Homeಕರ್ನಾಟಕಹುಡುಗಿಯರೆ ಸೇರಿ ನಡೆಸುವ ‘ಮುಹಮ್ಮದ್‌ ಅಂಕಲ್‌’ ನೇತೃತ್ವದ ಬೆಂಕಿಕೆರೆ ಗಣೇಶೋತ್ಸವ!

ಹುಡುಗಿಯರೆ ಸೇರಿ ನಡೆಸುವ ‘ಮುಹಮ್ಮದ್‌ ಅಂಕಲ್‌’ ನೇತೃತ್ವದ ಬೆಂಕಿಕೆರೆ ಗಣೇಶೋತ್ಸವ!

- Advertisement -
- Advertisement -

ದಾವಣಗೆರೆ ಜಿಲ್ಲೆ, ಚನ್ನಗಿರಿ ತಾಲ್ಲೂಕಿನ ಬೆಂಕಿಕೆರೆ ಗ್ರಾಮದ ಈ ಬಾರಿಯ ಗೌರಿ ಗಣೇಶ ಹಬ್ಬ ಹಲವು ವಿಶೇಷತೆಗೆ ಕಾರಣವಾಗಿದೆ. ಮಹಿಳೆಯರು ಪೂಜೆ ಮಾಡಬಾರದು, ಗರ್ಭಗುಡಿ ಪ್ರವೇಶ ಮಾಡಬಾರದು ಎಂಬ ಹಲವು ವಾದಗಳಿವೆ. ಮಹಿಳೆಯರ ಮುಟ್ಟನ್ನು ತಪ್ಪಾಗಿ ಅರ್ಥ ಮಾಡಿಕೊಂಡಿರುವ ಭಾರತದಂತಹ ದೇಶದಲ್ಲಿ ಮಹಿಳೆಯರು ದೇವಾಲಯದ ಪ್ರವೇಶ ಮಾಡುವುದನ್ನು ನಿಷೇಧಿಸಿರುವ, ಕೆಲ ಪ್ರಕರಣಗಳು ಸುಪ್ರೀಮ್ ಕೋರ್ಟ್ ಮೆಟ್ಟಿಲೂ ಏರಿರುವ ಸನ್ನಿವೇಶಕ್ಕೆ ನಾವೆಲ್ಲಾ ಸಾಕ್ಷಿಯಾಗಿದ್ದೇವೆ.

ಮನುಷ್ಯ ನಿರ್ಮಿತ ಈ ಚೌಕಟ್ಟಗಳನ್ನು ತಿಳಿಯದ, ಅಸಮಾನತೆಯನ್ನು ಆಚರಣೆ ಮಾಡದ, ನಿಶ್ಕಲ್ಮಶ ಮುಗ್ದ ಮನಸ್ಸಿನ ಈ ಗ್ರಾಮದ ಪುಟಾಣಿ ಹೆಣ್ಣಮಕ್ಕಳು ಗ್ರಾಮದ ಮೂಲೆಯೊಂದರಲ್ಲಿ ಗೌರಿ ಗಣೇಶ ಕೂರಿಸಿದ್ದಾರೆ. ಗಂಡಸರೇ ಸೇರಿ ಪೆಂಡಾಲ್ ಕಟ್ಟಿ, ಕುಣಿದು ಕುಪ್ಪಳಿಸಿ ಹಬ್ಬ ಮಾಡುವುದು ಸರ್ವೇ ಸಾಮಾನ್ಯ. ಇದಕ್ಕೆ ಅಪವಾದದಂತೆ ಇಲ್ಲಿನ ಹುಡುಗೀಯರೇ ಸೇರಿ ಗ್ರಾಮದ ಮಟ್ಟಕ್ಕೆ ಹೊಸ ಇತಿಹಾಸವನ್ನು ನಿರ್ಮಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಗುಡುಗುಡು ಅಂಕಲ್ ಖ್ಯಾತಿಯ ಮೊಹಮ್ಮದ್ ಅಣ್ಣನ ಗಣಪತಿ ಪ್ರೀತಿ

