Homeಕರ್ನಾಟಕ"ಬೇಟಿ ಬಚಾವೋ" ಯೋಜನೆ ಇರುವುದೇ ಬಿಜೆಪಿ ನಾಯಕರಿಂದ ಮಹಿಳೆಯರಿಗೆ ರಕ್ಷಿಸಿಕೊಳ್ಳಲು: ಬಿ.ಕೆ ಹರಿಪ್ರಸಾದ್

“ಬೇಟಿ ಬಚಾವೋ” ಯೋಜನೆ ಇರುವುದೇ ಬಿಜೆಪಿ ನಾಯಕರಿಂದ ಮಹಿಳೆಯರಿಗೆ ರಕ್ಷಿಸಿಕೊಳ್ಳಲು: ಬಿ.ಕೆ ಹರಿಪ್ರಸಾದ್

- Advertisement -
- Advertisement -

“ಬೇಟಿ ಬಚಾವೋ” ಎಂದು ಕೇಂದ್ರದ ಯೋಜನೆ ಇರುವುದೇ ಬಿಜೆಪಿ ನಾಯಕರಿಂದ ಮಹಿಳೆಯರಿಗೆ ರಕ್ಷಿಸಿಕೊಳ್ಳಲು ಅಲ್ಲವೇ.? ಅಸಲಿಗೂ ನಾರಿ ಶಕ್ತಿಯಿಂದ ಬೆದರಿ ಬೆಂಡಾಗಿರುವುದು ನಿಮ್ಮದೇ ಪಕ್ಷದ ನಾಯಕರೇ ಹೊರತು ಸಾಮಾನ್ಯ ಜನರಲ್ಲ. ಅಷ್ಟಕ್ಕೂ ನಿಮ್ಮ ಪಕ್ಷದ ಘಟಾನುಘಟಿ 19 ನಾಯಕರು ನ್ಯಾಯಾಲಯಕ್ಕೆ ಹೋಗಿ ತಡೆಯಾಜ್ಞೆ ತರಲು ಯಾವ ನಾರಿ ಶಕ್ತಿ ಅಡ್ಡ ಬಂದಿದೆ ಒಮ್ಮೆ ಜನರಿಗೆ ಹೇಳುವ ಧೈರ್ಯ ಮಾಡಿ ಎಂದು ಕಾಂಗ್ರೆಸ್ ಹಿರಿಯ ನಾಯಕ, ವಿಧಾನ ಪರಿಷತ್ ಸದಸ್ಯ ಬಿ.ಕೆ ಹರಿಪ್ರಸಾದ್ ಅವರು ಕಾರ್ಕಳದ ಬಿಜೆಪಿ ಶಾಸಕ ವಿ.ಸುನೀಲ್ ಕುಮಾರ್ ಅವರಿಗೆ ಸವಾಲು ಹಾಕಿದ್ದಾರೆ.

ತನ್ನ ವಿರುದ್ಧ ಸುನೀಲ್ ಕುಮಾರ್ ‘ಎಕ್ಸ್’ನಲ್ಲಿ ಮಾಡಿರುವ ಟೀಕೆಗೆ ‘ಫೇಸ್ ಬುಕ್ ಖಾತೆಯಲ್ಲಿ ತಿರುಗೇಟು ನೀಡಿರುವ ಬಿ.ಕೆ ಹರಿಪ್ರಸಾದ್, “ನಾನು ಚುನಾವಣಾ ಕಲಿ ಆಗದೇ ಇದ್ದರೂ ಪರವಾಗಿಲ್ಲ, ಆದರೆ ನಿಮ್ಮಂತೆ ‘ಪರಶುರಾಮನ’ ಕಲಿಯಂತೂ ಆಗಲಾರೆ. ಬಿಜೆಪಿಯ ಅಧ್ಯಕ್ಷ ಸ್ಥಾನಕ್ಕೆ ಅರ್ಧನಾರೀಶ್ವರನ್ನಾದರೂ ಮಾಡಲಿ ಎಂದು ಹೇಳುವ ಬದಲು ‘ಅರ್ಧನಾರೀಶ್ವರ ಪ್ರತಿಮೆ’ ಮಾಡಲಿ ಎಂದು ಹೇಳಿಕೆ ಕೊಟ್ಟಿದ್ದರೆ ಬಹುಶಃ ನಿಮಿಗೆ ಲಾಭವಾಗುತ್ತಿತ್ತು” ಎಂದು ಕುಟುಕಿದ್ದಾರೆ.

