Homeಕರ್ನಾಟಕಹುಡುಗಿಯರೆ ಸೇರಿ ನಡೆಸುವ ‘ಮುಹಮ್ಮದ್‌ ಅಂಕಲ್‌’ ನೇತೃತ್ವದ ಬೆಂಕಿಕೆರೆ ಗಣೇಶೋತ್ಸವ!

ಹುಡುಗಿಯರೆ ಸೇರಿ ನಡೆಸುವ ‘ಮುಹಮ್ಮದ್‌ ಅಂಕಲ್‌’ ನೇತೃತ್ವದ ಬೆಂಕಿಕೆರೆ ಗಣೇಶೋತ್ಸವ!

- Advertisement -
- Advertisement -

ದಾವಣಗೆರೆ ಜಿಲ್ಲೆ, ಚನ್ನಗಿರಿ ತಾಲ್ಲೂಕಿನ ಬೆಂಕಿಕೆರೆ ಗ್ರಾಮದ ಈ ಬಾರಿಯ ಗೌರಿ ಗಣೇಶ ಹಬ್ಬ ಹಲವು ವಿಶೇಷತೆಗೆ ಕಾರಣವಾಗಿದೆ. ಮಹಿಳೆಯರು ಪೂಜೆ ಮಾಡಬಾರದು, ಗರ್ಭಗುಡಿ ಪ್ರವೇಶ ಮಾಡಬಾರದು ಎಂಬ ಹಲವು ವಾದಗಳಿವೆ. ಮಹಿಳೆಯರ ಮುಟ್ಟನ್ನು ತಪ್ಪಾಗಿ ಅರ್ಥ ಮಾಡಿಕೊಂಡಿರುವ ಭಾರತದಂತಹ ದೇಶದಲ್ಲಿ ಮಹಿಳೆಯರು ದೇವಾಲಯದ ಪ್ರವೇಶ ಮಾಡುವುದನ್ನು ನಿಷೇಧಿಸಿರುವ, ಕೆಲ ಪ್ರಕರಣಗಳು ಸುಪ್ರೀಮ್ ಕೋರ್ಟ್ ಮೆಟ್ಟಿಲೂ ಏರಿರುವ ಸನ್ನಿವೇಶಕ್ಕೆ ನಾವೆಲ್ಲಾ ಸಾಕ್ಷಿಯಾಗಿದ್ದೇವೆ.

ಮನುಷ್ಯ ನಿರ್ಮಿತ ಈ ಚೌಕಟ್ಟಗಳನ್ನು ತಿಳಿಯದ, ಅಸಮಾನತೆಯನ್ನು ಆಚರಣೆ ಮಾಡದ, ನಿಶ್ಕಲ್ಮಶ ಮುಗ್ದ ಮನಸ್ಸಿನ ಈ ಗ್ರಾಮದ ಪುಟಾಣಿ ಹೆಣ್ಣಮಕ್ಕಳು ಗ್ರಾಮದ ಮೂಲೆಯೊಂದರಲ್ಲಿ ಗೌರಿ ಗಣೇಶ ಕೂರಿಸಿದ್ದಾರೆ. ಗಂಡಸರೇ ಸೇರಿ ಪೆಂಡಾಲ್ ಕಟ್ಟಿ, ಕುಣಿದು ಕುಪ್ಪಳಿಸಿ ಹಬ್ಬ ಮಾಡುವುದು ಸರ್ವೇ ಸಾಮಾನ್ಯ. ಇದಕ್ಕೆ ಅಪವಾದದಂತೆ ಇಲ್ಲಿನ ಹುಡುಗೀಯರೇ ಸೇರಿ ಗ್ರಾಮದ ಮಟ್ಟಕ್ಕೆ ಹೊಸ ಇತಿಹಾಸವನ್ನು ನಿರ್ಮಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಗುಡುಗುಡು ಅಂಕಲ್ ಖ್ಯಾತಿಯ ಮೊಹಮ್ಮದ್ ಅಣ್ಣನ ಗಣಪತಿ ಪ್ರೀತಿ