ರಾಜ್ಯದಲ್ಲೀಗ ಹಬ್ಬ-ಧರ್ಮದ ಹೆಸರಿನಲ್ಲಿ ರಾಜಕಾರಣ ಹೆಚ್ಚಾಗಿದೆ. ಗಲಭೆಗಳಲ್ಲಿ ಯುವಕರು ಪ್ರಾಣಗಳನ್ನು ಕಳೆದುಕೊಳ್ಳುತ್ತಿದ್ದಾರೆ. ಸಹೋದರ ಧರ್ಮೀಯರ ಮೇಲೆ ದ್ವೇಷ ಹರಡಿಸುತ್ತಿರುವ ಹೊತ್ತಲ್ಲಿ ಗಾರೆ ಕೆಲಸದ ದಿನಗೂಲಿ ಕಾರ್ಮಿಕ ಮೊಹಮ್ಮದ್ ಅವರು ಬೆಂಕಿಕೆರೆಯಲ್ಲಿ ಈ ಮಕ್ಕಳ ಜೊತೆ ಸೇರಿ ಪ್ರೀತಿಯನ್ನು ಹಂಚುತ್ತಿದ್ದಾರೆ.ಹುಡುಗಿಯರೆ ಸೇರಿ ನಡೆಸುವ ‘ಮುಹಮ್ಮದ್‌ ಅಂಕಲ್‌’ ನೇತೃತ್ವದ ಬೆಂಕಿಕೆರೆ ಗಣೇಶೋತ್ಸವ!

 

ಮಕ್ಕಳ ಗಣಪತಿ ಪೆಂಡಾಲ್ ಅನ್ನು ಇವರೇ ಕಟ್ಟಿದ್ದು ಅಲ್ಲದೆ ಹಣ್ಣು ಸಿಹಿತಿನಿಸುಗಳನ್ನು ತಂದು ಕೊಟ್ಟಿದ್ದಾರೆ. ಗಣಪತಿಗೆ ಹಾರ ತರಲು ತಮ್ಮದೇ ಗಾಡಿಯಲ್ಲಿ 70 ಕಿ.ಮಿ. ದೂರದ ದಾವಣಗೆರೆಗೆ ಹೋಗಿ ಹೂವಿನ ಹಾರ ತಂದಿದ್ದಾರೆ. ಪೆಂಡಾಲ್ ಮತ್ತಷ್ಟು ಚೆನ್ನಾಗಿ ಕಾಣಲು ಲೈಟಿನ ಸರ, ಉಸ್ರುಬುಲ್ಡೆ (ಬಲೂನ್) ಗಳನ್ನು ಕಟ್ಟಿದ್ದಾರೆ. ಮಕ್ಕಳು ಪ್ರೀತಿಯಿಂದ ಭಾರತದ ಧ್ವಜವನ್ನೂ ಕಟ್ಟಿದ್ದಾರೆ.

ಇದನ್ನೂ ಓದಿ: ಏ.14 ರಂದು ಅಂಬೇಡ್ಕರ್ ಹಬ್ಬ: ದ್ವೇಷ, ಅಸೂಯೆ ಮೀರಿ ಶಾಂತಿ ಸಾಮರಸ್ಯದ ದೇಶ ಕಟ್ಟಲು ಕರೆ

ಮೊಹಮ್ಮದ್ ಅವರು ಭಕ್ತಿಯಿಂದ ಗಣಪತಿಗೆ ಕೈ ಮುಗಿಯುತ್ತಾರೆ, ಮಂಗಳಾರತಿ- ತೀರ್ಥ ಪಡೆಯುತ್ತಾರೆ. ಮಕ್ಕಳೆಲ್ಲಾ ಸಂಜೆಯ ಮೇಲೆ ಮನೆಗೆ ಹೋದಾಗ ಗಣಪತಿಯ ಮುಂದೆ ಹಚ್ಚಿಟ್ಟುರವ ದೀಪ ಆರದಂತೆ ನೋಡಿಕೊಳ್ಳಲು ಅವರೇ ಪೆಂಡಾಪ್ ಮುಂದೆ ಮಲಗುತ್ತಿದ್ದಾರೆ.

