Homeಅಂಕಣಗಳುಕಳೆದುಹೋದ ದಿನಗಳುಭಿನ್ನಾಭಿಪ್ರಾಯಗಳ ನಡುವೆಯೂ ಅಮರ ಸ್ನೇಹ: ಸಿ.ಎಂ ಪೂಣಚ್ಚ ಮತ್ತು ಗಣಪಯ್ಯ ಹೀಗಿದ್ದರು

ಭಿನ್ನಾಭಿಪ್ರಾಯಗಳ ನಡುವೆಯೂ ಅಮರ ಸ್ನೇಹ: ಸಿ.ಎಂ ಪೂಣಚ್ಚ ಮತ್ತು ಗಣಪಯ್ಯ ಹೀಗಿದ್ದರು

ಪೂಣಚ್ಚನವರು ತೀರಿಕೊಂಡಾಗ "ಸದಾ ಬಿಳಿ ಉಡುಪನ್ನು ಧರಿಸುತ್ತಿದ್ದ ಪೂಣಚ್ಚ ಕೊಳೆ ಮಾಡಿಕೊಳ್ಳದೆ, ಶುಭ್ರವಾಗಿಯೇ ನಿರ್ಗಮಿಸಿದರು" ಎಂದು ಲಂಕೇಶ್ ಬರೆದಿದ್ದರು...

- Advertisement -
- Advertisement -

ಕಳೆದುಹೋದ ದಿನಗಳು – 28

ಸಕಲೇಶಪುರಕ್ಕೆ ಬಂದ ನಂತರ ಗಣಪಯ್ಯನವರ ಕೊನೆಯ ದಿನಗಳವರೆಗೂ ಆಪ್ತ ಬಳಗದವರೆಂದು ಪರಿಗಣಿತವಾಗಿ ಇದ್ದವರು ಇಬ್ಬರು. ಒಬ್ಬರು ಸಿ.ಎಂ.ಪೂಣಚ್ಚ ಇನ್ನೊಬ್ಬರು  ಗ್ರೆಗೊರಿ ಮಥಾಯಿಸ್, ಪೂಣಚ್ಚನವರ ಪೂರ್ಣಿಮಾ ಎಸ್ಟೇಟ್ ಮತ್ತು ಗ್ರೆಗೊರಿ ಮಥಾಯಿಸ್ ಅವರ ಶ್ರೀನಿವಾಸ ಎಸ್ಟೇಟ್ ಇವೆರಡೂ ತೋಟಗಳು ಐವತ್ತರ ದಶಕದಿಂದಲೇ ಹಾರ್ಲೆ ಮ್ಯಾನೇಜ್ಮೆಂಟ್ ಸರ್ವಿಸಸ್ ಅಡಿಯಲ್ಲೇ ಇದ್ದವು. ಮಥಾಯಿಸ್ ಅವರು ಕೆಲಕಾಲ ಅಮೆರಿಕಾದಲ್ಲಿಯೂ ನಂತರ ಕರ್ನಾಟಕ ಮತ್ತು ಭಾರತ ಸರ್ಕಾರಗಳ ಹಿರಿಯ ಅಧಿಕಾರಿಯೂ ಆಗಿ ಇದ್ದುದರಿಂದ ತೋಟಕ್ಕೆ ಬರುತ್ತಿದ್ದುದು ಕಡಿಮೆಯೇ. ಅವರ ನಿವೃತ್ತಿಯ ನಂತರ ಕೆಲವು ಸಲ ತೋಟಕ್ಕೆ ಬಂದು ಇರುತ್ತಿದ್ದರು. ಅವರ ಮಗ ಜೆರೋಮ್ ಪೀಟರ್ ಮಥಾಯಿಸ್ ಹೃದ್ರೋಗ ತಜ್ಞ ವೈದ್ಯರಾಗಿ ಅಮೆರಿಕಾದಲ್ಲಿ ನೆಲೆಸಿದ್ದಾರೆ. ಶ್ರೀನಿವಾಸ ಎಸ್ಟೇಟ್‌ನ ಒಡೆತನವನ್ನು ಇನ್ನೂ ಉಳಿಸಿಕೊಂಡಿದ್ದಾರೆ.

