Homeಅಂತರಾಷ್ಟ್ರೀಯಅಮೆರಿಕಾ ಚುನಾವಣೆ: ಟ್ರಂಪ್ ಕುರಿತು ಬರ್ನಿ ಸ್ಯಾಂಡರ್ಸ್ ನುಡಿದಿದ್ದ ಭವಿಷ್ಯ ಸತ್ಯವಾದಾಗ!

ಅಮೆರಿಕಾ ಚುನಾವಣೆ: ಟ್ರಂಪ್ ಕುರಿತು ಬರ್ನಿ ಸ್ಯಾಂಡರ್ಸ್ ನುಡಿದಿದ್ದ ಭವಿಷ್ಯ ಸತ್ಯವಾದಾಗ!

ಡೆಮಾಕ್ರಟಿಕ್ ಪಕ್ಷದ ಹಿರಿಯ ಸೆನೆಟರ್ ಬರ್ನಿ ಸ್ಯಾಂಡರ್ಸ್ ವಿಡಿಯೋ ಇದೀಗ ವೈರಲ್ ಆಗಿದ್ದು, ಅವರು ಹೇಳಿದಂತೆಯೇ ಈಗ ಟ್ರಂಪ್ ಪ್ರತಿಕ್ರಿಯಿಸುತ್ತಿದ್ದಾರೆ.

- Advertisement -
- Advertisement -

ಈ ಬಾರಿಯ ಅಮೆರಿಕಾ ಅಧ್ಯಕ್ಷೀಯ ಚುನಾವಣೆ ಹೇಗೆ ನಡೆಯುತ್ತದೆ ಮತ್ತು ಅದಕ್ಕೆ ಡೊನಾಲ್ಡ್ ಟ್ರಂಪ್ ಹೇಗೆ ಪ್ರತಿಕ್ರಿಯಿಸುತ್ತಾರೆ ಎಂಬ ಬಗ್ಗೆ ಸುಮಾರು ಎರಡು ವಾರಗಳ ಹಿಂದೆ ಡೆಮಾಕ್ರಟಿಕ್ ಪಕ್ಷದ ಹಿರಿಯ ಸೆನೆಟರ್ ಬರ್ನಿ ಸ್ಯಾಂಡರ್ಸ್ ಹೇಳಿದ ಮಾತುಗಳಂತೆ ಪ್ರಸ್ತುತ ಡೊನಾಲ್ಡ್ ಟ್ರಂಪ್ ಪ್ರತಿಕ್ರಿಯಿಸುತ್ತಿದ್ದು, ಅವರ ವಿಡಿಯೋ ಇದೀಗ ವೈರಲ್ ಆಗಿದೆ.

ಕಳೆದ ತಿಂಗಳು ’ದಿ ಟುನೈಟ್ ಶೋ’ನಲ್ಲಿ ಕಾಣಿಸಿಕೊಂಡ 79 ವರ್ಷದ ಬರ್ನಿ ಸ್ಯಾಂಡರ್ಸ್ “ಈ ಚುನಾವಣೆಯಲ್ಲಿ ಮೇಲ್-ಇನ್ ಮತಪತ್ರಗಳ ಪ್ರವಾಹ ಉಂಟಾಗಲಿದ್ದು, ಈ ಎಣಿಕೆ ಪ್ರಕ್ರಿಯೆ ಪೂರ್ಣಗೊಳ್ಳುವಾಗ ವಿಳಂಬವಾಗಬಹುದು” ಎಂದು ಅವರು ಊಹಿಸಿದ್ದರು.

ಇದನ್ನೂ ಓದಿ: ಅಮೆರಿಕಾ ಚುನಾವಣೆ: ಟ್ರಂಪ್ ಪಾರುಪತ್ಯದ ರಾಜ್ಯಗಳಲ್ಲಿ ಜೋ ಬೈಡೆನ್ ಗೆಲುವು!

“ಫ್ಲೋರಿಡಾ ಅಥವಾ ವರ್ಮೊಂಟ್‌ನಂತಹ ರಾಜ್ಯಗಳಿಗೆ ಭಿನ್ನವಾಗಿ ಪೆನ್ಸಿಲ್ವೇನಿಯಾ, ಮಿಷಿಗನ್, ವಿಸ್ಕಾನ್ಸಿನ್ ಇತರ ರಾಜ್ಯಗಳಲ್ಲಿ ಹೆಚ್ಚಿನ ಪ್ರಮಾಣದ ಮೇಲ್-ಇನ್ ಮತಪತ್ರಗಳನ್ನು ಚಲಾವಣೆಯಾಗುತ್ತದೆ” ಎಂದು ಅವರು ಹೇಳಿದ್ದರು.

ಡೆಮೋಕ್ರಾಟ್‌ಗಳು ಮೇಲ್-ಇನ್ ಮತಪತ್ರಗಳನ್ನು ಬಳಸುವ ಸಾಧ್ಯತೆ ಹೆಚ್ಚಿದ್ದು, ಚುನಾವಣಾ ದಿನದಂದು ರಿಪಬ್ಲಿಕನ್ನರು ಮತದಾನ ಕೇಂದ್ರಗಳಿಗೆ ಕಾಲಿಡುವ ಸಾಧ್ಯತೆ ಹೆಚ್ಚು ಎಂದು ಅವರು ಹೇಳಿದ್ದಾರೆ.

