Homeಮುಖಪುಟಕವಿತಾ ಲಂಕೇಶ್‌ ನಿರ್ದೇಶನದ "ಗೌರಿ" ಸಾಕ್ಷ್ಯಚಿತ್ರಕ್ಕೆ ಬೆಸ್ಟ್ ಹ್ಯೂಮನ್ ರೈಟ್ಸ್ ಪ್ರಶಸ್ತಿ

ಕವಿತಾ ಲಂಕೇಶ್‌ ನಿರ್ದೇಶನದ “ಗೌರಿ” ಸಾಕ್ಷ್ಯಚಿತ್ರಕ್ಕೆ ಬೆಸ್ಟ್ ಹ್ಯೂಮನ್ ರೈಟ್ಸ್ ಪ್ರಶಸ್ತಿ

- Advertisement -
- Advertisement -

ಖ್ಯಾತ ನಿರ್ದೇಶಕಿ ಕವಿತಾ ಲಂಕೇಶ್‌ರವರು ನಿರ್ದೇಶಿಸಿರುವ ದಿಟ್ಟ ಪತ್ರಕರ್ತೆ ಗೌರಿ ಲಂಕೇಶ್‌ರವರ ಕುರಿತು “ಗೌರಿ” ಸಾಕ್ಷ್ಯಚಿತ್ರವು 2022ರ ಟೊರೊಂಟೊ ವುಮೆನ್ಸ್ ಫಿಲ್ಮ್ ಫೆಸ್ಟಿವಲ್‌ನಲ್ಲಿ ಬೆಸ್ಟ್ ಹ್ಯೂಮನ್ ರೈಟ್ಸ್ ಪ್ರಶಸ್ತಿ ಜಯಿಸಿದೆ.

ಅಲ್ಲದೆ ಈ ಸಾಕ್ಷ್ಯಚಿತ್ರವು ಮಾಂಟ್ರಿಯಲ್‌ನ ಸೌತ್ ಏಷ್ಯಾ ಫಿಲ್ಮ್ ಫೆಸ್ಟಿವಲ್‌ಗೂ ಸಹ ಆಯ್ಕೆಯಾಗಿದೆ. ಡಾಕ್ ನ್ಯೂಯಾರ್ಕ್, ಆಮ್‌ಸ್ಟರ್‌ಡ್ಯಾಮ್‌ನ ಇಂಟರ್‌ನ್ಯಾಶನಲ್ ಡಾಕ್ಯುಮೆಂಟರಿ ಫಿಲ್ಮ್ ಫೆಸ್ಟಿವಲ್, ಸನ್‌ಡಾನ್ಸ್ ಫಿಲ್ಮ್ ಫೆಸ್ಟಿವಲ್ ಮತ್ತು ಪ್ರಪಂಚದಾದ್ಯಂತದ ಇತರ ಸಿನಿಮೋತ್ಸವಗಳಿಗೆ ಈ ಸಾಕ್ಷ್ಯಚಿತ್ರವನ್ನು ಪರಿಗಣಿಸಲಾಗಿದೆ ಎಂದು ಅವರು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಕಳೆದ ಐದು ವರ್ಷಗಳಲ್ಲಿ ಭಾರತದಲ್ಲಿ 200 ಕ್ಕೂ ಹೆಚ್ಚು ಪತ್ರಕರ್ತರ ಮೇಲೆ ದಾಳಿಗಳು ನಡೆದ ವರದಿಯಾಗಿವೆ. 30 ಕ್ಕೂ ಹೆಚ್ಚು ಪತ್ರಕರ್ತರನ್ನು ಕಳೆದ ದಶಕದಲ್ಲಿ ಹತ್ಯೆ ಮಾಡಲಾಗಿದೆ. ಜಾಗತಿಕ ಪತ್ರಿಕಾ ಸ್ವಾತಂತ್ರ್ಯ ಸೂಚ್ಯಂಕದಲ್ಲಿ ಭಾರತದ ಸ್ಥಾನವು 180 ರಲ್ಲಿ 150ಕ್ಕೆ ಕುಸಿದಿದೆ. ಭಿನ್ನಮತೀಯರು ಮತ್ತು ಪತ್ರಕರ್ತರ ಮೇಲಿನ ದಾಳಿಗಳು ಹೊಸದಲ್ಲ ಮತ್ತು ಭಾರತಕ್ಕೆ ಸೀಮಿತವಾಗಿಲ್ಲ, ಆದರೆ ಕಳೆದ ದಶಕದಲ್ಲಿನ ಈ ದಾಳಿಗಳು ತೀವ್ರ ರೂಪದಲ್ಲಿದ್ದು ಚಿಂತಿಸಬೇಕಾದ ವಿಷಯಗಳಾಗಿವೆ ಎಂದು ಕವಿತಾ ಲಂಕೇಶ್ ಹೇಳಿದ್ದಾರೆ.

