Homeಅಂತರಾಷ್ಟ್ರೀಯಅಮೆರಿಕಾ ಚುನಾವಣೆ: ಟ್ರಂಪ್ ಕುರಿತು ಬರ್ನಿ ಸ್ಯಾಂಡರ್ಸ್ ನುಡಿದಿದ್ದ ಭವಿಷ್ಯ ಸತ್ಯವಾದಾಗ!

ಅಮೆರಿಕಾ ಚುನಾವಣೆ: ಟ್ರಂಪ್ ಕುರಿತು ಬರ್ನಿ ಸ್ಯಾಂಡರ್ಸ್ ನುಡಿದಿದ್ದ ಭವಿಷ್ಯ ಸತ್ಯವಾದಾಗ!

ಡೆಮಾಕ್ರಟಿಕ್ ಪಕ್ಷದ ಹಿರಿಯ ಸೆನೆಟರ್ ಬರ್ನಿ ಸ್ಯಾಂಡರ್ಸ್ ವಿಡಿಯೋ ಇದೀಗ ವೈರಲ್ ಆಗಿದ್ದು, ಅವರು ಹೇಳಿದಂತೆಯೇ ಈಗ ಟ್ರಂಪ್ ಪ್ರತಿಕ್ರಿಯಿಸುತ್ತಿದ್ದಾರೆ.

- Advertisement -
- Advertisement -

ಈ ಬಾರಿಯ ಅಮೆರಿಕಾ ಅಧ್ಯಕ್ಷೀಯ ಚುನಾವಣೆ ಹೇಗೆ ನಡೆಯುತ್ತದೆ ಮತ್ತು ಅದಕ್ಕೆ ಡೊನಾಲ್ಡ್ ಟ್ರಂಪ್ ಹೇಗೆ ಪ್ರತಿಕ್ರಿಯಿಸುತ್ತಾರೆ ಎಂಬ ಬಗ್ಗೆ ಸುಮಾರು ಎರಡು ವಾರಗಳ ಹಿಂದೆ ಡೆಮಾಕ್ರಟಿಕ್ ಪಕ್ಷದ ಹಿರಿಯ ಸೆನೆಟರ್ ಬರ್ನಿ ಸ್ಯಾಂಡರ್ಸ್ ಹೇಳಿದ ಮಾತುಗಳಂತೆ ಪ್ರಸ್ತುತ ಡೊನಾಲ್ಡ್ ಟ್ರಂಪ್ ಪ್ರತಿಕ್ರಿಯಿಸುತ್ತಿದ್ದು, ಅವರ ವಿಡಿಯೋ ಇದೀಗ ವೈರಲ್ ಆಗಿದೆ.

ಕಳೆದ ತಿಂಗಳು ’ದಿ ಟುನೈಟ್ ಶೋ’ನಲ್ಲಿ ಕಾಣಿಸಿಕೊಂಡ 79 ವರ್ಷದ ಬರ್ನಿ ಸ್ಯಾಂಡರ್ಸ್ “ಈ ಚುನಾವಣೆಯಲ್ಲಿ ಮೇಲ್-ಇನ್ ಮತಪತ್ರಗಳ ಪ್ರವಾಹ ಉಂಟಾಗಲಿದ್ದು, ಈ ಎಣಿಕೆ ಪ್ರಕ್ರಿಯೆ ಪೂರ್ಣಗೊಳ್ಳುವಾಗ ವಿಳಂಬವಾಗಬಹುದು” ಎಂದು ಅವರು ಊಹಿಸಿದ್ದರು.

ಇದನ್ನೂ ಓದಿ: ಅಮೆರಿಕಾ ಚುನಾವಣೆ: ಟ್ರಂಪ್ ಪಾರುಪತ್ಯದ ರಾಜ್ಯಗಳಲ್ಲಿ ಜೋ ಬೈಡೆನ್ ಗೆಲುವು!

“ಫ್ಲೋರಿಡಾ ಅಥವಾ ವರ್ಮೊಂಟ್‌ನಂತಹ ರಾಜ್ಯಗಳಿಗೆ ಭಿನ್ನವಾಗಿ ಪೆನ್ಸಿಲ್ವೇನಿಯಾ, ಮಿಷಿಗನ್, ವಿಸ್ಕಾನ್ಸಿನ್ ಇತರ ರಾಜ್ಯಗಳಲ್ಲಿ ಹೆಚ್ಚಿನ ಪ್ರಮಾಣದ ಮೇಲ್-ಇನ್ ಮತಪತ್ರಗಳನ್ನು ಚಲಾವಣೆಯಾಗುತ್ತದೆ” ಎಂದು ಅವರು ಹೇಳಿದ್ದರು.

ಡೆಮೋಕ್ರಾಟ್‌ಗಳು ಮೇಲ್-ಇನ್ ಮತಪತ್ರಗಳನ್ನು ಬಳಸುವ ಸಾಧ್ಯತೆ ಹೆಚ್ಚಿದ್ದು, ಚುನಾವಣಾ ದಿನದಂದು ರಿಪಬ್ಲಿಕನ್ನರು ಮತದಾನ ಕೇಂದ್ರಗಳಿಗೆ ಕಾಲಿಡುವ ಸಾಧ್ಯತೆ ಹೆಚ್ಚು ಎಂದು ಅವರು ಹೇಳಿದ್ದಾರೆ.

