Homeಕರ್ನಾಟಕ"ಬೇಟಿ ಬಚಾವೋ" ಯೋಜನೆ ಇರುವುದೇ ಬಿಜೆಪಿ ನಾಯಕರಿಂದ ಮಹಿಳೆಯರಿಗೆ ರಕ್ಷಿಸಿಕೊಳ್ಳಲು: ಬಿ.ಕೆ ಹರಿಪ್ರಸಾದ್

“ಬೇಟಿ ಬಚಾವೋ” ಯೋಜನೆ ಇರುವುದೇ ಬಿಜೆಪಿ ನಾಯಕರಿಂದ ಮಹಿಳೆಯರಿಗೆ ರಕ್ಷಿಸಿಕೊಳ್ಳಲು: ಬಿ.ಕೆ ಹರಿಪ್ರಸಾದ್

- Advertisement -
- Advertisement -

“ಬೇಟಿ ಬಚಾವೋ” ಎಂದು ಕೇಂದ್ರದ ಯೋಜನೆ ಇರುವುದೇ ಬಿಜೆಪಿ ನಾಯಕರಿಂದ ಮಹಿಳೆಯರಿಗೆ ರಕ್ಷಿಸಿಕೊಳ್ಳಲು ಅಲ್ಲವೇ.? ಅಸಲಿಗೂ ನಾರಿ ಶಕ್ತಿಯಿಂದ ಬೆದರಿ ಬೆಂಡಾಗಿರುವುದು ನಿಮ್ಮದೇ ಪಕ್ಷದ ನಾಯಕರೇ ಹೊರತು ಸಾಮಾನ್ಯ ಜನರಲ್ಲ. ಅಷ್ಟಕ್ಕೂ ನಿಮ್ಮ ಪಕ್ಷದ ಘಟಾನುಘಟಿ 19 ನಾಯಕರು ನ್ಯಾಯಾಲಯಕ್ಕೆ ಹೋಗಿ ತಡೆಯಾಜ್ಞೆ ತರಲು ಯಾವ ನಾರಿ ಶಕ್ತಿ ಅಡ್ಡ ಬಂದಿದೆ ಒಮ್ಮೆ ಜನರಿಗೆ ಹೇಳುವ ಧೈರ್ಯ ಮಾಡಿ ಎಂದು ಕಾಂಗ್ರೆಸ್ ಹಿರಿಯ ನಾಯಕ, ವಿಧಾನ ಪರಿಷತ್ ಸದಸ್ಯ ಬಿ.ಕೆ ಹರಿಪ್ರಸಾದ್ ಅವರು ಕಾರ್ಕಳದ ಬಿಜೆಪಿ ಶಾಸಕ ವಿ.ಸುನೀಲ್ ಕುಮಾರ್ ಅವರಿಗೆ ಸವಾಲು ಹಾಕಿದ್ದಾರೆ.

ತನ್ನ ವಿರುದ್ಧ ಸುನೀಲ್ ಕುಮಾರ್ ‘ಎಕ್ಸ್’ನಲ್ಲಿ ಮಾಡಿರುವ ಟೀಕೆಗೆ ‘ಫೇಸ್ ಬುಕ್ ಖಾತೆಯಲ್ಲಿ ತಿರುಗೇಟು ನೀಡಿರುವ ಬಿ.ಕೆ ಹರಿಪ್ರಸಾದ್, “ನಾನು ಚುನಾವಣಾ ಕಲಿ ಆಗದೇ ಇದ್ದರೂ ಪರವಾಗಿಲ್ಲ, ಆದರೆ ನಿಮ್ಮಂತೆ ‘ಪರಶುರಾಮನ’ ಕಲಿಯಂತೂ ಆಗಲಾರೆ. ಬಿಜೆಪಿಯ ಅಧ್ಯಕ್ಷ ಸ್ಥಾನಕ್ಕೆ ಅರ್ಧನಾರೀಶ್ವರನ್ನಾದರೂ ಮಾಡಲಿ ಎಂದು ಹೇಳುವ ಬದಲು ‘ಅರ್ಧನಾರೀಶ್ವರ ಪ್ರತಿಮೆ’ ಮಾಡಲಿ ಎಂದು ಹೇಳಿಕೆ ಕೊಟ್ಟಿದ್ದರೆ ಬಹುಶಃ ನಿಮಿಗೆ ಲಾಭವಾಗುತ್ತಿತ್ತು” ಎಂದು ಕುಟುಕಿದ್ದಾರೆ.