ಪೂಣಚ್ಚನವರು ರಾಜಕೀಯದಿಂದ ನಿವೃತ್ತರಾದನಂತರ ಒಮ್ಮೊಮ್ಮೆ ತೋಟಕ್ಕೆ ಬರುತ್ತಿದ್ದರು.

ಸಾಹಿತ್ಯದ ಅಭ್ಯಾಸಿಯಾಗಿದ್ದ ಅವರು ತಮ್ಮ ವೃತ್ತಿಜೀವನವನ್ನು ಪ್ರಾರಂಭಿಸಿದ್ದು ಮಡಿಕೇರಿಯ “ಕೊಡಗು” ಪತ್ರಿಕೆಯ ಸಂಪಾದಕರಾಗಿ. ನಂತರ ಅವರು ರಾಜಕಾರಣದಲ್ಲಿ ತೊಡಗಿದರು. ಆದ್ದರಿಂದ ಅವರಿಗೆ ಸಾಂಸ್ಕೃತಿಕ ಚುಟುವಟಿಕೆಗಳಲ್ಲಿಯೂ ಒಲವಿತ್ತು.

ಪೂಣಚ್ಚನವರು ಕೇಂದ್ರ ಸಚಿವರಾಗಿದ್ದಾಗ ಮತ್ತು ನಂತರ ರಾಜ್ಯಪಾಲರಾಗಿದ್ದ ಅವಧಿಯಲ್ಲಿಯೂ ನಮ್ಮ ನಾಟಕ ಪ್ರದರ್ಶನವಿದ್ದಾಗ ಅದರ ಆಹ್ವಾನ ಪತ್ರವನ್ನಿಟ್ಟು ಅವರಿಗೆ ಕಾಗದ ಬರೆಯುತ್ತಿದೆ. ಅವರ ಅಷ್ಟೆಲ್ಲ ಕೆಲಸಕಾರ್ಯಗಳ ನಡುವೆಯೂ ನಮ್ಮ ನಮ್ಮ ನಾಟಕಕ್ಕೆ ಶುಭಹಾರೈಸಿ ಪತ್ರ ಬರೆಯುತ್ತಿದ್ದರು.

ಒಮ್ಮೆ ಪೂಣಚ್ಚನವರು ತೋಟಕ್ಕೆ ಬಂದಾಗ ನಾನು ಇದುವರೆಗೆ ನಿಮ್ಮ ನಾಟಕಗಳನ್ನು ನೋಡಲಾಗಲಿಲ್ಲ. ಇನ್ನೊಮ್ಮೆ ಬಂದಾಗ ಸಾಧ್ಯವಾದರೆ ನೋಡುತ್ತೇನೆ ಎಂದಿದ್ದರು. ನೀವು ಬರುವ ಕಾರ್ಯಕ್ರಮವನ್ನು ಒಂದು ತಿಂಗಳಿಗೆ ಮೊದಲು ತಿಳಿಸಿದರೆ ನಾನು ಏನಾದರೂ ಮಾಡಬಹುದು ಎಂದಿದ್ದೆ.

ಆ ವರ್ಷ ನಾವು ಮಹದೇವ ಬಣಕಾರ ಅವರ “ಮಕ್ಕಳಿರಲವ್ವ ಮನೆತುಂಬ” ಎಂಬ ನಾಟಕವನ್ನು ತೆಗೆದುಕೊಂಡಿದ್ದೆವು. ಮೊದಲ ಪ್ರದರ್ಶನವಾದಾಗ ಎಂದಿನಂತೆ ಪೂಣಚ್ಚನವರಿಗೆ ಪತ್ರ ಬರೆದಿದ್ದೆ. ಅವರಿಗೆ ಬರಲು ಸಾಧ್ಯವಾಗಿರಲಿಲ್ಲ. ಕೆಲವೇ ದಿನಗಳಲ್ಲಿ “ಮುಂದಿನ ತಿಂಗಳ ಮೊದಲವಾರದಲ್ಲಿ ಬರುತ್ತೇನೆ, ನಾಟಕ ಪ್ರದರ್ಶನ ಮಾಡಲು ಸಾಧ್ಯವೇ?” ಎಂದು ಪತ್ರಬರೆದಿದ್ದರು.

