Homeಕರ್ನಾಟಕಹುಡುಗಿಯರೆ ಸೇರಿ ನಡೆಸುವ ‘ಮುಹಮ್ಮದ್‌ ಅಂಕಲ್‌’ ನೇತೃತ್ವದ ಬೆಂಕಿಕೆರೆ ಗಣೇಶೋತ್ಸವ!

ಹುಡುಗಿಯರೆ ಸೇರಿ ನಡೆಸುವ ‘ಮುಹಮ್ಮದ್‌ ಅಂಕಲ್‌’ ನೇತೃತ್ವದ ಬೆಂಕಿಕೆರೆ ಗಣೇಶೋತ್ಸವ!

- Advertisement -
- Advertisement -

ದಾವಣಗೆರೆ ಜಿಲ್ಲೆ, ಚನ್ನಗಿರಿ ತಾಲ್ಲೂಕಿನ ಬೆಂಕಿಕೆರೆ ಗ್ರಾಮದ ಈ ಬಾರಿಯ ಗೌರಿ ಗಣೇಶ ಹಬ್ಬ ಹಲವು ವಿಶೇಷತೆಗೆ ಕಾರಣವಾಗಿದೆ. ಮಹಿಳೆಯರು ಪೂಜೆ ಮಾಡಬಾರದು, ಗರ್ಭಗುಡಿ ಪ್ರವೇಶ ಮಾಡಬಾರದು ಎಂಬ ಹಲವು ವಾದಗಳಿವೆ. ಮಹಿಳೆಯರ ಮುಟ್ಟನ್ನು ತಪ್ಪಾಗಿ ಅರ್ಥ ಮಾಡಿಕೊಂಡಿರುವ ಭಾರತದಂತಹ ದೇಶದಲ್ಲಿ ಮಹಿಳೆಯರು ದೇವಾಲಯದ ಪ್ರವೇಶ ಮಾಡುವುದನ್ನು ನಿಷೇಧಿಸಿರುವ, ಕೆಲ ಪ್ರಕರಣಗಳು ಸುಪ್ರೀಮ್ ಕೋರ್ಟ್ ಮೆಟ್ಟಿಲೂ ಏರಿರುವ ಸನ್ನಿವೇಶಕ್ಕೆ ನಾವೆಲ್ಲಾ ಸಾಕ್ಷಿಯಾಗಿದ್ದೇವೆ.

ಮನುಷ್ಯ ನಿರ್ಮಿತ ಈ ಚೌಕಟ್ಟಗಳನ್ನು ತಿಳಿಯದ, ಅಸಮಾನತೆಯನ್ನು ಆಚರಣೆ ಮಾಡದ, ನಿಶ್ಕಲ್ಮಶ ಮುಗ್ದ ಮನಸ್ಸಿನ ಈ ಗ್ರಾಮದ ಪುಟಾಣಿ ಹೆಣ್ಣಮಕ್ಕಳು ಗ್ರಾಮದ ಮೂಲೆಯೊಂದರಲ್ಲಿ ಗೌರಿ ಗಣೇಶ ಕೂರಿಸಿದ್ದಾರೆ. ಗಂಡಸರೇ ಸೇರಿ ಪೆಂಡಾಲ್ ಕಟ್ಟಿ, ಕುಣಿದು ಕುಪ್ಪಳಿಸಿ ಹಬ್ಬ ಮಾಡುವುದು ಸರ್ವೇ ಸಾಮಾನ್ಯ. ಇದಕ್ಕೆ ಅಪವಾದದಂತೆ ಇಲ್ಲಿನ ಹುಡುಗೀಯರೇ ಸೇರಿ ಗ್ರಾಮದ ಮಟ್ಟಕ್ಕೆ ಹೊಸ ಇತಿಹಾಸವನ್ನು ನಿರ್ಮಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಗುಡುಗುಡು ಅಂಕಲ್ ಖ್ಯಾತಿಯ ಮೊಹಮ್ಮದ್ ಅಣ್ಣನ ಗಣಪತಿ ಪ್ರೀತಿ