“ನಾರಿ ಶಕ್ತಿ, ನಾರಿ ತತ್ವದ ಉಪದೇಶ ನಿಮ್ಮ ಸಂಘದ ಸರ ಸಂಘ ಸಂಚಾಲಕರಿಗೆ ಮಾಡುವಿರಂತೆ, ಇಲ್ಲಿಯವರೆಗೂ ಬಿಜೆಪಿ ಪಕ್ಷ ಒಬ್ಬೇ ಒಬ್ಬ ಮಹಿಳೆಯನ್ನ ಯಾಕೆ ಅಧ್ಯಕ್ಷರನ್ನಾಗಿ ಮಾಡಿಲ್ಲ ಎಂಬ ಪ್ರಶ್ನೆಗೆ ಉತ್ತರ ಇದ್ಯಾ? ಅಥವಾ “ಮಹಿಳೆ ನಾಲ್ಕು ಗೋಡೆಯಲ್ಲೇ ಬದುಕಬೇಕು” ಎಂದು ಮೋಹನ್ ಭಾಗವತ್ ಹೇಳಿಕೆಯಲ್ಲೇ ಉತ್ತರವಿದ್ಯಾ?” ಎಂದು ಪ್ರಶ್ನಿಸಿದ್ದಾರೆ.

“ಮಹಿಳೆಯರಿಗೆ ಗೌರವ ನೀಡುವ, ಸ್ಥಾನಮಾನ ಕೊಡುವ, ಸ್ವಾಭಿಮಾನದ ಬದುಕಿಗೆ ಅರ್ಥ ನೀಡುವ ಯಾವ ಮಾನದಂಡವೂ ಬಿಜೆಪಿಯ ಡಿಎನ್‌ಎ ಅಲ್ಲೇ ಇಲ್ಲ. ಅಷ್ಟಕ್ಕೂ ರಾಮ-ಪರಶುರಾಮನ ಮೂರ್ತಿ ಪ್ರತಿಷ್ಠಾಪನೆ ಮಾಡಿ ಅಮಾಯಕ ಜನರ ತೆರಿಗೆ ಹಣವನ್ನು ಜೇಬಿಗೆ ಇಳಿಸಿಕೊಂಡಂತೆ ಸುಲಭವಲ್ಲ ನಾರಿ ಶಕ್ತಿ ಬಗ್ಗೆ ಮಾತಾಡುವುದು. ಕರಾವಳಿಯ ಬಿಜೆಪಿ ಯುವಕರ ಪಟಾಲಂ ಮಹಿಳೆಯರನ್ನ, ಯುವತಿಯರನ್ನ ಯಾಮಾರಿಸಿ ಅತ್ಯಾಚಾರ ನಡೆಸಿ ಮೋಸ ಮಾಡುತ್ತಿರುವುದರ ವಿರುದ್ಧ ತುಟಿ ಬಿಚ್ಚದ ನಿಮಿಗೆ ಅದ್ಯಾವ ನಾರಿ ಶಕ್ತಿ, ನಾರಿ ತತ್ವದ ಬಗ್ಗೆ ಮಾತಾಡುವ ನೈತಿಕತೆ ಇದೆ?” ಎಂದು ಟೀಕಾ ಪ್ರಹಾರ ಮಾಡಿದ್ದಾರೆ.

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಸ್ಥಾನಕ್ಕೆ ಮಹಿಳಾ ನಾಯಕಿಯರನ್ನು ನೇಮಕ ಮಾಡುವ ಕುರಿತು ಕೇಂದ್ರ ಬಿಜೆಪಿ ನಾಯಕರು ಚಿಂತನೆ ನಡೆಸುತ್ತಿದ್ದಾರೆ ಎನ್ನಲಾಗಿದೆ. ಈ ಕುರಿತು ಪ್ರತಿಕ್ರಿಯೆ ನೀಡಿದ್ದ ಬಿ.ಕೆ ಹರಿಪ್ರಸಾದ್, “ಬಿಜೆಪಿ ಅಧ್ಯಕ್ಷ ಸ್ಥಾನಕ್ಕೆ ಅರ್ಧನಾರೀಶ್ವರರನ್ನು ಬೇಕಾದರು ಹುಡುಕಿಕೊಳ್ಳಲಿ” ಎಂದಿದ್ದರು.

