Homeಕರ್ನಾಟಕಅಡಿಕೆ ಬೆಳೆಗಾರರನ್ನು ರಕ್ಷಿಸುವರೆ ಈ ಆರು ಜನ ಮಾನಗೇಡಿ ಸಂಸದರು?

ಅಡಿಕೆ ಬೆಳೆಗಾರರನ್ನು ರಕ್ಷಿಸುವರೆ ಈ ಆರು ಜನ ಮಾನಗೇಡಿ ಸಂಸದರು?

- Advertisement -
- Advertisement -

ಅಡಿಕೆ ಬೆಳೆಯ ಮೇಲೆ ಅವಲಂಬಿತರಾಗಿ ಬದುಕು ಕಟ್ಟಿಕೊಂಡವರಿಗೆ ಕೇಂದ್ರ ಸರ್ಕಾರಗಳ ಎಡವಟ್ಟು ವಾಣಿಜ್ಯ ನೀತಿಗಳು ಲಾಗಾಯ್ತಿನಿಂದ ಒಂದಲ್ಲಾ ಒಂದು ಆತಂಕ ತಂದೊಡ್ಡುತ್ತಲೇ ಇವೆ. ದೇಶದ ಐದಾರು ರಾಜ್ಯದಲ್ಲಿ ಅಡಿಕೆ ಬೆಳೆಯಲಾಗುತ್ತಿದೆಯಾದರೂ ಕರ್ನಾಟಕದಲ್ಲೇ ಅತೀಹೆಚ್ಚು. ದೇಶದ ಶೇಕಡಾ 61 ರಷ್ಟು ಅಡಿಕೆಯನ್ನು ಕರ್ನಾಟಕವೊಂದೇ ಉತ್ಪಾದಿಸುತ್ತದೆ. ಕರ್ನಾಟಕದಲ್ಲಿ 2.61 ಲಕ್ಷ ಹೆಕ್ಟೇರ್ ಅಡಿಕೆ ಕೃಷಿ ಪ್ರದೇಶವಿದೆ. ಅಡಿಕೆ ವಹಿವಾಟು ಲಕ್ಷಾಂತರ ಕುಟುಂಬಕ್ಕೆ ಆಧಾರ. ಆದರೆ ಅಡಿಕೆ ಬೆಲೆಯಂತೆಯೇ ಅದರ ಬೆಳೆಗಾರರ ಬದುಕೂ ಅಸ್ಥಿರ.

ಚೀನಾ, ಮಯನ್ಮಾರ್, ಇಂಡೋನೇಷ್ಯಾ ಮುಂತಾದ ವಿದೇಶಗಳಲ್ಲಿ ಕಳಪೆ ಅಡಿಕೆಯ ಆಮದಿಗೆ ಯಾವಾಗ ಅವಕಾಶ ಕೊಡಲಾಯಿತೋ ಆಗ ಸ್ಥಳೀಯ ಅಡಿಕೆ ಕೃಷಿಕರು ತತ್ತರಿಸಿಹೋದರು! ಹೊರಗಿನ ಕೆಟ್ಟ ಅಡಿಕೆ ಜತೆ ಇಲ್ಲಿಯ ಉತ್ಕೃಷ್ಟ ಗುಣಮಟ್ಟದ ಅಡಿಕೆ ಸೇರಿಸಿ ಮಧ್ಯವರ್ತಿಗಳು ದೊಡ್ಡ ಫಾಯ್ದೆ ಬಾಚಿದರು. ಈ ಗೋಲ್‌ಮಾಲ್‌ನಿಂದ ಭಾರತದ ಅದರಲ್ಲೂ ಕರ್ನಾಟಕದ ಅಡಿಕೆ ತೋಟಿಗರ ಬದುಕು ಬರ್ಬಾದ್ ಆಗಿಹೋಯಿತು. ಈ ಅನಾಹುತದ ಅರಿವಾದಾಗ ಅಂದಿನ ಯುಪಿಎ ಸರ್ಕಾರ ಆಮದು ಸುಂಕ ಹೆಚ್ಚಿಸಿತು. ಆಗ ಹೊರಗಿನ ಅಡಕೆ ಬರುವುದು ಕಮ್ಮಿಯಾಗಿ ನಮ್ಮ ರೈತರಿಗೆ ಹೆಚ್ಚು ಧಾರಣೆ ಸಿಕ್ಕಿತು.