“ಚುನಾವಣಾ ಮತ ಎಣಿಕೆಯ ರಾತ್ರಿ 10 ಗಂಟೆಗೆ ಟ್ರಂಪ್ ಮಿಷಿಗನ್, ಪೆನ್ಸಿಲ್ವೇನಿಯಾ, ವಿಸ್ಕಾನ್ಸಿನ್‌ನಲ್ಲಿ ಗೆಲ್ಲುತ್ತಿದ್ದಂತೆ, ’ನನ್ನನ್ನು ಮರು ಆಯ್ಕೆ ಮಾಡಿದ ಅಮೆರಿಕನ್ನರಿಗೆ ಧನ್ಯವಾದಗಳು, ಎಣಿಕೆ ಮುಗಿಯಿತು ಶುಭದಿನ’ ಎಂದು ಹೇಳುತ್ತಾರೆ” ಎಂದು ಬರ್ನಿ ಸ್ಯಾಂಡರ್ಸ್ ಭವಿಷ್ಯ ನುಡಿದಿದ್ದರು.

ಇದನ್ನೂ ಓದಿ:: ಸ್ನೇಹಿತರೊಂದಿಗೆ ಮಾತನಾಡುವ ವಿಧಾನವಲ್ಲ: ಭಾರತವನ್ನು ಹೊಲಸು ಎಂದಿದ್ದ ಟ್ರಂಪ್ ಮೇಲೆ ಜೋ ಬಿಡೆನ್ ವಾಗ್ದಾಳಿ

ಮುಂದುವರೆದು ಮಾತನಾಡಿರುವ ಬರ್ನಿ ಸ್ಯಾಂಡರ್ಸ್, “ಆದರೆ, ಮರುದಿನ ಎಲ್ಲಾ ಮೇಲ್-ಇನ್ ಮತಪತ್ರಗಳ ಎಣಿಕೆ ಪ್ರಾರಂಭವಾಗಿ ಬಿಡೆನ್ ಆ ರಾಜ್ಯಗಳನ್ನು ಗೆದ್ದಿದ್ದಾರೆ ಎಂದು ತಿಳಿಯುತ್ತಿದ್ದಂತೆ ಟ್ರಂಪ್ ಹೇಳುತ್ತಾರೆ, ‘ನೋಡಿ? ನಾನು ಹೇಳಿದ್ದೇನೆ ಇಡೀ ಪ್ರಕ್ರಿಯೆ ಮೋಸದಿಂದ ಕೂಡಿದೆ. ಮೇಲ್-ಇನ್ ಮತಪತ್ರಗಳು ತಿರುಚಲಾಗಿದೆ’ ಎಂದು ಹೇಳುತ್ತಾರೆ” ಎಂದು ಹೇಳಿದ್ದರು.

ಬರ್ನಿ ಸ್ಯಾಂಡರ್ಸ್ ಹೇಳಿದಂತೆ ನಿನ್ನೆ ನಡೆದಿದ್ದು ಮೊದಲಿಗೆ ಟ್ರಂಪ್ ತಾನು ಗೆದ್ದಿರುವುದಾಗಿ ಹೇಳಿಕೊಂಡಿದ್ದರು, ನಂತರ ಫಲಿತಾಂಶ ಜೋ ಬಿಡೆನ್ ಪರವಾಗಿ ಬದಲಾಗುತ್ತಿದ್ದಂತೆ ಪತ್ರಿಕಾಗೋಷ್ಠಿ ನಡೆಸಿದ ಟ್ರಂಪ್ “ನಾವು ಹಲವು ರಾಜ್ಯಗಳಲ್ಲಿ ಗೆದ್ದಿದ್ದೇವೆ ಮತ್ತು ಅದನ್ನು ಘೋಷಿಸಲು ಹೊರಟಿದ್ದೇವೆ. ಆದರೆ ನಂತರ ಇದ್ದಕ್ಕಿದ್ದಂತೆ ವಂಚನೆ ಸಂಭವಿಸಿದೆ. ಅಮೆರಿಕಾದ ಜನರಿಗೆ ಮೋಸ ಮಾಡಲು ನಾವು ಬಿಡುವುದಿಲ್ಲ, ನಾವು ಸುಪ್ರೀಂ ಕೋರ್ಟ್‌ಗೆ ಹೋಗಲಿದ್ದೇವೆ. ಎಲ್ಲ ಮತ ಎಣಿಕೆ ನಿಲ್ಲಿಸಬೇಕೆಂದು ನಾವು ಬಯಸುತ್ತೇವೆ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಮತದಾನದಲ್ಲಿ ವಂಚನೆ, ಸುಪ್ರೀಂಕೋರ್ಟ್‌ಗೆ ಹೋಗಲಿದ್ದೇವೆ: ಡೊನಾಲ್ಡ್ ಟ್ರಂಪ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...