Homeಅಂತರಾಷ್ಟ್ರೀಯಗಾಝಾ ನೆಲದ ವಾಸ್ತವತೆ ಜಗತ್ತಿನ ಮುಂದೆ ಬಿಚ್ಚಿಟ್ಟಿದ್ದ 'ಅಲ್‌ ಜಝೀರಾ'ಗೆ ನಿರ್ಬಂಧ ವಿಧಿಸಿದ ಇಸ್ರೇಲ್‌

ಗಾಝಾ ನೆಲದ ವಾಸ್ತವತೆ ಜಗತ್ತಿನ ಮುಂದೆ ಬಿಚ್ಚಿಟ್ಟಿದ್ದ ‘ಅಲ್‌ ಜಝೀರಾ’ಗೆ ನಿರ್ಬಂಧ ವಿಧಿಸಿದ ಇಸ್ರೇಲ್‌

- Advertisement -
- Advertisement -

ಇಸ್ರೇಲ್‌ ಗಾಝಾದಲ್ಲಿ ನಡೆಸಿದ್ದ ಹತ್ಯಾಕಾಂಡವನ್ನು ಇಡೀ ಜಗತ್ತಿಗೆ ತಿಳಿಸಿ ಕಣ್ಣು ತೆರೆಯುವಂತೆ ಮಾಡಿದ್ದ ಅಲ್‌ ಜಝೀರಾ ಮಾಧ್ಯಮವನ್ನು ಇಸ್ರೇಲ್‌ ಪ್ರಧಾನಿ ಬೆಂಜಮನ್ ನೆತನ್ಯಾಹು “ಭಯೋತ್ಪಾದನಾ ಚಾನಲ್” ಎಂದು ಕರೆದು ದೇಶದಲ್ಲಿ ನಿರ್ಬಂಧಿಸಿದ್ದಾರೆ ಮತ್ತು ಪ್ರಧಾನಿ ಬೆಂಜಮನ್ ನೆತನ್ಯಾಹು ನೇತೃತ್ವದಲ್ಲಿ ಅದಕ್ಕೆ ಬೇಕಾಗಿರುವ ಕಾನೂನನ್ನು ಸಂಸತ್ತಿನಲ್ಲಿ ಅಂಗೀಕರಿಸಲಾಗಿದೆ.

ನೆತನ್ಯಾಹು ಅವರ ಈ ನಿರ್ಧಾರವು ಅಲ್ ಜಝೀರಾ ವಿರುದ್ಧ ಇಸ್ರೇಲ್‌ನ ದೀರ್ಘಕಾಲದ ದ್ವೇಷವನ್ನು ಬಹಿರಂಗಪಡಿಸುತ್ತದೆ, ಚಾನಲ್‌ನ ಮಾಲಕತ್ವ ಹೊಂದಿರುವ ಕತಾರ್‌ನೊಂದಿಗೆ ಇಸ್ರೇಲ್‌ನ ಉದ್ವಿಗ್ನತೆಯ ಭೀತಿಯನ್ನು ಹೆಚ್ಚಿಸಿದೆ.

ಕತಾರ್ ಈ ಬಗ್ಗೆ ತಕ್ಷಣಕ್ಕೆ ಯಾವುದೇ ಪ್ರತಿಕ್ರಿಯೆಯನ್ನು ನೀಡಿಲ್ಲ. ಇಸ್ರೇಲ್ ಅಲ್ ಜಝೀರಾದ ಸಂಬಂಧ ಮೊದಲಿನಿಂದಲೂ ಹಳಸಿತ್ತು. ಇಸ್ರೇಲ್‌ ಅಲ್ ಜಝೀರಾ ವಿರುದ್ಧ ಪಕ್ಷಪಾತದ ಆರೋಪವನ್ನು ಮಾಡಿತ್ತು.