ನಂತರ ಗುಜರಾತ್ ಮೂಲದ ಗುಟ್ಕಾ ಮಾಫಿಯಾ ಅಡಿಕೆಗೆ ಗಂಟು ಬಿದ್ದು ರೈತರನ್ನು ಕಾಡಿತು. ಸಿಗರೇಟ್ ಲಾಬಿಯೂ ಸತಾಯಿಸಿತು. ಯುಪಿಎ-2 ಸರ್ಕಾರ ಇದ್ದಾಗ ಅಡಿಕೆಯಲ್ಲಿ ಕ್ಯಾನ್ಸರ್‌ಕಾರಕ ಅಂಶಗಳಿವೆ ಎಂಬ ಅಫಿಡವಿಟ್ ಸುಪ್ರೀಂ ಕೋರ್ಟ್ಗೆ ಸಲ್ಲಿಕೆಯಾಗಿತ್ತು. ಇದು ಅಡಿಕೆ ತೋಟಿಗರಲ್ಲಿ ಅಲ್ಲೋಲಕಲ್ಲೋಲ ಉಂಟುಮಾಡಿತು. 2014ರ ಲೋಕಸಭಾ ಇಲೆಕ್ಷನ್‌ನಲ್ಲಿ ಬಿಜೆಪಿ ಕರ್ನಾಟಕದ ಮಲೆನಾಡು, ಅರೆಮಲೆನಾಡು ಮತ್ತು ಕರಾವಳಿಯಲ್ಲಿ ಈ “ಕ್ಯಾನ್ಸರ್” ಭೂತವನ್ನೇ ಅಸ್ತ್ರವಾಗಿ ಬಳಸಿ ಕಾಂಗ್ರೆಸನ್ನು ಹಣಿಯಿತು. ಕಾಂಗ್ರೆಸಿಗರು ಅಡಿಕೆ ಬೆಳೆಗಾರರ ಶತ್ರುಗಳು ಮತ್ತು ತಾವು ಮಾತ್ರ ರಕ್ಷಕರು ಎಂಬಂತೆ ಬಿಂಬಿಸಿದರು. ಗೊಂದಲದಲ್ಲಿದ್ದ ಅಡಿಕೆ ಬೆಳೆಗಾರರು ಬಿಜೆಪಿಗರ ಮೋಸಕ್ಕೆ ಮರುಳಾದರು. ಅಡಿಕೆ ಬೆಳೆಯುವ ಐದಾರು ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಭರ್ಜರಿ ಲಾಭಮಾಡಿಕೊಂಡಿತು.

