Homeಅಂತರಾಷ್ಟ್ರೀಯಅಮೆರಿಕಾ ಚುನಾವಣೆ: ಟ್ರಂಪ್ ಕುರಿತು ಬರ್ನಿ ಸ್ಯಾಂಡರ್ಸ್ ನುಡಿದಿದ್ದ ಭವಿಷ್ಯ ಸತ್ಯವಾದಾಗ!

ಅಮೆರಿಕಾ ಚುನಾವಣೆ: ಟ್ರಂಪ್ ಕುರಿತು ಬರ್ನಿ ಸ್ಯಾಂಡರ್ಸ್ ನುಡಿದಿದ್ದ ಭವಿಷ್ಯ ಸತ್ಯವಾದಾಗ!

ಡೆಮಾಕ್ರಟಿಕ್ ಪಕ್ಷದ ಹಿರಿಯ ಸೆನೆಟರ್ ಬರ್ನಿ ಸ್ಯಾಂಡರ್ಸ್ ವಿಡಿಯೋ ಇದೀಗ ವೈರಲ್ ಆಗಿದ್ದು, ಅವರು ಹೇಳಿದಂತೆಯೇ ಈಗ ಟ್ರಂಪ್ ಪ್ರತಿಕ್ರಿಯಿಸುತ್ತಿದ್ದಾರೆ.

- Advertisement -
- Advertisement -

ಈ ಬಾರಿಯ ಅಮೆರಿಕಾ ಅಧ್ಯಕ್ಷೀಯ ಚುನಾವಣೆ ಹೇಗೆ ನಡೆಯುತ್ತದೆ ಮತ್ತು ಅದಕ್ಕೆ ಡೊನಾಲ್ಡ್ ಟ್ರಂಪ್ ಹೇಗೆ ಪ್ರತಿಕ್ರಿಯಿಸುತ್ತಾರೆ ಎಂಬ ಬಗ್ಗೆ ಸುಮಾರು ಎರಡು ವಾರಗಳ ಹಿಂದೆ ಡೆಮಾಕ್ರಟಿಕ್ ಪಕ್ಷದ ಹಿರಿಯ ಸೆನೆಟರ್ ಬರ್ನಿ ಸ್ಯಾಂಡರ್ಸ್ ಹೇಳಿದ ಮಾತುಗಳಂತೆ ಪ್ರಸ್ತುತ ಡೊನಾಲ್ಡ್ ಟ್ರಂಪ್ ಪ್ರತಿಕ್ರಿಯಿಸುತ್ತಿದ್ದು, ಅವರ ವಿಡಿಯೋ ಇದೀಗ ವೈರಲ್ ಆಗಿದೆ.

ಕಳೆದ ತಿಂಗಳು ’ದಿ ಟುನೈಟ್ ಶೋ’ನಲ್ಲಿ ಕಾಣಿಸಿಕೊಂಡ 79 ವರ್ಷದ ಬರ್ನಿ ಸ್ಯಾಂಡರ್ಸ್ “ಈ ಚುನಾವಣೆಯಲ್ಲಿ ಮೇಲ್-ಇನ್ ಮತಪತ್ರಗಳ ಪ್ರವಾಹ ಉಂಟಾಗಲಿದ್ದು, ಈ ಎಣಿಕೆ ಪ್ರಕ್ರಿಯೆ ಪೂರ್ಣಗೊಳ್ಳುವಾಗ ವಿಳಂಬವಾಗಬಹುದು” ಎಂದು ಅವರು ಊಹಿಸಿದ್ದರು.

ಇದನ್ನೂ ಓದಿ: ಅಮೆರಿಕಾ ಚುನಾವಣೆ: ಟ್ರಂಪ್ ಪಾರುಪತ್ಯದ ರಾಜ್ಯಗಳಲ್ಲಿ ಜೋ ಬೈಡೆನ್ ಗೆಲುವು!

“ಫ್ಲೋರಿಡಾ ಅಥವಾ ವರ್ಮೊಂಟ್‌ನಂತಹ ರಾಜ್ಯಗಳಿಗೆ ಭಿನ್ನವಾಗಿ ಪೆನ್ಸಿಲ್ವೇನಿಯಾ, ಮಿಷಿಗನ್, ವಿಸ್ಕಾನ್ಸಿನ್ ಇತರ ರಾಜ್ಯಗಳಲ್ಲಿ ಹೆಚ್ಚಿನ ಪ್ರಮಾಣದ ಮೇಲ್-ಇನ್ ಮತಪತ್ರಗಳನ್ನು ಚಲಾವಣೆಯಾಗುತ್ತದೆ” ಎಂದು ಅವರು ಹೇಳಿದ್ದರು.

ಡೆಮೋಕ್ರಾಟ್‌ಗಳು ಮೇಲ್-ಇನ್ ಮತಪತ್ರಗಳನ್ನು ಬಳಸುವ ಸಾಧ್ಯತೆ ಹೆಚ್ಚಿದ್ದು, ಚುನಾವಣಾ ದಿನದಂದು ರಿಪಬ್ಲಿಕನ್ನರು ಮತದಾನ ಕೇಂದ್ರಗಳಿಗೆ ಕಾಲಿಡುವ ಸಾಧ್ಯತೆ ಹೆಚ್ಚು ಎಂದು ಅವರು ಹೇಳಿದ್ದಾರೆ.

