Homeಕರ್ನಾಟಕಹುಡುಗಿಯರೆ ಸೇರಿ ನಡೆಸುವ ‘ಮುಹಮ್ಮದ್‌ ಅಂಕಲ್‌’ ನೇತೃತ್ವದ ಬೆಂಕಿಕೆರೆ ಗಣೇಶೋತ್ಸವ!

ಹುಡುಗಿಯರೆ ಸೇರಿ ನಡೆಸುವ ‘ಮುಹಮ್ಮದ್‌ ಅಂಕಲ್‌’ ನೇತೃತ್ವದ ಬೆಂಕಿಕೆರೆ ಗಣೇಶೋತ್ಸವ!

- Advertisement -
- Advertisement -

ದಾವಣಗೆರೆ ಜಿಲ್ಲೆ, ಚನ್ನಗಿರಿ ತಾಲ್ಲೂಕಿನ ಬೆಂಕಿಕೆರೆ ಗ್ರಾಮದ ಈ ಬಾರಿಯ ಗೌರಿ ಗಣೇಶ ಹಬ್ಬ ಹಲವು ವಿಶೇಷತೆಗೆ ಕಾರಣವಾಗಿದೆ. ಮಹಿಳೆಯರು ಪೂಜೆ ಮಾಡಬಾರದು, ಗರ್ಭಗುಡಿ ಪ್ರವೇಶ ಮಾಡಬಾರದು ಎಂಬ ಹಲವು ವಾದಗಳಿವೆ. ಮಹಿಳೆಯರ ಮುಟ್ಟನ್ನು ತಪ್ಪಾಗಿ ಅರ್ಥ ಮಾಡಿಕೊಂಡಿರುವ ಭಾರತದಂತಹ ದೇಶದಲ್ಲಿ ಮಹಿಳೆಯರು ದೇವಾಲಯದ ಪ್ರವೇಶ ಮಾಡುವುದನ್ನು ನಿಷೇಧಿಸಿರುವ, ಕೆಲ ಪ್ರಕರಣಗಳು ಸುಪ್ರೀಮ್ ಕೋರ್ಟ್ ಮೆಟ್ಟಿಲೂ ಏರಿರುವ ಸನ್ನಿವೇಶಕ್ಕೆ ನಾವೆಲ್ಲಾ ಸಾಕ್ಷಿಯಾಗಿದ್ದೇವೆ.

ಮನುಷ್ಯ ನಿರ್ಮಿತ ಈ ಚೌಕಟ್ಟಗಳನ್ನು ತಿಳಿಯದ, ಅಸಮಾನತೆಯನ್ನು ಆಚರಣೆ ಮಾಡದ, ನಿಶ್ಕಲ್ಮಶ ಮುಗ್ದ ಮನಸ್ಸಿನ ಈ ಗ್ರಾಮದ ಪುಟಾಣಿ ಹೆಣ್ಣಮಕ್ಕಳು ಗ್ರಾಮದ ಮೂಲೆಯೊಂದರಲ್ಲಿ ಗೌರಿ ಗಣೇಶ ಕೂರಿಸಿದ್ದಾರೆ. ಗಂಡಸರೇ ಸೇರಿ ಪೆಂಡಾಲ್ ಕಟ್ಟಿ, ಕುಣಿದು ಕುಪ್ಪಳಿಸಿ ಹಬ್ಬ ಮಾಡುವುದು ಸರ್ವೇ ಸಾಮಾನ್ಯ. ಇದಕ್ಕೆ ಅಪವಾದದಂತೆ ಇಲ್ಲಿನ ಹುಡುಗೀಯರೇ ಸೇರಿ ಗ್ರಾಮದ ಮಟ್ಟಕ್ಕೆ ಹೊಸ ಇತಿಹಾಸವನ್ನು ನಿರ್ಮಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಗುಡುಗುಡು ಅಂಕಲ್ ಖ್ಯಾತಿಯ ಮೊಹಮ್ಮದ್ ಅಣ್ಣನ ಗಣಪತಿ ಪ್ರೀತಿ

