Homeಮುಖಪುಟಬಹುಸಂಖ್ಯಾತ ಭಾರತೀಯರಿಗೆ ಬಗೆದ ದ್ರೋಹ: ಬಜೆಟ್ ಕುರಿತು ಪಿ. ಚಿದಂಬರಂ ಪ್ರತಿಕ್ರಿಯೆ

ಬಹುಸಂಖ್ಯಾತ ಭಾರತೀಯರಿಗೆ ಬಗೆದ ದ್ರೋಹ: ಬಜೆಟ್ ಕುರಿತು ಪಿ. ಚಿದಂಬರಂ ಪ್ರತಿಕ್ರಿಯೆ

- Advertisement -
- Advertisement -

ವಿತ್ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಬುಧವಾರ 2023-24ರ ಕೇಂದ್ರ ಬಜೆಟ್ ಅನ್ನು ಮಂಡಿಸಿದರು. ಇದು “ಜಡ್ಡುಗಟ್ಟಿದ” ಮತ್ತು ಬಹುಸಂಖ್ಯಾತ ಭಾರತೀಯರ ಆಶಯಗಳಿಗೆ ದ್ರೋಹ ಬಗೆಯುವ ಬಜೆಟ್ ಆಗಿದೆ ಎಂದು ಮಾಜಿ ಹಣಕಾಸು ಸಚಿವ ಪಿ. ಚಿದಂಬರಂ ಹೇಳಿದ್ದಾರೆ.

”ಬಜೆಟ್ ಬಗ್ಗೆ ನಮ್ಮ ಪಕ್ಷದ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಟ್ವಿಟ್ ಮಾಡಿದ್ದಾರೆ ನೋಡಿ, ”ಬಜೆಟ್ ಘೋಷಣೆಗಳಲ್ಲಿ ದೊಡ್ಡದಾಗಿದೆ ಮತ್ತು ವಿತರಣೆಯಲ್ಲಿ ಚಿಕ್ಕದಾಗಿದೆ” ಎಂದು ಹೇಳಿದ್ದಾರೆ ಮತ್ತು ಬಿಜೆಪಿ ಸರ್ಕಾರವು ಸಾಮಾನ್ಯ ಜನರ ಜೀವನವನ್ನು ಕಷ್ಟಕರವಾಗಿಸಿದೆ ಎಂದು ಅವರು ಆರೋಪಿಸಿದ್ದಾರೆ.

ಕೇಂದ್ರ ಸರ್ಕಾರದ ಅಮೃತ್ ಕಾಲದ ಥೀಮ್‌ನ್ನು ಮಿತ್ರ ಕಾಲ [ಸ್ನೇಹಿತರ ಯುಗ] ಬಜೆಟ್ ಎಂದು ಪಕ್ಷದ ಮಾಜಿ ಮುಖ್ಯಸ್ಥ ರಾಹುಲ್ ಗಾಂಧಿ ಕರೆದರು, ಅದು ಭಾರತದ ಭವಿಷ್ಯವನ್ನು ನಿರ್ಮಿಸುವ ಮಾರ್ಗಸೂಚಿಯನ್ನು ಹೊಂದಿಲ್ಲ ಎಂದು ಅವರು ಹೇಳಿದ್ದಾರೆ.

ಅಖಿಲ ಭಾರತ ಕಾಂಗ್ರೆಸ್ ಸಮಿತಿ (ಎಐಸಿಸಿ) ಪ್ರಧಾನ ಕಛೇರಿಯಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಚಿದಂಬರಂ, ”ಸರ್ಕಾರವು ಜನರಿಂದ ಎಷ್ಟು ದೂರದಲ್ಲಿದೆ ಮತ್ತು ಜೀವನ, ಜೀವನೋಪಾಯ ಮತ್ತು ಶ್ರೀಮಂತ-ಬಡವರ ನಡುವಿನ ಅಸಮಾನತೆಯ ಬಗ್ಗೆ ಅವರ ಕಾಳಜಿಯನ್ನು ಈ ಬಜೆಟ್ ತೋರಿಸುತ್ತದೆ” ಎಂದು ಹೇಳಿದರು.

ಹೊಸ ತೆರಿಗೆ ಪದ್ಧತಿಯನ್ನು ಆಯ್ಕೆ ಮಾಡುವ ಕಡಿಮೆ ಸಂಖ್ಯೆಯ ಜನರನ್ನು ಹೊರತುಪಡಿಸಿ ಯಾವುದೇ ತೆರಿಗೆಯನ್ನು ಬಜೆಟ್‌ನಲ್ಲಿ ಕಡಿಮೆ ಮಾಡಲಾಗಿಲ್ಲ ಎಂದು ಅವರು ಪ್ರತಿಪಾದಿಸಿದರು. ಹೊಸ ತೆರಿಗೆ ಪದ್ಧತಿಯನ್ನು ಡೀಫಾಲ್ಟ್ ಆಯ್ಕೆಯನ್ನಾಗಿ ಮಾಡುವ ಮೂಲಕ, ಸರ್ಕಾರವು ”ಸಾಮಾನ್ಯ ತೆರಿಗೆ ಪಾವತಿದಾರನಿಗೆ ಹಳೆಯ ತೆರಿಗೆ ಪದ್ಧತಿಯಡಿಯಲ್ಲಿ ಸಿಗಬಹುದಾದ ಅತ್ಯಲ್ಪ ಸಾಮಾಜಿಕ ಭದ್ರತೆಯನ್ನು ದೋಚಲು ಬಯಸುತ್ತದೆ” ಎಂದು ಹೇಳಿದರು.

ಇದನ್ನೂ ಓದಿ: ಇದೊಂದು ಕಾರ್ಪೊರೇಟ್‌ ಪರ ಬಜೆಟ್‌: ಆರ್ಥಿಕ ವಿಶ್ಲೇಷಕರು ಹೇಳುವುದೇನು?

ತೆರಿಗೆ ವಿನಾಯಿತಿಗಳನ್ನು ರದ್ದುಗೊಳಿಸಬೇಕು ಎಂಬುದು ಸರ್ಕಾರದ ಅಂತಿಮ ಗುರಿಯಾಗಿದೆ. ತೆರಿಗೆ ವಿನಾಯಿತಿಗಳು ಇಂದು ಮಧ್ಯಮ ವರ್ಗದವರಿಗೆ ಸ್ವಲ್ಪ ಸಾಮಾಜಿಕ ಭದ್ರತೆಯನ್ನು ನೀಡುತ್ತವೆ. ತೆರಿಗೆ ವಿನಾಯಿತಿಗಳನ್ನು ರದ್ದುಗೊಳಿಸಿದರೆ, ತೆರಿಗೆ ಪಾವತಿದಾರರು ಕೆಲವು ಸಾಮಾಜಿಕ ಭದ್ರತೆಯನ್ನು ಪಡೆಯುವ ಮತ್ತೊಂದು ಕಾರ್ಯವಿಧಾನ ಇರಬೇಕು” ಎಂದು ಶ್ರೀ ಚಿದಂಬರಂ ಹೇಳಿದರು.

”ಈ ಬಜೆಟ್‌ನಿಂದ ಯಾರಿಗೆ ಲಾಭ? ಖಂಡಿತವಾಗಿಯೂ ಬಡವರಿಗಲ್ಲ. ಯುವಕರು ಉದ್ಯೋಗಕ್ಕಾಗಿ ಹತಾಶರಾಗಿದ್ದಾರೆ ಅವರನ್ನೂ ನೋಡುತ್ತಿಲ್ಲ. ಉದ್ಯೋಗ ಕಳೆದುಕೊಂಡವರನ್ನೂ ನೋಡುತ್ತಿಲ್ಲ. ಬಹುಪಾಲು ತೆರಿಗೆದಾರರನ್ನಲ್ಲ, ಗೃಹಿಣಿಯರನ್ನೂ ನೋಡುತ್ತಿಲ್ಲ. ಹೆಚ್ಚುತ್ತಿರುವ ಅಸಮಾನತೆ, ಶತಕೋಟ್ಯಾಧಿಪತಿಗಳ ಆಸ್ತಿಯ ಹೆಚ್ಚಳ ಮತ್ತು ಜನಸಂಖ್ಯೆಯ 1% ಜನರ ಕೈಯಲ್ಲಿ ಸಂಗ್ರಹವಾಗುತ್ತಿರುವ ಸಂಪತ್ತಿನಿಂದ ಆಘಾತಕ್ಕೊಳಗಾಗಿರುವ ಭಾರತೀಯರ ಬಗ್ಗೆ ಇವರಿಗೆ ಚಿಂತೆ ಇಲ್ಲ” ಎಂದು ಮಾಜಿ ಹಣಕಾಸು ಸಚಿವ ಹೇಳಿದರು.

ಪರೋಕ್ಷ ತೆರಿಗೆಗಳನ್ನು ಕಡಿಮೆ ಮಾಡಿಲ್ಲ ಅಥವಾ ಸರಕು ಮತ್ತು ಸೇವಾ ತೆರಿಗೆಯಲ್ಲಿ (ಜಿಎಸ್‌ಟಿ) ಯಾವುದೇ ಕಡಿತ ಮಾಡಿಲ್ಲ. ಪೆಟ್ರೋಲ್, ಡೀಸೆಲ್, ಸಿಮೆಂಟ್, ರಸಗೊಬ್ಬರಗಳ ಬೆಲೆಯಲ್ಲಿ ಯಾವುದೇ ಇಳಿಕೆಯಾಗಿಲ್ಲ ಮತ್ತು ರಾಜ್ಯ ಸರ್ಕಾರಗಳೊಂದಿಗೆ ಹಂಚಿಕೊಳ್ಳದ ಹಲವಾರು ಹೆಚ್ಚುವರಿ ಶುಲ್ಕಗಳು ಮತ್ತು ಸೆಸ್‌ಗಳು ಸಹ ಅಸ್ತಿತ್ವದಲ್ಲಿವೆ ಎಂದು ಹಿರಿಯ ಕಾಂಗ್ರೆಸ್ ನಾಯಕ ತಿಳಿಸಿದರು.

ಆರ್ಥಿಕ ಸಮೀಕ್ಷೆಯು, ಜಗತ್ತು ಎದುರಿಸಲಿರುವ ಎಲ್ಲಾ ಸಮಸ್ಯೆಗಳ ಪಟ್ಟಿ ಮಾಡಿದ್ದರೂ, ಬಜೆಟ್‌ ಮೂಲಕ ಯಾವುದೇ ಪರಿಹಾರವನ್ನು ನೀಡಲಿಲ್ಲ. “ಬಜೆಟ್ ಭಾಷಣವು ಆರ್ಥಿಕ ಸಮಸ್ಯೆಗಳನ್ನು ಸಹ ಗುರುತಿಸಲಿಲ್ಲ, ಈ ಸರ್ಕಾರವು ತನ್ನದೇಯಾದ ಕಾಲ್ಪನಿಕ ಜಗತ್ತಿನಲ್ಲಿ ವಾಸಿಸುತ್ತಿದೆ” ಎಂದು ಅವರು ಹೇಳಿದರು.

ವಿಶ್ವಾದ್ಯಂತ ಅಂಗಿಕರಿಸಲಾದ ಮೂರು ಕಟುವಾದ ಸಂಗತಿಗಳನ್ನು ಗಮನಿಸಬೇಕು, 1) ಜಾಗತಿಕ ವ್ಯಾಪಾರ ಮತ್ತು ಬೆಳವಣಿಗೆಯು 2023 ರಲ್ಲಿ ಗಮನಾರ್ಹವಾಗಿ ನಿಧಾನಗೊಳ್ಳುತ್ತದೆ. 2) ಅನೇಕ ಮುಂದುವರಿದ ರಾಷ್ಟ್ರಗಳು ಆರ್ಥಿಕ ಹಿಂಜರಿತಕ್ಕೆ ಹೋಗುತ್ತವೆ. 3) ಉಕ್ರೇನ್ ಯುದ್ಧ ಮತ್ತು ಇತರ ಬ್ರೂಯಿಂಗ್ ಘರ್ಷಣೆಗಳೊಂದಿಗೆ, ಜಾಗತಿಕ ಭದ್ರತಾ ಪರಿಸ್ಥಿತಿಯು ಹದಗೆಡುತ್ತದೆ ಎಂದು ಮಾಜಿ ಹಣಕಾಸು ಸಚಿವರು ನೆನಪಿಸಿದರು.

”ಈ ಮೂರೂ ಸಂಗತಿಗಳು ಕಾರ್ಯರೂಪಕ್ಕೆ ಬಂದರೆ, ಸರ್ಕಾರ ಏನು ಮಾಡುತ್ತದೆ? ಹಣದುಬ್ಬರ ಮತ್ತು ನಿರುದ್ಯೋಗದಿಂದ ಬಳಲುತ್ತಿರುವ ಜನರ ಮೇಲೆ ಅದು ಯಾವ ರೀತಿಯ ಹೊರೆಗಳನ್ನು ಹಾಕುತ್ತದೆ? ಆರ್ಥಿಕ ಸಮೀಕ್ಷೆಯಲ್ಲಿ ಅಥವಾ ಬಜೆಟ್ ಭಾಷಣದಲ್ಲಿ ಯಾವುದೇ ಉತ್ತರಗಳನ್ನು ನೀಡಲಾಗಿಲ್ಲ” ಎಂದು ಚಿದಂಬರಂ ಹೇಳಿದರು.

ಬಜೆಟ್ ಬಗ್ಗೆ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಟ್ವೀಟ್ ಮಾಡಿದ್ದು, ”ಕಳೆದ ವರ್ಷದ ಬಜೆಟ್ ಕೃಷಿ, ಆರೋಗ್ಯ, ಶಿಕ್ಷಣ, ಎಂಜಿಎನ್‌ಆರ್‌ಇಜಿಎ ಮತ್ತು ಎಸ್‌ಸಿಗಳ ಕಲ್ಯಾಣಕ್ಕೆ ಮೀಸಲಿಡಲು ಮೆಚ್ಚುಗೆಯನ್ನು ಗಳಿಸಿತು. ಆದರೆ ಇಂದು ವಾಸ್ತವ ಸ್ಪಷ್ಟವಾಗಿದೆ. ವಾಸ್ತವಿಕ ವೆಚ್ಚವು ಬಜೆಟ್‌ಗಿಂತ ಗಣನೀಯವಾಗಿ ಕಡಿಮೆಯಾಗಿದೆ. ಓವರ್ ಪ್ರಾಮಿಸ್, ಅಂಡರ್ ಡೆಲಿವರ್- ಇದು ಮೋದಿಯವರ ಒಪಿಯುಡಿ ಕಾರ್ಯತಂತ್ರದ ಮುಖ್ಯಾಂಶವಾಗಿದೆ” ಎಂದು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...