ಅಸಹಾಯಕರನ್ನು ದಿಕ್ಕು ತಪ್ಪಿಸಿ ಗೆಲ್ಲುವುದರಲ್ಲಿ ನಿಸ್ಸೀಮರಾದ ಕೇಸರಿ ಪಡೆಯವರು ಗೆದ್ದ ಬಳಿಕ ಅಡಿಕೆ ಬೆಳೆಗಾರರನ್ನು ಮರೆತೇ ಬಿಟ್ಟರು! ಅಡಿಕೆ ಬೆಳೆಗಾರರ ಸಾರಾಸಗಟು ಬೆಂಬಲದಿಂದ ಎಂಪಿಯಾಗಿದ್ದ ನಳಿನ್ ಕುಮಾರ್ ಕಟೀಲ್, ಶೋಭಾ ಕರಂದ್ಲಾಜೆ, ಅನಂತಕುಮಾರ್ ಹೆಗಡೆ, ರಾಘವೇಂದ್ರ, ಜಿ.ಎಂ.ಸಿದ್ದೇಶ್, ಹಾವೇರಿಯ ಉದಾಸಿ ಇವರೆಲ್ಲರೂ ಅಡಿಕೆ ಬೆಳೆಗೊಂದು ಸ್ಥಿರ ಮಾರುಕಟ್ಟೆ ಒದಗಿಸುವ ಸಣ್ಣ ಪ್ರಯತ್ನವನ್ನೂ ಮಾಡಲಿಲ್ಲ. ಅದಕ್ಕಿಂತ ದೊಡ್ಡ ದ್ರೋಹವೆಂದರೆ, ತಮ್ಮದೇ ಸರ್ಕಾರ ಕೇಂದ್ರದಲ್ಲಿದ್ದರೂ ಸುಪ್ರೀಂ ಕೋರ್ಟ್ನಲ್ಲಿದ್ದ “ಕ್ಯಾನ್ಸರ್” ಪ್ರಮಾಣಪತ್ರ ವಾಪಸ್ ಪಡೆಯುವ ಬಗ್ಗೆಯೂ ಯೋಚಿಸಲೇ ಇಲ್ಲ!!

ಅಷ್ಟೇ ಅಲ್ಲ, ಮೋದಿ ಸರ್ಕಾರದ ಆರೋಗ್ಯ ಇಲಾಖೆಯ ಸಹಾಯಕ ಮಂತ್ರಿಣಿ ಲೋಕಸಭೆಯಲ್ಲೇ ಅಡಿಕೆ ಆರೋಗ್ಯಕ್ಕೆ ಹಾನಿಕಾರಕ ಎಂದಿದ್ದರು! ಮೋದಿ ಬಳಗದ ಈ ಅಭಿಪ್ರಾಯ ಕೇಸರಿ ಸರ್ಕಾರ್-2ರಲ್ಲೂ ಬದಲಾಗಿಲ್ಲ. ಇಂಥದೇ ಮಾತು ಕೆಲದಿನಗಳ ಹಿಂದೆ ಪಾರ್ಲಿಮೆಂಟ್‌ನಲ್ಲಿ ಆರೋಗ್ಯ ಇಲಾಖೆಯ ಮರಿ ಮಂತ್ರಿ ಹೇಳಿದ್ದರು. ಇಷ್ಟಾದರೂ ರಾಜ್ಯದ ಅಡಿಕೆ ಏರಿಯಾದ ಸಂಸದ ಶಿಖಾಮಣಿಗಳು ತಲೆ ಕೆಡಿಸಿಕೊಳ್ಳಲಿಲ್ಲ. ಯಾವಾಗ ಅಡಿಕೆ ತೋಟಿಗರಲ್ಲಿ ಹಾಹಾಕಾರ ಎದ್ದು ಬೊಬ್ಬೆ ಶುರುವಾಯಿತೋ ಆಗ ಬೆಚ್ಚಿಬಿದ್ದ ಸಂಸದರು ಶೋಭಕ್ಕನ ಮುಂದಿಟ್ಟುಕೊಂಡು ಆರೋಗ್ಯ ಮಂತ್ರಿಗೊಂದು ಮನವಿ ಕೊಟ್ಟು ಕೈತೊಳೆದುಕೊಂಡರು. ಆ ಫೋಟೋ ಟಿವಿ-ಪತ್ರಿಕೆಗಳಲ್ಲೂ ಹಾಕಿಸಿಕೊಂಡು ಯಥಾಪ್ರಕಾರ ತಾವು ಅಡಿಕೆ ಬೆಳೆಗಾರರ ಉದ್ಧಾರಕ್ಕೆಂದೇ ಜೀವತಳೆದ ಎಂಪಿಗಳೆಂಬಂತೆ ಪೋಸುಕೊಟ್ಟರು.

