Homeಕರ್ನಾಟಕ"ಬೇಟಿ ಬಚಾವೋ" ಯೋಜನೆ ಇರುವುದೇ ಬಿಜೆಪಿ ನಾಯಕರಿಂದ ಮಹಿಳೆಯರಿಗೆ ರಕ್ಷಿಸಿಕೊಳ್ಳಲು: ಬಿ.ಕೆ ಹರಿಪ್ರಸಾದ್

“ಬೇಟಿ ಬಚಾವೋ” ಯೋಜನೆ ಇರುವುದೇ ಬಿಜೆಪಿ ನಾಯಕರಿಂದ ಮಹಿಳೆಯರಿಗೆ ರಕ್ಷಿಸಿಕೊಳ್ಳಲು: ಬಿ.ಕೆ ಹರಿಪ್ರಸಾದ್

- Advertisement -
- Advertisement -

“ಬೇಟಿ ಬಚಾವೋ” ಎಂದು ಕೇಂದ್ರದ ಯೋಜನೆ ಇರುವುದೇ ಬಿಜೆಪಿ ನಾಯಕರಿಂದ ಮಹಿಳೆಯರಿಗೆ ರಕ್ಷಿಸಿಕೊಳ್ಳಲು ಅಲ್ಲವೇ.? ಅಸಲಿಗೂ ನಾರಿ ಶಕ್ತಿಯಿಂದ ಬೆದರಿ ಬೆಂಡಾಗಿರುವುದು ನಿಮ್ಮದೇ ಪಕ್ಷದ ನಾಯಕರೇ ಹೊರತು ಸಾಮಾನ್ಯ ಜನರಲ್ಲ. ಅಷ್ಟಕ್ಕೂ ನಿಮ್ಮ ಪಕ್ಷದ ಘಟಾನುಘಟಿ 19 ನಾಯಕರು ನ್ಯಾಯಾಲಯಕ್ಕೆ ಹೋಗಿ ತಡೆಯಾಜ್ಞೆ ತರಲು ಯಾವ ನಾರಿ ಶಕ್ತಿ ಅಡ್ಡ ಬಂದಿದೆ ಒಮ್ಮೆ ಜನರಿಗೆ ಹೇಳುವ ಧೈರ್ಯ ಮಾಡಿ ಎಂದು ಕಾಂಗ್ರೆಸ್ ಹಿರಿಯ ನಾಯಕ, ವಿಧಾನ ಪರಿಷತ್ ಸದಸ್ಯ ಬಿ.ಕೆ ಹರಿಪ್ರಸಾದ್ ಅವರು ಕಾರ್ಕಳದ ಬಿಜೆಪಿ ಶಾಸಕ ವಿ.ಸುನೀಲ್ ಕುಮಾರ್ ಅವರಿಗೆ ಸವಾಲು ಹಾಕಿದ್ದಾರೆ.

ತನ್ನ ವಿರುದ್ಧ ಸುನೀಲ್ ಕುಮಾರ್ ‘ಎಕ್ಸ್’ನಲ್ಲಿ ಮಾಡಿರುವ ಟೀಕೆಗೆ ‘ಫೇಸ್ ಬುಕ್ ಖಾತೆಯಲ್ಲಿ ತಿರುಗೇಟು ನೀಡಿರುವ ಬಿ.ಕೆ ಹರಿಪ್ರಸಾದ್, “ನಾನು ಚುನಾವಣಾ ಕಲಿ ಆಗದೇ ಇದ್ದರೂ ಪರವಾಗಿಲ್ಲ, ಆದರೆ ನಿಮ್ಮಂತೆ ‘ಪರಶುರಾಮನ’ ಕಲಿಯಂತೂ ಆಗಲಾರೆ. ಬಿಜೆಪಿಯ ಅಧ್ಯಕ್ಷ ಸ್ಥಾನಕ್ಕೆ ಅರ್ಧನಾರೀಶ್ವರನ್ನಾದರೂ ಮಾಡಲಿ ಎಂದು ಹೇಳುವ ಬದಲು ‘ಅರ್ಧನಾರೀಶ್ವರ ಪ್ರತಿಮೆ’ ಮಾಡಲಿ ಎಂದು ಹೇಳಿಕೆ ಕೊಟ್ಟಿದ್ದರೆ ಬಹುಶಃ ನಿಮಿಗೆ ಲಾಭವಾಗುತ್ತಿತ್ತು” ಎಂದು ಕುಟುಕಿದ್ದಾರೆ.

