Homeಕರ್ನಾಟಕ"ಬೇಟಿ ಬಚಾವೋ" ಯೋಜನೆ ಇರುವುದೇ ಬಿಜೆಪಿ ನಾಯಕರಿಂದ ಮಹಿಳೆಯರಿಗೆ ರಕ್ಷಿಸಿಕೊಳ್ಳಲು: ಬಿ.ಕೆ ಹರಿಪ್ರಸಾದ್

“ಬೇಟಿ ಬಚಾವೋ” ಯೋಜನೆ ಇರುವುದೇ ಬಿಜೆಪಿ ನಾಯಕರಿಂದ ಮಹಿಳೆಯರಿಗೆ ರಕ್ಷಿಸಿಕೊಳ್ಳಲು: ಬಿ.ಕೆ ಹರಿಪ್ರಸಾದ್

- Advertisement -
- Advertisement -

“ಬೇಟಿ ಬಚಾವೋ” ಎಂದು ಕೇಂದ್ರದ ಯೋಜನೆ ಇರುವುದೇ ಬಿಜೆಪಿ ನಾಯಕರಿಂದ ಮಹಿಳೆಯರಿಗೆ ರಕ್ಷಿಸಿಕೊಳ್ಳಲು ಅಲ್ಲವೇ.? ಅಸಲಿಗೂ ನಾರಿ ಶಕ್ತಿಯಿಂದ ಬೆದರಿ ಬೆಂಡಾಗಿರುವುದು ನಿಮ್ಮದೇ ಪಕ್ಷದ ನಾಯಕರೇ ಹೊರತು ಸಾಮಾನ್ಯ ಜನರಲ್ಲ. ಅಷ್ಟಕ್ಕೂ ನಿಮ್ಮ ಪಕ್ಷದ ಘಟಾನುಘಟಿ 19 ನಾಯಕರು ನ್ಯಾಯಾಲಯಕ್ಕೆ ಹೋಗಿ ತಡೆಯಾಜ್ಞೆ ತರಲು ಯಾವ ನಾರಿ ಶಕ್ತಿ ಅಡ್ಡ ಬಂದಿದೆ ಒಮ್ಮೆ ಜನರಿಗೆ ಹೇಳುವ ಧೈರ್ಯ ಮಾಡಿ ಎಂದು ಕಾಂಗ್ರೆಸ್ ಹಿರಿಯ ನಾಯಕ, ವಿಧಾನ ಪರಿಷತ್ ಸದಸ್ಯ ಬಿ.ಕೆ ಹರಿಪ್ರಸಾದ್ ಅವರು ಕಾರ್ಕಳದ ಬಿಜೆಪಿ ಶಾಸಕ ವಿ.ಸುನೀಲ್ ಕುಮಾರ್ ಅವರಿಗೆ ಸವಾಲು ಹಾಕಿದ್ದಾರೆ.

ತನ್ನ ವಿರುದ್ಧ ಸುನೀಲ್ ಕುಮಾರ್ ‘ಎಕ್ಸ್’ನಲ್ಲಿ ಮಾಡಿರುವ ಟೀಕೆಗೆ ‘ಫೇಸ್ ಬುಕ್ ಖಾತೆಯಲ್ಲಿ ತಿರುಗೇಟು ನೀಡಿರುವ ಬಿ.ಕೆ ಹರಿಪ್ರಸಾದ್, “ನಾನು ಚುನಾವಣಾ ಕಲಿ ಆಗದೇ ಇದ್ದರೂ ಪರವಾಗಿಲ್ಲ, ಆದರೆ ನಿಮ್ಮಂತೆ ‘ಪರಶುರಾಮನ’ ಕಲಿಯಂತೂ ಆಗಲಾರೆ. ಬಿಜೆಪಿಯ ಅಧ್ಯಕ್ಷ ಸ್ಥಾನಕ್ಕೆ ಅರ್ಧನಾರೀಶ್ವರನ್ನಾದರೂ ಮಾಡಲಿ ಎಂದು ಹೇಳುವ ಬದಲು ‘ಅರ್ಧನಾರೀಶ್ವರ ಪ್ರತಿಮೆ’ ಮಾಡಲಿ ಎಂದು ಹೇಳಿಕೆ ಕೊಟ್ಟಿದ್ದರೆ ಬಹುಶಃ ನಿಮಿಗೆ ಲಾಭವಾಗುತ್ತಿತ್ತು” ಎಂದು ಕುಟುಕಿದ್ದಾರೆ.

