Homeಅಂತರಾಷ್ಟ್ರೀಯಗಾಝಾ ನೆಲದ ವಾಸ್ತವತೆ ಜಗತ್ತಿನ ಮುಂದೆ ಬಿಚ್ಚಿಟ್ಟಿದ್ದ 'ಅಲ್‌ ಜಝೀರಾ'ಗೆ ನಿರ್ಬಂಧ ವಿಧಿಸಿದ ಇಸ್ರೇಲ್‌

ಗಾಝಾ ನೆಲದ ವಾಸ್ತವತೆ ಜಗತ್ತಿನ ಮುಂದೆ ಬಿಚ್ಚಿಟ್ಟಿದ್ದ ‘ಅಲ್‌ ಜಝೀರಾ’ಗೆ ನಿರ್ಬಂಧ ವಿಧಿಸಿದ ಇಸ್ರೇಲ್‌

- Advertisement -
- Advertisement -

ಇಸ್ರೇಲ್‌ ಗಾಝಾದಲ್ಲಿ ನಡೆಸಿದ್ದ ಹತ್ಯಾಕಾಂಡವನ್ನು ಇಡೀ ಜಗತ್ತಿಗೆ ತಿಳಿಸಿ ಕಣ್ಣು ತೆರೆಯುವಂತೆ ಮಾಡಿದ್ದ ಅಲ್‌ ಜಝೀರಾ ಮಾಧ್ಯಮವನ್ನು ಇಸ್ರೇಲ್‌ ಪ್ರಧಾನಿ ಬೆಂಜಮನ್ ನೆತನ್ಯಾಹು “ಭಯೋತ್ಪಾದನಾ ಚಾನಲ್” ಎಂದು ಕರೆದು ದೇಶದಲ್ಲಿ ನಿರ್ಬಂಧಿಸಿದ್ದಾರೆ ಮತ್ತು ಪ್ರಧಾನಿ ಬೆಂಜಮನ್ ನೆತನ್ಯಾಹು ನೇತೃತ್ವದಲ್ಲಿ ಅದಕ್ಕೆ ಬೇಕಾಗಿರುವ ಕಾನೂನನ್ನು ಸಂಸತ್ತಿನಲ್ಲಿ ಅಂಗೀಕರಿಸಲಾಗಿದೆ.

ನೆತನ್ಯಾಹು ಅವರ ಈ ನಿರ್ಧಾರವು ಅಲ್ ಜಝೀರಾ ವಿರುದ್ಧ ಇಸ್ರೇಲ್‌ನ ದೀರ್ಘಕಾಲದ ದ್ವೇಷವನ್ನು ಬಹಿರಂಗಪಡಿಸುತ್ತದೆ, ಚಾನಲ್‌ನ ಮಾಲಕತ್ವ ಹೊಂದಿರುವ ಕತಾರ್‌ನೊಂದಿಗೆ ಇಸ್ರೇಲ್‌ನ ಉದ್ವಿಗ್ನತೆಯ ಭೀತಿಯನ್ನು ಹೆಚ್ಚಿಸಿದೆ.

ಕತಾರ್ ಈ ಬಗ್ಗೆ ತಕ್ಷಣಕ್ಕೆ ಯಾವುದೇ ಪ್ರತಿಕ್ರಿಯೆಯನ್ನು ನೀಡಿಲ್ಲ. ಇಸ್ರೇಲ್ ಅಲ್ ಜಝೀರಾದ ಸಂಬಂಧ ಮೊದಲಿನಿಂದಲೂ ಹಳಸಿತ್ತು. ಇಸ್ರೇಲ್‌ ಅಲ್ ಜಝೀರಾ ವಿರುದ್ಧ ಪಕ್ಷಪಾತದ ಆರೋಪವನ್ನು ಮಾಡಿತ್ತು.

ವೆಸ್ಟ್‌ಬ್ಯಾಂಕ್‌ನಲ್ಲಿ ಇಸ್ರೇಲ್‌ ಮಿಲಿಟರಿ ದಾಳಿಯ ಸಮಯದಲ್ಲಿ ಅಲ್ ಜಝೀರಾ ವರದಿಗಾರ ಶಿರೀನ್ ಅಬು ಅಕ್ಲೆಹ್ ಕೊಲ್ಲಲ್ಪಟ್ಟಾಗ ಇಸ್ರೇಲ್‌ ಮತ್ತು ಅಲ್ ಜಝೀರಾ ನಡುವಿನ ಸಂಬಂಧ ಕುಸಿದಿತ್ತು.

ಪ್ಯಾಲೆಸ್ತೀನ್‌-ಅಮೇರಿಕನ್ ಪತ್ರಕರ್ತೆ ಶಿರೀನ್ ಅಬು ಅಕ್ಲೆಹ್ ಇಸ್ರೇಲ್‌ ಬಗ್ಗೆ ವಿಮರ್ಶಾತ್ಮಕ ವರದಿಗಾಗಿ ಅರಬ್ ಪ್ರಪಂಚದಾದ್ಯಂತ ಚಿರಪರಿಚಿತರಾಗಿದ್ದರು ಮತ್ತು ಇಸ್ರೇಲ್ ಉದ್ದೇಶಪೂರ್ವಕವಾಗಿ ಅವಳನ್ನು ಕೊಂದಿದೆ ಎಂದು ಚಾನಲ್ ಆರೋಪಿಸಿತ್ತು. ಇಸ್ರೇಲ್‌ ಈ ಆರೋಪವನ್ನು ತಳ್ಳಿ ಹಾಕಿತ್ತು. ಇದು ಆಕಸ್ಮಿಕ ಘಟನೆ ಎಂದು ಹೇಳಿತ್ತು.