ಅಡಿಕೆ ಬೆಳೆಗಾರರು ಮಾತ್ರ ಈ ಗಿಮಿಕ್ ಸಂಸದರನ್ನು ನಂಬುವ ಸ್ಥಿತಿಯಲ್ಲಿಲ್ಲ. ಗುಟ್ಕಾ ನಿಷೇಧವಾದಾಗ ಅಡಿಕೆ ಮಾರುಕಟ್ಟೆಯಲ್ಲಿ ತಲ್ಲಣ ಆಗಿತ್ತಾದರೂ ಆರೊಗ್ಯದ ಕಾರಣಕ್ಕೆ ಏನೂ ಮಾಡದಂತಾಗಿತ್ತು. ಆದರೆ ತೀರಾ ಈಚೆಗೆ ರಾಜಸ್ಥಾನ ಸೇರಿದಂತೆ ಮುಂತಾದ ರಾಜ್ಯಗಳಲ್ಲಿ ಸುವಾಸನೆಯ ಸಿಹಿ ಅಡಿಕೆ ಮಾರಾಟವನ್ನು ನಿಷೇಧಿಸಲಾಯಿತು. ಆಗಲೂ ಅಡಕೆ ಬೆಳೆಗಾರರ ಗೋಳು ಆರು ಸಂಸದರಿಗೆ ಅರ್ಥವಾಗಲಿಲ್ಲ!! ಮೋಸಗಾರರ ಗೆಲ್ಲಿಸಿದ ಪ್ರಾರಬ್ಧಕ್ಕೆ ಅಡಿಕೆ ಬೆಳೆಗಾರರೀಗ ಹಣೆಹಣೆ ಚಚ್ಚಿಕೊಳ್ಳುತ್ತಿದ್ದಾರೆ. ಈಗ ಆಳುವ ಬಿಜೆಪಿಯವರಿಂದ ಅಡಿಕೆ ತೋಟಗಾರಿಕೆಗೆ ಆರ್‌ಸಿಇಪಿ (ಪ್ರಾದೇಶಿಕ ಸಮಗ್ರ ಆರ್ಥಿಕ ಸಹಭಾಗಿತ್ವ ಒಪ್ಪಂದ)ಯ ಕಂಟಕ ಎದುರಾಗಿದೆ. ಆಗ್ನೇಯ ಏಷ್ಯಾದ 16 ದೇಶಗಳ ಜತೆ ಮುಕ್ತ ಮಾರುಕಟ್ಟೆ ವ್ಯವಹಾರಕ್ಕೆ ಭಾರತವನ್ನು ತೊಡಗಿಸಲು ಮೋದಿ ಮಾಮ ಸಿದ್ಧವಾಗಿದ್ದಾರೆ. ಇದು ಅಡಿಕೆ ಕೃಷಿಯಿಂದ ಜೀವನ ನಡೆಸುತ್ತಿರುವವರ ಬದುಕು ಬರಿದಾಗಿಸುವುದು ಗ್ಯಾರಂಟಿ.

ಮೋದಿಯ ಆರ್‌ಸಿಇಪಿ ಒಪ್ಪಂದ ಸಾಂಪ್ರದಾಯಿಕ ಅಡಿಕೆ ಬೆಳೆಗಾರರನ್ನು ಹೈರಾಣಾಗಿಸಲಿದೆ. ಸಣ್ಣ ಹಿಡುವಳಿದಾರರಿಂದ ಮುಕ್ತ ಮಾರುಕಟ್ಟೆಯಲ್ಲಿ ಪೈಪೋಟಿ ಮಾಡಲು ಸಾಧ್ಯವಿಲ್ಲ. 16 ರಾಷ್ಟ್ರಗಳ ನಡುವೆ ವಾಣಿಜ್ಯ, ಕೃಷಿ, ಹಾಲಿನ ಉತ್ಪನ್ನಗಳ ಮುಕ್ತ ಮಾರುಕಟ್ಟೆಗೆ ಅವಕಾಶ ಕೊಡುವುದು ಮತ್ತು ಆಮದು-ರಫ್ತು ನೀತಿ ಸರಳೀಕರಿಸುವುದು ಆರ್‌ಸಿಇಪಿ ಒಪ್ಪಂದದ ಮುಖ್ಯ ಉದ್ದೇಶ. ಸದ್ಯಕ್ಕೆ ದೊಡ್ಡಮಟ್ಟದ ತೆರಿಗೆ ಆಮದು ಅಡಿಕೆಗೆ ವಿಧಿಸಿದರೂ ಒಪ್ಪಂದದಂತೆ ಮುಂದಿನ 12 ವರ್ಷದಲ್ಲಿ ಎಲ್ಲಾ ಆಯಾತ-ನಿಯಾತ ಸಂಕ ತೆಗೆಯಬೇಕೆಂಬುದು ಒಪ್ಪಂದದ ಕರಾರು. ಆಗ ಆಗ್ನೇಯ ಏಷ್ಯಾದ 15 ರಾಷ್ಟ್ರಗಳ ಅಡಿಕೆ ರೈತರ, ಬಂಡವಾಳಿಗರ ಜತೆ ನಾವು ಪೈಪೋಟಿ ಮಾಡಬೇಕಾಗುತ್ತದೆ. ಆಗ ಸ್ಥಳೀಯ ಅಡಿಕೆ ತೋಟಿಗರು ಆರ್ಥಿಕ ಸಂಕಷ್ಟಕ್ಕೆ ಸಿಲುಕುವುದು ಖಂಡಿತ!!