“ನಾರಿ ಶಕ್ತಿ, ನಾರಿ ತತ್ವದ ಉಪದೇಶ ನಿಮ್ಮ ಸಂಘದ ಸರ ಸಂಘ ಸಂಚಾಲಕರಿಗೆ ಮಾಡುವಿರಂತೆ, ಇಲ್ಲಿಯವರೆಗೂ ಬಿಜೆಪಿ ಪಕ್ಷ ಒಬ್ಬೇ ಒಬ್ಬ ಮಹಿಳೆಯನ್ನ ಯಾಕೆ ಅಧ್ಯಕ್ಷರನ್ನಾಗಿ ಮಾಡಿಲ್ಲ ಎಂಬ ಪ್ರಶ್ನೆಗೆ ಉತ್ತರ ಇದ್ಯಾ? ಅಥವಾ “ಮಹಿಳೆ ನಾಲ್ಕು ಗೋಡೆಯಲ್ಲೇ ಬದುಕಬೇಕು” ಎಂದು ಮೋಹನ್ ಭಾಗವತ್ ಹೇಳಿಕೆಯಲ್ಲೇ ಉತ್ತರವಿದ್ಯಾ?” ಎಂದು ಪ್ರಶ್ನಿಸಿದ್ದಾರೆ.

“ಮಹಿಳೆಯರಿಗೆ ಗೌರವ ನೀಡುವ, ಸ್ಥಾನಮಾನ ಕೊಡುವ, ಸ್ವಾಭಿಮಾನದ ಬದುಕಿಗೆ ಅರ್ಥ ನೀಡುವ ಯಾವ ಮಾನದಂಡವೂ ಬಿಜೆಪಿಯ ಡಿಎನ್‌ಎ ಅಲ್ಲೇ ಇಲ್ಲ. ಅಷ್ಟಕ್ಕೂ ರಾಮ-ಪರಶುರಾಮನ ಮೂರ್ತಿ ಪ್ರತಿಷ್ಠಾಪನೆ ಮಾಡಿ ಅಮಾಯಕ ಜನರ ತೆರಿಗೆ ಹಣವನ್ನು ಜೇಬಿಗೆ ಇಳಿಸಿಕೊಂಡಂತೆ ಸುಲಭವಲ್ಲ ನಾರಿ ಶಕ್ತಿ ಬಗ್ಗೆ ಮಾತಾಡುವುದು. ಕರಾವಳಿಯ ಬಿಜೆಪಿ ಯುವಕರ ಪಟಾಲಂ ಮಹಿಳೆಯರನ್ನ, ಯುವತಿಯರನ್ನ ಯಾಮಾರಿಸಿ ಅತ್ಯಾಚಾರ ನಡೆಸಿ ಮೋಸ ಮಾಡುತ್ತಿರುವುದರ ವಿರುದ್ಧ ತುಟಿ ಬಿಚ್ಚದ ನಿಮಿಗೆ ಅದ್ಯಾವ ನಾರಿ ಶಕ್ತಿ, ನಾರಿ ತತ್ವದ ಬಗ್ಗೆ ಮಾತಾಡುವ ನೈತಿಕತೆ ಇದೆ?” ಎಂದು ಟೀಕಾ ಪ್ರಹಾರ ಮಾಡಿದ್ದಾರೆ.

