Homeಅಂತರಾಷ್ಟ್ರೀಯಅಮೆರಿಕಾ ಚುನಾವಣೆ: ಟ್ರಂಪ್ ಕುರಿತು ಬರ್ನಿ ಸ್ಯಾಂಡರ್ಸ್ ನುಡಿದಿದ್ದ ಭವಿಷ್ಯ ಸತ್ಯವಾದಾಗ!

ಅಮೆರಿಕಾ ಚುನಾವಣೆ: ಟ್ರಂಪ್ ಕುರಿತು ಬರ್ನಿ ಸ್ಯಾಂಡರ್ಸ್ ನುಡಿದಿದ್ದ ಭವಿಷ್ಯ ಸತ್ಯವಾದಾಗ!

ಡೆಮಾಕ್ರಟಿಕ್ ಪಕ್ಷದ ಹಿರಿಯ ಸೆನೆಟರ್ ಬರ್ನಿ ಸ್ಯಾಂಡರ್ಸ್ ವಿಡಿಯೋ ಇದೀಗ ವೈರಲ್ ಆಗಿದ್ದು, ಅವರು ಹೇಳಿದಂತೆಯೇ ಈಗ ಟ್ರಂಪ್ ಪ್ರತಿಕ್ರಿಯಿಸುತ್ತಿದ್ದಾರೆ.

- Advertisement -
- Advertisement -

ಈ ಬಾರಿಯ ಅಮೆರಿಕಾ ಅಧ್ಯಕ್ಷೀಯ ಚುನಾವಣೆ ಹೇಗೆ ನಡೆಯುತ್ತದೆ ಮತ್ತು ಅದಕ್ಕೆ ಡೊನಾಲ್ಡ್ ಟ್ರಂಪ್ ಹೇಗೆ ಪ್ರತಿಕ್ರಿಯಿಸುತ್ತಾರೆ ಎಂಬ ಬಗ್ಗೆ ಸುಮಾರು ಎರಡು ವಾರಗಳ ಹಿಂದೆ ಡೆಮಾಕ್ರಟಿಕ್ ಪಕ್ಷದ ಹಿರಿಯ ಸೆನೆಟರ್ ಬರ್ನಿ ಸ್ಯಾಂಡರ್ಸ್ ಹೇಳಿದ ಮಾತುಗಳಂತೆ ಪ್ರಸ್ತುತ ಡೊನಾಲ್ಡ್ ಟ್ರಂಪ್ ಪ್ರತಿಕ್ರಿಯಿಸುತ್ತಿದ್ದು, ಅವರ ವಿಡಿಯೋ ಇದೀಗ ವೈರಲ್ ಆಗಿದೆ.

ಕಳೆದ ತಿಂಗಳು ’ದಿ ಟುನೈಟ್ ಶೋ’ನಲ್ಲಿ ಕಾಣಿಸಿಕೊಂಡ 79 ವರ್ಷದ ಬರ್ನಿ ಸ್ಯಾಂಡರ್ಸ್ “ಈ ಚುನಾವಣೆಯಲ್ಲಿ ಮೇಲ್-ಇನ್ ಮತಪತ್ರಗಳ ಪ್ರವಾಹ ಉಂಟಾಗಲಿದ್ದು, ಈ ಎಣಿಕೆ ಪ್ರಕ್ರಿಯೆ ಪೂರ್ಣಗೊಳ್ಳುವಾಗ ವಿಳಂಬವಾಗಬಹುದು” ಎಂದು ಅವರು ಊಹಿಸಿದ್ದರು.

ಇದನ್ನೂ ಓದಿ: ಅಮೆರಿಕಾ ಚುನಾವಣೆ: ಟ್ರಂಪ್ ಪಾರುಪತ್ಯದ ರಾಜ್ಯಗಳಲ್ಲಿ ಜೋ ಬೈಡೆನ್ ಗೆಲುವು!

“ಫ್ಲೋರಿಡಾ ಅಥವಾ ವರ್ಮೊಂಟ್‌ನಂತಹ ರಾಜ್ಯಗಳಿಗೆ ಭಿನ್ನವಾಗಿ ಪೆನ್ಸಿಲ್ವೇನಿಯಾ, ಮಿಷಿಗನ್, ವಿಸ್ಕಾನ್ಸಿನ್ ಇತರ ರಾಜ್ಯಗಳಲ್ಲಿ ಹೆಚ್ಚಿನ ಪ್ರಮಾಣದ ಮೇಲ್-ಇನ್ ಮತಪತ್ರಗಳನ್ನು ಚಲಾವಣೆಯಾಗುತ್ತದೆ” ಎಂದು ಅವರು ಹೇಳಿದ್ದರು.

ಡೆಮೋಕ್ರಾಟ್‌ಗಳು ಮೇಲ್-ಇನ್ ಮತಪತ್ರಗಳನ್ನು ಬಳಸುವ ಸಾಧ್ಯತೆ ಹೆಚ್ಚಿದ್ದು, ಚುನಾವಣಾ ದಿನದಂದು ರಿಪಬ್ಲಿಕನ್ನರು ಮತದಾನ ಕೇಂದ್ರಗಳಿಗೆ ಕಾಲಿಡುವ ಸಾಧ್ಯತೆ ಹೆಚ್ಚು ಎಂದು ಅವರು ಹೇಳಿದ್ದಾರೆ.