ವೆಸ್ಟ್‌ಬ್ಯಾಂಕ್‌ನಲ್ಲಿ ಇಸ್ರೇಲ್‌ ಮಿಲಿಟರಿ ದಾಳಿಯ ಸಮಯದಲ್ಲಿ ಅಲ್ ಜಝೀರಾ ವರದಿಗಾರ ಶಿರೀನ್ ಅಬು ಅಕ್ಲೆಹ್ ಕೊಲ್ಲಲ್ಪಟ್ಟಾಗ ಇಸ್ರೇಲ್‌ ಮತ್ತು ಅಲ್ ಜಝೀರಾ ನಡುವಿನ ಸಂಬಂಧ ಕುಸಿದಿತ್ತು.

ಪ್ಯಾಲೆಸ್ತೀನ್‌-ಅಮೇರಿಕನ್ ಪತ್ರಕರ್ತೆ ಶಿರೀನ್ ಅಬು ಅಕ್ಲೆಹ್ ಇಸ್ರೇಲ್‌ ಬಗ್ಗೆ ವಿಮರ್ಶಾತ್ಮಕ ವರದಿಗಾಗಿ ಅರಬ್ ಪ್ರಪಂಚದಾದ್ಯಂತ ಚಿರಪರಿಚಿತರಾಗಿದ್ದರು ಮತ್ತು ಇಸ್ರೇಲ್ ಉದ್ದೇಶಪೂರ್ವಕವಾಗಿ ಅವಳನ್ನು ಕೊಂದಿದೆ ಎಂದು ಚಾನಲ್ ಆರೋಪಿಸಿತ್ತು. ಇಸ್ರೇಲ್‌ ಈ ಆರೋಪವನ್ನು ತಳ್ಳಿ ಹಾಕಿತ್ತು. ಇದು ಆಕಸ್ಮಿಕ ಘಟನೆ ಎಂದು ಹೇಳಿತ್ತು.

ಅಕ್ಟೋಬರ್ 7, 2023ರಂದು ಹಮಾಸ್ ವಿರುದ್ಧ ಇಸ್ರೇಲ್‌ನ ಯುದ್ಧ ಘೋಷಿಸಿದ ಬಳಿಕ ಅಲ್‌ ಜಝೀರಾ ಮಾಧ್ಯಮ ಮತ್ತು ಇಸ್ರೇಲ್ ನಡುವಿನ ಸಂಬಂಧ ಮತ್ತಷ್ಟು ಹದೆಗೆಡಲು ಪ್ರಾರಂಭಿಸಿತು. ಇಸ್ರೇಲ್ ಗಾಝಾ ನೆಲದಲ್ಲಿ ನಡೆಸುತ್ತಿದ್ದ ಹತ್ಯಾಕಾಂಡವನ್ನು ಯಾವುದೇ ಭೀತಿಯಿಲ್ಲದೆ ಚಿತ್ರೀಕರಿಸಿ ಜಗತ್ತಿಗೆ ಅಲ್‌ ಜಝೀರಾ ಪ್ರಸಾರ ಮಾಡಿದೆ. ಗಾಝಾ ಯುದ್ಧ ಭೀಕರತೆಯ ಬಗ್ಗೆ ಬೇರೆ ಯಾವುದೇ ಮಾಧ್ಯಮಗಳಿಗಿಂತ ಹೆಚ್ಚಾಗಿ ನೆಲದ ವಾಸ್ತವತೆಯನ್ನು ಅಲ್‌ಜಝೀರಾ ವರದಿ ಮಾಡಿತ್ತು ಎನ್ನುವುದು ಗಮನಾರ್ಹ. ಕಳೆದ ಡಿಸೆಂಬರ್‌ನಲ್ಲಿ ದಕ್ಷಿಣ ಗಾಝಾದಲ್ಲಿ ವರದಿ ಮಾಡುತ್ತಿದ್ದ ಅಲ್ ಜಝೀರಾ ಕ್ಯಾಮೆರಾಮನ್‌ ಹತ್ಯೆ ನಡೆದಿದೆ. ಅದೇ  ದಾಳಿಯಲ್ಲಿ ಗಾಝಾದಲ್ಲಿ ಚಾನೆಲ್‌ನ ಬ್ಯೂರೋ ಮುಖ್ಯಸ್ಥ ವೇಲ್ ದಹದೌಹ್ ಗಾಯಗೊಂಡಿದ್ದರು.