ನಾವು ಮತ್ತೆ ಉತ್ಸಾಹದಿಂದ ತಾಲೀಮು ಪ್ರಾರಂಭಿಸಿದೆವು. ಅವರಿಗಾಗಿ ಒಂದು ಪ್ರದರ್ಶನ ಮಾಡಲು ಸಿದ್ಧರಾದೆವು.

ಪೂಣಚ್ಚ ದಂಪತಿ (ಶ್ರೀಮತಿ ಗಂಗವ್ವ ಪೂಣಚ್ಚ) ತೋಟದಲ್ಲೇ ಬಂದು ಉಳಿದಿದ್ದರು. ತೋಟದ ಕಾಫಿ ಕಣದ ಪಕ್ಕದಲ್ಲೇ ನಾವು ರಂಗವೇದಿಕೆಯನ್ನು ಸಿದ್ಧಮಾಡಿಕೊಂಡು, ಸಾರ್ವಜನಿಕರಿಗೂ ಮುಕ್ತ ಪ್ರವೇಶ ಇಟ್ಟೆವು. ಈ ಪದ್ಧತಿ ಹಾರ್ಲೆ ಗುಂಪಿನ ಎಲ್ಲ ಸಂಸ್ಥೆಗಳಲ್ಲೂ ನಡೆದು ಬಂದ ರೀತಿ. ಹಾರ್ಲೆ ಎಸ್ಟೇಟಿನಲ್ಲಿ ಯಾವುದೇ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿ ಅಲ್ಲಿ ಸುತ್ತಲಿನ ಗ್ರಾಮಸ್ಥರಿಗೂ ಮುಕ್ತ ಪ್ರವೇಶ.

ನಮ್ಮ ನಾಟಕ ಪ್ರದರ್ಶನಕ್ಕೆ ಅಂದು ಗಣಪಯ್ಯನವರೂ ಬಂದರು. ಅವರಿಗೆ ಬೆಂಗಳೂರಿನಲ್ಲಿ ಆದ ರಸ್ತೆ ಅಪಘಾತದಿಂದ ಕಾಲಿಗೆ ಪೆಟ್ಟಾದದ್ದು ಇನ್ನೂ ವಾಸಿಯಾಗಿರಲಿಲ್ಲ. ಕಾಲಿಗೆ ಕಟ್ಟಿದ ಪಟ್ಟಿಗಳು ಹಾಗೇ ಇದ್ದವು. ಆದರೂ ಸಂಜೆ ಬಂದು ಗೆಳೆಯನ ಜೊತೆ ಕುಳಿತು ಇಡೀ ನಾಟಕ ನೋಡಿದರು.

