Homeಅಂತರಾಷ್ಟ್ರೀಯಗಾಝಾ ನೆಲದ ವಾಸ್ತವತೆ ಜಗತ್ತಿನ ಮುಂದೆ ಬಿಚ್ಚಿಟ್ಟಿದ್ದ 'ಅಲ್‌ ಜಝೀರಾ'ಗೆ ನಿರ್ಬಂಧ ವಿಧಿಸಿದ ಇಸ್ರೇಲ್‌

ಗಾಝಾ ನೆಲದ ವಾಸ್ತವತೆ ಜಗತ್ತಿನ ಮುಂದೆ ಬಿಚ್ಚಿಟ್ಟಿದ್ದ ‘ಅಲ್‌ ಜಝೀರಾ’ಗೆ ನಿರ್ಬಂಧ ವಿಧಿಸಿದ ಇಸ್ರೇಲ್‌

- Advertisement -
- Advertisement -

ಇಸ್ರೇಲ್‌ ಗಾಝಾದಲ್ಲಿ ನಡೆಸಿದ್ದ ಹತ್ಯಾಕಾಂಡವನ್ನು ಇಡೀ ಜಗತ್ತಿಗೆ ತಿಳಿಸಿ ಕಣ್ಣು ತೆರೆಯುವಂತೆ ಮಾಡಿದ್ದ ಅಲ್‌ ಜಝೀರಾ ಮಾಧ್ಯಮವನ್ನು ಇಸ್ರೇಲ್‌ ಪ್ರಧಾನಿ ಬೆಂಜಮನ್ ನೆತನ್ಯಾಹು “ಭಯೋತ್ಪಾದನಾ ಚಾನಲ್” ಎಂದು ಕರೆದು ದೇಶದಲ್ಲಿ ನಿರ್ಬಂಧಿಸಿದ್ದಾರೆ ಮತ್ತು ಪ್ರಧಾನಿ ಬೆಂಜಮನ್ ನೆತನ್ಯಾಹು ನೇತೃತ್ವದಲ್ಲಿ ಅದಕ್ಕೆ ಬೇಕಾಗಿರುವ ಕಾನೂನನ್ನು ಸಂಸತ್ತಿನಲ್ಲಿ ಅಂಗೀಕರಿಸಲಾಗಿದೆ.

ನೆತನ್ಯಾಹು ಅವರ ಈ ನಿರ್ಧಾರವು ಅಲ್ ಜಝೀರಾ ವಿರುದ್ಧ ಇಸ್ರೇಲ್‌ನ ದೀರ್ಘಕಾಲದ ದ್ವೇಷವನ್ನು ಬಹಿರಂಗಪಡಿಸುತ್ತದೆ, ಚಾನಲ್‌ನ ಮಾಲಕತ್ವ ಹೊಂದಿರುವ ಕತಾರ್‌ನೊಂದಿಗೆ ಇಸ್ರೇಲ್‌ನ ಉದ್ವಿಗ್ನತೆಯ ಭೀತಿಯನ್ನು ಹೆಚ್ಚಿಸಿದೆ.

ಕತಾರ್ ಈ ಬಗ್ಗೆ ತಕ್ಷಣಕ್ಕೆ ಯಾವುದೇ ಪ್ರತಿಕ್ರಿಯೆಯನ್ನು ನೀಡಿಲ್ಲ. ಇಸ್ರೇಲ್ ಅಲ್ ಜಝೀರಾದ ಸಂಬಂಧ ಮೊದಲಿನಿಂದಲೂ ಹಳಸಿತ್ತು. ಇಸ್ರೇಲ್‌ ಅಲ್ ಜಝೀರಾ ವಿರುದ್ಧ ಪಕ್ಷಪಾತದ ಆರೋಪವನ್ನು ಮಾಡಿತ್ತು.

ವೆಸ್ಟ್‌ಬ್ಯಾಂಕ್‌ನಲ್ಲಿ ಇಸ್ರೇಲ್‌ ಮಿಲಿಟರಿ ದಾಳಿಯ ಸಮಯದಲ್ಲಿ ಅಲ್ ಜಝೀರಾ ವರದಿಗಾರ ಶಿರೀನ್ ಅಬು ಅಕ್ಲೆಹ್ ಕೊಲ್ಲಲ್ಪಟ್ಟಾಗ ಇಸ್ರೇಲ್‌ ಮತ್ತು ಅಲ್ ಜಝೀರಾ ನಡುವಿನ ಸಂಬಂಧ ಕುಸಿದಿತ್ತು.

ಪ್ಯಾಲೆಸ್ತೀನ್‌-ಅಮೇರಿಕನ್ ಪತ್ರಕರ್ತೆ ಶಿರೀನ್ ಅಬು ಅಕ್ಲೆಹ್ ಇಸ್ರೇಲ್‌ ಬಗ್ಗೆ ವಿಮರ್ಶಾತ್ಮಕ ವರದಿಗಾಗಿ ಅರಬ್ ಪ್ರಪಂಚದಾದ್ಯಂತ ಚಿರಪರಿಚಿತರಾಗಿದ್ದರು ಮತ್ತು ಇಸ್ರೇಲ್ ಉದ್ದೇಶಪೂರ್ವಕವಾಗಿ ಅವಳನ್ನು ಕೊಂದಿದೆ ಎಂದು ಚಾನಲ್ ಆರೋಪಿಸಿತ್ತು. ಇಸ್ರೇಲ್‌ ಈ ಆರೋಪವನ್ನು ತಳ್ಳಿ ಹಾಕಿತ್ತು. ಇದು ಆಕಸ್ಮಿಕ ಘಟನೆ ಎಂದು ಹೇಳಿತ್ತು.

