Homeಕರ್ನಾಟಕ"ಬೇಟಿ ಬಚಾವೋ" ಯೋಜನೆ ಇರುವುದೇ ಬಿಜೆಪಿ ನಾಯಕರಿಂದ ಮಹಿಳೆಯರಿಗೆ ರಕ್ಷಿಸಿಕೊಳ್ಳಲು: ಬಿ.ಕೆ ಹರಿಪ್ರಸಾದ್

“ಬೇಟಿ ಬಚಾವೋ” ಯೋಜನೆ ಇರುವುದೇ ಬಿಜೆಪಿ ನಾಯಕರಿಂದ ಮಹಿಳೆಯರಿಗೆ ರಕ್ಷಿಸಿಕೊಳ್ಳಲು: ಬಿ.ಕೆ ಹರಿಪ್ರಸಾದ್

- Advertisement -
- Advertisement -

“ಬೇಟಿ ಬಚಾವೋ” ಎಂದು ಕೇಂದ್ರದ ಯೋಜನೆ ಇರುವುದೇ ಬಿಜೆಪಿ ನಾಯಕರಿಂದ ಮಹಿಳೆಯರಿಗೆ ರಕ್ಷಿಸಿಕೊಳ್ಳಲು ಅಲ್ಲವೇ.? ಅಸಲಿಗೂ ನಾರಿ ಶಕ್ತಿಯಿಂದ ಬೆದರಿ ಬೆಂಡಾಗಿರುವುದು ನಿಮ್ಮದೇ ಪಕ್ಷದ ನಾಯಕರೇ ಹೊರತು ಸಾಮಾನ್ಯ ಜನರಲ್ಲ. ಅಷ್ಟಕ್ಕೂ ನಿಮ್ಮ ಪಕ್ಷದ ಘಟಾನುಘಟಿ 19 ನಾಯಕರು ನ್ಯಾಯಾಲಯಕ್ಕೆ ಹೋಗಿ ತಡೆಯಾಜ್ಞೆ ತರಲು ಯಾವ ನಾರಿ ಶಕ್ತಿ ಅಡ್ಡ ಬಂದಿದೆ ಒಮ್ಮೆ ಜನರಿಗೆ ಹೇಳುವ ಧೈರ್ಯ ಮಾಡಿ ಎಂದು ಕಾಂಗ್ರೆಸ್ ಹಿರಿಯ ನಾಯಕ, ವಿಧಾನ ಪರಿಷತ್ ಸದಸ್ಯ ಬಿ.ಕೆ ಹರಿಪ್ರಸಾದ್ ಅವರು ಕಾರ್ಕಳದ ಬಿಜೆಪಿ ಶಾಸಕ ವಿ.ಸುನೀಲ್ ಕುಮಾರ್ ಅವರಿಗೆ ಸವಾಲು ಹಾಕಿದ್ದಾರೆ.

ತನ್ನ ವಿರುದ್ಧ ಸುನೀಲ್ ಕುಮಾರ್ ‘ಎಕ್ಸ್’ನಲ್ಲಿ ಮಾಡಿರುವ ಟೀಕೆಗೆ ‘ಫೇಸ್ ಬುಕ್ ಖಾತೆಯಲ್ಲಿ ತಿರುಗೇಟು ನೀಡಿರುವ ಬಿ.ಕೆ ಹರಿಪ್ರಸಾದ್, “ನಾನು ಚುನಾವಣಾ ಕಲಿ ಆಗದೇ ಇದ್ದರೂ ಪರವಾಗಿಲ್ಲ, ಆದರೆ ನಿಮ್ಮಂತೆ ‘ಪರಶುರಾಮನ’ ಕಲಿಯಂತೂ ಆಗಲಾರೆ. ಬಿಜೆಪಿಯ ಅಧ್ಯಕ್ಷ ಸ್ಥಾನಕ್ಕೆ ಅರ್ಧನಾರೀಶ್ವರನ್ನಾದರೂ ಮಾಡಲಿ ಎಂದು ಹೇಳುವ ಬದಲು ‘ಅರ್ಧನಾರೀಶ್ವರ ಪ್ರತಿಮೆ’ ಮಾಡಲಿ ಎಂದು ಹೇಳಿಕೆ ಕೊಟ್ಟಿದ್ದರೆ ಬಹುಶಃ ನಿಮಿಗೆ ಲಾಭವಾಗುತ್ತಿತ್ತು” ಎಂದು ಕುಟುಕಿದ್ದಾರೆ.