ಇದಕ್ಕೆ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ತಿರುಗೇಟು ನೀಡಿದ್ದ ಸುನೀಲ್ ಕುಮಾರ್, “ಮಾನ್ಯ ಹರಿಪ್ರಸಾದ್ ಅವರೇ, ಮೊದಲನೆಯದಾಗಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರ ಸ್ಥಾನ ಖಾಲಿ ಇಲ್ಲ. ಅಧ್ಯಕ್ಷರ ಆಯ್ಕೆ ಮಾಡುವುದಕ್ಕೆ ಬಿಜೆಪಿ ತನ್ನದೇ ಆದ ನಿಯಮ ಹಾಗೂ ಪದ್ಧತಿಯನ್ನು ಹೊಂದಿದ್ದು ಆ ಪ್ರಕ್ರಿಯೆಯ ಭಾಗ ಈಗ ಅಂತಿಮ ಹಂತಕ್ಕೆ ತಲುಪಿದೆ. ”

“ದಶಕಗಳ ಕಾಲ ಎಐಸಿಸಿ ಅಖಾಡದಲ್ಲಿ ಅಲೆದಾಡಿದ ನಿಮಗೆ ಪ್ರತಿಸ್ಪರ್ಧಿ ರಾಜಕೀಯ ಪಕ್ಷವೊಂದರ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆ ಹೇಗೆ ನಡೆಯುತ್ತದೆ ಎಂಬ ಬಗ್ಗೆ ಸಾಮಾನ್ಯ ಜ್ಞಾನದ ಕೊರತೆ ಇರುವುದಕ್ಕೆ ಅಭಿನಂದನೆ ಸಲ್ಲಿಸುತ್ತೇನೆ” ಎಂದಿದ್ದರು.

“ಇನ್ನು ಎರಡನೆಯದಾಗಿ ತಾವು ಬಿಜೆಪಿಯನ್ನು ಟೀಕಿಸುವ ಭರದಲ್ಲಿ ” ಅರ್ಧನಾರೀಶ್ವರ” ನನ್ನು ಬೇಕಾದರೂ ಅಧ್ಯಕ್ಷರನ್ನಾಗಿ ಮಾಡಿಕೊಳ್ಳಲಿ ಎಂದು ಹೇಳುವ ಮೂಲಕ ಭಾರತೀಯ ತತ್ವಶಾಸ್ತ್ರದ ಮಹೋನ್ನತ ಚಿಂತನೆಯೊಂದನ್ನು ಅಣಕ ಮಾಡಿದ್ದೀರಿ. ಅರ್ಧನಾರೀಶ್ವರ ಎಂಬುದರ ಅರ್ಥ ವಿಸ್ತಾರವನ್ನು ನಿಮಗೆ ಪಾಠ ಮಾಡಬೇಕಾದ ಅನಿವಾರ್ಯತೆ ನಮಗಿಲ್ಲ”

“ಆದರೆ ಈ ಪದವನ್ನು ವ್ಯಂಗ್ಯಕ್ಕೆ ಬಳಸಿಕೊಂಡ ನೀವು ನಾರೀ ಶಕ್ತಿ ಹಾಗೂ ನಾರಿ ತತ್ವವನ್ನೇ ಅಪಮಾನಕ್ಕೆ ಗುರಿ ಮಾಡಿದ್ದೀರಿ. ಇತ್ತೀಚಿನ ದಿನಗಳಲ್ಲಿ ಅತೀವವಾಗಿ ಮಹಿಳಾಪರ ಕಾಳಜಿ ವ್ಯಕ್ತಪಡಿಸುತ್ತಿರುವ ನಿಮ್ಮ ಪಕ್ಷ ಈ ವಿಚಾರವನ್ನು ಹೇಗೆ ಗ್ರಹಿಸುತ್ತದೆ ಎಂಬ ಬಗ್ಗೆ ಸ್ಪಷ್ಟನೆ ನೀಡಿ ಎಂದು ನಾವು ಬಯಸುವುದಿಲ್ಲ” ಎಂದು ಹೇಳಿದ್ದರು.