ನಾವು ಆಡಿದ ನಾಟಕ ಮಕ್ಕಳಿರಲವ್ವ ಮನೆತುಂಬ ಜನಸಂಖ್ಯಾ ನಿಯಂತ್ರಣದ ಅಗತ್ಯದ ಬಗ್ಗೆ ಇತ್ತು. ನಾಟಕದ ನಂತರ ಮಾತಾಡಿದ ಪೂಣಚ್ಚ ಸಂಜಯ ಗಾಂಧಿಯ ಪ್ರಸ್ತಾಪ ಮಾಡಿ, “ನಾವು ಸಂಜಯಗಾಂಧಿಯವರ ರಾಜಕೀಯವನ್ನು ಮತ್ತು ಅನೇಕ ಕ್ರಮಗಳನ್ನು ವಿರೋಧಿಸಬಹುದು, ಆದರೆ ಅವರ ಕಾರ್ಯಕ್ರಮಗಳಲ್ಲಿ ಎರಡು ವಿಚಾರಗಳಿಗೆ ನಮ್ಮ ವಿರೋಧ ಇರಬಾರದು. ಆ ಕಾರ್ಯಕ್ರಮಗಳನ್ನು ಜಾರಿಗೊಳಿಸುವಾಗ ಆದ ತಪ್ಪುಗಳನ್ನು ತಿದ್ದಿಕೊಳ್ಳಬೇಕು. ಆದರೆ ಜನಸಂಖ್ಯಾ ನಿಯಂತ್ರಣ ಮತ್ತು ವ್ಯಾಪಕವಾದ ಅರಣ್ಯೀಕರಣ ಇವೆರಡು ವಿಷಯಗಳನ್ನು ನಾವು ಎಲ್ಲ ರಾಜಕಾರಣವನ್ನು ಬದಿಗಿಟ್ಟು ಮುಕ್ತವಾಗಿ ಮುನ್ನಡೆಸಬೇಕು. ಇಲ್ಲದಿದ್ದರೆ ಮುಂದೆ ದೊಡ್ಡ ಅನಾಹುತ ಕಾದಿದೆ. ಇದು ಭಾರತಕ್ಕೆ ಮಾತ್ರವಲ್ಲ ವಿಶ್ವಕ್ಕೇ ಅನ್ವಯಿಸುವ ವಿಷಯ” ಎಂದರು.

ನಾಟಕ ಮಕ್ಕಳಿರಲವ್ವ ಮನೆತುಂಬ 1986 ರಲ್ಲಿ

ಅದು ಈ ಗೆಳೆಯರಿಬ್ಬರು ಒಟ್ಟಿಗೆ ಕುಳಿತು ಮಾತಾಡಿದ ಕೊನೆಯ ಸಂದರ್ಭವಾಗಿತ್ತು. ನಂತರ ಮೊದಲು ಅಗಲಿದವರು ಗಣಪಯ್ಯನವರೇ.

ಇಬ್ಬರೂ ಗಾಂಧಿ ಅನುಯಾಯಿಗಳು, ಆದರೆ ರಾಜಕೀಯವಾಗಿ ವಿಭಿನ್ನ ಹಾದಿ ಹಿಡಿದವರು. ಪೂಣಚ್ಚ ಕೊನೆಯವರೆಗೂ ಗಣಪಯ್ಯನವರನ್ನು ತನ್ನ ಗುರುಗಳೆಂದೇ ಹೇಳುತ್ತಿದ್ದರು.

ಅಂದಿನ ದಿನಗಳ ಸೊಬಗಿದು.

ಗಾಂಧಿಯಿಂದ ಪ್ರಭಾವಿತರಾಗಿ ಸರಳ ಜೀವನ ನಡೆಸುತ್ತಾ ರಾಜಾಜಿ ಅನುಯಾಯಿಯೂ ಆಗಿ ನಿಜವಾದ ಅರ್ಥದ ಬಲಪಂಥೀಯ ಆರ್ಥಿಕ ಚಿಂತನೆಯ ಸ್ವತಂತ್ರ ಪಾರ್ಟಿಯಲ್ಲಿ ಇದ್ದು ಕಾಂಗ್ರೆಸ್‌ನ ಕಡು ವಿರೋಧಿಯೂ ವೈಯಕ್ತಿಕವಾಗಿ ಸಮಾಜ ಸೇವಕರೂ ಆಗಿದ್ದ ಗಣಪಯ್ಯ.