“ನಾರಿ ಶಕ್ತಿ, ನಾರಿ ತತ್ವದ ಉಪದೇಶ ನಿಮ್ಮ ಸಂಘದ ಸರ ಸಂಘ ಸಂಚಾಲಕರಿಗೆ ಮಾಡುವಿರಂತೆ, ಇಲ್ಲಿಯವರೆಗೂ ಬಿಜೆಪಿ ಪಕ್ಷ ಒಬ್ಬೇ ಒಬ್ಬ ಮಹಿಳೆಯನ್ನ ಯಾಕೆ ಅಧ್ಯಕ್ಷರನ್ನಾಗಿ ಮಾಡಿಲ್ಲ ಎಂಬ ಪ್ರಶ್ನೆಗೆ ಉತ್ತರ ಇದ್ಯಾ? ಅಥವಾ “ಮಹಿಳೆ ನಾಲ್ಕು ಗೋಡೆಯಲ್ಲೇ ಬದುಕಬೇಕು” ಎಂದು ಮೋಹನ್ ಭಾಗವತ್ ಹೇಳಿಕೆಯಲ್ಲೇ ಉತ್ತರವಿದ್ಯಾ?” ಎಂದು ಪ್ರಶ್ನಿಸಿದ್ದಾರೆ.

“ಮಹಿಳೆಯರಿಗೆ ಗೌರವ ನೀಡುವ, ಸ್ಥಾನಮಾನ ಕೊಡುವ, ಸ್ವಾಭಿಮಾನದ ಬದುಕಿಗೆ ಅರ್ಥ ನೀಡುವ ಯಾವ ಮಾನದಂಡವೂ ಬಿಜೆಪಿಯ ಡಿಎನ್‌ಎ ಅಲ್ಲೇ ಇಲ್ಲ. ಅಷ್ಟಕ್ಕೂ ರಾಮ-ಪರಶುರಾಮನ ಮೂರ್ತಿ ಪ್ರತಿಷ್ಠಾಪನೆ ಮಾಡಿ ಅಮಾಯಕ ಜನರ ತೆರಿಗೆ ಹಣವನ್ನು ಜೇಬಿಗೆ ಇಳಿಸಿಕೊಂಡಂತೆ ಸುಲಭವಲ್ಲ ನಾರಿ ಶಕ್ತಿ ಬಗ್ಗೆ ಮಾತಾಡುವುದು. ಕರಾವಳಿಯ ಬಿಜೆಪಿ ಯುವಕರ ಪಟಾಲಂ ಮಹಿಳೆಯರನ್ನ, ಯುವತಿಯರನ್ನ ಯಾಮಾರಿಸಿ ಅತ್ಯಾಚಾರ ನಡೆಸಿ ಮೋಸ ಮಾಡುತ್ತಿರುವುದರ ವಿರುದ್ಧ ತುಟಿ ಬಿಚ್ಚದ ನಿಮಿಗೆ ಅದ್ಯಾವ ನಾರಿ ಶಕ್ತಿ, ನಾರಿ ತತ್ವದ ಬಗ್ಗೆ ಮಾತಾಡುವ ನೈತಿಕತೆ ಇದೆ?” ಎಂದು ಟೀಕಾ ಪ್ರಹಾರ ಮಾಡಿದ್ದಾರೆ.

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಸ್ಥಾನಕ್ಕೆ ಮಹಿಳಾ ನಾಯಕಿಯರನ್ನು ನೇಮಕ ಮಾಡುವ ಕುರಿತು ಕೇಂದ್ರ ಬಿಜೆಪಿ ನಾಯಕರು ಚಿಂತನೆ ನಡೆಸುತ್ತಿದ್ದಾರೆ ಎನ್ನಲಾಗಿದೆ. ಈ ಕುರಿತು ಪ್ರತಿಕ್ರಿಯೆ ನೀಡಿದ್ದ ಬಿ.ಕೆ ಹರಿಪ್ರಸಾದ್, “ಬಿಜೆಪಿ ಅಧ್ಯಕ್ಷ ಸ್ಥಾನಕ್ಕೆ ಅರ್ಧನಾರೀಶ್ವರರನ್ನು ಬೇಕಾದರು ಹುಡುಕಿಕೊಳ್ಳಲಿ” ಎಂದಿದ್ದರು.

