Homeಕರ್ನಾಟಕಹುಡುಗಿಯರೆ ಸೇರಿ ನಡೆಸುವ ‘ಮುಹಮ್ಮದ್‌ ಅಂಕಲ್‌’ ನೇತೃತ್ವದ ಬೆಂಕಿಕೆರೆ ಗಣೇಶೋತ್ಸವ!

ಹುಡುಗಿಯರೆ ಸೇರಿ ನಡೆಸುವ ‘ಮುಹಮ್ಮದ್‌ ಅಂಕಲ್‌’ ನೇತೃತ್ವದ ಬೆಂಕಿಕೆರೆ ಗಣೇಶೋತ್ಸವ!

- Advertisement -
- Advertisement -

ದಾವಣಗೆರೆ ಜಿಲ್ಲೆ, ಚನ್ನಗಿರಿ ತಾಲ್ಲೂಕಿನ ಬೆಂಕಿಕೆರೆ ಗ್ರಾಮದ ಈ ಬಾರಿಯ ಗೌರಿ ಗಣೇಶ ಹಬ್ಬ ಹಲವು ವಿಶೇಷತೆಗೆ ಕಾರಣವಾಗಿದೆ. ಮಹಿಳೆಯರು ಪೂಜೆ ಮಾಡಬಾರದು, ಗರ್ಭಗುಡಿ ಪ್ರವೇಶ ಮಾಡಬಾರದು ಎಂಬ ಹಲವು ವಾದಗಳಿವೆ. ಮಹಿಳೆಯರ ಮುಟ್ಟನ್ನು ತಪ್ಪಾಗಿ ಅರ್ಥ ಮಾಡಿಕೊಂಡಿರುವ ಭಾರತದಂತಹ ದೇಶದಲ್ಲಿ ಮಹಿಳೆಯರು ದೇವಾಲಯದ ಪ್ರವೇಶ ಮಾಡುವುದನ್ನು ನಿಷೇಧಿಸಿರುವ, ಕೆಲ ಪ್ರಕರಣಗಳು ಸುಪ್ರೀಮ್ ಕೋರ್ಟ್ ಮೆಟ್ಟಿಲೂ ಏರಿರುವ ಸನ್ನಿವೇಶಕ್ಕೆ ನಾವೆಲ್ಲಾ ಸಾಕ್ಷಿಯಾಗಿದ್ದೇವೆ.

ಮನುಷ್ಯ ನಿರ್ಮಿತ ಈ ಚೌಕಟ್ಟಗಳನ್ನು ತಿಳಿಯದ, ಅಸಮಾನತೆಯನ್ನು ಆಚರಣೆ ಮಾಡದ, ನಿಶ್ಕಲ್ಮಶ ಮುಗ್ದ ಮನಸ್ಸಿನ ಈ ಗ್ರಾಮದ ಪುಟಾಣಿ ಹೆಣ್ಣಮಕ್ಕಳು ಗ್ರಾಮದ ಮೂಲೆಯೊಂದರಲ್ಲಿ ಗೌರಿ ಗಣೇಶ ಕೂರಿಸಿದ್ದಾರೆ. ಗಂಡಸರೇ ಸೇರಿ ಪೆಂಡಾಲ್ ಕಟ್ಟಿ, ಕುಣಿದು ಕುಪ್ಪಳಿಸಿ ಹಬ್ಬ ಮಾಡುವುದು ಸರ್ವೇ ಸಾಮಾನ್ಯ. ಇದಕ್ಕೆ ಅಪವಾದದಂತೆ ಇಲ್ಲಿನ ಹುಡುಗೀಯರೇ ಸೇರಿ ಗ್ರಾಮದ ಮಟ್ಟಕ್ಕೆ ಹೊಸ ಇತಿಹಾಸವನ್ನು ನಿರ್ಮಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಗುಡುಗುಡು ಅಂಕಲ್ ಖ್ಯಾತಿಯ ಮೊಹಮ್ಮದ್ ಅಣ್ಣನ ಗಣಪತಿ ಪ್ರೀತಿ