ರಾಜ್ಯದಲ್ಲೀಗ ಹಬ್ಬ-ಧರ್ಮದ ಹೆಸರಿನಲ್ಲಿ ರಾಜಕಾರಣ ಹೆಚ್ಚಾಗಿದೆ. ಗಲಭೆಗಳಲ್ಲಿ ಯುವಕರು ಪ್ರಾಣಗಳನ್ನು ಕಳೆದುಕೊಳ್ಳುತ್ತಿದ್ದಾರೆ. ಸಹೋದರ ಧರ್ಮೀಯರ ಮೇಲೆ ದ್ವೇಷ ಹರಡಿಸುತ್ತಿರುವ ಹೊತ್ತಲ್ಲಿ ಗಾರೆ ಕೆಲಸದ ದಿನಗೂಲಿ ಕಾರ್ಮಿಕ ಮೊಹಮ್ಮದ್ ಅವರು ಬೆಂಕಿಕೆರೆಯಲ್ಲಿ ಈ ಮಕ್ಕಳ ಜೊತೆ ಸೇರಿ ಪ್ರೀತಿಯನ್ನು ಹಂಚುತ್ತಿದ್ದಾರೆ.ಹುಡುಗಿಯರೆ ಸೇರಿ ನಡೆಸುವ ‘ಮುಹಮ್ಮದ್‌ ಅಂಕಲ್‌’ ನೇತೃತ್ವದ ಬೆಂಕಿಕೆರೆ ಗಣೇಶೋತ್ಸವ!

 

ಮಕ್ಕಳ ಗಣಪತಿ ಪೆಂಡಾಲ್ ಅನ್ನು ಇವರೇ ಕಟ್ಟಿದ್ದು ಅಲ್ಲದೆ ಹಣ್ಣು ಸಿಹಿತಿನಿಸುಗಳನ್ನು ತಂದು ಕೊಟ್ಟಿದ್ದಾರೆ. ಗಣಪತಿಗೆ ಹಾರ ತರಲು ತಮ್ಮದೇ ಗಾಡಿಯಲ್ಲಿ 70 ಕಿ.ಮಿ. ದೂರದ ದಾವಣಗೆರೆಗೆ ಹೋಗಿ ಹೂವಿನ ಹಾರ ತಂದಿದ್ದಾರೆ. ಪೆಂಡಾಲ್ ಮತ್ತಷ್ಟು ಚೆನ್ನಾಗಿ ಕಾಣಲು ಲೈಟಿನ ಸರ, ಉಸ್ರುಬುಲ್ಡೆ (ಬಲೂನ್) ಗಳನ್ನು ಕಟ್ಟಿದ್ದಾರೆ. ಮಕ್ಕಳು ಪ್ರೀತಿಯಿಂದ ಭಾರತದ ಧ್ವಜವನ್ನೂ ಕಟ್ಟಿದ್ದಾರೆ.

ಇದನ್ನೂ ಓದಿ: ಏ.14 ರಂದು ಅಂಬೇಡ್ಕರ್ ಹಬ್ಬ: ದ್ವೇಷ, ಅಸೂಯೆ ಮೀರಿ ಶಾಂತಿ ಸಾಮರಸ್ಯದ ದೇಶ ಕಟ್ಟಲು ಕರೆ

ಮೊಹಮ್ಮದ್ ಅವರು ಭಕ್ತಿಯಿಂದ ಗಣಪತಿಗೆ ಕೈ ಮುಗಿಯುತ್ತಾರೆ, ಮಂಗಳಾರತಿ- ತೀರ್ಥ ಪಡೆಯುತ್ತಾರೆ. ಮಕ್ಕಳೆಲ್ಲಾ ಸಂಜೆಯ ಮೇಲೆ ಮನೆಗೆ ಹೋದಾಗ ಗಣಪತಿಯ ಮುಂದೆ ಹಚ್ಚಿಟ್ಟುರವ ದೀಪ ಆರದಂತೆ ನೋಡಿಕೊಳ್ಳಲು ಅವರೇ ಪೆಂಡಾಪ್ ಮುಂದೆ ಮಲಗುತ್ತಿದ್ದಾರೆ.