“ನಾರಿ ಶಕ್ತಿ, ನಾರಿ ತತ್ವದ ಉಪದೇಶ ನಿಮ್ಮ ಸಂಘದ ಸರ ಸಂಘ ಸಂಚಾಲಕರಿಗೆ ಮಾಡುವಿರಂತೆ, ಇಲ್ಲಿಯವರೆಗೂ ಬಿಜೆಪಿ ಪಕ್ಷ ಒಬ್ಬೇ ಒಬ್ಬ ಮಹಿಳೆಯನ್ನ ಯಾಕೆ ಅಧ್ಯಕ್ಷರನ್ನಾಗಿ ಮಾಡಿಲ್ಲ ಎಂಬ ಪ್ರಶ್ನೆಗೆ ಉತ್ತರ ಇದ್ಯಾ? ಅಥವಾ “ಮಹಿಳೆ ನಾಲ್ಕು ಗೋಡೆಯಲ್ಲೇ ಬದುಕಬೇಕು” ಎಂದು ಮೋಹನ್ ಭಾಗವತ್ ಹೇಳಿಕೆಯಲ್ಲೇ ಉತ್ತರವಿದ್ಯಾ?” ಎಂದು ಪ್ರಶ್ನಿಸಿದ್ದಾರೆ.

“ಮಹಿಳೆಯರಿಗೆ ಗೌರವ ನೀಡುವ, ಸ್ಥಾನಮಾನ ಕೊಡುವ, ಸ್ವಾಭಿಮಾನದ ಬದುಕಿಗೆ ಅರ್ಥ ನೀಡುವ ಯಾವ ಮಾನದಂಡವೂ ಬಿಜೆಪಿಯ ಡಿಎನ್‌ಎ ಅಲ್ಲೇ ಇಲ್ಲ. ಅಷ್ಟಕ್ಕೂ ರಾಮ-ಪರಶುರಾಮನ ಮೂರ್ತಿ ಪ್ರತಿಷ್ಠಾಪನೆ ಮಾಡಿ ಅಮಾಯಕ ಜನರ ತೆರಿಗೆ ಹಣವನ್ನು ಜೇಬಿಗೆ ಇಳಿಸಿಕೊಂಡಂತೆ ಸುಲಭವಲ್ಲ ನಾರಿ ಶಕ್ತಿ ಬಗ್ಗೆ ಮಾತಾಡುವುದು. ಕರಾವಳಿಯ ಬಿಜೆಪಿ ಯುವಕರ ಪಟಾಲಂ ಮಹಿಳೆಯರನ್ನ, ಯುವತಿಯರನ್ನ ಯಾಮಾರಿಸಿ ಅತ್ಯಾಚಾರ ನಡೆಸಿ ಮೋಸ ಮಾಡುತ್ತಿರುವುದರ ವಿರುದ್ಧ ತುಟಿ ಬಿಚ್ಚದ ನಿಮಿಗೆ ಅದ್ಯಾವ ನಾರಿ ಶಕ್ತಿ, ನಾರಿ ತತ್ವದ ಬಗ್ಗೆ ಮಾತಾಡುವ ನೈತಿಕತೆ ಇದೆ?” ಎಂದು ಟೀಕಾ ಪ್ರಹಾರ ಮಾಡಿದ್ದಾರೆ.

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಸ್ಥಾನಕ್ಕೆ ಮಹಿಳಾ ನಾಯಕಿಯರನ್ನು ನೇಮಕ ಮಾಡುವ ಕುರಿತು ಕೇಂದ್ರ ಬಿಜೆಪಿ ನಾಯಕರು ಚಿಂತನೆ ನಡೆಸುತ್ತಿದ್ದಾರೆ ಎನ್ನಲಾಗಿದೆ. ಈ ಕುರಿತು ಪ್ರತಿಕ್ರಿಯೆ ನೀಡಿದ್ದ ಬಿ.ಕೆ ಹರಿಪ್ರಸಾದ್, “ಬಿಜೆಪಿ ಅಧ್ಯಕ್ಷ ಸ್ಥಾನಕ್ಕೆ ಅರ್ಧನಾರೀಶ್ವರರನ್ನು ಬೇಕಾದರು ಹುಡುಕಿಕೊಳ್ಳಲಿ” ಎಂದಿದ್ದರು.