ರಾಜ್ಯದಲ್ಲೀಗ ಹಬ್ಬ-ಧರ್ಮದ ಹೆಸರಿನಲ್ಲಿ ರಾಜಕಾರಣ ಹೆಚ್ಚಾಗಿದೆ. ಗಲಭೆಗಳಲ್ಲಿ ಯುವಕರು ಪ್ರಾಣಗಳನ್ನು ಕಳೆದುಕೊಳ್ಳುತ್ತಿದ್ದಾರೆ. ಸಹೋದರ ಧರ್ಮೀಯರ ಮೇಲೆ ದ್ವೇಷ ಹರಡಿಸುತ್ತಿರುವ ಹೊತ್ತಲ್ಲಿ ಗಾರೆ ಕೆಲಸದ ದಿನಗೂಲಿ ಕಾರ್ಮಿಕ ಮೊಹಮ್ಮದ್ ಅವರು ಬೆಂಕಿಕೆರೆಯಲ್ಲಿ ಈ ಮಕ್ಕಳ ಜೊತೆ ಸೇರಿ ಪ್ರೀತಿಯನ್ನು ಹಂಚುತ್ತಿದ್ದಾರೆ.ಹುಡುಗಿಯರೆ ಸೇರಿ ನಡೆಸುವ ‘ಮುಹಮ್ಮದ್‌ ಅಂಕಲ್‌’ ನೇತೃತ್ವದ ಬೆಂಕಿಕೆರೆ ಗಣೇಶೋತ್ಸವ!

 

ಮಕ್ಕಳ ಗಣಪತಿ ಪೆಂಡಾಲ್ ಅನ್ನು ಇವರೇ ಕಟ್ಟಿದ್ದು ಅಲ್ಲದೆ ಹಣ್ಣು ಸಿಹಿತಿನಿಸುಗಳನ್ನು ತಂದು ಕೊಟ್ಟಿದ್ದಾರೆ. ಗಣಪತಿಗೆ ಹಾರ ತರಲು ತಮ್ಮದೇ ಗಾಡಿಯಲ್ಲಿ 70 ಕಿ.ಮಿ. ದೂರದ ದಾವಣಗೆರೆಗೆ ಹೋಗಿ ಹೂವಿನ ಹಾರ ತಂದಿದ್ದಾರೆ. ಪೆಂಡಾಲ್ ಮತ್ತಷ್ಟು ಚೆನ್ನಾಗಿ ಕಾಣಲು ಲೈಟಿನ ಸರ, ಉಸ್ರುಬುಲ್ಡೆ (ಬಲೂನ್) ಗಳನ್ನು ಕಟ್ಟಿದ್ದಾರೆ. ಮಕ್ಕಳು ಪ್ರೀತಿಯಿಂದ ಭಾರತದ ಧ್ವಜವನ್ನೂ ಕಟ್ಟಿದ್ದಾರೆ.

ಇದನ್ನೂ ಓದಿ: ಏ.14 ರಂದು ಅಂಬೇಡ್ಕರ್ ಹಬ್ಬ: ದ್ವೇಷ, ಅಸೂಯೆ ಮೀರಿ ಶಾಂತಿ ಸಾಮರಸ್ಯದ ದೇಶ ಕಟ್ಟಲು ಕರೆ

ಮೊಹಮ್ಮದ್ ಅವರು ಭಕ್ತಿಯಿಂದ ಗಣಪತಿಗೆ ಕೈ ಮುಗಿಯುತ್ತಾರೆ, ಮಂಗಳಾರತಿ- ತೀರ್ಥ ಪಡೆಯುತ್ತಾರೆ. ಮಕ್ಕಳೆಲ್ಲಾ ಸಂಜೆಯ ಮೇಲೆ ಮನೆಗೆ ಹೋದಾಗ ಗಣಪತಿಯ ಮುಂದೆ ಹಚ್ಚಿಟ್ಟುರವ ದೀಪ ಆರದಂತೆ ನೋಡಿಕೊಳ್ಳಲು ಅವರೇ ಪೆಂಡಾಪ್ ಮುಂದೆ ಮಲಗುತ್ತಿದ್ದಾರೆ.