“ಚುನಾವಣಾ ಮತ ಎಣಿಕೆಯ ರಾತ್ರಿ 10 ಗಂಟೆಗೆ ಟ್ರಂಪ್ ಮಿಷಿಗನ್, ಪೆನ್ಸಿಲ್ವೇನಿಯಾ, ವಿಸ್ಕಾನ್ಸಿನ್‌ನಲ್ಲಿ ಗೆಲ್ಲುತ್ತಿದ್ದಂತೆ, ’ನನ್ನನ್ನು ಮರು ಆಯ್ಕೆ ಮಾಡಿದ ಅಮೆರಿಕನ್ನರಿಗೆ ಧನ್ಯವಾದಗಳು, ಎಣಿಕೆ ಮುಗಿಯಿತು ಶುಭದಿನ’ ಎಂದು ಹೇಳುತ್ತಾರೆ” ಎಂದು ಬರ್ನಿ ಸ್ಯಾಂಡರ್ಸ್ ಭವಿಷ್ಯ ನುಡಿದಿದ್ದರು.

ಇದನ್ನೂ ಓದಿ:: ಸ್ನೇಹಿತರೊಂದಿಗೆ ಮಾತನಾಡುವ ವಿಧಾನವಲ್ಲ: ಭಾರತವನ್ನು ಹೊಲಸು ಎಂದಿದ್ದ ಟ್ರಂಪ್ ಮೇಲೆ ಜೋ ಬಿಡೆನ್ ವಾಗ್ದಾಳಿ

ಮುಂದುವರೆದು ಮಾತನಾಡಿರುವ ಬರ್ನಿ ಸ್ಯಾಂಡರ್ಸ್, “ಆದರೆ, ಮರುದಿನ ಎಲ್ಲಾ ಮೇಲ್-ಇನ್ ಮತಪತ್ರಗಳ ಎಣಿಕೆ ಪ್ರಾರಂಭವಾಗಿ ಬಿಡೆನ್ ಆ ರಾಜ್ಯಗಳನ್ನು ಗೆದ್ದಿದ್ದಾರೆ ಎಂದು ತಿಳಿಯುತ್ತಿದ್ದಂತೆ ಟ್ರಂಪ್ ಹೇಳುತ್ತಾರೆ, ‘ನೋಡಿ? ನಾನು ಹೇಳಿದ್ದೇನೆ ಇಡೀ ಪ್ರಕ್ರಿಯೆ ಮೋಸದಿಂದ ಕೂಡಿದೆ. ಮೇಲ್-ಇನ್ ಮತಪತ್ರಗಳು ತಿರುಚಲಾಗಿದೆ’ ಎಂದು ಹೇಳುತ್ತಾರೆ” ಎಂದು ಹೇಳಿದ್ದರು.

ಬರ್ನಿ ಸ್ಯಾಂಡರ್ಸ್ ಹೇಳಿದಂತೆ ನಿನ್ನೆ ನಡೆದಿದ್ದು ಮೊದಲಿಗೆ ಟ್ರಂಪ್ ತಾನು ಗೆದ್ದಿರುವುದಾಗಿ ಹೇಳಿಕೊಂಡಿದ್ದರು, ನಂತರ ಫಲಿತಾಂಶ ಜೋ ಬಿಡೆನ್ ಪರವಾಗಿ ಬದಲಾಗುತ್ತಿದ್ದಂತೆ ಪತ್ರಿಕಾಗೋಷ್ಠಿ ನಡೆಸಿದ ಟ್ರಂಪ್ “ನಾವು ಹಲವು ರಾಜ್ಯಗಳಲ್ಲಿ ಗೆದ್ದಿದ್ದೇವೆ ಮತ್ತು ಅದನ್ನು ಘೋಷಿಸಲು ಹೊರಟಿದ್ದೇವೆ. ಆದರೆ ನಂತರ ಇದ್ದಕ್ಕಿದ್ದಂತೆ ವಂಚನೆ ಸಂಭವಿಸಿದೆ. ಅಮೆರಿಕಾದ ಜನರಿಗೆ ಮೋಸ ಮಾಡಲು ನಾವು ಬಿಡುವುದಿಲ್ಲ, ನಾವು ಸುಪ್ರೀಂ ಕೋರ್ಟ್‌ಗೆ ಹೋಗಲಿದ್ದೇವೆ. ಎಲ್ಲ ಮತ ಎಣಿಕೆ ನಿಲ್ಲಿಸಬೇಕೆಂದು ನಾವು ಬಯಸುತ್ತೇವೆ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಮತದಾನದಲ್ಲಿ ವಂಚನೆ, ಸುಪ್ರೀಂಕೋರ್ಟ್‌ಗೆ ಹೋಗಲಿದ್ದೇವೆ: ಡೊನಾಲ್ಡ್ ಟ್ರಂಪ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...