಮುಂದೆ ಬಿಚ್ಚಿಟ್ಟಿದ್ದ ‘ಅಲ್‌ ಜಝೀರಾ’ಗೆ ನಿರ್ಬಂಧ ವಿಧಿಸಿದ ಇಸ್ರೇಲ್‌

- Advertisement -
- Advertisement -

ಇಸ್ರೇಲ್‌ ಗಾಝಾದಲ್ಲಿ ನಡೆಸಿದ್ದ ಹತ್ಯಾಕಾಂಡವನ್ನು ಇಡೀ ಜಗತ್ತಿಗೆ ತಿಳಿಸಿ ಕಣ್ಣು ತೆರೆಯುವಂತೆ ಮಾಡಿದ್ದ ಅಲ್‌ ಜಝೀರಾ ಮಾಧ್ಯಮವನ್ನು ಇಸ್ರೇಲ್‌ ಪ್ರಧಾನಿ ಬೆಂಜಮನ್ ನೆತನ್ಯಾಹು “ಭಯೋತ್ಪಾದನಾ ಚಾನಲ್” ಎಂದು ಕರೆದು ದೇಶದಲ್ಲಿ ನಿರ್ಬಂಧಿಸಿದ್ದಾರೆ ಮತ್ತು ಪ್ರಧಾನಿ ಬೆಂಜಮನ್ ನೆತನ್ಯಾಹು ನೇತೃತ್ವದಲ್ಲಿ ಅದಕ್ಕೆ ಬೇಕಾಗಿರುವ ಕಾನೂನನ್ನು ಸಂಸತ್ತಿನಲ್ಲಿ ಅಂಗೀಕರಿಸಲಾಗಿದೆ.

ನೆತನ್ಯಾಹು ಅವರ ಈ ನಿರ್ಧಾರವು ಅಲ್ ಜಝೀರಾ ವಿರುದ್ಧ ಇಸ್ರೇಲ್‌ನ ದೀರ್ಘಕಾಲದ ದ್ವೇಷವನ್ನು ಬಹಿರಂಗಪಡಿಸುತ್ತದೆ, ಚಾನಲ್‌ನ ಮಾಲಕತ್ವ ಹೊಂದಿರುವ ಕತಾರ್‌ನೊಂದಿಗೆ ಇಸ್ರೇಲ್‌ನ ಉದ್ವಿಗ್ನತೆಯ ಭೀತಿಯನ್ನು ಹೆಚ್ಚಿಸಿದೆ.

ಕತಾರ್ ಈ ಬಗ್ಗೆ ತಕ್ಷಣಕ್ಕೆ ಯಾವುದೇ ಪ್ರತಿಕ್ರಿಯೆಯನ್ನು ನೀಡಿಲ್ಲ. ಇಸ್ರೇಲ್ ಅಲ್ ಜಝೀರಾದ ಸಂಬಂಧ ಮೊದಲಿನಿಂದಲೂ ಹಳಸಿತ್ತು. ಇಸ್ರೇಲ್‌ ಅಲ್ ಜಝೀರಾ ವಿರುದ್ಧ ಪಕ್ಷಪಾತದ ಆರೋಪವನ್ನು ಮಾಡಿತ್ತು.

ವೆಸ್ಟ್‌ಬ್ಯಾಂಕ್‌ನಲ್ಲಿ ಇಸ್ರೇಲ್‌ ಮಿಲಿಟರಿ ದಾಳಿಯ ಸಮಯದಲ್ಲಿ ಅಲ್ ಜಝೀರಾ ವರದಿಗಾರ ಶಿರೀನ್ ಅಬು ಅಕ್ಲೆಹ್ ಕೊಲ್ಲಲ್ಪಟ್ಟಾಗ ಇಸ್ರೇಲ್‌ ಮತ್ತು ಅಲ್ ಜಝೀರಾ ನಡುವಿನ ಸಂಬಂಧ ಕುಸಿದಿತ್ತು.