ಕಾಂಗ್ರೆಸ್‌ನ ಅನುಯಾಯಿಯಾಗಿ ಇಂದಿರಾ ಸರ್ಕಾರದಲ್ಲಿ ಮಂತ್ರಿಯಾಗಿ ನಂತರ ತುರ್ತುಸ್ಥಿತಿ ಯನ್ನು ವಿರೋಧಿಸಿದರೂ ನಂತರ ಮತ್ತೆ ಇಂದಿರಾ ಸರ್ಕಾರ ಬಂದಾಗಲೂ ಮತ್ತೆ ರಾಜ್ಯಪಾಲರಾಗಿ ಮುಂದುವರಿದ ಪೂಣಚ್ಚ ಇವರಿಬ್ಬರಲ್ಲಿ ರಾಜಕೀಯವನ್ನು ಮೀರಿದ ಸ್ನೇಹ ಸಾಧ್ಯವಾಗಿತ್ತು.

ತನ್ನನ್ನು ವಿರೋಧಿಸಿ ಜನತಾ ಪಾಳೆಯ ಸೇರಿದ ಪೂಣಚ್ಚ ಜನತಾ ಸರ್ಕಾರದಿಂದ ರಾಜ್ಯಪಾಲರಾಗಿ ನಿಯುಕ್ತರಾಗಿದ್ದರೂ ಇಂದಿರಾಗಾಂಧಿ ಮತ್ತೆ ತನಗೆ ಅಧಿಕಾರ ಬಂದಾಗ ಅವರನ್ನು ರಾಜ್ಯಪಾಲರಾಗಿ ಮುಂದುವರೆಸಿದ್ದು…..

ಇದು ಕೃಪೆಯಲ್ಲ ಯಾಕೆಂದರೆ ಪೂಣಚ್ಚನವರ ಪ್ರಾಮಾಣಿಕತೆಯ ಬಗ್ಗೆ ಇಂದಿರಾಗಾಂಧಿಗೂ ಅರಿವಿತ್ತು.

ಪೂಣಚ್ಚನವರು ತೀರಿಕೊಂಡಾಗ ಸಾಮಾನ್ಯವಾಗಿ ಮತ್ತು ಸುಲಭವಾಗಿ ಯಾವ ರಾಜಕಾರಣಿಗಳನ್ನು ಹೊಗಳದ ಲಂಕೇಶ್ “ಸದಾ ಬಿಳಿ ಉಡುಪನ್ನು ಧರಿಸುತ್ತಿದ್ದ ಪೂಣಚ್ಚ ಕೊಳೆ ಮಾಡಿಕೊಳ್ಳದೆ, ಶುಭ್ರವಾಗಿಯೇ ನಿರ್ಗಮಿಸಿದರು” ಎಂದು ಬರೆದರು.

ಇಂತಹ ಸಂಬಂಧಗಳೇ ಮರೆಯಾಗುತ್ತ ಭಿನ್ನಾಭಿಪ್ರಾಯ ಹೊಂದಿದವರೆಲ್ಲ ನಮ್ಮ ಶತ್ರುಗಳು ಎಂದುಕೊಳ್ಳುವ ಕಾಲದಲ್ಲಿ ನಾವೀಗ ಬದುಕುತ್ತಿದ್ದೇವೆ.