ಸದ್ಯಕ್ಕೆ ನಾವು ಆರ್‌ಸಿಇಪಿಗೆ ಸಹಿ ಹಾಕುವುದಿಲ್ಲ ಎಂದು ಮೋದಿ ಮಾಮ ಹೇಳಿದ್ದಾರೆ. ಇದಕ್ಕೆ ಕಾರಣ ಡೈರಿ ಉದ್ಯಮದ ಮೇಲೆ ಬೀರುವ ದುಷ್ಪರಿಣಾಮಗಳನ್ನು ಅರಿತ ಜನ ಬೀದಿಗಿಳಿದು ಹೋರಾಡಿದರು. ಒಂದೊಂದು ತಾಲ್ಲೂಕು ಕೇಂದ್ರದಲ್ಲಿಯೂ ಹತ್ತಾರು ಸಾವಿರ ಜನ ಆರ್‌ಸಿಇಪಿ ವಿರುದ್ಧ ಪ್ರತಿಭಟಿಸಿದರು. ಹಾಗಾಗಿ ಸರ್ಕಾರ ಬೆದರಿದೆ. ಆದರೆ ಇನ್ನು ಮೂರು ತಿಂಗಳಲ್ಲಿ ಸಹಿ ಹಾಕಲೇಬೇಕಾದ ಒತ್ತಡ ಸರ್ಕಾರಕ್ಕಿದೆ. ಆಗ ಡೈರಿ ಉದ್ದಿಮೆಯನ್ನು ಹೊರಗಿಟ್ಟು ಸಹಿ ಹಾಕುವ ತೀರ್ಮಾನವನ್ನು ಭಾರತ ತೆಗೆದುಕೊಳ್ಳಬಹುದು. ಆಗ ಮತ್ತೆ ಅಡಿಕೆ ಬೆಳೆಗಾರರಿಗೆ ಕುತ್ತು ಬರುವುದರಲ್ಲಿ ಸಂದೇಹವಿಲ್ಲ.

