Homeಮುಖಪುಟ”ಬೇಟಿ ಬಚಾವೋ ಈಗ ಅಪರಾಧಿ ಬಚಾವೋ ಆಗಿದೆ": ರಾಹುಲ್, ಪ್ರಿಯಾಂಕಾ ಕಿಡಿ

”ಬೇಟಿ ಬಚಾವೋ ಈಗ ಅಪರಾಧಿ ಬಚಾವೋ ಆಗಿದೆ”: ರಾಹುಲ್, ಪ್ರಿಯಾಂಕಾ ಕಿಡಿ

ಹತ್ರಾಸ್ ಘಟನೆ ನಂತರ ಉತ್ತರಪ್ರದೇಶ ಸರ್ಕಾರ ತೀವ್ರ ಟೀಕೆಗೆ ಗುರಿಯಾಗಿದೆ. ಆದರೂ ಉತ್ತರ ಪ್ರದೇಶದಲ್ಲಿ ಮಹಿಳಾ ದೌರ್ಜನ್ಯ. ಅತ್ಯಾಚಾರ ಪ್ರಕರಣಗಳು, ದಲಿತರ ಮೇಲಿನ ಹಲ್ಲೆಗಳು ನಿರಂತರವಾಗಿ ವರದಿಯಾಗುತ್ತಲೇ ಇವೆ.

- Advertisement -
- Advertisement -

ಉತ್ತರ ಪ್ರದೇಶ ರಾಜ್ಯದಲ್ಲಿ ಮಹಿಳೆಯರ ವಿರುದ್ಧ ಅಪರಾಧಗಳು ಹೆಚ್ಚುತ್ತಿವೆ ಎಂಬ ಬಗ್ಗೆ ಧ್ವನಿ ಎತ್ತಿರುವ ಕಾಂಗ್ರೆಸ್ ಮುಖಂಡರಾದ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ವಾದ್ರಾ ಉತ್ತರ ಪ್ರದೇಶ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಬಿಜೆಪಿಯ ಬೇಟಿ ಬಚಾವೋ ಮಿಷನ್ ಬಗ್ಗೆ ವ್ಯಂಗ್ಯವಾಡಿದ್ದಾರೆ.

ರಾಜ್ಯದಲ್ಲಿ ಮಹಿಳೆಯರನ್ನು ರಕ್ಷಿಸುವ ಬದಲು, ಉತ್ತರ ಪ್ರದೇಶ ಬಿಜೆಪಿ ನೇತೃತ್ವದ ಸರ್ಕಾರವು “ಅಪರಾಧಿಗಳನ್ನು ಉಳಿಸಲು” ಪ್ರಯತ್ನಿಸುತ್ತಿದೆ ಎಂದು ಮಾಧ್ಯಮದ ವರದಿಯನ್ನು ಟ್ಯಾಗ್ ಮಾಡಿ ಸರ್ಕಾರದ ಬೇಟಿ ಬಚಾವೋ ಮಿಷನ್‌ ಅನ್ನು ಅಪರಾಧಿ ಬಚಾವೋಗೆ ಹೋಲಿಸಿದ್ದಾರೆ. ವರದಿಯಲ್ಲಿ ಮಹಿಳೆಯೊಬ್ಬರ ಮೇಲೆ ದೌರ್ಜನ್ಯ ನಡೆಸಿದ ಆರೋಪಿಯನ್ನು ಬಿಜೆಪಿ ಶಾಸಕ, ಅವರ ಪುತ್ರ ಮತ್ತು ಬೆಂಬಲಿಗರು ಪೊಲೀಸ್ ವಶದಿಂದ ಬಲವಂತವಾಗಿ ಬಿಡಿಸಿದ ಪ್ರಕರಣದ ಉಲ್ಲೇಖವಿದೆ.

ಘಟನೆ ಕುರಿತು ಟ್ವೀಟ್ ಮಾಡಿರುವ ರಾಹುಲ್ ಗಾಂಧಿ, ಬೇಟಿ ಬಚಾವೋ (ಹೆಣ್ಣುಮಕ್ಕಳನ್ನು ಉಳಿಸಿ) ಎಂದು ಆರಂಭವಾದ ಅಭಿಯಾನ ಈಗ ಅದು ಅಪರಾಧಿ ಬಚಾವೋ (ಅಪರಾಧಿಗಳನ್ನು ಉಳಿಸಿ) ಎಂಬ ರೀತಿಯಲ್ಲಿ ನಡೆಯುತ್ತಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಹತ್ರಾಸ್ ಕುರಿತು ಪ್ರಧಾನಿ ಒಂದೂ ಮಾತಾಡಲಿಲ್ಲ ಏಕೆ? : ರಾಹುಲ್ ಗಾಂಧಿ ಪ್ರಶ್ನೆ

 

ಮಾಧ್ಯಮ ವರದಿಯ ಪ್ರಕಾರ, ಬಿಜೆಪಿ ಶಾಸಕರು ತಮ್ಮ ಪಕ್ಷದ ಕಾರ್ಯಕರ್ತರೊಂದಿಗೆ ಬಲವಂತವಾಗಿ ಪೊಲೀಸ್ ಠಾಣೆಗೆ ಪ್ರವೇಶಿಸಿ, ಮಹಿಳೆಗೆ ಮೇಲೆ ದೌರ್ಜನ್ಯ ನಡೆಸಿದ ಆರೋಪಿಯನ್ನು ಪೊಲೀಸ್ ವಶದಿಂದ ಬಲವಂತವಾಗಿ ಬಿಡಿಸಿ ಕರೆದೊಯ್ದಿದ್ದಾರೆ.