  • ಪ್ರಸಾದ್ ರಕ್ಷಿದಿ

(ಪ್ರಸಾದ್ ರಕ್ಷಿದಿಯವರು ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಬೆಳ್ಳೇಕೆರೆಯಲ್ಲಿ ಮೂರು ದಶಕಗಳಿಗೂ ಹೆಚ್ಚು ಕಾಲದಿಂದ ಸಾಂಸ್ಕೃತಿಕ, ಶೈಕ್ಷಣಿಕ ಹಾಗೂ ರಂಗಭೂಮಿ ಚಟುವಟಿಕೆಯಲ್ಲಿ ಕ್ರಿಯಾಶೀಲರಾಗಿದ್ದಾರೆ. ‘ಜೈ ಕರ್ನಾಟಕ ಸಂಘ’ ಎಂಬ ವೇದಿಕೆ ಸ್ಥಾಪಿಸಿದ ಅವರು ಸುತ್ತಲಿನ ಕಾರ್ಮಿಕರನ್ನೆಲ್ಲ ಒಟ್ಟುಹಾಕಿ ಅವರಿಗೆ ರಾತ್ರಿಶಾಲೆಗಳ ಮೂಲಕ ಅಕ್ಷರಾಭ್ಯಾಸ ಕಲಿಸಿದವರು. ಕೂಲಿ ಕಾರ್ಮಿಕರಿಗೆ ರಂಗಭೂಮಿಯ ಒಲವು ಮೂಡಿಸಿ, ನಾಟಕ ತಂಡವೊಂದನ್ನು ಕಟ್ಟಿ ಹತ್ತಾರು ನಾಟಕಗಳನ್ನು ಪ್ರದರ್ಶಿಸಿದ್ದಲ್ಲದೆ ರಾಜ್ಯ ಮಟ್ಟದಲ್ಲಿ ಪ್ರಥಮ ಬಹುಮಾನ ಗಳಿಸಿದ ಹೆಗ್ಗಳಿಕೆ ಅವರದು. ಶಾಲಾಭಿವೃದ್ದಿ, ಸಾವಯವ ಕೃಷಿ, ರಚನಾತ್ಮಕ ರಾಜಕೀಯ ಅವರ ಆಸಕ್ತಿಯ ಕ್ಷೇತ್ರಗಳು. ಅವರ `ಬೆಳ್ಳೇಕೆರೆ ಹಳ್ಳಿ ಥೇಟರ್’ ಈ ಎಲ್ಲಾ ಚಟುವಟಿಕೆಗಳನ್ನು ವಿವರಿಸುವ ಮಹತ್ವದ ಕೃತಿಯಾಗಿದೆ.)


ಇದನ್ನೂ ಓದಿ: ‘ನಮ್ಮ ಎಲುಬುಗಳ ಮೇಲೆ’ – ನಾವು ಪ್ರದರ್ಶಿಸಿದ ಮೊದಲ ನಾಟಕ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೊಸ ಕಾರ್ಮಿಕ ಕಾನೂನು ಶ್ರಮಿಕರ ಮೂಲಭೂತ ಹಕ್ಕುಗಳಿಗೆ ಕತ್ತರಿ!

"8 ಗಂಟೆ ಕೆಲಸ, 8 ಗಂಟೆ ಮನರಂಜನೆ, 8 ಗಂಟೆ ವಿಶ್ರಾಂತಿ" ಎಂಬ ತತ್ವವು ಸುಲಭವಾಗಿ ದೊರೆತದ್ದಲ್ಲ, ಇದು ದೀರ್ಘಕಾಲದ ಹೋರಾಟ, ತ್ಯಾಗ ಮತ್ತು ಏಕತೆಯ ಫಲವಾಗಿದೆ. ಕೆಲಸದ ಹೊರೆ ಅತಿಯಾಗಿ ಇದ್ದ...

ಮನರೇಗಾ ಯಶೋಗಾಥೆ: ಭಾಗ-1 ದಲಿತರು-ಮಹಿಳೆಯರಿಗೆ ಆರ್ಥಿಕ ಭದ್ರತೆ; ಗ್ರಾಮ ಸಬಲೀಕರಣಕ್ಕೆ ಮನರೇಗಾ ಕೊಟ್ಟ ಕೊಡುಗೆ ಅಪಾರ

2001-2004 ರವರೆಗಿನ ನಿರಂತರ ಬರ ಕರ್ನಾಟಕದ ಬಹುತೇಕ ಹಳ್ಳಿಗಳನ್ನು ಕಂಗಾಲಾಗಿಸಿದ್ದಂತೂ ನಿಜ. ಎಲ್ಲ ಕೆರೆಗಳು ಬತ್ತಿಹೋಗಿದ್ದರಿಂದ ದನಕರುಗಳಿಗೆ ನೀರು ಕುಡಿಸಲೂ ಜನ ಅಲೆದಾಡುತ್ತಿದ್ದರು. ಜನರಿಗೆ ಕುಡಿಯುವ ನೀರು ಪೂರೈಕೆ ಸಹ ಆ ಸಂದರ್ಭದಲ್ಲಿ...