“ನಾರಿ ಶಕ್ತಿ, ನಾರಿ ತತ್ವದ ಉಪದೇಶ ನಿಮ್ಮ ಸಂಘದ ಸರ ಸಂಘ ಸಂಚಾಲಕರಿಗೆ ಮಾಡುವಿರಂತೆ, ಇಲ್ಲಿಯವರೆಗೂ ಬಿಜೆಪಿ ಪಕ್ಷ ಒಬ್ಬೇ ಒಬ್ಬ ಮಹಿಳೆಯನ್ನ ಯಾಕೆ ಅಧ್ಯಕ್ಷರನ್ನಾಗಿ ಮಾಡಿಲ್ಲ ಎಂಬ ಪ್ರಶ್ನೆಗೆ ಉತ್ತರ ಇದ್ಯಾ? ಅಥವಾ “ಮಹಿಳೆ ನಾಲ್ಕು ಗೋಡೆಯಲ್ಲೇ ಬದುಕಬೇಕು” ಎಂದು ಮೋಹನ್ ಭಾಗವತ್ ಹೇಳಿಕೆಯಲ್ಲೇ ಉತ್ತರವಿದ್ಯಾ?” ಎಂದು ಪ್ರಶ್ನಿಸಿದ್ದಾರೆ.

“ಮಹಿಳೆಯರಿಗೆ ಗೌರವ ನೀಡುವ, ಸ್ಥಾನಮಾನ ಕೊಡುವ, ಸ್ವಾಭಿಮಾನದ ಬದುಕಿಗೆ ಅರ್ಥ ನೀಡುವ ಯಾವ ಮಾನದಂಡವೂ ಬಿಜೆಪಿಯ ಡಿಎನ್‌ಎ ಅಲ್ಲೇ ಇಲ್ಲ. ಅಷ್ಟಕ್ಕೂ ರಾಮ-ಪರಶುರಾಮನ ಮೂರ್ತಿ ಪ್ರತಿಷ್ಠಾಪನೆ ಮಾಡಿ ಅಮಾಯಕ ಜನರ ತೆರಿಗೆ ಹಣವನ್ನು ಜೇಬಿಗೆ ಇಳಿಸಿಕೊಂಡಂತೆ ಸುಲಭವಲ್ಲ ನಾರಿ ಶಕ್ತಿ ಬಗ್ಗೆ ಮಾತಾಡುವುದು. ಕರಾವಳಿಯ ಬಿಜೆಪಿ ಯುವಕರ ಪಟಾಲಂ ಮಹಿಳೆಯರನ್ನ, ಯುವತಿಯರನ್ನ ಯಾಮಾರಿಸಿ ಅತ್ಯಾಚಾರ ನಡೆಸಿ ಮೋಸ ಮಾಡುತ್ತಿರುವುದರ ವಿರುದ್ಧ ತುಟಿ ಬಿಚ್ಚದ ನಿಮಿಗೆ ಅದ್ಯಾವ ನಾರಿ ಶಕ್ತಿ, ನಾರಿ ತತ್ವದ ಬಗ್ಗೆ ಮಾತಾಡುವ ನೈತಿಕತೆ ಇದೆ?” ಎಂದು ಟೀಕಾ ಪ್ರಹಾರ ಮಾಡಿದ್ದಾರೆ.