“ನಿನಿಗ್ಯಾಕಣ್ಣ ಇದೆಲ್ಲಾ, ಈ ಮಕ್ಳು ಸುಮ್ಮನೆ ನಿಮ್ ದುಡ್ಡೆಲ್ಲಾ ಖರ್ಚು ಮಾಡಿಸ್ತಾರೆ ನೋಡಿ” ಅಂತ ಗ್ರಾಮಸ್ತರು ಹೇಳಿದ ಮಾತಿಗೆ, “ಹಬ್ಬ ಏನ್ ದಿನಾ ಬರಲ್ಲ, ಮಕ್ಳು ಎಷ್ಟು ಖುಷಿ ಆಗಿದ್ದಾರೆ ನೋಡಿ. ಏನ್ ಮೂರ್ನಾಕ್ ಸಾವ್ರ ಖರ್ಚಾಗುತ್ತಾ? ಆಗ್ಲಿ ಬಿಡಿ” ಎಂದು ದಿನಕ್ಕೆ 500 ರೂ. ಕೂಲಿ ಪಡೆಯುವ ಮೊಹಮ್ಮದ್ ಅವರು ಉತ್ತರಿಸುತ್ತಾರೆ. ಅಲ್ಲದೇ ಈ ಹಿಂದೆಯೂ ಗಣಪತಿ ಹಬ್ಬಗಳಲ್ಲಿ ತಾವು ಭಾಗಿಯಾಗಿದ್ದ ಅನುಭವಗಳನ್ನು ಅಭಿಮಾನದಿಂದ ಹಂಚಿಕೊಳ್ಳುತ್ತಾರೆ.

ಗಣಪತಿ ಪೆಂಡಾಲ್ ನ ವಿಶೇಷತೆಗಳೇನು?

ಗ್ರಾಮದಲ್ಲಿ ಸುಮಾರು 8 ಸಮುದಾಯಗಳಿವೆ, ಎಲ್ಲರೂ ತಮ್ಮ ತಮ್ಮ ಸಮುದಾಯದ ಸ್ನೇಹಿತರು ಸೇರಿಕೊಂಡು ಗಣಪತಿ ಕೂರಿಸುತ್ತಾರೆ. ಆದರೆ ಈ ಹೆಣ್ಣುಮಕ್ಕಳ ಗಣಪತಿ ಪೆಂಡಾಲ್ ನಲ್ಲಿ ಬಹುತೇಕ ಎಲ್ಲಾ ಸಮುದಾಯದ ಮಕ್ಕಳು ಸೇರಿಕೊಂಡು ಆಚರಣೆ ಮಾಡುತ್ತಿದ್ದಾರೆ.

ಇದನ್ನೂ ಓದಿ: ಮಂಗಳೂರು: ಮಳಲಿಪೇಟೆಯ ಪ್ರಾಚೀನ ಮಸೀದಿಯನ್ನು ದೇವಸ್ಥಾನ ಎಂದು ಸುಳ್ಳು ಹಬ್ಬಿಸಿದ ಕನ್ನಡ ಮಾಧ್ಯಮಗಳು

ದೇವರ ಮಂತ್ರಗಳು ತಿಳಿಯದ ಈ ಮಕ್ಕಳು ಕೈ ಮುಗಿದು ದೇಶಭಕ್ತಿ ಗೀತೆ ಮತ್ತು ನಾಡ ಗೀತೆಗಳನ್ನು ಹಾಡುತ್ತಾರೆ. ತಮ್ಮ ಟೀಚರ್ ಹೇಳಿಕೊಟ್ಟಿರುವ “ನಮ್ಮ ದೇಶವು ಪ್ರೀತಿಯ ಪ್ರತಿರೂಪವು” ಎನ್ನುವ ಹಾಡು ಗಮನ ಸೆಳೆಯುತ್ತಿದೆ. ಡಿಜೆ, ಡ್ರಮ್ ಸೆಟ್, ವಿಚಿತ್ರ ಚಿತ್ರಗೀತೆಗಳ ಯಾವ ಹಂಗು ಇಲ್ಲದೆ ತಮಗೆ ತಿಳಿದಷ್ಟು ಜಾನಪದ ಹಾಡುಗಳನ್ನು ಹಾಡುತ್ತಾ ಕುಣಿಯುತ್ತಾರೆ. ಬಂದವರಿಗೆ ಕಾರ ಮಂಡಿಕ್ಕಿ ಕೊಡುತ್ತಾರೆ.

ಒಟ್ಟಾರೆಯಾಗಿ ಗಲಭೆ, ದ್ವೇಷ ಅಸೂಯೆ, ಶ್ರೇಷ್ಠತೆ ಯಾವುದೂ ಇಲ್ಲದೆ ಪ್ರೀತಿ ಸೌಹಾರ್ದತೆ ಹಂಚುವ ಇಂತಹ ಪರಂಪರೆ ಮುಂದುವರೆಯಲಿ. ಮಕ್ಕಳ ಹಾಡಿನ ಸಾಲುಗಳು ಹೇಳುವ “ಈ ನಮ್ಮ ದೇಶವು, ಪ್ರೀತಿಯ ಪ್ರತಿ ರೂಪವು” ಎಲ್ಲರಿಗೂ ಆದರ್ಶವಾಗಲಿ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...