ಇದಕ್ಕೆ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ತಿರುಗೇಟು ನೀಡಿದ್ದ ಸುನೀಲ್ ಕುಮಾರ್, “ಮಾನ್ಯ ಹರಿಪ್ರಸಾದ್ ಅವರೇ, ಮೊದಲನೆಯದಾಗಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರ ಸ್ಥಾನ ಖಾಲಿ ಇಲ್ಲ. ಅಧ್ಯಕ್ಷರ ಆಯ್ಕೆ ಮಾಡುವುದಕ್ಕೆ ಬಿಜೆಪಿ ತನ್ನದೇ ಆದ ನಿಯಮ ಹಾಗೂ ಪದ್ಧತಿಯನ್ನು ಹೊಂದಿದ್ದು ಆ ಪ್ರಕ್ರಿಯೆಯ ಭಾಗ ಈಗ ಅಂತಿಮ ಹಂತಕ್ಕೆ ತಲುಪಿದೆ. ”

“ದಶಕಗಳ ಕಾಲ ಎಐಸಿಸಿ ಅಖಾಡದಲ್ಲಿ ಅಲೆದಾಡಿದ ನಿಮಗೆ ಪ್ರತಿಸ್ಪರ್ಧಿ ರಾಜಕೀಯ ಪಕ್ಷವೊಂದರ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆ ಹೇಗೆ ನಡೆಯುತ್ತದೆ ಎಂಬ ಬಗ್ಗೆ ಸಾಮಾನ್ಯ ಜ್ಞಾನದ ಕೊರತೆ ಇರುವುದಕ್ಕೆ ಅಭಿನಂದನೆ ಸಲ್ಲಿಸುತ್ತೇನೆ” ಎಂದಿದ್ದರು.

“ಇನ್ನು ಎರಡನೆಯದಾಗಿ ತಾವು ಬಿಜೆಪಿಯನ್ನು ಟೀಕಿಸುವ ಭರದಲ್ಲಿ ” ಅರ್ಧನಾರೀಶ್ವರ” ನನ್ನು ಬೇಕಾದರೂ ಅಧ್ಯಕ್ಷರನ್ನಾಗಿ ಮಾಡಿಕೊಳ್ಳಲಿ ಎಂದು ಹೇಳುವ ಮೂಲಕ ಭಾರತೀಯ ತತ್ವಶಾಸ್ತ್ರದ ಮಹೋನ್ನತ ಚಿಂತನೆಯೊಂದನ್ನು ಅಣಕ ಮಾಡಿದ್ದೀರಿ. ಅರ್ಧನಾರೀಶ್ವರ ಎಂಬುದರ ಅರ್ಥ ವಿಸ್ತಾರವನ್ನು ನಿಮಗೆ ಪಾಠ ಮಾಡಬೇಕಾದ ಅನಿವಾರ್ಯತೆ ನಮಗಿಲ್ಲ”

“ಆದರೆ ಈ ಪದವನ್ನು ವ್ಯಂಗ್ಯಕ್ಕೆ ಬಳಸಿಕೊಂಡ ನೀವು ನಾರೀ ಶಕ್ತಿ ಹಾಗೂ ನಾರಿ ತತ್ವವನ್ನೇ ಅಪಮಾನಕ್ಕೆ ಗುರಿ ಮಾಡಿದ್ದೀರಿ. ಇತ್ತೀಚಿನ ದಿನಗಳಲ್ಲಿ ಅತೀವವಾಗಿ ಮಹಿಳಾಪರ ಕಾಳಜಿ ವ್ಯಕ್ತಪಡಿಸುತ್ತಿರುವ ನಿಮ್ಮ ಪಕ್ಷ ಈ ವಿಚಾರವನ್ನು ಹೇಗೆ ಗ್ರಹಿಸುತ್ತದೆ ಎಂಬ ಬಗ್ಗೆ ಸ್ಪಷ್ಟನೆ ನೀಡಿ ಎಂದು ನಾವು ಬಯಸುವುದಿಲ್ಲ” ಎಂದು ಹೇಳಿದ್ದರು.

ಸುನೀಲ್ ಕುಮಾರ್ ಅವರ ಮೇಲಿನ ಪೋಸ್ಟ್‌ಗೆ ಹರಿಪ್ರಸಾದ್ ಖಾರವಾಗಿ ಪ್ರತಿಕ್ರಿಯಿಸಿದ್ದಾರೆ.

ಬಿಹಾರದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ವಿವಾದ: 11 ದಾಖಲೆಗಳಲ್ಲಿ 5ರಲ್ಲಿ ಜನ್ಮ ದಿನಾಂಕ ಇಲ್ಲ, 25% ಮತದಾರರ ಹೆಸರು ಡಿಲೀಟ್ ಆತಂಕ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...