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಸ್ಥಾನಕ್ಕೆ ಮಹಿಳಾ ನಾಯಕಿಯರನ್ನು ನೇಮಕ ಮಾಡುವ ಕುರಿತು ಕೇಂದ್ರ ಬಿಜೆಪಿ ನಾಯಕರು ಚಿಂತನೆ ನಡೆಸುತ್ತಿದ್ದಾರೆ ಎನ್ನಲಾಗಿದೆ. ಈ ಕುರಿತು ಪ್ರತಿಕ್ರಿಯೆ ನೀಡಿದ್ದ ಬಿ.ಕೆ ಹರಿಪ್ರಸಾದ್, “ಬಿಜೆಪಿ ಅಧ್ಯಕ್ಷ ಸ್ಥಾನಕ್ಕೆ ಅರ್ಧನಾರೀಶ್ವರರನ್ನು ಬೇಕಾದರು ಹುಡುಕಿಕೊಳ್ಳಲಿ” ಎಂದಿದ್ದರು.

ಇದಕ್ಕೆ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ತಿರುಗೇಟು ನೀಡಿದ್ದ ಸುನೀಲ್ ಕುಮಾರ್, “ಮಾನ್ಯ ಹರಿಪ್ರಸಾದ್ ಅವರೇ, ಮೊದಲನೆಯದಾಗಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರ ಸ್ಥಾನ ಖಾಲಿ ಇಲ್ಲ. ಅಧ್ಯಕ್ಷರ ಆಯ್ಕೆ ಮಾಡುವುದಕ್ಕೆ ಬಿಜೆಪಿ ತನ್ನದೇ ಆದ ನಿಯಮ ಹಾಗೂ ಪದ್ಧತಿಯನ್ನು ಹೊಂದಿದ್ದು ಆ ಪ್ರಕ್ರಿಯೆಯ ಭಾಗ ಈಗ ಅಂತಿಮ ಹಂತಕ್ಕೆ ತಲುಪಿದೆ. ”

“ದಶಕಗಳ ಕಾಲ ಎಐಸಿಸಿ ಅಖಾಡದಲ್ಲಿ ಅಲೆದಾಡಿದ ನಿಮಗೆ ಪ್ರತಿಸ್ಪರ್ಧಿ ರಾಜಕೀಯ ಪಕ್ಷವೊಂದರ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆ ಹೇಗೆ ನಡೆಯುತ್ತದೆ ಎಂಬ ಬಗ್ಗೆ ಸಾಮಾನ್ಯ ಜ್ಞಾನದ ಕೊರತೆ ಇರುವುದಕ್ಕೆ ಅಭಿನಂದನೆ ಸಲ್ಲಿಸುತ್ತೇನೆ” ಎಂದಿದ್ದರು.

“ಇನ್ನು ಎರಡನೆಯದಾಗಿ ತಾವು ಬಿಜೆಪಿಯನ್ನು ಟೀಕಿಸುವ ಭರದಲ್ಲಿ ” ಅರ್ಧನಾರೀಶ್ವರ” ನನ್ನು ಬೇಕಾದರೂ ಅಧ್ಯಕ್ಷರನ್ನಾಗಿ ಮಾಡಿಕೊಳ್ಳಲಿ ಎಂದು ಹೇಳುವ ಮೂಲಕ ಭಾರತೀಯ ತತ್ವಶಾಸ್ತ್ರದ ಮಹೋನ್ನತ ಚಿಂತನೆಯೊಂದನ್ನು ಅಣಕ ಮಾಡಿದ್ದೀರಿ. ಅರ್ಧನಾರೀಶ್ವರ ಎಂಬುದರ ಅರ್ಥ ವಿಸ್ತಾರವನ್ನು ನಿಮಗೆ ಪಾಠ ಮಾಡಬೇಕಾದ ಅನಿವಾರ್ಯತೆ ನಮಗಿಲ್ಲ”