ಜನವರಿಯಲ್ಲಿ ದಹದೌಹ್‌ ಅವರ ಪುತ್ರನನ್ನು ಕೊಂದಿದ್ದಕ್ಕಾಗಿ ನೆಟ್ವರ್ಕ್ ಇಸ್ರೇಲ್‌ನ್ನು ದೂಷಿಸಿದೆ. ಹಮ್ಜಾ ದಹದೌಹ್ ಅಲ್ ಜಝೀರಾದಲ್ಲಿ ಕೆಲಸ ಮಾಡುತ್ತಿದ್ದಾಗ ಇಸ್ರೇಲ್‌ ದಾಳಿಗೆ ಬಲಿಯಾಗಿದ್ದರು. ಕಳೆದ ಅಕ್ಟೋಬರ್‌ನಲ್ಲಿ ನಡೆದ ಮತ್ತೊಂದು ದಾಳಿಯಲ್ಲಿ ವೇಲ್ ದಹದೌಹ್ ಅವರ ಪತ್ನಿ, ಮಗಳು ಮತ್ತು ಇನ್ನೊಬ್ಬ ಮಗ ಮತ್ತು ಮೊಮ್ಮಗ ಕೊಲ್ಲಲ್ಪಟ್ಟಿದ್ದರು.

ಯುದ್ಧದ ವೇಳೆ ಗಾಝಾದಲ್ಲಿ ಉಳಿದುಕೊಂಡಿರುವ ಕೆಲವೇ ಕೆಲವು ಅಂತರಾಷ್ಟ್ರೀಯ ಮಾಧ್ಯಮಗಳಲ್ಲಿ ಅಲ್ ಜಝೀರಾ ಒಂದಾಗಿದೆ, ವೈಮಾನಿಕ ದಾಳಿ ಮತ್ತು ಕಿಕ್ಕಿರಿದ ಆಸ್ಪತ್ರೆಗಳ ರಕ್ತಸಿಕ್ತ ದೃಶ್ಯಗಳನ್ನು ಪ್ರಸಾರ ಮಾಡಿದ್ದ ಅಲ್‌ ಜಝೀರಾ ಇಸ್ರೇಲ್ ವಿರುದ್ಧ ಹತ್ಯಾಕಾಂಡದ ಆರೋಪವನ್ನು ಮಾಡಿತ್ತು. ಇಸ್ರೇಲ್, ಅಲ್ ಜಝೀರಾ ಹಮಾಸ್ ಜೊತೆ ಸಹಕರಿಸುತ್ತಿದೆ ಎಂದು ಆರೋಪಿಸಿತ್ತು.

ಇದನ್ನು ಓದಿ: ಅರುಣ್ ಪುರಿ, ರಾಜ್ ದೀಪ್ ಸರ್ದೇಸಾಯಿ, ಶಿವ್ ಅರೂರ್ ವಿರುದ್ಧದ ಮಾನಹಾನಿ ಪ್ರಕರಣಕ್ಕೆ ಸುಪ್ರೀಂಕೋರ್ಟ್‌ ತಡೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳದ ಸೋಲಿನ ಬಳಿಕ ‘ಇಂಡಿಯಾದ ಆಸರೆ’ ಬಯಸಿದ ಮಮತಾ

2026ರ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಸೋಲಿನ ನಂತರ ಮಮತಾ ಬ್ಯಾನರ್ಜಿ ಅವರು ಇದ್ದಕ್ಕಿದ್ದಂತೆ ‘ಇಂಡಿಯಾ’ (INDIA) ಒಕ್ಕೂಟ ಮತ್ತು ರಾಷ್ಟ್ರೀಯ ಮಟ್ಟದ ವಿರೋಧ ಪಕ್ಷಗಳ ಒಗ್ಗಟ್ಟಿಗೆ ಇಷ್ಟೊಂದು ಪ್ರಾಮುಖ್ಯತೆ ನೀಡುತ್ತಿರುವುದು ಏಕೆ? ದೀರ್ಘಕಾಲದವರೆಗೆ...

ಪಶ್ಚಿಮ ಬಂಗಾಳ| ಮತದಾರರ ಪಟ್ಟಿಯಿಂದ ಡಿಲೀಟ್‌ ಆದವರಿಗೆ ಪಡಿತರ ಪ್ರಯೋಜನಗಳಿಲ್ಲ

ಚುನಾವಣಾ ಆಯೋಗದ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಯಿಂದಾಗಿ ಪಶ್ಚಿಮ ಬಂಗಾಳದ ಚುನಾವಣಾ ಪ್ರಕ್ರಿಯೆಯಿಂದ ಹೊರಗುಳಿದವರಿಗೆ ಈಗ ಎರಡು ಹೊಡೆತ ಎದುರಾಗಿದೆ. ರಾಜ್ಯ ಸರ್ಕಾರವು ಈಗ ಅವರ ಪಡಿತರ ಚೀಟಿಗಳನ್ನು ಸಹ ನಿಷ್ಕ್ರಿಯಗೊಳಿಸಲು...

ಇಂಡಿಯಾ ಮೈತ್ರಿಕೂಟದ ಸಭೆ: ಎಸ್‌ಐಆರ್, ಬೆಲೆ ಏರಿಕೆ, ನಿರುದ್ಯೋಗದ ಕುರಿತು ಖರ್ಗೆ ಕಳವಳ; ಒಗ್ಗಟ್ಟಿನ ಹೋರಾಟಕ್ಕೆ ಕರೆ

ರಾಜಕೀಯ, ಆರ್ಥಿಕ, ಸಾಮಾಜಿಕ ಮತ್ತು ವಿದೇಶಾಂಗ ನೀತಿ ರಂಗಗಳಲ್ಲಿ ಮೋದಿ ಸರ್ಕಾರದ ವೈಫಲ್ಯಗಳನ್ನು ಎದುರಿಸಲು ತನ್ನ ಒಗ್ಗಟ್ಟನ್ನು ಬಲಪಡಿಸಿಕೊಳ್ಳುವಂತೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸೋಮವಾರ (ಜೂ.8) ಇಂಡಿಯಾ ಮೈತ್ರಿಕೂಟಕ್ಕೆ ಕರೆ...

ಟೆಹ್ರಾನ್ ಮೇಲಿನ ದಾಳಿಗೆ ಪ್ರತೀಕಾರ: ಇಸ್ರೇಲ್ ಮೇಲೆ ಕ್ಷಿಪಣಿ ಹಾರಿಸಿದ ಇರಾನ್

ಟೆಹ್ರಾನ್, ತಬ್ರಿಜ್ ಮತ್ತು ಇಸ್ಫಹಾನ್‌ ಮೇಲಿನ ದಾಲಿಗಳಿಗೆ ಪ್ರತೀಕಾರವಾಗಿ, ಇರಾನ್ ಸೇನೆಯು ಇಸ್ರೇಲ್‌ ಮೇಲೆ ಎರಡನೇ ತರಂಗದ ಕ್ಷಿಪಣಿಗಳನ್ನು ಹಾರಿಸಿದೆ. ದೇಶಾದ್ಯಂತ ಸೈರನ್‌ಗಳು ಮೊಳಗುತ್ತಿವೆ ಎಂದು ಇಸ್ರೇಲ್ ಮಿಲಿಟರಿ ಹೇಳಿದೆ ಎಂದು ಅಂತರಾಷ್ಟ್ರೀಯ...

ಭಾರತದಲ್ಲಿ ಬೆಂಕಿ ದುರಂತ ‘ದಿನವೊಂದಕ್ಕೆ ಬಲಿಯಾಗುತ್ತಿವೆ 16 ಜೀವಗಳು’ NCRB ವರದಿ

ಇತ್ತೀಚೆಗೆ ದೆಹಲಿಯ ಮಾಳವೀಯ ನಗರದ ಹೋಟೆಲ್‌ ಒಂದರಲ್ಲಿ ನಡೆದ ಭೀಕರ ಬೆಂಕಿ ದುರಂತ (ಇದರಲ್ಲಿ 22 ಜನರು ಸಜೀವ ದಹನವಾಗಿದ್ದರು) ಇಡೀ ದೇಶವನ್ನೇ ನಡುಗಿಸಿದೆ. ಈ ದುರಂತದ ಬೆನ್ನಲ್ಲೇ ಕರ್ನಾಟಕದಲ್ಲೂ ವಾಣಿಜ್ಯ ಮತ್ತು...