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಸ್ಥಾನಕ್ಕೆ ಮಹಿಳಾ ನಾಯಕಿಯರನ್ನು ನೇಮಕ ಮಾಡುವ ಕುರಿತು ಕೇಂದ್ರ ಬಿಜೆಪಿ ನಾಯಕರು ಚಿಂತನೆ ನಡೆಸುತ್ತಿದ್ದಾರೆ ಎನ್ನಲಾಗಿದೆ. ಈ ಕುರಿತು ಪ್ರತಿಕ್ರಿಯೆ ನೀಡಿದ್ದ ಬಿ.ಕೆ ಹರಿಪ್ರಸಾದ್, “ಬಿಜೆಪಿ ಅಧ್ಯಕ್ಷ ಸ್ಥಾನಕ್ಕೆ ಅರ್ಧನಾರೀಶ್ವರರನ್ನು ಬೇಕಾದರು ಹುಡುಕಿಕೊಳ್ಳಲಿ” ಎಂದಿದ್ದರು.

ಇದಕ್ಕೆ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ತಿರುಗೇಟು ನೀಡಿದ್ದ ಸುನೀಲ್ ಕುಮಾರ್, “ಮಾನ್ಯ ಹರಿಪ್ರಸಾದ್ ಅವರೇ, ಮೊದಲನೆಯದಾಗಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರ ಸ್ಥಾನ ಖಾಲಿ ಇಲ್ಲ. ಅಧ್ಯಕ್ಷರ ಆಯ್ಕೆ ಮಾಡುವುದಕ್ಕೆ ಬಿಜೆಪಿ ತನ್ನದೇ ಆದ ನಿಯಮ ಹಾಗೂ ಪದ್ಧತಿಯನ್ನು ಹೊಂದಿದ್ದು ಆ ಪ್ರಕ್ರಿಯೆಯ ಭಾಗ ಈಗ ಅಂತಿಮ ಹಂತಕ್ಕೆ ತಲುಪಿದೆ. ”

“ದಶಕಗಳ ಕಾಲ ಎಐಸಿಸಿ ಅಖಾಡದಲ್ಲಿ ಅಲೆದಾಡಿದ ನಿಮಗೆ ಪ್ರತಿಸ್ಪರ್ಧಿ ರಾಜಕೀಯ ಪಕ್ಷವೊಂದರ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆ ಹೇಗೆ ನಡೆಯುತ್ತದೆ ಎಂಬ ಬಗ್ಗೆ ಸಾಮಾನ್ಯ ಜ್ಞಾನದ ಕೊರತೆ ಇರುವುದಕ್ಕೆ ಅಭಿನಂದನೆ ಸಲ್ಲಿಸುತ್ತೇನೆ” ಎಂದಿದ್ದರು.

“ಇನ್ನು ಎರಡನೆಯದಾಗಿ ತಾವು ಬಿಜೆಪಿಯನ್ನು ಟೀಕಿಸುವ ಭರದಲ್ಲಿ ” ಅರ್ಧನಾರೀಶ್ವರ” ನನ್ನು ಬೇಕಾದರೂ ಅಧ್ಯಕ್ಷರನ್ನಾಗಿ ಮಾಡಿಕೊಳ್ಳಲಿ ಎಂದು ಹೇಳುವ ಮೂಲಕ ಭಾರತೀಯ ತತ್ವಶಾಸ್ತ್ರದ ಮಹೋನ್ನತ ಚಿಂತನೆಯೊಂದನ್ನು ಅಣಕ ಮಾಡಿದ್ದೀರಿ. ಅರ್ಧನಾರೀಶ್ವರ ಎಂಬುದರ ಅರ್ಥ ವಿಸ್ತಾರವನ್ನು ನಿಮಗೆ ಪಾಠ ಮಾಡಬೇಕಾದ ಅನಿವಾರ್ಯತೆ ನಮಗಿಲ್ಲ”

