Homeಮುಖಪುಟಕವಿತಾ ಲಂಕೇಶ್‌ ನಿರ್ದೇಶನದ "ಗೌರಿ" ಸಾಕ್ಷ್ಯಚಿತ್ರಕ್ಕೆ ಬೆಸ್ಟ್ ಹ್ಯೂಮನ್ ರೈಟ್ಸ್ ಪ್ರಶಸ್ತಿ

ಕವಿತಾ ಲಂಕೇಶ್‌ ನಿರ್ದೇಶನದ “ಗೌರಿ” ಸಾಕ್ಷ್ಯಚಿತ್ರಕ್ಕೆ ಬೆಸ್ಟ್ ಹ್ಯೂಮನ್ ರೈಟ್ಸ್ ಪ್ರಶಸ್ತಿ

- Advertisement -
- Advertisement -

ಖ್ಯಾತ ನಿರ್ದೇಶಕಿ ಕವಿತಾ ಲಂಕೇಶ್‌ರವರು ನಿರ್ದೇಶಿಸಿರುವ ದಿಟ್ಟ ಪತ್ರಕರ್ತೆ ಗೌರಿ ಲಂಕೇಶ್‌ರವರ ಕುರಿತು “ಗೌರಿ” ಸಾಕ್ಷ್ಯಚಿತ್ರವು 2022ರ ಟೊರೊಂಟೊ ವುಮೆನ್ಸ್ ಫಿಲ್ಮ್ ಫೆಸ್ಟಿವಲ್‌ನಲ್ಲಿ ಬೆಸ್ಟ್ ಹ್ಯೂಮನ್ ರೈಟ್ಸ್ ಪ್ರಶಸ್ತಿ ಜಯಿಸಿದೆ.

ಅಲ್ಲದೆ ಈ ಸಾಕ್ಷ್ಯಚಿತ್ರವು ಮಾಂಟ್ರಿಯಲ್‌ನ ಸೌತ್ ಏಷ್ಯಾ ಫಿಲ್ಮ್ ಫೆಸ್ಟಿವಲ್‌ಗೂ ಸಹ ಆಯ್ಕೆಯಾಗಿದೆ. ಡಾಕ್ ನ್ಯೂಯಾರ್ಕ್, ಆಮ್‌ಸ್ಟರ್‌ಡ್ಯಾಮ್‌ನ ಇಂಟರ್‌ನ್ಯಾಶನಲ್ ಡಾಕ್ಯುಮೆಂಟರಿ ಫಿಲ್ಮ್ ಫೆಸ್ಟಿವಲ್, ಸನ್‌ಡಾನ್ಸ್ ಫಿಲ್ಮ್ ಫೆಸ್ಟಿವಲ್ ಮತ್ತು ಪ್ರಪಂಚದಾದ್ಯಂತದ ಇತರ ಸಿನಿಮೋತ್ಸವಗಳಿಗೆ ಈ ಸಾಕ್ಷ್ಯಚಿತ್ರವನ್ನು ಪರಿಗಣಿಸಲಾಗಿದೆ ಎಂದು ಅವರು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಕಳೆದ ಐದು ವರ್ಷಗಳಲ್ಲಿ ಭಾರತದಲ್ಲಿ 200 ಕ್ಕೂ ಹೆಚ್ಚು ಪತ್ರಕರ್ತರ ಮೇಲೆ ದಾಳಿಗಳು ನಡೆದ ವರದಿಯಾಗಿವೆ. 30 ಕ್ಕೂ ಹೆಚ್ಚು ಪತ್ರಕರ್ತರನ್ನು ಕಳೆದ ದಶಕದಲ್ಲಿ ಹತ್ಯೆ ಮಾಡಲಾಗಿದೆ. ಜಾಗತಿಕ ಪತ್ರಿಕಾ ಸ್ವಾತಂತ್ರ್ಯ ಸೂಚ್ಯಂಕದಲ್ಲಿ ಭಾರತದ ಸ್ಥಾನವು 180 ರಲ್ಲಿ 150ಕ್ಕೆ ಕುಸಿದಿದೆ. ಭಿನ್ನಮತೀಯರು ಮತ್ತು ಪತ್ರಕರ್ತರ ಮೇಲಿನ ದಾಳಿಗಳು ಹೊಸದಲ್ಲ ಮತ್ತು ಭಾರತಕ್ಕೆ ಸೀಮಿತವಾಗಿಲ್ಲ, ಆದರೆ ಕಳೆದ ದಶಕದಲ್ಲಿನ ಈ ದಾಳಿಗಳು ತೀವ್ರ ರೂಪದಲ್ಲಿದ್ದು ಚಿಂತಿಸಬೇಕಾದ ವಿಷಯಗಳಾಗಿವೆ ಎಂದು ಕವಿತಾ ಲಂಕೇಶ್ ಹೇಳಿದ್ದಾರೆ.