ರಾಜ್ಯದಲ್ಲೀಗ ಹಬ್ಬ-ಧರ್ಮದ ಹೆಸರಿನಲ್ಲಿ ರಾಜಕಾರಣ ಹೆಚ್ಚಾಗಿದೆ. ಗಲಭೆಗಳಲ್ಲಿ ಯುವಕರು ಪ್ರಾಣಗಳನ್ನು ಕಳೆದುಕೊಳ್ಳುತ್ತಿದ್ದಾರೆ. ಸಹೋದರ ಧರ್ಮೀಯರ ಮೇಲೆ ದ್ವೇಷ ಹರಡಿಸುತ್ತಿರುವ ಹೊತ್ತಲ್ಲಿ ಗಾರೆ ಕೆಲಸದ ದಿನಗೂಲಿ ಕಾರ್ಮಿಕ ಮೊಹಮ್ಮದ್ ಅವರು ಬೆಂಕಿಕೆರೆಯಲ್ಲಿ ಈ ಮಕ್ಕಳ ಜೊತೆ ಸೇರಿ ಪ್ರೀತಿಯನ್ನು ಹಂಚುತ್ತಿದ್ದಾರೆ.ಹುಡುಗಿಯರೆ ಸೇರಿ ನಡೆಸುವ ‘ಮುಹಮ್ಮದ್‌ ಅಂಕಲ್‌’ ನೇತೃತ್ವದ ಬೆಂಕಿಕೆರೆ ಗಣೇಶೋತ್ಸವ!

 

ಮಕ್ಕಳ ಗಣಪತಿ ಪೆಂಡಾಲ್ ಅನ್ನು ಇವರೇ ಕಟ್ಟಿದ್ದು ಅಲ್ಲದೆ ಹಣ್ಣು ಸಿಹಿತಿನಿಸುಗಳನ್ನು ತಂದು ಕೊಟ್ಟಿದ್ದಾರೆ. ಗಣಪತಿಗೆ ಹಾರ ತರಲು ತಮ್ಮದೇ ಗಾಡಿಯಲ್ಲಿ 70 ಕಿ.ಮಿ. ದೂರದ ದಾವಣಗೆರೆಗೆ ಹೋಗಿ ಹೂವಿನ ಹಾರ ತಂದಿದ್ದಾರೆ. ಪೆಂಡಾಲ್ ಮತ್ತಷ್ಟು ಚೆನ್ನಾಗಿ ಕಾಣಲು ಲೈಟಿನ ಸರ, ಉಸ್ರುಬುಲ್ಡೆ (ಬಲೂನ್) ಗಳನ್ನು ಕಟ್ಟಿದ್ದಾರೆ. ಮಕ್ಕಳು ಪ್ರೀತಿಯಿಂದ ಭಾರತದ ಧ್ವಜವನ್ನೂ ಕಟ್ಟಿದ್ದಾರೆ.

ಇದನ್ನೂ ಓದಿ: ಏ.14 ರಂದು ಅಂಬೇಡ್ಕರ್ ಹಬ್ಬ: ದ್ವೇಷ, ಅಸೂಯೆ ಮೀರಿ ಶಾಂತಿ ಸಾಮರಸ್ಯದ ದೇಶ ಕಟ್ಟಲು ಕರೆ

ಮೊಹಮ್ಮದ್ ಅವರು ಭಕ್ತಿಯಿಂದ ಗಣಪತಿಗೆ ಕೈ ಮುಗಿಯುತ್ತಾರೆ, ಮಂಗಳಾರತಿ- ತೀರ್ಥ ಪಡೆಯುತ್ತಾರೆ. ಮಕ್ಕಳೆಲ್ಲಾ ಸಂಜೆಯ ಮೇಲೆ ಮನೆಗೆ ಹೋದಾಗ ಗಣಪತಿಯ ಮುಂದೆ ಹಚ್ಚಿಟ್ಟುರವ ದೀಪ ಆರದಂತೆ ನೋಡಿಕೊಳ್ಳಲು ಅವರೇ ಪೆಂಡಾಪ್ ಮುಂದೆ ಮಲಗುತ್ತಿದ್ದಾರೆ.

