Homeಅಂತರಾಷ್ಟ್ರೀಯಅಮೆರಿಕಾ ಚುನಾವಣೆ: ಟ್ರಂಪ್ ಕುರಿತು ಬರ್ನಿ ಸ್ಯಾಂಡರ್ಸ್ ನುಡಿದಿದ್ದ ಭವಿಷ್ಯ ಸತ್ಯವಾದಾಗ!

ಅಮೆರಿಕಾ ಚುನಾವಣೆ: ಟ್ರಂಪ್ ಕುರಿತು ಬರ್ನಿ ಸ್ಯಾಂಡರ್ಸ್ ನುಡಿದಿದ್ದ ಭವಿಷ್ಯ ಸತ್ಯವಾದಾಗ!

ಡೆಮಾಕ್ರಟಿಕ್ ಪಕ್ಷದ ಹಿರಿಯ ಸೆನೆಟರ್ ಬರ್ನಿ ಸ್ಯಾಂಡರ್ಸ್ ವಿಡಿಯೋ ಇದೀಗ ವೈರಲ್ ಆಗಿದ್ದು, ಅವರು ಹೇಳಿದಂತೆಯೇ ಈಗ ಟ್ರಂಪ್ ಪ್ರತಿಕ್ರಿಯಿಸುತ್ತಿದ್ದಾರೆ.

- Advertisement -
- Advertisement -

ಈ ಬಾರಿಯ ಅಮೆರಿಕಾ ಅಧ್ಯಕ್ಷೀಯ ಚುನಾವಣೆ ಹೇಗೆ ನಡೆಯುತ್ತದೆ ಮತ್ತು ಅದಕ್ಕೆ ಡೊನಾಲ್ಡ್ ಟ್ರಂಪ್ ಹೇಗೆ ಪ್ರತಿಕ್ರಿಯಿಸುತ್ತಾರೆ ಎಂಬ ಬಗ್ಗೆ ಸುಮಾರು ಎರಡು ವಾರಗಳ ಹಿಂದೆ ಡೆಮಾಕ್ರಟಿಕ್ ಪಕ್ಷದ ಹಿರಿಯ ಸೆನೆಟರ್ ಬರ್ನಿ ಸ್ಯಾಂಡರ್ಸ್ ಹೇಳಿದ ಮಾತುಗಳಂತೆ ಪ್ರಸ್ತುತ ಡೊನಾಲ್ಡ್ ಟ್ರಂಪ್ ಪ್ರತಿಕ್ರಿಯಿಸುತ್ತಿದ್ದು, ಅವರ ವಿಡಿಯೋ ಇದೀಗ ವೈರಲ್ ಆಗಿದೆ.

ಕಳೆದ ತಿಂಗಳು ’ದಿ ಟುನೈಟ್ ಶೋ’ನಲ್ಲಿ ಕಾಣಿಸಿಕೊಂಡ 79 ವರ್ಷದ ಬರ್ನಿ ಸ್ಯಾಂಡರ್ಸ್ “ಈ ಚುನಾವಣೆಯಲ್ಲಿ ಮೇಲ್-ಇನ್ ಮತಪತ್ರಗಳ ಪ್ರವಾಹ ಉಂಟಾಗಲಿದ್ದು, ಈ ಎಣಿಕೆ ಪ್ರಕ್ರಿಯೆ ಪೂರ್ಣಗೊಳ್ಳುವಾಗ ವಿಳಂಬವಾಗಬಹುದು” ಎಂದು ಅವರು ಊಹಿಸಿದ್ದರು.

ಇದನ್ನೂ ಓದಿ: ಅಮೆರಿಕಾ ಚುನಾವಣೆ: ಟ್ರಂಪ್ ಪಾರುಪತ್ಯದ ರಾಜ್ಯಗಳಲ್ಲಿ ಜೋ ಬೈಡೆನ್ ಗೆಲುವು!

“ಫ್ಲೋರಿಡಾ ಅಥವಾ ವರ್ಮೊಂಟ್‌ನಂತಹ ರಾಜ್ಯಗಳಿಗೆ ಭಿನ್ನವಾಗಿ ಪೆನ್ಸಿಲ್ವೇನಿಯಾ, ಮಿಷಿಗನ್, ವಿಸ್ಕಾನ್ಸಿನ್ ಇತರ ರಾಜ್ಯಗಳಲ್ಲಿ ಹೆಚ್ಚಿನ ಪ್ರಮಾಣದ ಮೇಲ್-ಇನ್ ಮತಪತ್ರಗಳನ್ನು ಚಲಾವಣೆಯಾಗುತ್ತದೆ” ಎಂದು ಅವರು ಹೇಳಿದ್ದರು.

ಡೆಮೋಕ್ರಾಟ್‌ಗಳು ಮೇಲ್-ಇನ್ ಮತಪತ್ರಗಳನ್ನು ಬಳಸುವ ಸಾಧ್ಯತೆ ಹೆಚ್ಚಿದ್ದು, ಚುನಾವಣಾ ದಿನದಂದು ರಿಪಬ್ಲಿಕನ್ನರು ಮತದಾನ ಕೇಂದ್ರಗಳಿಗೆ ಕಾಲಿಡುವ ಸಾಧ್ಯತೆ ಹೆಚ್ಚು ಎಂದು ಅವರು ಹೇಳಿದ್ದಾರೆ.