ಇದೆಲ್ಲ ಅಡಿಕೆ ಬೆಳೆಗಾರರ ಯಾಮಾರಿಸಿ ಗೆದ್ದಿರುವ ಕರ್ಮಗೇಡಿ ಆರು ಸಂಸದರಿಗೆ ಅರ್ಥವಾಗಿದೆಯೋ ಇಲ್ಲವೋ? ಅಕಸ್ಮಾತ್ ಅರ್ಥವಾದರೂ ಹೆಡ್ ಮಾಸ್ಟರ್ ಮೋದಿ ಎದುರು ನಿಂತು ಸಮಸ್ಯೆ ಹೇಳುವ ನೈತಿಕ ಧೈರ್ಯ ಇರ‍್ಯಾರಿಗೂ ಇಲ್ಲ!! ಆರ್‌ಸಿಇಪಿ ಒಪ್ಪಂದದಲ್ಲಿ ಅಡಿಕೆಯನ್ನು ಋಣಾತ್ಮಕ ಪಟ್ಟಿಗೆ ಸೇರಿಸಿದರೆ ಬೆಳೆಗಾರರಿಗೆ ತೊಂದರೆ ತಪ್ಪುತ್ತದೆ. ಋಣಾತ್ಮಕ ಪಟ್ಟಿಯಲ್ಲಿ ಅಡಿಕೆಯಿದ್ದರೆ ಮುಕ್ತ ಆಮದಿಗೆ ಅವಕಾಶವಿರದು. ಇರುವ ಮೂರು ತಿಂಗಳಲ್ಲಿ ಇಂಥದೊಂದು ಪ್ರಯತ್ನ ಪ್ರಾಮಾಣಿಕವಾಗಿ ಆರು ಸಂಸದರು ಮಾಡಿ ತಮ್ಮನ್ನು ಗೆಲ್ಲಿಸಿದವರ ಋಣ ತೀರಿಸುವರಾ? ಅಥವಾ ಮೋದಿ ಕೆಂಗಣ್ಣಿಗೆ ಗುರಿಯಾಗಿ ಹೆದರಿ ಹೇತ್ಲಾಂಡಿಗಳೆಂದು ಇತಿಹಾಸದಲ್ಲಿ ದಾಖಲಾಗುವರಾ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ವಕ್ಷೇತ್ರ ತಿರುವನಂತಪುರದಲ್ಲಿ ಬಿಜೆಪಿ ಭರ್ಜರಿ ಗೆಲುವು : ‘ಪ್ರಜಾಪ್ರಭುತ್ವದ ಸೌಂದರ್ಯ’ ಎಂದ ಕಾಂಗ್ರೆಸ್ ಸಂಸದ ಶಶಿ ತರೂರ್

ಕೇರಳದ ಸ್ಥಳೀಯ ಸಂಸ್ಥೆ ಚುನಾವಣೆಯ ಫಲಿತಾಂಶ ಇಂದು (ಡಿ.13) ಪ್ರಕಟಗೊಂಡಿದ್ದು, ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಭರ್ಜರಿ ಗೆಲುವು ದಾಖಲಿಸಿದೆ. ಈ ಮೂಲಕ 45 ವರ್ಷಗಳ ಸಿಪಿಐ(ಎಂ) ನೇತೃತ್ವದ ಎಲ್‌ಡಿಎಫ್‌...

ಕೇರಳ ಸ್ಥಳೀಯ ಸಂಸ್ಥೆ ಚುನಾವಣೆ : ಯುಡಿಎಫ್‌ ಸ್ಪಷ್ಟ ಮೇಲುಗೈ

ಇಂದು (2025 ಡಿಸೆಂಬರ್ 13, ಶನಿವಾರ) ಪ್ರಕಟಗೊಂಡ ಕೇರಳದ ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶದಲ್ಲಿ ವಿರೋಧ ಪಕ್ಷಗಳ ಒಕ್ಕೂಟವಾದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್) ಸ್ಪಷ್ಟ ಮೇಲುಗೈ ಸಾಧಿಸಿದೆ. ಈ ಮೂಲಕ ರಾಜ್ಯ...

ಕೋಲ್ಕತ್ತಾ ಮೆಸ್ಸಿ ಕಾರ್ಯಕ್ರಮದಲ್ಲಿ ಗಲಾಟೆ | ಕ್ಷಮೆ ಯಾಚಿಸಿದ ಸಿಎಂ ಮಮತಾ ಬ್ಯಾನರ್ಜಿ, ತನಿಖೆಗೆ ಸಮಿತಿ ರಚನೆ; ಆಯೋಜಕನ ಬಂಧನ

ಫುಟ್ಬಾಲ್ ತಾರೆ ಲಿಯೋನೆಲ್ ಮೆಸ್ಸಿ ಭೇಟಿಯ ವೇಳೆ ಶನಿವಾರ (ಡಿಸೆಂಬರ್ 13) ಕೋಲ್ಕತ್ತಾದ ಸಾಲ್ಟ್ ಲೇಕ್ ಕ್ರೀಡಾಂಗಣದಲ್ಲಿ ಉಂಟಾದ ಗಲಾಟೆಗೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕ್ಷಮೆಯಾಚಿಸಿದ್ದು, ನಿವೃತ್ತ ನ್ಯಾಯಮೂರ್ತಿ...