“ಆದರೆ ಈ ಪದವನ್ನು ವ್ಯಂಗ್ಯಕ್ಕೆ ಬಳಸಿಕೊಂಡ ನೀವು ನಾರೀ ಶಕ್ತಿ ಹಾಗೂ ನಾರಿ ತತ್ವವನ್ನೇ ಅಪಮಾನಕ್ಕೆ ಗುರಿ ಮಾಡಿದ್ದೀರಿ. ಇತ್ತೀಚಿನ ದಿನಗಳಲ್ಲಿ ಅತೀವವಾಗಿ ಮಹಿಳಾಪರ ಕಾಳಜಿ ವ್ಯಕ್ತಪಡಿಸುತ್ತಿರುವ ನಿಮ್ಮ ಪಕ್ಷ ಈ ವಿಚಾರವನ್ನು ಹೇಗೆ ಗ್ರಹಿಸುತ್ತದೆ ಎಂಬ ಬಗ್ಗೆ ಸ್ಪಷ್ಟನೆ ನೀಡಿ ಎಂದು ನಾವು ಬಯಸುವುದಿಲ್ಲ” ಎಂದು ಹೇಳಿದ್ದರು.

ಸುನೀಲ್ ಕುಮಾರ್ ಅವರ ಮೇಲಿನ ಪೋಸ್ಟ್‌ಗೆ ಹರಿಪ್ರಸಾದ್ ಖಾರವಾಗಿ ಪ್ರತಿಕ್ರಿಯಿಸಿದ್ದಾರೆ.

ಬಿಹಾರದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ವಿವಾದ: 11 ದಾಖಲೆಗಳಲ್ಲಿ 5ರಲ್ಲಿ ಜನ್ಮ ದಿನಾಂಕ ಇಲ್ಲ, 25% ಮತದಾರರ ಹೆಸರು ಡಿಲೀಟ್ ಆತಂಕ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಬಾಲ ಕಾರ್ಮಿಕ’ ಶಂಕೆಯ ಮೇಲೆ 155 ಮುಸ್ಲಿಂ ವಿದ್ಯಾರ್ಥಿಗಳ ಬಂಧನ: ಧಾರ್ಮಿಕ ಗುರುತಿನ ಕಾರಣಕ್ಕೆ ಬಂಧಿಸಿರುವುದಾಗಿ ಪೋಷಕರ ಆರೋಪ

ಮಧ್ಯಪ್ರದೇಶದ ಕಟ್ನಿಯಲ್ಲಿ ಸರ್ಕಾರಿ ರೈಲ್ವೆ ಪೊಲೀಸರು (GRP) 155 ಮುಸ್ಲಿಂ ವಿದ್ಯಾರ್ಥಿಗಳು ಮತ್ತು ಎಂಟು ಶಿಕ್ಷಕರನ್ನು "ಬಾಲ ಕಾರ್ಮಿಕ" ಶಂಕೆಯ ಮೇಲೆ ಬಂಧಿಸಿದ ನಂತರ, ಪೋಷಕರು ಮುಸ್ಲಿಂ ವಿರೋಧಿ ಪಕ್ಷಪಾತವನ್ನು ಹೊಂದಿದ್ದಾರೆಂದು ಆರೋಪಿಸಿದ್ದಾರೆ....

ಜನಿವಾರದ ಹಿಂದೆ ಬಿದ್ದಿರುವ ವಿರೋಧ ಪಕ್ಷ ಮತ್ತು ಮಾಧ್ಯಮಗಳು

ಏಪ್ರಿಲ್ 23, 2026 ರಂದು ನಡೆದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (KCET) ವೇಳೆ ಬೆಂಗಳೂರಿನ ಕೋರಮಂಗಲದಲ್ಲಿರುವ ಕೃಪಾನಿಧಿ ಪಿಯು ಕಾಲೇಜಿನಲ್ಲಿ ಐವರು ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರವನ್ನು ಬಲವಂತವಾಗಿ ತೆಗೆಸಿದ ಘಟನೆ ರಾಜಕೀಯ...