ಪ್ರಿಯಾಂಕಾ ಗಾಂಧಿ ವಾದ್ರಾ ಕೂಡ ಈ ಕುರಿತು ಟ್ವೀಟ್ ಮಾಡಿ ಆಕ್ರೋಶ ಹೊರಹಾಕಿದ್ದಾರೆ.

“ಇದು ಯಾವ ಮಿಷನ್” ಅಡಿಯಲ್ಲಿ ನಡೆಯುತ್ತಿದೆ ಎಂದು ಹೇಳುತ್ತೀರಾ ಯುಪಿ ಸಿಎಂ?” ಬೇಟಿ ಬಚಾವೊ (ಹೆಣ್ಣುಮಕ್ಕಳನ್ನು ಉಳಿಸಿ)” ಅಥವಾ “ಅಪರಾಧಿ ಬಚಾವೊ(ಅಪರಾಧಿಗಳನ್ನು ಉಳಿಸಿ)?” ಎಂದು ಪ್ರಿಯಾಂಕಾ ಗಾಂಧಿ ವಾದ್ರಾ ಟ್ವೀಟ್ ಮಾಡಿದ್ದಾರೆ.

ಹತ್ರಾಸ್ ಜಿಲ್ಲೆಯ 19 ವರ್ಷದ ದಲಿತ ಯುವತಿ ಮೇಲೆ ಮೇಲ್ಜಾತಿಯ ನಾಲ್ವರು ಪುರುಷರು ಅತ್ಯಾಚಾರ ಎಸಗಿ ಹಲ್ಲೆ ಮಾಡಿದ್ದರು. ತೀವ್ರವಾದ ಚಿತ್ರಹಿಂಸೆ, ಹಲ್ಲೆಯಿಂದಾಗಿ ಆಕೆ ಆಸ್ಪತ್ರೆಯಲ್ಲಿ ಮೃತಪಟ್ಟ ಬಳಿಕ, ಕಾಂಗ್ರೆಸ್ ಉತ್ತರ ಪ್ರದೇಶ ಸರ್ಕಾರವನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ.

ಹತ್ರಾಸ್ ಘಟನೆ ಬಳಿಕ ಉತ್ತರ ಪ್ರದೇಶ ಸರ್ಕಾರ ದೇಶದಾದ್ಯಂತ ಹಲವು ಪ್ರತಿಭಟನೆಗಳು, ಪ್ರತಿರೋಧಗಳನ್ನು ಎದುರಿಸಬೇಕಾಯಿತು. ಆದರೂ ಉತ್ತರ ಪ್ರದೇಶದಲ್ಲಿ ಅತ್ಯಾಚಾರ ಪ್ರಕರಣಗಳು, ಮಹಿಳಾ ದೌರ್ಜನ್ಯ, ದಲಿತರ ಮೇಲಿನ ಹಲ್ಲೆಗಳು ನಿರಂತರವಾಗಿ ವರದಿಯಾಗುತ್ತಲೇ ಇವೆ. ಆದಿತ್ಯನಾಥ್ ಸರ್ಕಾರ ಇವುಗಳ ಬಗ್ಗೆ ಕಠಿಣ ಕ್ರಮ ಕೈಗೊಳ್ಳುವ ಕುರಿತು ಆದೇಶಗಳನ್ನು ಮಾತ್ರ ನೀಡುತ್ತಿದೆ. ಆದರೆ ಅದರಿಂದ ಯಾವುದೇ ಪರಿಣಾಮ ಉಂಟಾಗಿಲ್ಲ. ಹಾಗಾಗಿ ಸರ್ಕಾರ ಇಂತಹ ಘಟನೆಗಳ ಬಗ್ಗೆ ಕಠಿಣ ಕ್ರಮ ಕೈಗೊಳ್ಳುವ ನಿಟ್ಟಿನಲ್ಲಿ ಕಾರ್ಯಪ್ರವೃತ್ತರಾಗಬೇಕು ಎಂದು ಸಾಮಾಜಿಕ ಕಾರ್ಯಕರ್ತರು ಆಗ್ರಹಿಸಿದ್ದಾರೆ.


ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಹತ್ರಾಸ್‌ ಭೇಟಿಯ ಫೋಟೋದಲ್ಲಿ ಪ್ರಿಯಾಂಕಾ ಗಾಂಧಿ ಅಪ್ಪಿಕೊಂಡಿದ್ದ ಮಹಿಳೆ ಯಾರು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...