ಸುನೀಲ್ ಕುಮಾರ್ ಅವರ ಮೇಲಿನ ಪೋಸ್ಟ್‌ಗೆ ಹರಿಪ್ರಸಾದ್ ಖಾರವಾಗಿ ಪ್ರತಿಕ್ರಿಯಿಸಿದ್ದಾರೆ.

ಬಿಹಾರದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ವಿವಾದ: 11 ದಾಖಲೆಗಳಲ್ಲಿ 5ರಲ್ಲಿ ಜನ್ಮ ದಿನಾಂಕ ಇಲ್ಲ, 25% ಮತದಾರರ ಹೆಸರು ಡಿಲೀಟ್ ಆತಂಕ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಏಷ್ಯಾ ಸಂಘರ್ಷ: ಇರಾನ್ ಭದ್ರತಾ ಮುಖ್ಯಸ್ಥ ಅಲಿ ಲಾರಿಜಾನಿ ಹತ್ಯೆ ಮಾಡಿರುವುದಾಗಿ ಹೇಳಿಕೊಂಡ ಇಸ್ರೇಲ್ 

ಇರಾನ್‌ನ ಭದ್ರತಾ ಮುಖ್ಯಸ್ಥ ಅಲಿ ಲಾರಿಜಾನಿ ವೈಮಾನಿಕ ದಾಳಿಯಲ್ಲಿ ಸಾವನ್ನಪ್ಪಿದ್ದಾರೆ ಎಂದು ಇಸ್ರೇಲ್ ರಕ್ಷಣಾ ಸಚಿವ ಕಾಟ್ಜ್ ಮಂಗಳವಾರ ಹೇಳಿದ್ದಾರೆ. ಆದರೆ ಟೆಹ್ರಾನ್‌ನಿಂದ ಯಾವುದೇ ಅಧಿಕೃತ ದೃಢೀಕರಣವಿಲ್ಲ. ಕಾಟ್ಜ್ ಪ್ರಕಾರ, ಜನರಲ್ ಘೋಲಮ್...

ನಾಲ್ಕು ತಿಂಗಳಲ್ಲೇ ಗರಿಷ್ಠ ಮಟ್ಟಕ್ಕೆ ತಲುಪಿದ ಯುವಜನರ ನಿರುದ್ಯೋಗ ಪ್ರಮಾಣ

15–29 ವರ್ಷ ವಯಸ್ಸಿನ ಯುವಕರಲ್ಲಿ ನಿರುದ್ಯೋಗ ದರವು ಫೆಬ್ರವರಿಯಲ್ಲಿ ನಾಲ್ಕು ತಿಂಗಳಲ್ಲೇ ಗರಿಷ್ಠ ಶೇ. 14.8 ಕ್ಕೆ ಏರಿದೆ. ಇದು ಜನವರಿಯಲ್ಲಿ ಶೇ. 14.7 ರಷ್ಟು ಹೆಚ್ಚಾಗಿ, ಯುವಜನರಲ್ಲಿ ನಿರುದ್ಯೋಗ ಹೆಚ್ಚಳ ಉಂಟಾಗಿದೆ...

ಆರ್‌ಎಸ್‌ಎಸ್‌ ನಿಷೇಧಕ್ಕೆ ಒತ್ತಾಯಿಸಿದ ಅಮೆರಿಕದ ಧಾರ್ಮಿಕ ಸ್ವಾತಂತ್ರ್ಯ ಸಮಿತಿ; ಕಾಂಗ್ರೆಸ್ ಪ್ರತಿಕ್ರಿಯೆ

ಭಾರತದಲ್ಲಿ ಧಾರ್ಮಿಕ ಸ್ವಾತಂತ್ರ್ಯದ ಉಲ್ಲಂಘನೆಯಾಗಿದೆ ಎಂದು ಆರೋಪಿಸಿರುವ ಅಂತರರಾಷ್ಟ್ರೀಯ ಧಾರ್ಮಿಕ ಸ್ವಾತಂತ್ರ್ಯದ ಯುನೈಟೆಡ್ ಸ್ಟೇಟ್ಸ್ ಆಯೋಗವು, ರಾಷ್ಟ್ರೀಯ ಸ್ವಯಂ ಸೇವಕ ಸಂಘ (ಆರೆಸ್ಸೆಸ್) ಮತ್ತು ಭಾರತದ ಬಾಹ್ಯ ಗುಪ್ತಚರ ಸಂಸ್ಥೆಯಾದ ಸಂಶೋಧನೆ, ವಿಶ್ಲೇಷಣಾ...