“ಆದರೆ ಈ ಪದವನ್ನು ವ್ಯಂಗ್ಯಕ್ಕೆ ಬಳಸಿಕೊಂಡ ನೀವು ನಾರೀ ಶಕ್ತಿ ಹಾಗೂ ನಾರಿ ತತ್ವವನ್ನೇ ಅಪಮಾನಕ್ಕೆ ಗುರಿ ಮಾಡಿದ್ದೀರಿ. ಇತ್ತೀಚಿನ ದಿನಗಳಲ್ಲಿ ಅತೀವವಾಗಿ ಮಹಿಳಾಪರ ಕಾಳಜಿ ವ್ಯಕ್ತಪಡಿಸುತ್ತಿರುವ ನಿಮ್ಮ ಪಕ್ಷ ಈ ವಿಚಾರವನ್ನು ಹೇಗೆ ಗ್ರಹಿಸುತ್ತದೆ ಎಂಬ ಬಗ್ಗೆ ಸ್ಪಷ್ಟನೆ ನೀಡಿ ಎಂದು ನಾವು ಬಯಸುವುದಿಲ್ಲ” ಎಂದು ಹೇಳಿದ್ದರು.

ಸುನೀಲ್ ಕುಮಾರ್ ಅವರ ಮೇಲಿನ ಪೋಸ್ಟ್‌ಗೆ ಹರಿಪ್ರಸಾದ್ ಖಾರವಾಗಿ ಪ್ರತಿಕ್ರಿಯಿಸಿದ್ದಾರೆ.

ಬಿಹಾರದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ವಿವಾದ: 11 ದಾಖಲೆಗಳಲ್ಲಿ 5ರಲ್ಲಿ ಜನ್ಮ ದಿನಾಂಕ ಇಲ್ಲ, 25% ಮತದಾರರ ಹೆಸರು ಡಿಲೀಟ್ ಆತಂಕ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೂತುಕುಡಿ ಸಾತನ್‌ಕುಳಂ ತಂದೆ-ಮಗನ ಕಸ್ಟಡಿ ಸಾವು ಪ್ರಕರಣ : ಅಪರಾಧಿಗಳಾದ ಎಲ್ಲಾ 9 ಪೊಲೀಸರಿಗೆ ಮರಣದಂಡನೆ ವಿಧಿಸಿದ ನ್ಯಾಯಾಲಯ

ತಮಿಳುನಾಡಿನ ತೂತುಕುಡಿ ಜಿಲ್ಲೆಯ ಸಾತನ್‌ಕುಳಂ ಪೊಲೀಸ್ ಠಾಣೆಯಲ್ಲಿ ಕೋವಿಡ್-19 ಲಾಕ್‌ಡೌನ್ ಸಮಯದಲ್ಲಿ ಸಂಭವಿಸಿದ, ವ್ಯಾಪಾರಿ ಪಿ. ಜಯರಾಜ್ (58) ಮತ್ತು ಅವರ ಮಗ ಜೆ. ಬೆನಿಕ್ಸ್ (31) ಅವರ ಕಸ್ಟಡಿ ಸಾವು ಪ್ರಕರಣದ...

ದಾವಣಗೆರೆ ದಕ್ಷಿಣ ಉಪ-ಸಮರ: ಶಾಮನೂರು ಸಾಮ್ರಾಜ್ಯದಲ್ಲಿ ಅಹಿಂದ ಬಂಡಾಯ!

ತುಂಗಭದ್ರಾ ನದಿ ಪರ‍್ವಕ್ಕೆ ಎತ್ತರದ ಪ್ರದೇಶದಲ್ಲಿರುವ ದಾವಣಗೆರೆ ಮಧ್ಯ ಕರ್ನಾಟಕದ ಪ್ರಮುಖ ವಾಣಿಜ್ಯ ನಗರಿ. ಬೆಣ್ಣೆ ದೋಸೆಯ ಘಮಲಿನ ದಾವಣಗೆರೆಯ ರಾಜಕಾರಣ ಮಾತ್ರ ಮಿರ್ಚಿ-ಮಂಡಕ್ಕಿಯ ಖಡಕ್ ಖಾರಾ ಕುರುಕುಲಿನಂತೆ! ದಾವಣಗೆರೆ ಮತ್ತದರ ಸುತಮುತ್ತಲಿನ...