ಕವಿತಾ ಲಂಕೇಶ್

 

ಈ ಸಾಕ್ಷ್ಯ ಚಿತ್ರವು ಭಾರತದಲ್ಲಿ ಪತ್ರಕರ್ತರು ದಿನನಿತ್ಯವು ಎದುರಿಸುತ್ತಿರುವ ಮೌಖಿಕ, ದೈಹಿಕ ದಾಳಿಗಳನ್ನು ತೆರೆದಿಡುತ್ತಿದೆ. ತಮ್ಮ ದಿಟ್ಟ ವರದಿಗಳ ಕಾರಣಕ್ಕಾಗಿ ಗೌರಿಯವರು ತಮ್ಮ ಮೇಲಿನ 80ಕ್ಕೂ ಹೆಚ್ಚು ಪ್ರಕರಣಗಳನ್ನು ರಾಜ್ಯಾದ್ಯಂತ ಓಡಾಡುತ್ತಾ ಹೇಗೆ ಅದನ್ನೊಂದು ಅವಕಾಶವನ್ನಾಗಿ ಬಳಸಿಕೊಂಡರು ಎಂಬುದರ ವಿವರಣೆ ಇಲ್ಲಿದೆ ಎಂದು ಅವರು ತಿಳಿಸಿದ್ದಾರೆ.

ಆಂಸ್ಟರ್‌ಡ್ಯಾಮ್‌ನ ಫ್ರೀ ಪ್ರೆಸ್ ಅನ್‌ಲಿಮಿಟೆಡ್‌ “ಗೌರಿ” ಸಾಕ್ಷ್ಯಚಿತ್ರವನ್ನು ನಿರ್ಮಾಣಕ್ಕೆ ಕೈಜೋಡಿಸಿದೆ. ಈ ಸಂಸ್ಥೆಯು ತಮ್ಮ ವೃತ್ತಿಪರ ಸೇವೆಯ ಕಾರಣದಿಂದಾಗಿ ಹಿಂಸಾಚಾರಕ್ಕೆ ಒಳಗಾಗಿ ಪ್ರಾಣ ಕಳೆದುಕೊಂಡ ಪತ್ರಕರ್ತರ ಸಾಕ್ಷ್ಯಚಿತ್ರಗಳ ಪ್ರಸ್ತಾಪಗಳಿಗೆ ಕರೆ ನೀಡಿತ್ತು. ಸುಮಾರು 300 ಪ್ರಸ್ತಾವನೆಗಳು ಬಂದಿದ್ದವು, ಆ ಪೈಕಿ ನಾಲ್ಕು ಚಿತ್ರಗಳನ್ನು ಫ್ರೀ ಪ್ರೆಸ್‌ ಆಯ್ಕೆ ಮಾಡಿದ್ದು, ಅದರಲ್ಲಿ ‘ಗೌರಿ’ ಅವರ ಕುರಿತ ತಮ್ಮ ಸಾಕ್ಷ್ಯಾಚಿತ್ರವೂ ಒಂದಾಗಿದೆ.

ಇದನ್ನೂ ಓದಿ: ಗೌರಿ ಲಂಕೇಶ್‌ ಕುರಿತು ಸಾಕ್ಷ್ಯಚಿತ್ರ ನಿರ್ಮಿಸುತ್ತಿರುವ ಕವಿತಾ ಲಂಕೇಶ್: ಮುಂದಿನ ತಿಂಗಳು ಬಿಡುಗಡೆ ಸಾಧ್ಯತೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

4 COMMENTS

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...