ಪ್ಯಾಲೆಸ್ತೀನ್‌-ಅಮೇರಿಕನ್ ಪತ್ರಕರ್ತೆ ಶಿರೀನ್ ಅಬು ಅಕ್ಲೆಹ್ ಇಸ್ರೇಲ್‌ ಬಗ್ಗೆ ವಿಮರ್ಶಾತ್ಮಕ ವರದಿಗಾಗಿ ಅರಬ್ ಪ್ರಪಂಚದಾದ್ಯಂತ ಚಿರಪರಿಚಿತರಾಗಿದ್ದರು ಮತ್ತು ಇಸ್ರೇಲ್ ಉದ್ದೇಶಪೂರ್ವಕವಾಗಿ ಅವಳನ್ನು ಕೊಂದಿದೆ ಎಂದು ಚಾನಲ್ ಆರೋಪಿಸಿತ್ತು. ಇಸ್ರೇಲ್‌ ಈ ಆರೋಪವನ್ನು ತಳ್ಳಿ ಹಾಕಿತ್ತು. ಇದು ಆಕಸ್ಮಿಕ ಘಟನೆ ಎಂದು ಹೇಳಿತ್ತು.

ಅಕ್ಟೋಬರ್ 7, 2023ರಂದು ಹಮಾಸ್ ವಿರುದ್ಧ ಇಸ್ರೇಲ್‌ನ ಯುದ್ಧ ಘೋಷಿಸಿದ ಬಳಿಕ ಅಲ್‌ ಜಝೀರಾ ಮಾಧ್ಯಮ ಮತ್ತು ಇಸ್ರೇಲ್ ನಡುವಿನ ಸಂಬಂಧ ಮತ್ತಷ್ಟು ಹದೆಗೆಡಲು ಪ್ರಾರಂಭಿಸಿತು. ಇಸ್ರೇಲ್ ಗಾಝಾ ನೆಲದಲ್ಲಿ ನಡೆಸುತ್ತಿದ್ದ ಹತ್ಯಾಕಾಂಡವನ್ನು ಯಾವುದೇ ಭೀತಿಯಿಲ್ಲದೆ ಚಿತ್ರೀಕರಿಸಿ ಜಗತ್ತಿಗೆ ಅಲ್‌ ಜಝೀರಾ ಪ್ರಸಾರ ಮಾಡಿದೆ. ಗಾಝಾ ಯುದ್ಧ ಭೀಕರತೆಯ ಬಗ್ಗೆ ಬೇರೆ ಯಾವುದೇ ಮಾಧ್ಯಮಗಳಿಗಿಂತ ಹೆಚ್ಚಾಗಿ ನೆಲದ ವಾಸ್ತವತೆಯನ್ನು ಅಲ್‌ಜಝೀರಾ ವರದಿ ಮಾಡಿತ್ತು ಎನ್ನುವುದು ಗಮನಾರ್ಹ. ಕಳೆದ ಡಿಸೆಂಬರ್‌ನಲ್ಲಿ ದಕ್ಷಿಣ ಗಾಝಾದಲ್ಲಿ ವರದಿ ಮಾಡುತ್ತಿದ್ದ ಅಲ್ ಜಝೀರಾ ಕ್ಯಾಮೆರಾಮನ್‌ ಹತ್ಯೆ ನಡೆದಿದೆ. ಅದೇ  ದಾಳಿಯಲ್ಲಿ ಗಾಝಾದಲ್ಲಿ ಚಾನೆಲ್‌ನ ಬ್ಯೂರೋ ಮುಖ್ಯಸ್ಥ ವೇಲ್ ದಹದೌಹ್ ಗಾಯಗೊಂಡಿದ್ದರು.

ಜನವರಿಯಲ್ಲಿ ದಹದೌಹ್‌ ಅವರ ಪುತ್ರನನ್ನು ಕೊಂದಿದ್ದಕ್ಕಾಗಿ ನೆಟ್ವರ್ಕ್ ಇಸ್ರೇಲ್‌ನ್ನು ದೂಷಿಸಿದೆ. ಹಮ್ಜಾ ದಹದೌಹ್ ಅಲ್ ಜಝೀರಾದಲ್ಲಿ ಕೆಲಸ ಮಾಡುತ್ತಿದ್ದಾಗ ಇಸ್ರೇಲ್‌ ದಾಳಿಗೆ ಬಲಿಯಾಗಿದ್ದರು. ಕಳೆದ ಅಕ್ಟೋಬರ್‌ನಲ್ಲಿ ನಡೆದ ಮತ್ತೊಂದು ದಾಳಿಯಲ್ಲಿ ವೇಲ್ ದಹದೌಹ್ ಅವರ ಪತ್ನಿ, ಮಗಳು ಮತ್ತು ಇನ್ನೊಬ್ಬ ಮಗ ಮತ್ತು ಮೊಮ್ಮಗ ಕೊಲ್ಲಲ್ಪಟ್ಟಿದ್ದರು.