ಮೆಸ್ಸಿ ನೋಡಲು 25 ಸಾವಿರ ರೂ. ಪಾವತಿಸಿದವರಿಗೆ ನಿರಾಶೆ; ಕೋಪಗೊಂಡ ಅಭಿಮಾನಿಗಳಿಂದ ಕ್ರೀಡಾಂಗಣದಲ್ಲಿ ದಾಂಧಲೆ

ಶನಿವಾರ ನಡೆದ ಲಿಯೋನೆಲ್ ಮೆಸ್ಸಿ ಅವರ ಬಹು ನಿರೀಕ್ಷಿತ "ಗೋಟ್ ಇಂಡಿಯಾ ಟೂರ್" ಕೋಲ್ಕತ್ತಾದಲ್ಲಿ ಅಸ್ತವ್ಯಸ್ತವಾಯಿತು. ಯುವ ಭಾರತಿ ಕ್ರಿರಂಗನ್‌ನಲ್ಲಿ ರೊಚ್ಚಿಗೆದ್ದ ಅಭಿಮಾನಿಗಳ ದಾಂಧಲೆಯಿಂದ ಕ್ರೀಡಾಂಗಣ ಅವ್ಯವಸ್ಥೆಗೆ ಒಳಗಾಯಿತು. ಸಾವಿರಾರು ಅಭಿಮಾನಿಗಳು ಅರ್ಜೆಂಟೀನಾದ...

ಡ್ರಗ್‌ ಪೆಡ್ಲರ್‌ಗಳ ಮನೆ ಒಡೆದು ಹಾಕುವ ಹೇಳಿಕೆ : ಪರಮೇಶ್ವರ್ ಮಾತಿಗೆ ಆತಂಕ ವ್ಯಕ್ತಪಡಿಸಿದ ಕಾಂಗ್ರೆಸ್ ಹಿರಿಯ ನಾಯಕ ಚಿದಂಬರಂ

"ಡ್ರಗ್‌ ಪೆಡ್ಲರ್‌ಗಳ ಬಾಡಿಗೆ ಮನೆಗಳನ್ನು ಒಡೆದು ಹಾಕುವ ಹಂತಕ್ಕೆ ಹೋಗಿದ್ದೇವೆ" ಎಂಬ ಗೃಹ ಸಚಿವ ಜಿ.ಪರಮೇಶ್ವರ್ ಹೇಳಿಕೆಗೆ ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಕೇಂದ್ರ ಸಚಿವ ಪಿ. ಚಿದಂಬರಂ ಆತಂಕ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ...

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆ: ಶಶಿ ತರೂರ್ ಕ್ಷೇತ್ರ ತಿರುವನಂತಪುರಂನಲ್ಲಿ ಬಿಜೆಪಿ ಮುನ್ನಡೆ

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ, ವಿಶೇಷವಾಗಿ ತಿರುವನಂತಪುರಂನಲ್ಲಿ ಭಾರತೀಯ ಜನತಾ ಪಕ್ಷದ ಸಾಧನೆಯನ್ನು ಹಿರಿಯ ಕಾಂಗ್ರೆಸ್ ನಾಯಕ ಶಶಿ ತರೂರ್ ಶನಿವಾರ ಅಭಿನಂದಿಸಿದ್ದಾರೆ. ಜನರ ತೀರ್ಪನ್ನು ಗೌರವಿಸಬೇಕು ಎಂದು ಹೇಳಿದ್ದಾರೆ. ಎಕ್ಸ್‌ನಲ್ಲಿ ದೀರ್ಘ...