‘Dr. Nimo Yadav’, ‘Nehr Who’ ಎಕ್ಸ್‌ ಖಾತೆಗಳನ್ನು ತಕ್ಷಣ ಮರುಸ್ಥಾಪಿಸಲು ದೆಹಲಿ ಹೈಕೋರ್ಟ್ ಆದೇಶ

'Dr. Nimo Yadav' ಮತ್ತು 'Nehr Who' ಎಂಬ ಎರಡು ಪರೋಡಿ ಎಕ್ಸ್‌ ಖಾತೆಗಳನ್ನು ತಕ್ಷಣ ಮರು ಸ್ಥಾಪಿಸುವಂತೆ ದೆಹಲಿ ಹೈಕೋರ್ಟ್ ಸೋಮವಾರ (ಏ.6) ಎಕ್ಸ್ ಸಂಸ್ಥೆಗೆ (X Corp) ಆದೇಶಿಸಿದೆ. 'Dr....

ಬಂಗಾಳ| ಮತದಾರರ ಪಟ್ಟಿಯಿಂದ ಹೆಸರು ತೆಗೆದ ಬಳಿಕ ಸಾವಿಗೆ ಶರಣಾದ ಮುಸ್ಲಿಂ ವ್ಯಕ್ತಿ

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ನಂತರ ಪಶ್ಚಿಮ ಬಂಗಾಳದಲ್ಲಿ ಮತದಾರರ ಪಟ್ಟಿಯಿಂದ ತನ್ನ ಹೆಸರನ್ನು ತೆಗೆದುಹಾಕಿದ್ದರಿಂದ ಮನನೊಂದ ಮುಸ್ಲಿಂ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ಮೃತನನ್ನು ಬಿರ್ಭುಮ್...

‘ಯೋಜನೆಯು ಕೇರಳಕ್ಕೆ ಜೀವನಾಡಿಯಾಗಲಿದೆ’: ವಯನಾಡ್ ಸುರಂಗ ಮಾರ್ಗ ವಿರುದ್ದದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಕೇರಳದ ಕೋಝಿಕ್ಕೋಡ್-ವಯನಾಡ್ ಸುರಂಗ ಮಾರ್ಗ ನಿರ್ಮಾಣಕ್ಕೆ ನೀಡಲಾದ ಪರಿಸರ ಅನುಮತಿ (ಇಸಿ) ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ (ಏ.6) ವಜಾಗೊಳಿಸಿದೆ. ಸುರಂಗ ನಿರ್ಮಾಣದ ಸಮಯದಲ್ಲಿ ಪರಿಸರ ಅನುಮತಿಯ ಷರತ್ತುಗಳ ಉಲ್ಲಂಘನೆಯಾದರೆ, ಅರ್ಜಿದಾರರು...

651 ಕೋಟಿ ರೂ. ಮೌಲ್ಯದ ನಗದು, ಮದ್ಯ, ಮಾದಕ ವಸ್ತು ವಶಪಡಿಸಿಕೊಂಡ ಚುನಾವಣಾ ಆಯೋಗ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದಲ್ಲಿ ನಡೆಯುತ್ತಿರುವ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಅಧಿಕಾರಿಗಳು 651.51 ಕೋಟಿ ರೂ.ಗೂ ಹೆಚ್ಚು ಮೌಲ್ಯದ ನಗದು, ಮದ್ಯ, ಮಾದಕ ವಸ್ತುಗಳು ಮತ್ತು ಇತರ ಉಚಿತ ವಸ್ತುಗಳನ್ನು...

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ಬಾಲಕಿಯನ್ನು ಸರಪಳಿಯಿಂದ ಕಟ್ಟಿ ಥಳಿಸಿದ ಮಾಜಿ ಸೇನಾಧಿಕಾರಿ

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ನಾಲ್ಕು ವರ್ಷದ ಬಾಲಕಿಯನ್ನು ನಿವೃತ್ತ ಸೇನಾಧಿಕಾರಿಯೊಬ್ಬರು ಸರಪಳಿಯಿಂದ ಕಟ್ಟಿಹಾಕಿ ಕ್ರೂರವಾಗಿ ಥಳಿಸಿರುವ ಆಘಾತಕಾರಿ ಘಟನೆ ಹಿಮಾಚಲ ಪ್ರದೇಶದ ಉನಾ ಜಿಲ್ಲೆಯ ಬೆಹಡಾಲ ಗ್ರಾಮದಲ್ಲಿ ನಡೆದಿದೆ. ಬಾಲಕಿಯು ನಿವೃತ್ತ ಸೇನಾಧಿಕಾರಿಯ ತೋಟದ...