ಅಕ್ಟೋಬರ್ 7, 2023ರಂದು ಹಮಾಸ್ ವಿರುದ್ಧ ಇಸ್ರೇಲ್‌ನ ಯುದ್ಧ ಘೋಷಿಸಿದ ಬಳಿಕ ಅಲ್‌ ಜಝೀರಾ ಮಾಧ್ಯಮ ಮತ್ತು ಇಸ್ರೇಲ್ ನಡುವಿನ ಸಂಬಂಧ ಮತ್ತಷ್ಟು ಹದೆಗೆಡಲು ಪ್ರಾರಂಭಿಸಿತು. ಇಸ್ರೇಲ್ ಗಾಝಾ ನೆಲದಲ್ಲಿ ನಡೆಸುತ್ತಿದ್ದ ಹತ್ಯಾಕಾಂಡವನ್ನು ಯಾವುದೇ ಭೀತಿಯಿಲ್ಲದೆ ಚಿತ್ರೀಕರಿಸಿ ಜಗತ್ತಿಗೆ ಅಲ್‌ ಜಝೀರಾ ಪ್ರಸಾರ ಮಾಡಿದೆ. ಗಾಝಾ ಯುದ್ಧ ಭೀಕರತೆಯ ಬಗ್ಗೆ ಬೇರೆ ಯಾವುದೇ ಮಾಧ್ಯಮಗಳಿಗಿಂತ ಹೆಚ್ಚಾಗಿ ನೆಲದ ವಾಸ್ತವತೆಯನ್ನು ಅಲ್‌ಜಝೀರಾ ವರದಿ ಮಾಡಿತ್ತು ಎನ್ನುವುದು ಗಮನಾರ್ಹ. ಕಳೆದ ಡಿಸೆಂಬರ್‌ನಲ್ಲಿ ದಕ್ಷಿಣ ಗಾಝಾದಲ್ಲಿ ವರದಿ ಮಾಡುತ್ತಿದ್ದ ಅಲ್ ಜಝೀರಾ ಕ್ಯಾಮೆರಾಮನ್‌ ಹತ್ಯೆ ನಡೆದಿದೆ. ಅದೇ  ದಾಳಿಯಲ್ಲಿ ಗಾಝಾದಲ್ಲಿ ಚಾನೆಲ್‌ನ ಬ್ಯೂರೋ ಮುಖ್ಯಸ್ಥ ವೇಲ್ ದಹದೌಹ್ ಗಾಯಗೊಂಡಿದ್ದರು.

ಜನವರಿಯಲ್ಲಿ ದಹದೌಹ್‌ ಅವರ ಪುತ್ರನನ್ನು ಕೊಂದಿದ್ದಕ್ಕಾಗಿ ನೆಟ್ವರ್ಕ್ ಇಸ್ರೇಲ್‌ನ್ನು ದೂಷಿಸಿದೆ. ಹಮ್ಜಾ ದಹದೌಹ್ ಅಲ್ ಜಝೀರಾದಲ್ಲಿ ಕೆಲಸ ಮಾಡುತ್ತಿದ್ದಾಗ ಇಸ್ರೇಲ್‌ ದಾಳಿಗೆ ಬಲಿಯಾಗಿದ್ದರು. ಕಳೆದ ಅಕ್ಟೋಬರ್‌ನಲ್ಲಿ ನಡೆದ ಮತ್ತೊಂದು ದಾಳಿಯಲ್ಲಿ ವೇಲ್ ದಹದೌಹ್ ಅವರ ಪತ್ನಿ, ಮಗಳು ಮತ್ತು ಇನ್ನೊಬ್ಬ ಮಗ ಮತ್ತು ಮೊಮ್ಮಗ ಕೊಲ್ಲಲ್ಪಟ್ಟಿದ್ದರು.

ಯುದ್ಧದ ವೇಳೆ ಗಾಝಾದಲ್ಲಿ ಉಳಿದುಕೊಂಡಿರುವ ಕೆಲವೇ ಕೆಲವು ಅಂತರಾಷ್ಟ್ರೀಯ ಮಾಧ್ಯಮಗಳಲ್ಲಿ ಅಲ್ ಜಝೀರಾ ಒಂದಾಗಿದೆ, ವೈಮಾನಿಕ ದಾಳಿ ಮತ್ತು ಕಿಕ್ಕಿರಿದ ಆಸ್ಪತ್ರೆಗಳ ರಕ್ತಸಿಕ್ತ ದೃಶ್ಯಗಳನ್ನು ಪ್ರಸಾರ ಮಾಡಿದ್ದ ಅಲ್‌ ಜಝೀರಾ ಇಸ್ರೇಲ್ ವಿರುದ್ಧ ಹತ್ಯಾಕಾಂಡದ ಆರೋಪವನ್ನು ಮಾಡಿತ್ತು. ಇಸ್ರೇಲ್, ಅಲ್ ಜಝೀರಾ ಹಮಾಸ್ ಜೊತೆ ಸಹಕರಿಸುತ್ತಿದೆ ಎಂದು ಆರೋಪಿಸಿತ್ತು.

ಇದನ್ನು ಓದಿ: ಅರುಣ್ ಪುರಿ, ರಾಜ್ ದೀಪ್ ಸರ್ದೇಸಾಯಿ, ಶಿವ್ ಅರೂರ್ ವಿರುದ್ಧದ ಮಾನಹಾನಿ ಪ್ರಕರಣಕ್ಕೆ ಸುಪ್ರೀಂಕೋರ್ಟ್‌ ತಡೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...