ರಾಜ್ಯದಲ್ಲೀಗ ಹಬ್ಬ-ಧರ್ಮದ ಹೆಸರಿನಲ್ಲಿ ರಾಜಕಾರಣ ಹೆಚ್ಚಾಗಿದೆ. ಗಲಭೆಗಳಲ್ಲಿ ಯುವಕರು ಪ್ರಾಣಗಳನ್ನು ಕಳೆದುಕೊಳ್ಳುತ್ತಿದ್ದಾರೆ. ಸಹೋದರ ಧರ್ಮೀಯರ ಮೇಲೆ ದ್ವೇಷ ಹರಡಿಸುತ್ತಿರುವ ಹೊತ್ತಲ್ಲಿ ಗಾರೆ ಕೆಲಸದ ದಿನಗೂಲಿ ಕಾರ್ಮಿಕ ಮೊಹಮ್ಮದ್ ಅವರು ಬೆಂಕಿಕೆರೆಯಲ್ಲಿ ಈ ಮಕ್ಕಳ ಜೊತೆ ಸೇರಿ ಪ್ರೀತಿಯನ್ನು ಹಂಚುತ್ತಿದ್ದಾರೆ.ಹುಡುಗಿಯರೆ ಸೇರಿ ನಡೆಸುವ ‘ಮುಹಮ್ಮದ್‌ ಅಂಕಲ್‌’ ನೇತೃತ್ವದ ಬೆಂಕಿಕೆರೆ ಗಣೇಶೋತ್ಸವ!

 

ಮಕ್ಕಳ ಗಣಪತಿ ಪೆಂಡಾಲ್ ಅನ್ನು ಇವರೇ ಕಟ್ಟಿದ್ದು ಅಲ್ಲದೆ ಹಣ್ಣು ಸಿಹಿತಿನಿಸುಗಳನ್ನು ತಂದು ಕೊಟ್ಟಿದ್ದಾರೆ. ಗಣಪತಿಗೆ ಹಾರ ತರಲು ತಮ್ಮದೇ ಗಾಡಿಯಲ್ಲಿ 70 ಕಿ.ಮಿ. ದೂರದ ದಾವಣಗೆರೆಗೆ ಹೋಗಿ ಹೂವಿನ ಹಾರ ತಂದಿದ್ದಾರೆ. ಪೆಂಡಾಲ್ ಮತ್ತಷ್ಟು ಚೆನ್ನಾಗಿ ಕಾಣಲು ಲೈಟಿನ ಸರ, ಉಸ್ರುಬುಲ್ಡೆ (ಬಲೂನ್) ಗಳನ್ನು ಕಟ್ಟಿದ್ದಾರೆ. ಮಕ್ಕಳು ಪ್ರೀತಿಯಿಂದ ಭಾರತದ ಧ್ವಜವನ್ನೂ ಕಟ್ಟಿದ್ದಾರೆ.

ಇದನ್ನೂ ಓದಿ: ಏ.14 ರಂದು ಅಂಬೇಡ್ಕರ್ ಹಬ್ಬ: ದ್ವೇಷ, ಅಸೂಯೆ ಮೀರಿ ಶಾಂತಿ ಸಾಮರಸ್ಯದ ದೇಶ ಕಟ್ಟಲು ಕರೆ

ಮೊಹಮ್ಮದ್ ಅವರು ಭಕ್ತಿಯಿಂದ ಗಣಪತಿಗೆ ಕೈ ಮುಗಿಯುತ್ತಾರೆ, ಮಂಗಳಾರತಿ- ತೀರ್ಥ ಪಡೆಯುತ್ತಾರೆ. ಮಕ್ಕಳೆಲ್ಲಾ ಸಂಜೆಯ ಮೇಲೆ ಮನೆಗೆ ಹೋದಾಗ ಗಣಪತಿಯ ಮುಂದೆ ಹಚ್ಚಿಟ್ಟುರವ ದೀಪ ಆರದಂತೆ ನೋಡಿಕೊಳ್ಳಲು ಅವರೇ ಪೆಂಡಾಪ್ ಮುಂದೆ ಮಲಗುತ್ತಿದ್ದಾರೆ.