“ನಿನಿಗ್ಯಾಕಣ್ಣ ಇದೆಲ್ಲಾ, ಈ ಮಕ್ಳು ಸುಮ್ಮನೆ ನಿಮ್ ದುಡ್ಡೆಲ್ಲಾ ಖರ್ಚು ಮಾಡಿಸ್ತಾರೆ ನೋಡಿ” ಅಂತ ಗ್ರಾಮಸ್ತರು ಹೇಳಿದ ಮಾತಿಗೆ, “ಹಬ್ಬ ಏನ್ ದಿನಾ ಬರಲ್ಲ, ಮಕ್ಳು ಎಷ್ಟು ಖುಷಿ ಆಗಿದ್ದಾರೆ ನೋಡಿ. ಏನ್ ಮೂರ್ನಾಕ್ ಸಾವ್ರ ಖರ್ಚಾಗುತ್ತಾ? ಆಗ್ಲಿ ಬಿಡಿ” ಎಂದು ದಿನಕ್ಕೆ 500 ರೂ. ಕೂಲಿ ಪಡೆಯುವ ಮೊಹಮ್ಮದ್ ಅವರು ಉತ್ತರಿಸುತ್ತಾರೆ. ಅಲ್ಲದೇ ಈ ಹಿಂದೆಯೂ ಗಣಪತಿ ಹಬ್ಬಗಳಲ್ಲಿ ತಾವು ಭಾಗಿಯಾಗಿದ್ದ ಅನುಭವಗಳನ್ನು ಅಭಿಮಾನದಿಂದ ಹಂಚಿಕೊಳ್ಳುತ್ತಾರೆ.

ಗಣಪತಿ ಪೆಂಡಾಲ್ ನ ವಿಶೇಷತೆಗಳೇನು?

ಗ್ರಾಮದಲ್ಲಿ ಸುಮಾರು 8 ಸಮುದಾಯಗಳಿವೆ, ಎಲ್ಲರೂ ತಮ್ಮ ತಮ್ಮ ಸಮುದಾಯದ ಸ್ನೇಹಿತರು ಸೇರಿಕೊಂಡು ಗಣಪತಿ ಕೂರಿಸುತ್ತಾರೆ. ಆದರೆ ಈ ಹೆಣ್ಣುಮಕ್ಕಳ ಗಣಪತಿ ಪೆಂಡಾಲ್ ನಲ್ಲಿ ಬಹುತೇಕ ಎಲ್ಲಾ ಸಮುದಾಯದ ಮಕ್ಕಳು ಸೇರಿಕೊಂಡು ಆಚರಣೆ ಮಾಡುತ್ತಿದ್ದಾರೆ.

ಇದನ್ನೂ ಓದಿ: ಮಂಗಳೂರು: ಮಳಲಿಪೇಟೆಯ ಪ್ರಾಚೀನ ಮಸೀದಿಯನ್ನು ದೇವಸ್ಥಾನ ಎಂದು ಸುಳ್ಳು ಹಬ್ಬಿಸಿದ ಕನ್ನಡ ಮಾಧ್ಯಮಗಳು

ದೇವರ ಮಂತ್ರಗಳು ತಿಳಿಯದ ಈ ಮಕ್ಕಳು ಕೈ ಮುಗಿದು ದೇಶಭಕ್ತಿ ಗೀತೆ ಮತ್ತು ನಾಡ ಗೀತೆಗಳನ್ನು ಹಾಡುತ್ತಾರೆ. ತಮ್ಮ ಟೀಚರ್ ಹೇಳಿಕೊಟ್ಟಿರುವ “ನಮ್ಮ ದೇಶವು ಪ್ರೀತಿಯ ಪ್ರತಿರೂಪವು” ಎನ್ನುವ ಹಾಡು ಗಮನ ಸೆಳೆಯುತ್ತಿದೆ. ಡಿಜೆ, ಡ್ರಮ್ ಸೆಟ್, ವಿಚಿತ್ರ ಚಿತ್ರಗೀತೆಗಳ ಯಾವ ಹಂಗು ಇಲ್ಲದೆ ತಮಗೆ ತಿಳಿದಷ್ಟು ಜಾನಪದ ಹಾಡುಗಳನ್ನು ಹಾಡುತ್ತಾ ಕುಣಿಯುತ್ತಾರೆ. ಬಂದವರಿಗೆ ಕಾರ ಮಂಡಿಕ್ಕಿ ಕೊಡುತ್ತಾರೆ.

ಒಟ್ಟಾರೆಯಾಗಿ ಗಲಭೆ, ದ್ವೇಷ ಅಸೂಯೆ, ಶ್ರೇಷ್ಠತೆ ಯಾವುದೂ ಇಲ್ಲದೆ ಪ್ರೀತಿ ಸೌಹಾರ್ದತೆ ಹಂಚುವ ಇಂತಹ ಪರಂಪರೆ ಮುಂದುವರೆಯಲಿ. ಮಕ್ಕಳ ಹಾಡಿನ ಸಾಲುಗಳು ಹೇಳುವ “ಈ ನಮ್ಮ ದೇಶವು, ಪ್ರೀತಿಯ ಪ್ರತಿ ರೂಪವು” ಎಲ್ಲರಿಗೂ ಆದರ್ಶವಾಗಲಿ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...