ಅಕ್ಟೋಬರ್ 7, 2023ರಂದು ಹಮಾಸ್ ವಿರುದ್ಧ ಇಸ್ರೇಲ್‌ನ ಯುದ್ಧ ಘೋಷಿಸಿದ ಬಳಿಕ ಅಲ್‌ ಜಝೀರಾ ಮಾಧ್ಯಮ ಮತ್ತು ಇಸ್ರೇಲ್ ನಡುವಿನ ಸಂಬಂಧ ಮತ್ತಷ್ಟು ಹದೆಗೆಡಲು ಪ್ರಾರಂಭಿಸಿತು. ಇಸ್ರೇಲ್ ಗಾಝಾ ನೆಲದಲ್ಲಿ ನಡೆಸುತ್ತಿದ್ದ ಹತ್ಯಾಕಾಂಡವನ್ನು ಯಾವುದೇ ಭೀತಿಯಿಲ್ಲದೆ ಚಿತ್ರೀಕರಿಸಿ ಜಗತ್ತಿಗೆ ಅಲ್‌ ಜಝೀರಾ ಪ್ರಸಾರ ಮಾಡಿದೆ. ಗಾಝಾ ಯುದ್ಧ ಭೀಕರತೆಯ ಬಗ್ಗೆ ಬೇರೆ ಯಾವುದೇ ಮಾಧ್ಯಮಗಳಿಗಿಂತ ಹೆಚ್ಚಾಗಿ ನೆಲದ ವಾಸ್ತವತೆಯನ್ನು ಅಲ್‌ಜಝೀರಾ ವರದಿ ಮಾಡಿತ್ತು ಎನ್ನುವುದು ಗಮನಾರ್ಹ. ಕಳೆದ ಡಿಸೆಂಬರ್‌ನಲ್ಲಿ ದಕ್ಷಿಣ ಗಾಝಾದಲ್ಲಿ ವರದಿ ಮಾಡುತ್ತಿದ್ದ ಅಲ್ ಜಝೀರಾ ಕ್ಯಾಮೆರಾಮನ್‌ ಹತ್ಯೆ ನಡೆದಿದೆ. ಅದೇ  ದಾಳಿಯಲ್ಲಿ ಗಾಝಾದಲ್ಲಿ ಚಾನೆಲ್‌ನ ಬ್ಯೂರೋ ಮುಖ್ಯಸ್ಥ ವೇಲ್ ದಹದೌಹ್ ಗಾಯಗೊಂಡಿದ್ದರು.

ಜನವರಿಯಲ್ಲಿ ದಹದೌಹ್‌ ಅವರ ಪುತ್ರನನ್ನು ಕೊಂದಿದ್ದಕ್ಕಾಗಿ ನೆಟ್ವರ್ಕ್ ಇಸ್ರೇಲ್‌ನ್ನು ದೂಷಿಸಿದೆ. ಹಮ್ಜಾ ದಹದೌಹ್ ಅಲ್ ಜಝೀರಾದಲ್ಲಿ ಕೆಲಸ ಮಾಡುತ್ತಿದ್ದಾಗ ಇಸ್ರೇಲ್‌ ದಾಳಿಗೆ ಬಲಿಯಾಗಿದ್ದರು. ಕಳೆದ ಅಕ್ಟೋಬರ್‌ನಲ್ಲಿ ನಡೆದ ಮತ್ತೊಂದು ದಾಳಿಯಲ್ಲಿ ವೇಲ್ ದಹದೌಹ್ ಅವರ ಪತ್ನಿ, ಮಗಳು ಮತ್ತು ಇನ್ನೊಬ್ಬ ಮಗ ಮತ್ತು ಮೊಮ್ಮಗ ಕೊಲ್ಲಲ್ಪಟ್ಟಿದ್ದರು.

ಯುದ್ಧದ ವೇಳೆ ಗಾಝಾದಲ್ಲಿ ಉಳಿದುಕೊಂಡಿರುವ ಕೆಲವೇ ಕೆಲವು ಅಂತರಾಷ್ಟ್ರೀಯ ಮಾಧ್ಯಮಗಳಲ್ಲಿ ಅಲ್ ಜಝೀರಾ ಒಂದಾಗಿದೆ, ವೈಮಾನಿಕ ದಾಳಿ ಮತ್ತು ಕಿಕ್ಕಿರಿದ ಆಸ್ಪತ್ರೆಗಳ ರಕ್ತಸಿಕ್ತ ದೃಶ್ಯಗಳನ್ನು ಪ್ರಸಾರ ಮಾಡಿದ್ದ ಅಲ್‌ ಜಝೀರಾ ಇಸ್ರೇಲ್ ವಿರುದ್ಧ ಹತ್ಯಾಕಾಂಡದ ಆರೋಪವನ್ನು ಮಾಡಿತ್ತು. ಇಸ್ರೇಲ್, ಅಲ್ ಜಝೀರಾ ಹಮಾಸ್ ಜೊತೆ ಸಹಕರಿಸುತ್ತಿದೆ ಎಂದು ಆರೋಪಿಸಿತ್ತು.

ಇದನ್ನು ಓದಿ: ಅರುಣ್ ಪುರಿ, ರಾಜ್ ದೀಪ್ ಸರ್ದೇಸಾಯಿ, ಶಿವ್ ಅರೂರ್ ವಿರುದ್ಧದ ಮಾನಹಾನಿ ಪ್ರಕರಣಕ್ಕೆ ಸುಪ್ರೀಂಕೋರ್ಟ್‌ ತಡೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...