ಯುದ್ಧದ ವೇಳೆ ಗಾಝಾದಲ್ಲಿ ಉಳಿದುಕೊಂಡಿರುವ ಕೆಲವೇ ಕೆಲವು ಅಂತರಾಷ್ಟ್ರೀಯ ಮಾಧ್ಯಮಗಳಲ್ಲಿ ಅಲ್ ಜಝೀರಾ ಒಂದಾಗಿದೆ, ವೈಮಾನಿಕ ದಾಳಿ ಮತ್ತು ಕಿಕ್ಕಿರಿದ ಆಸ್ಪತ್ರೆಗಳ ರಕ್ತಸಿಕ್ತ ದೃಶ್ಯಗಳನ್ನು ಪ್ರಸಾರ ಮಾಡಿದ್ದ ಅಲ್‌ ಜಝೀರಾ ಇಸ್ರೇಲ್ ವಿರುದ್ಧ ಹತ್ಯಾಕಾಂಡದ ಆರೋಪವನ್ನು ಮಾಡಿತ್ತು. ಇಸ್ರೇಲ್, ಅಲ್ ಜಝೀರಾ ಹಮಾಸ್ ಜೊತೆ ಸಹಕರಿಸುತ್ತಿದೆ ಎಂದು ಆರೋಪಿಸಿತ್ತು.

ಇದನ್ನು ಓದಿ: ಅರುಣ್ ಪುರಿ, ರಾಜ್ ದೀಪ್ ಸರ್ದೇಸಾಯಿ, ಶಿವ್ ಅರೂರ್ ವಿರುದ್ಧದ ಮಾನಹಾನಿ ಪ್ರಕರಣಕ್ಕೆ ಸುಪ್ರೀಂಕೋರ್ಟ್‌ ತಡೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆಪರೇಷನ್ ಡೆಮಾಲಿಶ್‌ಮೆಂಟ್ ಅಡಿಯಲ್ಲಿ 200ಕ್ಕೂ ಹೆಚ್ಚು ನಕ್ಸಲ್ ಸ್ಮಾರಕಗಳನ್ನು ನೆಲಸಮಗೊಳಿಸಿದ ಭದ್ರತಾ ಪಡೆಗಳು 

ನವದೆಹಲಿ: ನಕ್ಸಲ್ ಚಟುವಟಿಕೆಗಳ ವಿರುದ್ಧ ತೀವ್ರಗೊಂಡ ಕಾರ್ಯಾಚರಣೆ ನಿರ್ಣಾಯಕ ಹಂತವನ್ನು ಪ್ರವೇಶಿಸಿರುವುದಾಗಿ ಭದ್ರತಾಪಡೆಯ ಅಧಿಕಾರಿಗಳು ತಿಳಿಸಿದ್ದಾರೆ.  ಆಪರೇಷನ್ ಡೆಮಾಲಿಶ್‌ಮೆಂಟ್ ಎಂದು ಕರೆಯಲ್ಪಡುವ ಇತ್ತೀಚಿನ ಕಾರ್ಯಾಚರಣೆಯ ಅಡಿಯಲ್ಲಿ ನಕ್ಸಲ್ ಕಾರ್ಯಕರ್ತರು ತಮ್ಮ ನಾಯಕರನ್ನು ಸ್ಮರಿಸಲು ಮತ್ತು...

ಮುಸ್ಲಿಮರಿಗೆ ನೀಡಿದ್ದ 5% ಮೀಸಲಾತಿ ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಕ್ರಮ ಪ್ರಶ್ನಿಸಿ ಬಾಂಬೆ ಹೈಕೋರ್ಟ್ ಗೆ ಅರ್ಜಿ 

ಶಿಕ್ಷಣ ಮತ್ತು ಸರ್ಕಾರಿ ಉದ್ಯೋಗಗಳಲ್ಲಿ ಮುಸ್ಲಿಮರಿಗೆ 5% ಮೀಸಲಾತಿಯನ್ನು ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಇತ್ತೀಚಿನ ನಿರ್ಧಾರವನ್ನು ಮುಂಬೈ ಮೂಲದ ವಕೀಲರು ಬಾಂಬೆ ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದಾರೆ. ವಕೀಲ ಸೈಯದ್ ಎಜಾಜ್ ಅಬ್ಬಾಸ್ ನಖ್ವಿ ಅವರು ವಕೀಲ...