“ನಿನಿಗ್ಯಾಕಣ್ಣ ಇದೆಲ್ಲಾ, ಈ ಮಕ್ಳು ಸುಮ್ಮನೆ ನಿಮ್ ದುಡ್ಡೆಲ್ಲಾ ಖರ್ಚು ಮಾಡಿಸ್ತಾರೆ ನೋಡಿ” ಅಂತ ಗ್ರಾಮಸ್ತರು ಹೇಳಿದ ಮಾತಿಗೆ, “ಹಬ್ಬ ಏನ್ ದಿನಾ ಬರಲ್ಲ, ಮಕ್ಳು ಎಷ್ಟು ಖುಷಿ ಆಗಿದ್ದಾರೆ ನೋಡಿ. ಏನ್ ಮೂರ್ನಾಕ್ ಸಾವ್ರ ಖರ್ಚಾಗುತ್ತಾ? ಆಗ್ಲಿ ಬಿಡಿ” ಎಂದು ದಿನಕ್ಕೆ 500 ರೂ. ಕೂಲಿ ಪಡೆಯುವ ಮೊಹಮ್ಮದ್ ಅವರು ಉತ್ತರಿಸುತ್ತಾರೆ. ಅಲ್ಲದೇ ಈ ಹಿಂದೆಯೂ ಗಣಪತಿ ಹಬ್ಬಗಳಲ್ಲಿ ತಾವು ಭಾಗಿಯಾಗಿದ್ದ ಅನುಭವಗಳನ್ನು ಅಭಿಮಾನದಿಂದ ಹಂಚಿಕೊಳ್ಳುತ್ತಾರೆ.

ಗಣಪತಿ ಪೆಂಡಾಲ್ ನ ವಿಶೇಷತೆಗಳೇನು?

ಗ್ರಾಮದಲ್ಲಿ ಸುಮಾರು 8 ಸಮುದಾಯಗಳಿವೆ, ಎಲ್ಲರೂ ತಮ್ಮ ತಮ್ಮ ಸಮುದಾಯದ ಸ್ನೇಹಿತರು ಸೇರಿಕೊಂಡು ಗಣಪತಿ ಕೂರಿಸುತ್ತಾರೆ. ಆದರೆ ಈ ಹೆಣ್ಣುಮಕ್ಕಳ ಗಣಪತಿ ಪೆಂಡಾಲ್ ನಲ್ಲಿ ಬಹುತೇಕ ಎಲ್ಲಾ ಸಮುದಾಯದ ಮಕ್ಕಳು ಸೇರಿಕೊಂಡು ಆಚರಣೆ ಮಾಡುತ್ತಿದ್ದಾರೆ.

ಇದನ್ನೂ ಓದಿ: ಮಂಗಳೂರು: ಮಳಲಿಪೇಟೆಯ ಪ್ರಾಚೀನ ಮಸೀದಿಯನ್ನು ದೇವಸ್ಥಾನ ಎಂದು ಸುಳ್ಳು ಹಬ್ಬಿಸಿದ ಕನ್ನಡ ಮಾಧ್ಯಮಗಳು

ದೇವರ ಮಂತ್ರಗಳು ತಿಳಿಯದ ಈ ಮಕ್ಕಳು ಕೈ ಮುಗಿದು ದೇಶಭಕ್ತಿ ಗೀತೆ ಮತ್ತು ನಾಡ ಗೀತೆಗಳನ್ನು ಹಾಡುತ್ತಾರೆ. ತಮ್ಮ ಟೀಚರ್ ಹೇಳಿಕೊಟ್ಟಿರುವ “ನಮ್ಮ ದೇಶವು ಪ್ರೀತಿಯ ಪ್ರತಿರೂಪವು” ಎನ್ನುವ ಹಾಡು ಗಮನ ಸೆಳೆಯುತ್ತಿದೆ. ಡಿಜೆ, ಡ್ರಮ್ ಸೆಟ್, ವಿಚಿತ್ರ ಚಿತ್ರಗೀತೆಗಳ ಯಾವ ಹಂಗು ಇಲ್ಲದೆ ತಮಗೆ ತಿಳಿದಷ್ಟು ಜಾನಪದ ಹಾಡುಗಳನ್ನು ಹಾಡುತ್ತಾ ಕುಣಿಯುತ್ತಾರೆ. ಬಂದವರಿಗೆ ಕಾರ ಮಂಡಿಕ್ಕಿ ಕೊಡುತ್ತಾರೆ.

ಒಟ್ಟಾರೆಯಾಗಿ ಗಲಭೆ, ದ್ವೇಷ ಅಸೂಯೆ, ಶ್ರೇಷ್ಠತೆ ಯಾವುದೂ ಇಲ್ಲದೆ ಪ್ರೀತಿ ಸೌಹಾರ್ದತೆ ಹಂಚುವ ಇಂತಹ ಪರಂಪರೆ ಮುಂದುವರೆಯಲಿ. ಮಕ್ಕಳ ಹಾಡಿನ ಸಾಲುಗಳು ಹೇಳುವ “ಈ ನಮ್ಮ ದೇಶವು, ಪ್ರೀತಿಯ ಪ್ರತಿ ರೂಪವು” ಎಲ್ಲರಿಗೂ ಆದರ್ಶವಾಗಲಿ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...