ಈದ್ ಹಬ್ಬದ ವೇಳೆ ಮುಸ್ಲೀಮರನ್ನು ಗುರಿಯಾಗಿಸಿ 46 ದ್ವೇಷ ಅಪರಾಧಗಳು, ಮೂವರ ಹತ್ಯೆ: APCR ಆತಂಕಕಾರಿ ವರದಿ

ಇತ್ತೀಚಿನ ಬಕ್ರೀದ್ (ಈದ್ ಉಲ್-ಅಧಾ) ಹಬ್ಬದ ಆಚರಣೆಯ ಸಂದರ್ಭದಲ್ಲಿ ದೇಶದ ವಿವಿಧೆಡೆ ಅಲ್ಪಸಂಖ್ಯಾತರನ್ನು ಗುರಿಯಾಗಿಸಿಕೊಂಡು ನಡೆದ ಕೋಮು ಕಿರುಕುಳ, ದ್ವೇಷ ಭಾಷಣ ಹಾಗೂ ಹಿಂಸಾಚಾರದ ಘಟನೆಗಳ ಕುರಿತು 'ನಾಗರಿಕ ಹಕ್ಕುಗಳ ರಕ್ಷಣಾ ಸಂಘ'...

ಗ್ರೇಟ್ ನಿಕೋಬಾರ್ : ಕಾರ್ಪೊರೇಟ್ ಹಿತಾಸಕ್ತಿಗೆ ಬಲಿಯಾಗುತ್ತಿರುವ ಪರಿಸರ, ಆದಿವಾಸಿಗಳ ಅಸ್ತಿತ್ವ

ಬಂಗಾಳಕೊಲ್ಲಿಯಲ್ಲಿರುವ ಭಾರತದ ದಕ್ಷಿಣ ತುದಿಯ ದ್ವೀಪದ ಸಮಗ್ರ ಅಭಿವೃದ್ಧಿಯ ಹೆಸರಿನಲ್ಲಿ ಕೇಂದ್ರ ಸರ್ಕಾರ ಬರೋಬ್ಬರಿ 72 ಸಾವಿರದಿಂದ 81 ಸಾವಿರ ಕೋಟಿ ರೂಪಾಯಿ ವೆಚ್ಚದ ’ಗ್ರೇಟ್ ನಿಕೋಬಾರ್ ದ್ವೀಪ ಅಭಿವೃದ್ಧಿ ಯೋಜನೆ’ಯನ್ನು ರೂಪಿಸಿದೆ.ಈ...

ಅಸ್ಸಾಂನ ನಾಲ್ವರು ಮುಸ್ಲಿಂ ಮಹಿಳೆಯರ ಗಡೀಪಾರು ಪ್ರಕ್ರಿಯೆಗೆ ಸುಪ್ರೀಂ ತಡೆ: ಕೇಂದ್ರ, ರಾಜ್ಯ ಸರ್ಕಾರಗಳಿಗೆ ನೋಟಿಸ್‌

ಅಸ್ಸಾಂನಲ್ಲಿ 'ವಿದೇಶಿಯರು' ಎಂದು ಘೋಷಿತರಾಗಿ ಗಡೀಪಾರು ಭೀತಿ ಎದುರಿಸುತ್ತಿದ್ದ ನಾಲ್ವರು ಮುಸ್ಲಿಂ ಮಹಿಳೆಯರ ವಿಚಾರದಲ್ಲಿ ಭಾರತದ ಸುಪ್ರೀಂ ಕೋರ್ಟ್ ಮಹತ್ವದ ಮಧ್ಯಪ್ರವೇಶ ಮಾಡಿದೆ. ಈ ಮಹಿಳೆಯರನ್ನು ದೇಶದಿಂದ ಹೊರಹಾಕುವ (ಗಡೀಪಾರು ಮಾಡುವ) ಪ್ರಕ್ರಿಯೆಗೆ...

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...