ಕಾಂಗ್ರೆಸ್ ವಿರುದ್ಧದ ‘ಟರ್ಕಿ ಕಚೇರಿ’ ಹೇಳಿಕೆ: ಅರ್ನಾಬ್ ಗೋಸ್ವಾಮಿಗೆ ₹2 ಕೋಟಿ ಮಾನನಷ್ಟ ಮೊಕದ್ದಮೆ ಹೂಡಲು ಸಮನ್ಸ್ ಜಾರಿ ಮಾಡಿದ ದೆಹಲಿ ಹೈಕೋರ್ಟ್

ಕಾಂಗ್ರೆಸ್ ವಿರುದ್ಧದ "ಟರ್ಕಿ ಕಚೇರಿ" ಆರೋಪಕ್ಕೆ ಸಂಬಂಧಿಸಿದಂತೆ ಅರ್ನಾಬ್ ಗೋಸ್ವಾಮಿಗೆ ₹2 ಕೋಟಿ ಮಾನನಷ್ಟ ಮೊಕದ್ದಮೆ ಹೂಡಲು ದೆಹಲಿ ಹೈಕೋರ್ಟ್ ಸಮನ್ಸ್ ಜಾರಿ ಮಾಡಿದೆ. ಟರ್ಕಿಯಲ್ಲಿ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಅಂತರರಾಷ್ಟ್ರೀಯ ಕಚೇರಿಯನ್ನು ನಡೆಸುತ್ತಿದೆ...

ಚುನಾವಣಾ ಆಯೋಗ ಬಿಜೆಪಿ ಆಜ್ಞೆಯ ಮೇರೆಗೆ ಕೆಲಸ ಮಾಡುತ್ತಿದೆ: ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ

ವಿಧಾನಸಭಾ ಚುನಾವಣೆಗೂ ಮುನ್ನ, ಭಾರತದ ಚುನಾವಣಾ ಆಯೋಗ (ಇಸಿಐ) ಪ್ರಸ್ತುತ ಡಿಜಿಪಿ, ಕೋಲ್ಕತ್ತಾ ಪೊಲೀಸ್ ಆಯುಕ್ತರು, ಮುಖ್ಯ ಮತ್ತು ಗೃಹ ಕಾರ್ಯದರ್ಶಿಗಳನ್ನು ಬದಲಿಸುವ ಮೂಲಕ ಪ್ರಮುಖ ಪುನರ್ರಚನೆಯನ್ನು ಮಾಡಿದೆ. ಪಶ್ಚಿಮ ಬಂಗಾಳದ ಹೊಸ ಡಿಜಿ...

‘ಶಾಂತಿಗೆ ಇದು ಸಮಯವಲ್ಲ’: ‘ಕದನ ವಿರಾಮ’ ಪ್ರಸ್ತಾಪಗಳನ್ನು ತಿರಸ್ಕರಿಸಿದ ಇರಾನ್ ಸರ್ವೋಚ್ಚ ನಾಯಕ ಮೊಜ್ತಾಬಾ ಖಮೇನಿ 

ಇರಾನ್‌ನ ನೂತನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ ಅವರು ಉದ್ವಿಗ್ನತೆಯನ್ನು ಕಡಿಮೆ ಮಾಡುವ ಅಥವಾ ಎರಡು ಮಧ್ಯವರ್ತಿ ರಾಷ್ಟ್ರಗಳು ಟೆಹ್ರಾನ್‌ಗೆ ತಲುಪಿಸಿದ ಯುನೈಟೆಡ್ ಸ್ಟೇಟ್ಸ್‌ನೊಂದಿಗೆ ಕದನ ವಿರಾಮದ ಪ್ರಸ್ತಾಪಗಳನ್ನು ತಿರಸ್ಕರಿಸಿದರು ಎಂದು...