“ಚುನಾವಣಾ ಮತ ಎಣಿಕೆಯ ರಾತ್ರಿ 10 ಗಂಟೆಗೆ ಟ್ರಂಪ್ ಮಿಷಿಗನ್, ಪೆನ್ಸಿಲ್ವೇನಿಯಾ, ವಿಸ್ಕಾನ್ಸಿನ್‌ನಲ್ಲಿ ಗೆಲ್ಲುತ್ತಿದ್ದಂತೆ, ’ನನ್ನನ್ನು ಮರು ಆಯ್ಕೆ ಮಾಡಿದ ಅಮೆರಿಕನ್ನರಿಗೆ ಧನ್ಯವಾದಗಳು, ಎಣಿಕೆ ಮುಗಿಯಿತು ಶುಭದಿನ’ ಎಂದು ಹೇಳುತ್ತಾರೆ” ಎಂದು ಬರ್ನಿ ಸ್ಯಾಂಡರ್ಸ್ ಭವಿಷ್ಯ ನುಡಿದಿದ್ದರು.

ಇದನ್ನೂ ಓದಿ:: ಸ್ನೇಹಿತರೊಂದಿಗೆ ಮಾತನಾಡುವ ವಿಧಾನವಲ್ಲ: ಭಾರತವನ್ನು ಹೊಲಸು ಎಂದಿದ್ದ ಟ್ರಂಪ್ ಮೇಲೆ ಜೋ ಬಿಡೆನ್ ವಾಗ್ದಾಳಿ

ಮುಂದುವರೆದು ಮಾತನಾಡಿರುವ ಬರ್ನಿ ಸ್ಯಾಂಡರ್ಸ್, “ಆದರೆ, ಮರುದಿನ ಎಲ್ಲಾ ಮೇಲ್-ಇನ್ ಮತಪತ್ರಗಳ ಎಣಿಕೆ ಪ್ರಾರಂಭವಾಗಿ ಬಿಡೆನ್ ಆ ರಾಜ್ಯಗಳನ್ನು ಗೆದ್ದಿದ್ದಾರೆ ಎಂದು ತಿಳಿಯುತ್ತಿದ್ದಂತೆ ಟ್ರಂಪ್ ಹೇಳುತ್ತಾರೆ, ‘ನೋಡಿ? ನಾನು ಹೇಳಿದ್ದೇನೆ ಇಡೀ ಪ್ರಕ್ರಿಯೆ ಮೋಸದಿಂದ ಕೂಡಿದೆ. ಮೇಲ್-ಇನ್ ಮತಪತ್ರಗಳು ತಿರುಚಲಾಗಿದೆ’ ಎಂದು ಹೇಳುತ್ತಾರೆ” ಎಂದು ಹೇಳಿದ್ದರು.

ಬರ್ನಿ ಸ್ಯಾಂಡರ್ಸ್ ಹೇಳಿದಂತೆ ನಿನ್ನೆ ನಡೆದಿದ್ದು ಮೊದಲಿಗೆ ಟ್ರಂಪ್ ತಾನು ಗೆದ್ದಿರುವುದಾಗಿ ಹೇಳಿಕೊಂಡಿದ್ದರು, ನಂತರ ಫಲಿತಾಂಶ ಜೋ ಬಿಡೆನ್ ಪರವಾಗಿ ಬದಲಾಗುತ್ತಿದ್ದಂತೆ ಪತ್ರಿಕಾಗೋಷ್ಠಿ ನಡೆಸಿದ ಟ್ರಂಪ್ “ನಾವು ಹಲವು ರಾಜ್ಯಗಳಲ್ಲಿ ಗೆದ್ದಿದ್ದೇವೆ ಮತ್ತು ಅದನ್ನು ಘೋಷಿಸಲು ಹೊರಟಿದ್ದೇವೆ. ಆದರೆ ನಂತರ ಇದ್ದಕ್ಕಿದ್ದಂತೆ ವಂಚನೆ ಸಂಭವಿಸಿದೆ. ಅಮೆರಿಕಾದ ಜನರಿಗೆ ಮೋಸ ಮಾಡಲು ನಾವು ಬಿಡುವುದಿಲ್ಲ, ನಾವು ಸುಪ್ರೀಂ ಕೋರ್ಟ್‌ಗೆ ಹೋಗಲಿದ್ದೇವೆ. ಎಲ್ಲ ಮತ ಎಣಿಕೆ ನಿಲ್ಲಿಸಬೇಕೆಂದು ನಾವು ಬಯಸುತ್ತೇವೆ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಮತದಾನದಲ್ಲಿ ವಂಚನೆ, ಸುಪ್ರೀಂಕೋರ್ಟ್‌ಗೆ ಹೋಗಲಿದ್ದೇವೆ: ಡೊನಾಲ್ಡ್ ಟ್ರಂಪ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...