“ನಿನಿಗ್ಯಾಕಣ್ಣ ಇದೆಲ್ಲಾ, ಈ ಮಕ್ಳು ಸುಮ್ಮನೆ ನಿಮ್ ದುಡ್ಡೆಲ್ಲಾ ಖರ್ಚು ಮಾಡಿಸ್ತಾರೆ ನೋಡಿ” ಅಂತ ಗ್ರಾಮಸ್ತರು ಹೇಳಿದ ಮಾತಿಗೆ, “ಹಬ್ಬ ಏನ್ ದಿನಾ ಬರಲ್ಲ, ಮಕ್ಳು ಎಷ್ಟು ಖುಷಿ ಆಗಿದ್ದಾರೆ ನೋಡಿ. ಏನ್ ಮೂರ್ನಾಕ್ ಸಾವ್ರ ಖರ್ಚಾಗುತ್ತಾ? ಆಗ್ಲಿ ಬಿಡಿ” ಎಂದು ದಿನಕ್ಕೆ 500 ರೂ. ಕೂಲಿ ಪಡೆಯುವ ಮೊಹಮ್ಮದ್ ಅವರು ಉತ್ತರಿಸುತ್ತಾರೆ. ಅಲ್ಲದೇ ಈ ಹಿಂದೆಯೂ ಗಣಪತಿ ಹಬ್ಬಗಳಲ್ಲಿ ತಾವು ಭಾಗಿಯಾಗಿದ್ದ ಅನುಭವಗಳನ್ನು ಅಭಿಮಾನದಿಂದ ಹಂಚಿಕೊಳ್ಳುತ್ತಾರೆ.

ಗಣಪತಿ ಪೆಂಡಾಲ್ ನ ವಿಶೇಷತೆಗಳೇನು?

ಗ್ರಾಮದಲ್ಲಿ ಸುಮಾರು 8 ಸಮುದಾಯಗಳಿವೆ, ಎಲ್ಲರೂ ತಮ್ಮ ತಮ್ಮ ಸಮುದಾಯದ ಸ್ನೇಹಿತರು ಸೇರಿಕೊಂಡು ಗಣಪತಿ ಕೂರಿಸುತ್ತಾರೆ. ಆದರೆ ಈ ಹೆಣ್ಣುಮಕ್ಕಳ ಗಣಪತಿ ಪೆಂಡಾಲ್ ನಲ್ಲಿ ಬಹುತೇಕ ಎಲ್ಲಾ ಸಮುದಾಯದ ಮಕ್ಕಳು ಸೇರಿಕೊಂಡು ಆಚರಣೆ ಮಾಡುತ್ತಿದ್ದಾರೆ.

ಇದನ್ನೂ ಓದಿ: ಮಂಗಳೂರು: ಮಳಲಿಪೇಟೆಯ ಪ್ರಾಚೀನ ಮಸೀದಿಯನ್ನು ದೇವಸ್ಥಾನ ಎಂದು ಸುಳ್ಳು ಹಬ್ಬಿಸಿದ ಕನ್ನಡ ಮಾಧ್ಯಮಗಳು

ದೇವರ ಮಂತ್ರಗಳು ತಿಳಿಯದ ಈ ಮಕ್ಕಳು ಕೈ ಮುಗಿದು ದೇಶಭಕ್ತಿ ಗೀತೆ ಮತ್ತು ನಾಡ ಗೀತೆಗಳನ್ನು ಹಾಡುತ್ತಾರೆ. ತಮ್ಮ ಟೀಚರ್ ಹೇಳಿಕೊಟ್ಟಿರುವ “ನಮ್ಮ ದೇಶವು ಪ್ರೀತಿಯ ಪ್ರತಿರೂಪವು” ಎನ್ನುವ ಹಾಡು ಗಮನ ಸೆಳೆಯುತ್ತಿದೆ. ಡಿಜೆ, ಡ್ರಮ್ ಸೆಟ್, ವಿಚಿತ್ರ ಚಿತ್ರಗೀತೆಗಳ ಯಾವ ಹಂಗು ಇಲ್ಲದೆ ತಮಗೆ ತಿಳಿದಷ್ಟು ಜಾನಪದ ಹಾಡುಗಳನ್ನು ಹಾಡುತ್ತಾ ಕುಣಿಯುತ್ತಾರೆ. ಬಂದವರಿಗೆ ಕಾರ ಮಂಡಿಕ್ಕಿ ಕೊಡುತ್ತಾರೆ.

ಒಟ್ಟಾರೆಯಾಗಿ ಗಲಭೆ, ದ್ವೇಷ ಅಸೂಯೆ, ಶ್ರೇಷ್ಠತೆ ಯಾವುದೂ ಇಲ್ಲದೆ ಪ್ರೀತಿ ಸೌಹಾರ್ದತೆ ಹಂಚುವ ಇಂತಹ ಪರಂಪರೆ ಮುಂದುವರೆಯಲಿ. ಮಕ್ಕಳ ಹಾಡಿನ ಸಾಲುಗಳು ಹೇಳುವ “ಈ ನಮ್ಮ ದೇಶವು, ಪ್ರೀತಿಯ ಪ್ರತಿ ರೂಪವು” ಎಲ್ಲರಿಗೂ ಆದರ್ಶವಾಗಲಿ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...