ಮಣಿಪುರ: ಬುಡಕಟ್ಟು ಚರ್ಚ್ ನಾಯಕರ ಮೇಲೆ ಉಗ್ರ ದಾಳಿ:  ಹಲವೆಡೆ ಮೇಣದ ಬತ್ತಿಯ ಜೊತೆಗೆ ಶೋಕ ವ್ಯಕ್ತ ಪಡಿಸಿದ ಕುಕಿ ಸಮುದಾಯ 

ಇಂಫಾಲ್: ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಮೂವರು ಪ್ರಮುಖ ಕುಕಿ ಚರ್ಚ್ ನಾಯಕರನ್ನು ಹೊಂಚು ಹಾಕಿ ದಾಳಿ ನಡೆಸಿ ಕೊಲ್ಲಲಾಗಿದೆ. ಈ ಘಟನೆಯು ರಾಜ್ಯದಲ್ಲಿ ಜನಾಂಗೀಯ ಉದ್ವಿಗ್ನತೆಯನ್ನು ಮತ್ತಷ್ಟು ತೀವ್ರಗೊಳಿಸಿದೆ.  ಮೇ 13ರಂದು ಬೆಳಿಗ್ಗೆ ಚುರಾಚಂದ್‌ಪುರನಲ್ಲಿ...

ಗುಜರಾತ್| ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡಿದ ದಲಿತ ವರನ ಮೇಲೆ ಹಲ್ಲೆ

ಗುಜರಾತ್‌ನ ಮೆಹ್ಸಾನಾ ಜಿಲ್ಲೆಯ ಮಡಿ ಗ್ರಾಮದಲ್ಲಿ ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡುತ್ತಿದ್ದ ದಲಿತ ವರನ ಮೇಲೆ ಮೇಲ್ಜಾತಿಯ ಪುರುಷರ ಗುಂಪೊಂದು ಜಾತಿ ನಿಂದನೆ ಮಾಡಿ ನಿಂದಿಸಿದ್ದಾರೆ ಎಂದು ಆರೋಪಿಸಲಾಗಿದೆ. ಮೇ 10 ರಂದು...

ಆತಂಕಕಾರಿಯಾದ ಆನೆ ದಾಳಿ

ಆನೆ ದಾಳಿ ಹಿಂದೆಂದಿಗಿಂತಲೂ ದುಪ್ಪಟ್ಟಾಗಿದೆ. ಅರಣ್ಯಮಂತ್ರಿ ಈಶ್ವರ್ ಖಂಡ್ರೆಯವರ ಪ್ರಕಾರ ಆನೆಗಳ ಸಂಖ್ಯೆ ದುಪ್ಪಟ್ಟಾಗಿದೆ. ಕಾಡಿನ ಪ್ರಮಾಣ ಅಷ್ಟೆ ಇದೆ. ಅಂದರೆ ಕಾಡಿನ ಪ್ರಮಾಣ ಹೆಚ್ಚು ಮಾಡಬೇಕೆಂದರೆ ಮನುಷ್ಯರ ಆವಾಸ ಇಲ್ಲದೆ ಆನೆಗಳಿಗಾಗಿ...

ವೈದ್ಯಕೀಯ ಸೀಟುಗಳ ಹಂಚಿಕೆ ಕೇಂದ್ರೀಕರಣಕ್ಕೆ ದಕ್ಷಿಣದ ವಿರೋಧ; ನೀಟ್ ಪರೀಕ್ಷೆಯನ್ನೇ ರದ್ದುಗೊಳಿಸಲು ಇದು ಸಕಾಲ

ರಾಜ್ಯಪಟ್ಟಿಯಲ್ಲಿದ್ದ ಶಿಕ್ಷಣದ ಹಕ್ಕನ್ನು ನೀಟ್‌ ಹೆಸರಿನಲ್ಲಿ ಕೇಂದ್ರದ ಜಂಟಿ ಪಟ್ಟಿಗೆ ಸೇರಿಸುವ ಒಕ್ಕೂಟ ಸರ್ಕಾರದ ನಿರ್ಧಾರದಿಂದ ದಕ್ಷಿಣದ ರಾಜ್ಯಗಳು ಭಾರಿ ನಷ್ಟ ಅನುಭವಿಸುತ್ತಿವೆ. ಜೊತೆಗೆ, ನೀಟ್ ಪಾಸ್‌ ಮಾಡುವ ಒತ್ತಡ ತಾಳಲಾರದೆ ದೇಶದಾದ್ಯಂತ...