ಕವಿತಾ ಲಂಕೇಶ್

 

ಈ ಸಾಕ್ಷ್ಯ ಚಿತ್ರವು ಭಾರತದಲ್ಲಿ ಪತ್ರಕರ್ತರು ದಿನನಿತ್ಯವು ಎದುರಿಸುತ್ತಿರುವ ಮೌಖಿಕ, ದೈಹಿಕ ದಾಳಿಗಳನ್ನು ತೆರೆದಿಡುತ್ತಿದೆ. ತಮ್ಮ ದಿಟ್ಟ ವರದಿಗಳ ಕಾರಣಕ್ಕಾಗಿ ಗೌರಿಯವರು ತಮ್ಮ ಮೇಲಿನ 80ಕ್ಕೂ ಹೆಚ್ಚು ಪ್ರಕರಣಗಳನ್ನು ರಾಜ್ಯಾದ್ಯಂತ ಓಡಾಡುತ್ತಾ ಹೇಗೆ ಅದನ್ನೊಂದು ಅವಕಾಶವನ್ನಾಗಿ ಬಳಸಿಕೊಂಡರು ಎಂಬುದರ ವಿವರಣೆ ಇಲ್ಲಿದೆ ಎಂದು ಅವರು ತಿಳಿಸಿದ್ದಾರೆ.

ಆಂಸ್ಟರ್‌ಡ್ಯಾಮ್‌ನ ಫ್ರೀ ಪ್ರೆಸ್ ಅನ್‌ಲಿಮಿಟೆಡ್‌ “ಗೌರಿ” ಸಾಕ್ಷ್ಯಚಿತ್ರವನ್ನು ನಿರ್ಮಾಣಕ್ಕೆ ಕೈಜೋಡಿಸಿದೆ. ಈ ಸಂಸ್ಥೆಯು ತಮ್ಮ ವೃತ್ತಿಪರ ಸೇವೆಯ ಕಾರಣದಿಂದಾಗಿ ಹಿಂಸಾಚಾರಕ್ಕೆ ಒಳಗಾಗಿ ಪ್ರಾಣ ಕಳೆದುಕೊಂಡ ಪತ್ರಕರ್ತರ ಸಾಕ್ಷ್ಯಚಿತ್ರಗಳ ಪ್ರಸ್ತಾಪಗಳಿಗೆ ಕರೆ ನೀಡಿತ್ತು. ಸುಮಾರು 300 ಪ್ರಸ್ತಾವನೆಗಳು ಬಂದಿದ್ದವು, ಆ ಪೈಕಿ ನಾಲ್ಕು ಚಿತ್ರಗಳನ್ನು ಫ್ರೀ ಪ್ರೆಸ್‌ ಆಯ್ಕೆ ಮಾಡಿದ್ದು, ಅದರಲ್ಲಿ ‘ಗೌರಿ’ ಅವರ ಕುರಿತ ತಮ್ಮ ಸಾಕ್ಷ್ಯಾಚಿತ್ರವೂ ಒಂದಾಗಿದೆ.

ಇದನ್ನೂ ಓದಿ: ಗೌರಿ ಲಂಕೇಶ್‌ ಕುರಿತು ಸಾಕ್ಷ್ಯಚಿತ್ರ ನಿರ್ಮಿಸುತ್ತಿರುವ ಕವಿತಾ ಲಂಕೇಶ್: ಮುಂದಿನ ತಿಂಗಳು ಬಿಡುಗಡೆ ಸಾಧ್ಯತೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

4 COMMENTS

LEAVE A REPLY

Please enter your comment!
Please enter your name here

- Advertisment -

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...