ಲೋಕಸಭೆ | 8 ವಿಪಕ್ಷ ಸಂಸದರ ಅಮಾನತು ರದ್ದು

ಲೋಕಸಭೆಯ ಎಂಟು ವಿಪಕ್ಷ ಸಂಸದರ ಅಮಾನತನ್ನು ತಕ್ಷಣಕ್ಕೆ ಜಾರಿಗೆ ಬರುವಂತೆ ಸ್ಪೀಕರ್ ಓಂ ಬಿರ್ಲಾ ಮಂಗಳವಾರ (ಮಾ.17) ವಾಪಸ್ ಪಡೆದಿದ್ದಾರೆ. ಅಶಿಸ್ತಿನ ಕಾರಣ ನೀಡಿ ಫೆಬ್ರವರಿ 8ರಂದು ಸಂಸದರನ್ನು ಅಮಾನತು ಮಾಡಲಾಗಿತ್ತು. ಅಮಾನತು...

ಪಿತೃತ್ವ ರಜೆಗೆ ಕಾನೂನು ತನ್ನಿ : ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಪಿತೃತ್ವ ರಜೆಯನ್ನು (paternity leave) ಸಾಮಾಜಿಕ ಭದ್ರತಾ ಸೌಲಭ್ಯವೆಂದು ಪರಿಗಣಿಸಿ ಕಾನೂನು ರೂಪಿಸುವಂತೆ ಸುಪ್ರೀಂ ಕೋರ್ಟ್ ಮಂಗಳವಾರ (ಮಾ.17) ಕೇಂದ್ರ ಸರ್ಕಾರಕ್ಕೆ ಸೂಚಿಸಿದೆ. ಈ ರಜೆಯ ಅವಧಿಯು ಪೋಷಕರು ಮತ್ತು ಮಗು ಇಬ್ಬರ...

‘ಕಾಲ ಎಲ್ಲಕ್ಕೂ ಉತ್ತರಿಸುತ್ತದೆ’; ಟಿವಿಕೆ ನಾಯಕನ ‘ಡಿಎಂಕೆ ಬೆದರಿಕೆ’ ಆರೋಪ ‘ಸತ್ಯಕ್ಕೆ ದೂರವಾದ ಮಾತು’ ಎಂದ ರಜನಿಕಾಂತ್

ರಾಜಕೀಯ ಪ್ರವೇಶಕ್ಕೆ ಯತ್ನಿಸಿದಾಗ ಡಿಎಂಕೆಯಿಂದ ಬೆದರಿಕೆ ಇತ್ತು ಎಂಬ ಟಿವಿಕೆ ನಾಯಕ ಆಧವ್ ಅರ್ಜುನ ಅವರ ಆರೋಪವನ್ನು ಸೂಪರ್‌ಸ್ಟಾರ್ ರಜನಿಕಾಂತ್ ಮಂಗಳವಾರ ನಿರಾಕರಿಸಿದ್ದಾರೆ ಮತ್ತು "ಕಾಲವೇ ಉತ್ತರ ನೀಡುತ್ತದೆ" ಎಂದು ಹೇಳಿದ್ದಾರೆ. ತಮ್ಮ ಅಧಿಕೃತ...

ಕಾಂಗ್ರೆಸ್‌ ಮಾನನಷ್ಟ ಪ್ರಕರಣ : ಅರ್ನಾಬ್ ಗೋಸ್ವಾಮಿ, ರಿಪಬ್ಲಿಕ್ ಟಿವಿಗೆ ದೆಹಲಿ ಹೈಕೋರ್ಟ್ ಸಮನ್ಸ್

ಟರ್ಕಿ ದೇಶದಲ್ಲಿ ಕಾಂಗ್ರೆಸ್‌ ಪಕ್ಷವು ಅಂತಾರಾಷ್ಟ್ರೀಯ ಕಚೇರಿ ಹೊಂದಿದೆ ಎಂಬ ವರದಿಗೆ ಸಂಬಂಧಿಸಿದಂತೆ, ಅರ್ನಾಬ್ ಗೋಸ್ವಾಮಿ ಮತ್ತು ರಿಪಬ್ಲಿಕ್ ಟಿವಿ ವಿರುದ್ಧ ಕಾಂಗ್ರೆಸ್ ಹೂಡಿರುವ ಮಾನನಷ್ಟ ಮೊಕದ್ದಮೆಯಲ್ಲಿ ದೆಹಲಿ ಹೈಕೋರ್ಟ್ ಮಂಗಳವಾರ (ಮಾ.17)...