ಆಳಂದ ಮತಗಳ್ಳತನ | ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್ ಸೇರಿ 7 ಮಂದಿ ವಿರುದ್ಧ ಎಸ್‌ಐಟಿ ಚಾರ್ಜ್‌ಶೀಟ್‌

ಕಲಬುರಗಿಯ ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಮತಗಳ್ಳತನ (ಚುನಾವಣಾ ಆಕ್ರಮ) ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ್ದು, ಆಳಂದದ ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್...

ಉತ್ತರ ಪ್ರದೇಶ| ಗಸ್ತು ವಾಹನ ಹಳ್ಳಕ್ಕೆ ಉರುಳಿಸಿದ ಪಾನಮತ್ತ ಪೊಲೀಸರು; ಕ್ರೇನ್ ಚಾಲಕನ ಮೇಲೆ ಹಲ್ಲೆ

ಶುಕ್ರವಾರ (ಡಿಸೆಂಬರ್ 12) ರಾತ್ರಿ ಪೊಲೀಸರೊಬ್ಬರು ಕಾರಿನ ನಿಯಂತ್ರಣ ಕಳೆದುಕೊಂಡ ಬಳಿಕ '112' ಪೊಲೀಸ್ ಪ್ರತಿಕ್ರಿಯೆ ವಾಹನ (ಪಿಆರ್‌ವಿ) ಹಳ್ಳಕ್ಕೆ ಉರುಳಿದೆ. ವರದಿಗಳ ಪ್ರಕಾರ, ಘಟನೆಯ ಸಮಯದಲ್ಲಿ ಪೊಲೀಸರು ಪಾನಮತ್ತರಾಗಿದ್ದರು. ಕಾರ್ ಕಂದಕಕ್ಕೆ...

ಲಿಯೋನೆಲ್ ಮೆಸ್ಸಿ ಇಂಡಿಯಾ ಪ್ರವಾಸ; ಅಭೂತಪೂರ್ವ ಸ್ವಾಗತ ಕೋರಿದ ಕೋಲ್ಕತ್ತಾ ಅಭಿಮಾನಿಗಳು

ಇಂಡಿಯಾ ಪ್ರವಾಸ ಪ್ರಾರಂಭಿಸಿರುವ ಅರ್ಜೆಂಟೀನಾದ ಪುಟ್‌ಬಾಲ್‌ ತಾರೆ ಲಿಯೋನೆಲ್ ಮೆಸ್ಸಿ ಕೋಲ್ಕತ್ತಾಗೆ ಬಂದಿಳಿದಿದ್ದಾರೆ. ಶನಿವಾರ ಬೆಳಗಿನ ಜಾವ ವಿಮಾನ ನಿಲ್ದಾಣದಲ್ಲಿ ನೆರೆದಿದ್ದ ಸಾವಿರಾರು ಅಭಿಮಾನಿಗಳಿಂದ ಅವರಿಗೆ ಅಭೂತಪೂರ್ವ ಸ್ವಾಗತ ಕೋರಿದರು. ಅರ್ಜೆಂಟೀನಾದ ಸೂಪರ್‌ಸ್ಟಾರ್ ದುಬೈ...

ನಟಿಯ ಅಪಹರಣ, ಅತ್ಯಾಚಾರ ಪ್ರಕರಣ : ಆರು ಅಪರಾಧಿಗಳಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಮಲಯಾಳಂ ಮೂಲದ ಬಹುಭಾಷಾ ನಟಿಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದ (2017ರ ಪ್ರಕರಣ) ಆರು ಅಪರಾಧಿಗಳಿಗೆ ಇಪ್ಪತ್ತು ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿ ಶುಕ್ರವಾರ (ಡಿಸೆಂಬರ್ 12) ಕೇರಳ ನ್ಯಾಯಾಲಯ ಆದೇಶಿಸಿದೆ. ಡಿಸೆಂಬರ್...