ವಿಧಾನಸಭಾ ಚುನಾವಣೆಯಲ್ಲಿ ನೇಮಮ್ ನಿಂದ ಸ್ಪರ್ಧಿಸುವ ಬಯಕೆಯನ್ನು ಪುನರುಚ್ಚರಿಸಿದ ಬಿಜೆಪಿ ಕೇರಳ ಅಧ್ಯಕ್ಷ ರಾಜೀವ್ ಚಂದ್ರಶೇಖರ್ 

ತಿರುವನಂತಪುರಂ: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕೇರಳದ ನೇಮಮ್ ಕ್ಷೇತ್ರದಿಂದ ಸ್ಪರ್ಧಿಸುವ ತಮ್ಮ ಇಚ್ಛೆಯನ್ನು ಬಿಜೆಪಿ ರಾಜ್ಯಾಧ್ಯಕ್ಷ ರಾಜೀವ್ ಚಂದ್ರಶೇಖರ್ ಭಾನುವಾರ ಪುನರುಚ್ಚರಿಸಿದ್ದಾರೆ. ನೇಮಮ್‌ನಲ್ಲಿ ಬಿಜೆಪಿಯ ಚುನಾವಣಾ ಗೋಡೆ ಬರಹ ಅಭಿಯಾನಕ್ಕೆ ಚಾಲನೆ ನೀಡಿದ ನಂತರ...

ಯುವತಿಯನ್ನು ಬಂಧಿಸಿಟ್ಟು ಚಿತ್ರಹಿಂಸೆ : ಆರೋಪಿಯ ಬಂಧನ

ಯುವಕನೋರ್ವ ತನ್ನ ಲಿವ್-ಇನ್ ಸಂಗಾತಿಯಾದ 19 ವರ್ಷದ ಯುವತಿಯನ್ನು ಕೊಠಡಿಯಲ್ಲಿ ಬಂಧಿಸಿಟ್ಟು ಚಿತ್ರಹಿಂಸೆ ನೀಡಿರುವ ಘಟನೆ ಗುರುಗಾಂವ್‌ನ ಸೆಕ್ಟರ್ 69ರಲ್ಲಿ ನಡೆದಿದೆ. ಆರೋಪಿಯನ್ನು ದೆಹಲಿಯ ನರೇಲಾ ನಿವಾಸಿ 19 ವರ್ಷದ ಶಿವಂ ಎಂದು ಗುರುತಿಸಲಾಗಿದೆ....

ಕೋಝಿಕ್ಕೋಡ್‌: ಆಹಾರ ಸೇವಿಸಿ, ಬಿಲ್ ಪಾವತಿಸಲು ನಿರಾಕರಿಸಿದ ಮೂವರ ತಂಡದಿಂದ ರೆಸ್ಟೋರೆಂಟ್ ಧ್ವಂಸ

ಕೋಝಿಕ್ಕೋಡ್ (ಕೇರಳ): ಆಹಾರ ಸೇವಿಸಿ, ಹಣ ನೀಡಲು ನಿರಾಕರಿಸಿದ ಮೂವರು ಸದಸ್ಯರ ಗುಂಪೊಂದು ಬಿಲ್ ಕೇಳಿದ್ದಕ್ಕೆ ರೆಸ್ಟೋರೆಂಟ್ ಅನ್ನು ಧ್ವಂಸಗೊಳಿಸಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. ಪ್ರಕರಣ ಸಂಬಂಧ ಒಬ್ಬ ವ್ಯಕ್ತಿಯನ್ನು ವಶಕ್ಕೆ ತೆಗೆದುಕೊಳ್ಳಲಾಗಿದ್ದು,...

ಲೈಂಗಿಕ ದೌರ್ಜನ್ಯ ಆರೋಪ : ಸ್ವಾಮಿ ಅವಿಮುಕ್ತೇಶ್ವರಾನಂದ ವಿರುದ್ಧ ಎಫ್‌ಐಆರ್ ದಾಖಲಿಸಲು ಕೋರ್ಟ್ ಆದೇಶ

ಇಬ್ಬರು ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಜ್ಯೋತಿಷ್ ಪೀಠದ ಸ್ವಾಮಿ ಅವಿಮುಕ್ತೇಶ್ವರಾನಂದ ಸರಸ್ವತಿ ಮತ್ತು ಅವರ ಶಿಷ್ಯ ಮುಕುಂದಾನಂದ ಬ್ರಹ್ಮಚಾರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನ ವಿಶೇಷ ಪೋಕ್ಸೋ ನ್ಯಾಯಾಲಯ...

ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಶಿಕ್ಷಕಿಯಿಂದ ಹಲ್ಲೆ

ಶಾಲಾ ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಹಲ್ಲೆ ನಡೆಸಿದ ಶಿಕ್ಷಕಿ, ಆಕೆಯ ಹೆಸರನ್ನು ದಾಖಲಾತಿಯಿಂದ ತೆಗೆದು ಹಾಕುವುದಾಗಿ ಬೆದರಿಕೆ ಹಾಕಿರುವ ಆರೋಪ ಕೇಳಿ ಬಂದಿದೆ. ಉತ್ತರ ಪ್ರದೇಶದ ಅಲೀಗಢ ಜಿಲ್ಲೆಯ...

ಚಿಕ್ಕಮಗಳೂರಿನಲ್ಲಿ ಒಂದೇ ವಾರದಲ್ಲಿ ಕಾಡಾನೆ ದಾಳಿಗೆ ಎರಡನೇ ಸಾವು; ಆನೆ ಸೆರೆ; ಸರ್ಕಾರದ ವಿರುದ್ಧ ಸ್ಥಳೀಯರ ಪ್ರತಿಭಟನೆ

ಚಿಕ್ಕಮಗಳೂರಿನ ವ್ಯಾಪ್ತಿಯಲ್ಲಿ ದಿನದಿಂದ ದಿನಕ್ಕೆ ಮಾನವ ಹಾಗೂ ಪ್ರಾಣಿಗಳ ಸಂಘರ್ಷ ಹೆಚ್ಚಾಗುತ್ತಿದ್ದು, ಒಂದೇ ವಾರದಲ್ಲಿ ಕಾಡಾನೆ ದಾಳಿಯಿಂದ ಇಬ್ಬರು ಮೃತಪಟ್ಟಿದ್ದಾರೆ. ಭಾನುವಾರ ಬೆಳಗ್ಗೆ ತೋಟದ ಕೆಲಸಕ್ಕೆ ತೆರಳಿದಾಗ ಹೊಸಪೇಟೆ ಮೂಲದ ಬೋರಮ್ಮ(34), ಕಾಡಾನೆ...

ಬಿಜೆಪಿ ಸೇರ್ಪಡೆಯಾದ ಅಸ್ಸಾಂ ಕಾಂಗ್ರೆಸ್ ಮಾಜಿ ಅಧ್ಯಕ್ಷ ಭೂಪೇನ್ ಬೋರಾ

ವಿಧಾನಸಭೆ ಚುನಾವಣೆಯ ಹೊಸ್ತಿಲಲ್ಲಿ ಅಸ್ಸಾಂ ಕಾಂಗ್ರೆಸ್‌ನ ಮಾಜಿ ರಾಜ್ಯಾಧ್ಯಕ್ಷ ಭೂಪೇನ್ ಬೋರಾ ಭಾನುವಾರ (ಫೆ.22) ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಬೋರಾ ಫೆ. 16ರಂದು ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದರು. ಪಕ್ಷದಲ್ಲಿ ತಮ್ಮನ್ನು ನಿರ್ಲಕ್ಷಿಸಲಾಗುತ್ತಿದೆ...

ದೆಹಲಿಯಲ್ಲಿ ಭಯೋತ್ಪಾದನಾ ಸಂಚು ಆರೋಪ: ಬಾಂಗ್ಲಾದೇಶಿ ಪ್ರಜೆಗಳು ಸೇರಿ ಎಂಟು ಮಂದಿ ಬಂಧನ

ನವದೆಹಲಿ: ಪಾಕಿಸ್ತಾನದ ಐಎಸ್‌ಐ ಮತ್ತು ಬಾಂಗ್ಲಾದೇಶ ಮೂಲದ ಉಗ್ರಗಾಮಿ ಸಂಘಟನೆಗಳ ಸೂಚನೆಯ ಮೇರೆಗೆ ದೆಹಲಿಯಲ್ಲಿ ಪ್ರಮುಖ ಭಯೋತ್ಪಾದಕ ಪಿತೂರಿ ನಡೆಸಲು ಸಂಚು ರೂಪಿಸಿದ್ದ ಆರೋಪದ ಮೇಲೆ ಎಂಟು ಶಂಕಿತರನ್ನು ಬಂಧಿಸಲಾಗಿದೆ ಎಂದು ಪೊಲೀಸ್...