ಇದಕ್ಕೆ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ತಿರುಗೇಟು ನೀಡಿದ್ದ ಸುನೀಲ್ ಕುಮಾರ್, “ಮಾನ್ಯ ಹರಿಪ್ರಸಾದ್ ಅವರೇ, ಮೊದಲನೆಯದಾಗಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರ ಸ್ಥಾನ ಖಾಲಿ ಇಲ್ಲ. ಅಧ್ಯಕ್ಷರ ಆಯ್ಕೆ ಮಾಡುವುದಕ್ಕೆ ಬಿಜೆಪಿ ತನ್ನದೇ ಆದ ನಿಯಮ ಹಾಗೂ ಪದ್ಧತಿಯನ್ನು ಹೊಂದಿದ್ದು ಆ ಪ್ರಕ್ರಿಯೆಯ ಭಾಗ ಈಗ ಅಂತಿಮ ಹಂತಕ್ಕೆ ತಲುಪಿದೆ. ”

“ದಶಕಗಳ ಕಾಲ ಎಐಸಿಸಿ ಅಖಾಡದಲ್ಲಿ ಅಲೆದಾಡಿದ ನಿಮಗೆ ಪ್ರತಿಸ್ಪರ್ಧಿ ರಾಜಕೀಯ ಪಕ್ಷವೊಂದರ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆ ಹೇಗೆ ನಡೆಯುತ್ತದೆ ಎಂಬ ಬಗ್ಗೆ ಸಾಮಾನ್ಯ ಜ್ಞಾನದ ಕೊರತೆ ಇರುವುದಕ್ಕೆ ಅಭಿನಂದನೆ ಸಲ್ಲಿಸುತ್ತೇನೆ” ಎಂದಿದ್ದರು.

“ಇನ್ನು ಎರಡನೆಯದಾಗಿ ತಾವು ಬಿಜೆಪಿಯನ್ನು ಟೀಕಿಸುವ ಭರದಲ್ಲಿ ” ಅರ್ಧನಾರೀಶ್ವರ” ನನ್ನು ಬೇಕಾದರೂ ಅಧ್ಯಕ್ಷರನ್ನಾಗಿ ಮಾಡಿಕೊಳ್ಳಲಿ ಎಂದು ಹೇಳುವ ಮೂಲಕ ಭಾರತೀಯ ತತ್ವಶಾಸ್ತ್ರದ ಮಹೋನ್ನತ ಚಿಂತನೆಯೊಂದನ್ನು ಅಣಕ ಮಾಡಿದ್ದೀರಿ. ಅರ್ಧನಾರೀಶ್ವರ ಎಂಬುದರ ಅರ್ಥ ವಿಸ್ತಾರವನ್ನು ನಿಮಗೆ ಪಾಠ ಮಾಡಬೇಕಾದ ಅನಿವಾರ್ಯತೆ ನಮಗಿಲ್ಲ”

“ಆದರೆ ಈ ಪದವನ್ನು ವ್ಯಂಗ್ಯಕ್ಕೆ ಬಳಸಿಕೊಂಡ ನೀವು ನಾರೀ ಶಕ್ತಿ ಹಾಗೂ ನಾರಿ ತತ್ವವನ್ನೇ ಅಪಮಾನಕ್ಕೆ ಗುರಿ ಮಾಡಿದ್ದೀರಿ. ಇತ್ತೀಚಿನ ದಿನಗಳಲ್ಲಿ ಅತೀವವಾಗಿ ಮಹಿಳಾಪರ ಕಾಳಜಿ ವ್ಯಕ್ತಪಡಿಸುತ್ತಿರುವ ನಿಮ್ಮ ಪಕ್ಷ ಈ ವಿಚಾರವನ್ನು ಹೇಗೆ ಗ್ರಹಿಸುತ್ತದೆ ಎಂಬ ಬಗ್ಗೆ ಸ್ಪಷ್ಟನೆ ನೀಡಿ ಎಂದು ನಾವು ಬಯಸುವುದಿಲ್ಲ” ಎಂದು ಹೇಳಿದ್ದರು.

ಸುನೀಲ್ ಕುಮಾರ್ ಅವರ ಮೇಲಿನ ಪೋಸ್ಟ್‌ಗೆ ಹರಿಪ್ರಸಾದ್ ಖಾರವಾಗಿ ಪ್ರತಿಕ್ರಿಯಿಸಿದ್ದಾರೆ.

ಬಿಹಾರದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ವಿವಾದ: 11 ದಾಖಲೆಗಳಲ್ಲಿ 5ರಲ್ಲಿ ಜನ್ಮ ದಿನಾಂಕ ಇಲ್ಲ, 25% ಮತದಾರರ ಹೆಸರು ಡಿಲೀಟ್ ಆತಂಕ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...