ಒಡಿಶಾ| ಸಾವಿನ ದಾಖಲೆ ಕೇಳಿದ ಬ್ಯಾಂಕ್‌ ಸಿಬ್ಬಂದಿ; ಸಮಾದಿ ಅಗೆದು ಸಹೋದರಿಯ ಅಸ್ಥಿಪಂಜರ ತಂದ ಬುಡಕಟ್ಟು ವ್ಯಕ್ತಿ

ಒಡಿಶಾದ ಕಿಯೋಂಜಾರ್ ಜಿಲ್ಲೆಯಲ್ಲಿ, ಬುಡಕಟ್ಟು ವ್ಯಕ್ತಿಯೊಬ್ಬ ತನ್ನ ಮೃತ ಸಹೋದರಿಯ ಅಸ್ಥಿಪಂಜರವನ್ನು ಅಗೆದು ಗ್ರಾಮೀಣ ಬ್ಯಾಂಕ್‌ಗೆ ತೆಗೆದುಕೊಂಡು ಹೋಗಿದ್ದಾನೆ. ಆಕೆಯ ಸಾವನ್ನು ಸಾಬೀತುಪಡಿಸುವ ಮೂಲಕ ಆಕೆಯ ಖಾತೆಯಲ್ಲಿ ಜಮಾ ಮಾಡಿದ ಹಣವನ್ನು ಪಡೆಯಲು...

ಜಾತಿ ಕಿರುಕುಳಕ್ಕೆ ದಲಿತ ವಿದ್ಯಾರ್ಥಿ ಸಾವು ಪ್ರಕರಣ: ಇಂದು ಸಂಜೆ 6 ರವರೆಗೆ ಕೇರಳ ಬಂದ್

ಜಾತಿ ಆಧಾರಿತ ಕಿರುಕುಳದಿಂದ ಮನನೊಂದಿದ್ದ ಕೇರಳದ ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ರಾಜ್ಯದಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಕಾಲೇಜು ಕಟ್ಟಡದಿಂದ ಹಾರಿ ಆತ್ಮಹತ್ಯೆ...

‘ಹೊತ್ತಿ ಉರಿಯುತ್ತಿರುವ ಮಣಿಪುರ’: ಶತಮಾನದ ಬೆಂಕಿಗೆ ತುಪ್ಪ ಸುರಿದ ಬಿಜೆಪಿಯ ಕೋಮುರಾಜಕಾರಣ

ಭಾರತದ ಈಶಾನ್ಯ ರಾಜ್ಯ ಮಣಿಪುರ ಅಕ್ಷರಶಃ ಹೊತ್ತಿ ಉರಿಯುತ್ತಿದೆ. ಶತಮಾನಗಳಿಂದ ಹೊಗೆಯಾಡುತ್ತಿದ್ದ ಹಗೆತನಕ್ಕೆ ಕೋಮುರಾಜಕಾರಣದ ಬಣ್ಣ ಬಳಿದ ಬಿಜೆಪಿ ಮತ್ತು ಕೇಂದ್ರ ಸರ್ಕಾರ ಮಣಿಪುರದ ಜನರತ್ತ ತಿರುಗಿಯೂ ನೋಡುತ್ತಿಲ್ಲ. 2023ರಲ್ಲಿ ಭುಗಿಲೆದ್ದ ಉದ್ವಿಗ್ನತೆ...

ಮಧ್ಯಪ್ರದೇಶ| ದಲಿತ ದಂಪತಿಗೆ ಹನುಮಾನ್ ದೇಗುಲ ಪ್ರವೇಶ ನಿರಾಕರಣೆ; ಸಾಮಾಜಿಕ ಬಹಿಷ್ಕಾರ

ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯ ಹನುಮಾನ್ ದೇವಸ್ಥಾನಕ್ಕೆ ನವವಿವಾಹಿತ ದಲಿತ ದಂಪತಿಗೆ ಪ್ರವೇಶ ನಿರಾಕರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಇದು ಗ್ರಾಮದಲ್ಲಿ ಉದ್ವಿಗ್ನತೆಯನ್ನು ಉಂಟುಮಾಡಿದೆ. ಈ ಘಟನೆಯು ಜಾತಿ ಆಧಾರಿತ ತಾರತಮ್ಯದ ಕುರಿತು ಕಳವಳ...

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...