“ಚುನಾವಣಾ ಮತ ಎಣಿಕೆಯ ರಾತ್ರಿ 10 ಗಂಟೆಗೆ ಟ್ರಂಪ್ ಮಿಷಿಗನ್, ಪೆನ್ಸಿಲ್ವೇನಿಯಾ, ವಿಸ್ಕಾನ್ಸಿನ್‌ನಲ್ಲಿ ಗೆಲ್ಲುತ್ತಿದ್ದಂತೆ, ’ನನ್ನನ್ನು ಮರು ಆಯ್ಕೆ ಮಾಡಿದ ಅಮೆರಿಕನ್ನರಿಗೆ ಧನ್ಯವಾದಗಳು, ಎಣಿಕೆ ಮುಗಿಯಿತು ಶುಭದಿನ’ ಎಂದು ಹೇಳುತ್ತಾರೆ” ಎಂದು ಬರ್ನಿ ಸ್ಯಾಂಡರ್ಸ್ ಭವಿಷ್ಯ ನುಡಿದಿದ್ದರು.

ಇದನ್ನೂ ಓದಿ:: ಸ್ನೇಹಿತರೊಂದಿಗೆ ಮಾತನಾಡುವ ವಿಧಾನವಲ್ಲ: ಭಾರತವನ್ನು ಹೊಲಸು ಎಂದಿದ್ದ ಟ್ರಂಪ್ ಮೇಲೆ ಜೋ ಬಿಡೆನ್ ವಾಗ್ದಾಳಿ

ಮುಂದುವರೆದು ಮಾತನಾಡಿರುವ ಬರ್ನಿ ಸ್ಯಾಂಡರ್ಸ್, “ಆದರೆ, ಮರುದಿನ ಎಲ್ಲಾ ಮೇಲ್-ಇನ್ ಮತಪತ್ರಗಳ ಎಣಿಕೆ ಪ್ರಾರಂಭವಾಗಿ ಬಿಡೆನ್ ಆ ರಾಜ್ಯಗಳನ್ನು ಗೆದ್ದಿದ್ದಾರೆ ಎಂದು ತಿಳಿಯುತ್ತಿದ್ದಂತೆ ಟ್ರಂಪ್ ಹೇಳುತ್ತಾರೆ, ‘ನೋಡಿ? ನಾನು ಹೇಳಿದ್ದೇನೆ ಇಡೀ ಪ್ರಕ್ರಿಯೆ ಮೋಸದಿಂದ ಕೂಡಿದೆ. ಮೇಲ್-ಇನ್ ಮತಪತ್ರಗಳು ತಿರುಚಲಾಗಿದೆ’ ಎಂದು ಹೇಳುತ್ತಾರೆ” ಎಂದು ಹೇಳಿದ್ದರು.

ಬರ್ನಿ ಸ್ಯಾಂಡರ್ಸ್ ಹೇಳಿದಂತೆ ನಿನ್ನೆ ನಡೆದಿದ್ದು ಮೊದಲಿಗೆ ಟ್ರಂಪ್ ತಾನು ಗೆದ್ದಿರುವುದಾಗಿ ಹೇಳಿಕೊಂಡಿದ್ದರು, ನಂತರ ಫಲಿತಾಂಶ ಜೋ ಬಿಡೆನ್ ಪರವಾಗಿ ಬದಲಾಗುತ್ತಿದ್ದಂತೆ ಪತ್ರಿಕಾಗೋಷ್ಠಿ ನಡೆಸಿದ ಟ್ರಂಪ್ “ನಾವು ಹಲವು ರಾಜ್ಯಗಳಲ್ಲಿ ಗೆದ್ದಿದ್ದೇವೆ ಮತ್ತು ಅದನ್ನು ಘೋಷಿಸಲು ಹೊರಟಿದ್ದೇವೆ. ಆದರೆ ನಂತರ ಇದ್ದಕ್ಕಿದ್ದಂತೆ ವಂಚನೆ ಸಂಭವಿಸಿದೆ. ಅಮೆರಿಕಾದ ಜನರಿಗೆ ಮೋಸ ಮಾಡಲು ನಾವು ಬಿಡುವುದಿಲ್ಲ, ನಾವು ಸುಪ್ರೀಂ ಕೋರ್ಟ್‌ಗೆ ಹೋಗಲಿದ್ದೇವೆ. ಎಲ್ಲ ಮತ ಎಣಿಕೆ ನಿಲ್ಲಿಸಬೇಕೆಂದು ನಾವು ಬಯಸುತ್ತೇವೆ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಮತದಾನದಲ್ಲಿ ವಂಚನೆ, ಸುಪ್ರೀಂಕೋರ್ಟ್‌ಗೆ ಹೋಗಲಿದ್ದೇವೆ: ಡೊನಾಲ್ಡ್ ಟ್ರಂಪ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...