“ನಿನಿಗ್ಯಾಕಣ್ಣ ಇದೆಲ್ಲಾ, ಈ ಮಕ್ಳು ಸುಮ್ಮನೆ ನಿಮ್ ದುಡ್ಡೆಲ್ಲಾ ಖರ್ಚು ಮಾಡಿಸ್ತಾರೆ ನೋಡಿ” ಅಂತ ಗ್ರಾಮಸ್ತರು ಹೇಳಿದ ಮಾತಿಗೆ, “ಹಬ್ಬ ಏನ್ ದಿನಾ ಬರಲ್ಲ, ಮಕ್ಳು ಎಷ್ಟು ಖುಷಿ ಆಗಿದ್ದಾರೆ ನೋಡಿ. ಏನ್ ಮೂರ್ನಾಕ್ ಸಾವ್ರ ಖರ್ಚಾಗುತ್ತಾ? ಆಗ್ಲಿ ಬಿಡಿ” ಎಂದು ದಿನಕ್ಕೆ 500 ರೂ. ಕೂಲಿ ಪಡೆಯುವ ಮೊಹಮ್ಮದ್ ಅವರು ಉತ್ತರಿಸುತ್ತಾರೆ. ಅಲ್ಲದೇ ಈ ಹಿಂದೆಯೂ ಗಣಪತಿ ಹಬ್ಬಗಳಲ್ಲಿ ತಾವು ಭಾಗಿಯಾಗಿದ್ದ ಅನುಭವಗಳನ್ನು ಅಭಿಮಾನದಿಂದ ಹಂಚಿಕೊಳ್ಳುತ್ತಾರೆ.

ಗಣಪತಿ ಪೆಂಡಾಲ್ ನ ವಿಶೇಷತೆಗಳೇನು?

ಗ್ರಾಮದಲ್ಲಿ ಸುಮಾರು 8 ಸಮುದಾಯಗಳಿವೆ, ಎಲ್ಲರೂ ತಮ್ಮ ತಮ್ಮ ಸಮುದಾಯದ ಸ್ನೇಹಿತರು ಸೇರಿಕೊಂಡು ಗಣಪತಿ ಕೂರಿಸುತ್ತಾರೆ. ಆದರೆ ಈ ಹೆಣ್ಣುಮಕ್ಕಳ ಗಣಪತಿ ಪೆಂಡಾಲ್ ನಲ್ಲಿ ಬಹುತೇಕ ಎಲ್ಲಾ ಸಮುದಾಯದ ಮಕ್ಕಳು ಸೇರಿಕೊಂಡು ಆಚರಣೆ ಮಾಡುತ್ತಿದ್ದಾರೆ.

ಇದನ್ನೂ ಓದಿ: ಮಂಗಳೂರು: ಮಳಲಿಪೇಟೆಯ ಪ್ರಾಚೀನ ಮಸೀದಿಯನ್ನು ದೇವಸ್ಥಾನ ಎಂದು ಸುಳ್ಳು ಹಬ್ಬಿಸಿದ ಕನ್ನಡ ಮಾಧ್ಯಮಗಳು

ದೇವರ ಮಂತ್ರಗಳು ತಿಳಿಯದ ಈ ಮಕ್ಕಳು ಕೈ ಮುಗಿದು ದೇಶಭಕ್ತಿ ಗೀತೆ ಮತ್ತು ನಾಡ ಗೀತೆಗಳನ್ನು ಹಾಡುತ್ತಾರೆ. ತಮ್ಮ ಟೀಚರ್ ಹೇಳಿಕೊಟ್ಟಿರುವ “ನಮ್ಮ ದೇಶವು ಪ್ರೀತಿಯ ಪ್ರತಿರೂಪವು” ಎನ್ನುವ ಹಾಡು ಗಮನ ಸೆಳೆಯುತ್ತಿದೆ. ಡಿಜೆ, ಡ್ರಮ್ ಸೆಟ್, ವಿಚಿತ್ರ ಚಿತ್ರಗೀತೆಗಳ ಯಾವ ಹಂಗು ಇಲ್ಲದೆ ತಮಗೆ ತಿಳಿದಷ್ಟು ಜಾನಪದ ಹಾಡುಗಳನ್ನು ಹಾಡುತ್ತಾ ಕುಣಿಯುತ್ತಾರೆ. ಬಂದವರಿಗೆ ಕಾರ ಮಂಡಿಕ್ಕಿ ಕೊಡುತ್ತಾರೆ.

ಒಟ್ಟಾರೆಯಾಗಿ ಗಲಭೆ, ದ್ವೇಷ ಅಸೂಯೆ, ಶ್ರೇಷ್ಠತೆ ಯಾವುದೂ ಇಲ್ಲದೆ ಪ್ರೀತಿ ಸೌಹಾರ್ದತೆ ಹಂಚುವ ಇಂತಹ ಪರಂಪರೆ ಮುಂದುವರೆಯಲಿ. ಮಕ್ಕಳ ಹಾಡಿನ ಸಾಲುಗಳು ಹೇಳುವ “ಈ ನಮ್ಮ ದೇಶವು, ಪ್ರೀತಿಯ ಪ್ರತಿ ರೂಪವು” ಎಲ್ಲರಿಗೂ ಆದರ್ಶವಾಗಲಿ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...