“ಚುನಾವಣಾ ಮತ ಎಣಿಕೆಯ ರಾತ್ರಿ 10 ಗಂಟೆಗೆ ಟ್ರಂಪ್ ಮಿಷಿಗನ್, ಪೆನ್ಸಿಲ್ವೇನಿಯಾ, ವಿಸ್ಕಾನ್ಸಿನ್‌ನಲ್ಲಿ ಗೆಲ್ಲುತ್ತಿದ್ದಂತೆ, ’ನನ್ನನ್ನು ಮರು ಆಯ್ಕೆ ಮಾಡಿದ ಅಮೆರಿಕನ್ನರಿಗೆ ಧನ್ಯವಾದಗಳು, ಎಣಿಕೆ ಮುಗಿಯಿತು ಶುಭದಿನ’ ಎಂದು ಹೇಳುತ್ತಾರೆ” ಎಂದು ಬರ್ನಿ ಸ್ಯಾಂಡರ್ಸ್ ಭವಿಷ್ಯ ನುಡಿದಿದ್ದರು.

ಇದನ್ನೂ ಓದಿ:: ಸ್ನೇಹಿತರೊಂದಿಗೆ ಮಾತನಾಡುವ ವಿಧಾನವಲ್ಲ: ಭಾರತವನ್ನು ಹೊಲಸು ಎಂದಿದ್ದ ಟ್ರಂಪ್ ಮೇಲೆ ಜೋ ಬಿಡೆನ್ ವಾಗ್ದಾಳಿ

ಮುಂದುವರೆದು ಮಾತನಾಡಿರುವ ಬರ್ನಿ ಸ್ಯಾಂಡರ್ಸ್, “ಆದರೆ, ಮರುದಿನ ಎಲ್ಲಾ ಮೇಲ್-ಇನ್ ಮತಪತ್ರಗಳ ಎಣಿಕೆ ಪ್ರಾರಂಭವಾಗಿ ಬಿಡೆನ್ ಆ ರಾಜ್ಯಗಳನ್ನು ಗೆದ್ದಿದ್ದಾರೆ ಎಂದು ತಿಳಿಯುತ್ತಿದ್ದಂತೆ ಟ್ರಂಪ್ ಹೇಳುತ್ತಾರೆ, ‘ನೋಡಿ? ನಾನು ಹೇಳಿದ್ದೇನೆ ಇಡೀ ಪ್ರಕ್ರಿಯೆ ಮೋಸದಿಂದ ಕೂಡಿದೆ. ಮೇಲ್-ಇನ್ ಮತಪತ್ರಗಳು ತಿರುಚಲಾಗಿದೆ’ ಎಂದು ಹೇಳುತ್ತಾರೆ” ಎಂದು ಹೇಳಿದ್ದರು.

ಬರ್ನಿ ಸ್ಯಾಂಡರ್ಸ್ ಹೇಳಿದಂತೆ ನಿನ್ನೆ ನಡೆದಿದ್ದು ಮೊದಲಿಗೆ ಟ್ರಂಪ್ ತಾನು ಗೆದ್ದಿರುವುದಾಗಿ ಹೇಳಿಕೊಂಡಿದ್ದರು, ನಂತರ ಫಲಿತಾಂಶ ಜೋ ಬಿಡೆನ್ ಪರವಾಗಿ ಬದಲಾಗುತ್ತಿದ್ದಂತೆ ಪತ್ರಿಕಾಗೋಷ್ಠಿ ನಡೆಸಿದ ಟ್ರಂಪ್ “ನಾವು ಹಲವು ರಾಜ್ಯಗಳಲ್ಲಿ ಗೆದ್ದಿದ್ದೇವೆ ಮತ್ತು ಅದನ್ನು ಘೋಷಿಸಲು ಹೊರಟಿದ್ದೇವೆ. ಆದರೆ ನಂತರ ಇದ್ದಕ್ಕಿದ್ದಂತೆ ವಂಚನೆ ಸಂಭವಿಸಿದೆ. ಅಮೆರಿಕಾದ ಜನರಿಗೆ ಮೋಸ ಮಾಡಲು ನಾವು ಬಿಡುವುದಿಲ್ಲ, ನಾವು ಸುಪ್ರೀಂ ಕೋರ್ಟ್‌ಗೆ ಹೋಗಲಿದ್ದೇವೆ. ಎಲ್ಲ ಮತ ಎಣಿಕೆ ನಿಲ್ಲಿಸಬೇಕೆಂದು ನಾವು ಬಯಸುತ್ತೇವೆ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಮತದಾನದಲ್ಲಿ ವಂಚನೆ, ಸುಪ್ರೀಂಕೋರ್ಟ್‌ಗೆ ಹೋಗಲಿದ್ದೇವೆ: ಡೊನಾಲ್ಡ್ ಟ್ರಂಪ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....