‘ಮತ’ ವ್ಯರ್ಥ ಮಾಡದ ಮತದಾರ: 2026ರಲ್ಲಿ ಕುಸಿಯಿತು ‘ನೋಟಾ’ ಅಬ್ಬರ

2026ರ ವಿಧಾನಸಭಾ ಚುನಾವಣೆಯಲ್ಲಿ ಅಸ್ಸಾಂ, ಕೇರಳ, ಪುದುಚೇರಿ, ತಮಿಳುನಾಡು ಮತ್ತು ಪಶ್ಚಿಮ ಬಂಗಾಳದಾದ್ಯಂತ ಸುಮಾರು 10.9 ಲಕ್ಷ ಮತಗಳು 'ನೋಟಾ' (ಯಾರಿಗೂ ಮತವಿಲ್ಲ) ಪಾಲಾಗಿವೆ. ಆದರೆ, 2016 ಮತ್ತು 2021ರ ಚುನಾವಣೆಗಳಿಗೆ ಹೋಲಿಸಿದರೆ...

ಕೇರಳದ 13ನೇ ಮುಖ್ಯಮಂತ್ರಿ ವಿ.ಡಿ. ಸತೀಶನ್: ವಿದ್ಯಾರ್ಥಿ ನಾಯಕನಿಂದ ಸಿಎಂ ಸ್ಥಾನದವರೆಗೆ ಸತೀಶನ್ ಪಯಣ

ತಿರುವನಂತಪುರಂ: ಕೇರಳಂನ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿದೆ. ಆ ಮೂಲಕ ಹಲವು ದಿನಗಳಿಂದ ಈ ಬಗ್ಗೆ ನಡೆಯುತ್ತಿದ್ದ ಕುತೂಹಲ ಮತ್ತು ಚರ್ಚೆಗಳಿಗೆ ತೆರೆ ಬಿದ್ದಿದೆ.  ಅಖಿಲ ಭಾರತ...

ದಲಿತರ ನ್ಯಾಯಕ್ಕೆ ಹೊಸ ಅಡ್ಡಿಯಾಗಲಿದೆಯೇ ‘ಸಾರ್ವಜನಿಕ ವೀಕ್ಷಣೆ’ ನಿಯಮ? ಪರಿಶಿಷ್ಟರನ್ನು ಆತಂಕಕ್ಕೆ ತಳ್ಳಿದ ಸುಪ್ರೀಂ ತೀರ್ಪು

ಸಾರ್ವಜನಿಕರು ನೋಡದ ಜಾಗದಲ್ಲಿ, ಅಂದರೆ ಯಾರೂ ನೋಡದ ಜಾಗದಲ್ಲಿ ಜಾತಿ ನಿಂದನೆ ಅಥವಾ ಅವಮಾನ ನಡೆದರೆ, ಅದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆ 1989ರ ಅಡಿಯಲ್ಲಿ ಅಪರಾಧ...

ಪಶ್ಚಿಮ ಬಂಗಾಳ: “ಇದು ಬುಲ್ಡೋಜರ್ ರಾಜ್ಯವಲ್ಲ”: ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಗುರುವಾರ ವಕೀಲರ ನಿಲುವಂಗಿಯನ್ನು ಧರಿಸಿ ಕಲ್ಕತ್ತಾ ಹೈಕೋರ್ಟ್‌ಗೆ ಬಂದ ಅವರು ವಿಧಾನಸಭಾ...