ಆಂಧ್ರ ವಿಧಾನಸಭಾ ಸ್ಪೀಕರ್ ಅಯ್ಯಣ್ಣ ಪಾತ್ರುಡು ಅವರಿಂದ ದಲಿತ ವ್ಯಕ್ತಿಗೆ ಕಪಾಳಮೋಕ್ಷ: ವೈಎಸ್‌ಆರ್‌ಸಿಪಿ ವಾಗ್ದಾಳಿ

ಏಪ್ರಿಲ್ 3 ರ ಗುರುವಾರ ನರಸಿಪಟ್ಟಣದಲ್ಲಿ ದಲಿತ ವ್ಯಕ್ತಿಯೊಬ್ಬರಿಗೆ ಕಪಾಳಮೋಕ್ಷ ಮಾಡಿದ್ದಕ್ಕಾಗಿ ಆಂಧ್ರಪ್ರದೇಶ ವಿಧಾನಸಭಾ ಸ್ಪೀಕರ್ ಮತ್ತು ತೆಲುಗು ದೇಶಂ ಪಕ್ಷದ (ಟಿಡಿಪಿ) ನಾಯಕ ಅಯ್ಯಣ್ಣ ಪಾತ್ರುಡು ಅವರ ವಿರುದ್ಧ ವೈಎಸ್‌ಆರ್ ಕಾಂಗ್ರೆಸ್...

ಪ. ಬಂಗಾಳ | ಬಿಜೆಪಿ ಪ್ರಚಾರ ಸಾಮಗ್ರಿ ಸಜ್ಜುಗೊಳಿಸಿದ ವಿಡಿಯೋ ವೈರಲ್ : ಚುನಾವಣಾ ಕರ್ತವ್ಯದಲ್ಲಿದ್ದ ಅಧಿಕಾರಿ ಅಮಾನತು

ಬಿಜೆಪಿ ಪ್ರಚಾರ ಸಾಮಗ್ರಿಗಳನ್ನು ತಯಾರಿಸಲು ಸಹಾಯ ಮಾಡಿದ ಆರೋಪದ ಮೇಲೆ ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯ ಪಾಣಿಹಟಿ ವಿಧಾನಸಭಾ ಕ್ಷೇತ್ರದ ಅಧಿಕಾರಿಯೊಬ್ಬರನ್ನು ಚುನಾವಣಾ ಆಯೋಗ ಅಮಾನತುಗೊಳಿಸಿದೆ ಎಂದು ದಿ ಇಂಡಿಯನ್...

ಮುಸ್ಲಿಮರ ವಿರುದ್ಧ ದ್ವೇಷ ಕಾರುವ ಅಸ್ಸಾಂ ಸಿಎಂ ಪತ್ನಿ ಬಳಿ 2 ಮುಸ್ಲಿಂ ದೇಶಗಳ ಪಾಸ್‌ಪೋರ್ಟ್ ಇದೆ : ಕಾಂಗ್ರೆಸ್ ಆರೋಪ

ಮತದಾನಕ್ಕೆ ಇನ್ನೇನು ಮೂರು ದಿನಗಳು ಬಾಕಿ ಇರುವಾಗ, ಅಸ್ಸಾಂನಲ್ಲಿ ಕಾಂಗ್ರೆಸ್‌-ಬಿಜೆಪಿ ನಡುವೆ ವೈಯಕ್ತಿಕ ವಿಚಾರಗಳ ಕುರಿತ ವಾಗ್ಯುದ್ಧ ತಾರಕಕ್ಕೇರಿದೆ. ಸಿಎಂ ಹಿಮಂತ ಬಿಸ್ವಾ ಶರ್ಮಾ ಮತ್ತು ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ...