Homeಮುಖಪುಟಬಹುಸಂಖ್ಯಾತ ಭಾರತೀಯರಿಗೆ ಬಗೆದ ದ್ರೋಹ: ಬಜೆಟ್ ಕುರಿತು ಪಿ. ಚಿದಂಬರಂ ಪ್ರತಿಕ್ರಿಯೆ

ಬಹುಸಂಖ್ಯಾತ ಭಾರತೀಯರಿಗೆ ಬಗೆದ ದ್ರೋಹ: ಬಜೆಟ್ ಕುರಿತು ಪಿ. ಚಿದಂಬರಂ ಪ್ರತಿಕ್ರಿಯೆ

- Advertisement -
- Advertisement -

ವಿತ್ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಬುಧವಾರ 2023-24ರ ಕೇಂದ್ರ ಬಜೆಟ್ ಅನ್ನು ಮಂಡಿಸಿದರು. ಇದು “ಜಡ್ಡುಗಟ್ಟಿದ” ಮತ್ತು ಬಹುಸಂಖ್ಯಾತ ಭಾರತೀಯರ ಆಶಯಗಳಿಗೆ ದ್ರೋಹ ಬಗೆಯುವ ಬಜೆಟ್ ಆಗಿದೆ ಎಂದು ಮಾಜಿ ಹಣಕಾಸು ಸಚಿವ ಪಿ. ಚಿದಂಬರಂ ಹೇಳಿದ್ದಾರೆ.

”ಬಜೆಟ್ ಬಗ್ಗೆ ನಮ್ಮ ಪಕ್ಷದ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಟ್ವಿಟ್ ಮಾಡಿದ್ದಾರೆ ನೋಡಿ, ”ಬಜೆಟ್ ಘೋಷಣೆಗಳಲ್ಲಿ ದೊಡ್ಡದಾಗಿದೆ ಮತ್ತು ವಿತರಣೆಯಲ್ಲಿ ಚಿಕ್ಕದಾಗಿದೆ” ಎಂದು ಹೇಳಿದ್ದಾರೆ ಮತ್ತು ಬಿಜೆಪಿ ಸರ್ಕಾರವು ಸಾಮಾನ್ಯ ಜನರ ಜೀವನವನ್ನು ಕಷ್ಟಕರವಾಗಿಸಿದೆ ಎಂದು ಅವರು ಆರೋಪಿಸಿದ್ದಾರೆ.

ಕೇಂದ್ರ ಸರ್ಕಾರದ ಅಮೃತ್ ಕಾಲದ ಥೀಮ್‌ನ್ನು ಮಿತ್ರ ಕಾಲ [ಸ್ನೇಹಿತರ ಯುಗ] ಬಜೆಟ್ ಎಂದು ಪಕ್ಷದ ಮಾಜಿ ಮುಖ್ಯಸ್ಥ ರಾಹುಲ್ ಗಾಂಧಿ ಕರೆದರು, ಅದು ಭಾರತದ ಭವಿಷ್ಯವನ್ನು ನಿರ್ಮಿಸುವ ಮಾರ್ಗಸೂಚಿಯನ್ನು ಹೊಂದಿಲ್ಲ ಎಂದು ಅವರು ಹೇಳಿದ್ದಾರೆ.

ಅಖಿಲ ಭಾರತ ಕಾಂಗ್ರೆಸ್ ಸಮಿತಿ (ಎಐಸಿಸಿ) ಪ್ರಧಾನ ಕಛೇರಿಯಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಚಿದಂಬರಂ, ”ಸರ್ಕಾರವು ಜನರಿಂದ ಎಷ್ಟು ದೂರದಲ್ಲಿದೆ ಮತ್ತು ಜೀವನ, ಜೀವನೋಪಾಯ ಮತ್ತು ಶ್ರೀಮಂತ-ಬಡವರ ನಡುವಿನ ಅಸಮಾನತೆಯ ಬಗ್ಗೆ ಅವರ ಕಾಳಜಿಯನ್ನು ಈ ಬಜೆಟ್ ತೋರಿಸುತ್ತದೆ” ಎಂದು ಹೇಳಿದರು.

ಹೊಸ ತೆರಿಗೆ ಪದ್ಧತಿಯನ್ನು ಆಯ್ಕೆ ಮಾಡುವ ಕಡಿಮೆ ಸಂಖ್ಯೆಯ ಜನರನ್ನು ಹೊರತುಪಡಿಸಿ ಯಾವುದೇ ತೆರಿಗೆಯನ್ನು ಬಜೆಟ್‌ನಲ್ಲಿ ಕಡಿಮೆ ಮಾಡಲಾಗಿಲ್ಲ ಎಂದು ಅವರು ಪ್ರತಿಪಾದಿಸಿದರು. ಹೊಸ ತೆರಿಗೆ ಪದ್ಧತಿಯನ್ನು ಡೀಫಾಲ್ಟ್ ಆಯ್ಕೆಯನ್ನಾಗಿ ಮಾಡುವ ಮೂಲಕ, ಸರ್ಕಾರವು ”ಸಾಮಾನ್ಯ ತೆರಿಗೆ ಪಾವತಿದಾರನಿಗೆ ಹಳೆಯ ತೆರಿಗೆ ಪದ್ಧತಿಯಡಿಯಲ್ಲಿ ಸಿಗಬಹುದಾದ ಅತ್ಯಲ್ಪ ಸಾಮಾಜಿಕ ಭದ್ರತೆಯನ್ನು ದೋಚಲು ಬಯಸುತ್ತದೆ” ಎಂದು ಹೇಳಿದರು.

ಇದನ್ನೂ ಓದಿ: ಇದೊಂದು ಕಾರ್ಪೊರೇಟ್‌ ಪರ ಬಜೆಟ್‌: ಆರ್ಥಿಕ ವಿಶ್ಲೇಷಕರು ಹೇಳುವುದೇನು?

ತೆರಿಗೆ ವಿನಾಯಿತಿಗಳನ್ನು ರದ್ದುಗೊಳಿಸಬೇಕು ಎಂಬುದು ಸರ್ಕಾರದ ಅಂತಿಮ ಗುರಿಯಾಗಿದೆ. ತೆರಿಗೆ ವಿನಾಯಿತಿಗಳು ಇಂದು ಮಧ್ಯಮ ವರ್ಗದವರಿಗೆ ಸ್ವಲ್ಪ ಸಾಮಾಜಿಕ ಭದ್ರತೆಯನ್ನು ನೀಡುತ್ತವೆ. ತೆರಿಗೆ ವಿನಾಯಿತಿಗಳನ್ನು ರದ್ದುಗೊಳಿಸಿದರೆ, ತೆರಿಗೆ ಪಾವತಿದಾರರು ಕೆಲವು ಸಾಮಾಜಿಕ ಭದ್ರತೆಯನ್ನು ಪಡೆಯುವ ಮತ್ತೊಂದು ಕಾರ್ಯವಿಧಾನ ಇರಬೇಕು” ಎಂದು ಶ್ರೀ ಚಿದಂಬರಂ ಹೇಳಿದರು.

”ಈ ಬಜೆಟ್‌ನಿಂದ ಯಾರಿಗೆ ಲಾಭ? ಖಂಡಿತವಾಗಿಯೂ ಬಡವರಿಗಲ್ಲ. ಯುವಕರು ಉದ್ಯೋಗಕ್ಕಾಗಿ ಹತಾಶರಾಗಿದ್ದಾರೆ ಅವರನ್ನೂ ನೋಡುತ್ತಿಲ್ಲ. ಉದ್ಯೋಗ ಕಳೆದುಕೊಂಡವರನ್ನೂ ನೋಡುತ್ತಿಲ್ಲ. ಬಹುಪಾಲು ತೆರಿಗೆದಾರರನ್ನಲ್ಲ, ಗೃಹಿಣಿಯರನ್ನೂ ನೋಡುತ್ತಿಲ್ಲ. ಹೆಚ್ಚುತ್ತಿರುವ ಅಸಮಾನತೆ, ಶತಕೋಟ್ಯಾಧಿಪತಿಗಳ ಆಸ್ತಿಯ ಹೆಚ್ಚಳ ಮತ್ತು ಜನಸಂಖ್ಯೆಯ 1% ಜನರ ಕೈಯಲ್ಲಿ ಸಂಗ್ರಹವಾಗುತ್ತಿರುವ ಸಂಪತ್ತಿನಿಂದ ಆಘಾತಕ್ಕೊಳಗಾಗಿರುವ ಭಾರತೀಯರ ಬಗ್ಗೆ ಇವರಿಗೆ ಚಿಂತೆ ಇಲ್ಲ” ಎಂದು ಮಾಜಿ ಹಣಕಾಸು ಸಚಿವ ಹೇಳಿದರು.

ಪರೋಕ್ಷ ತೆರಿಗೆಗಳನ್ನು ಕಡಿಮೆ ಮಾಡಿಲ್ಲ ಅಥವಾ ಸರಕು ಮತ್ತು ಸೇವಾ ತೆರಿಗೆಯಲ್ಲಿ (ಜಿಎಸ್‌ಟಿ) ಯಾವುದೇ ಕಡಿತ ಮಾಡಿಲ್ಲ. ಪೆಟ್ರೋಲ್, ಡೀಸೆಲ್, ಸಿಮೆಂಟ್, ರಸಗೊಬ್ಬರಗಳ ಬೆಲೆಯಲ್ಲಿ ಯಾವುದೇ ಇಳಿಕೆಯಾಗಿಲ್ಲ ಮತ್ತು ರಾಜ್ಯ ಸರ್ಕಾರಗಳೊಂದಿಗೆ ಹಂಚಿಕೊಳ್ಳದ ಹಲವಾರು ಹೆಚ್ಚುವರಿ ಶುಲ್ಕಗಳು ಮತ್ತು ಸೆಸ್‌ಗಳು ಸಹ ಅಸ್ತಿತ್ವದಲ್ಲಿವೆ ಎಂದು ಹಿರಿಯ ಕಾಂಗ್ರೆಸ್ ನಾಯಕ ತಿಳಿಸಿದರು.

ಆರ್ಥಿಕ ಸಮೀಕ್ಷೆಯು, ಜಗತ್ತು ಎದುರಿಸಲಿರುವ ಎಲ್ಲಾ ಸಮಸ್ಯೆಗಳ ಪಟ್ಟಿ ಮಾಡಿದ್ದರೂ, ಬಜೆಟ್‌ ಮೂಲಕ ಯಾವುದೇ ಪರಿಹಾರವನ್ನು ನೀಡಲಿಲ್ಲ. “ಬಜೆಟ್ ಭಾಷಣವು ಆರ್ಥಿಕ ಸಮಸ್ಯೆಗಳನ್ನು ಸಹ ಗುರುತಿಸಲಿಲ್ಲ, ಈ ಸರ್ಕಾರವು ತನ್ನದೇಯಾದ ಕಾಲ್ಪನಿಕ ಜಗತ್ತಿನಲ್ಲಿ ವಾಸಿಸುತ್ತಿದೆ” ಎಂದು ಅವರು ಹೇಳಿದರು.

ವಿಶ್ವಾದ್ಯಂತ ಅಂಗಿಕರಿಸಲಾದ ಮೂರು ಕಟುವಾದ ಸಂಗತಿಗಳನ್ನು ಗಮನಿಸಬೇಕು, 1) ಜಾಗತಿಕ ವ್ಯಾಪಾರ ಮತ್ತು ಬೆಳವಣಿಗೆಯು 2023 ರಲ್ಲಿ ಗಮನಾರ್ಹವಾಗಿ ನಿಧಾನಗೊಳ್ಳುತ್ತದೆ. 2) ಅನೇಕ ಮುಂದುವರಿದ ರಾಷ್ಟ್ರಗಳು ಆರ್ಥಿಕ ಹಿಂಜರಿತಕ್ಕೆ ಹೋಗುತ್ತವೆ. 3) ಉಕ್ರೇನ್ ಯುದ್ಧ ಮತ್ತು ಇತರ ಬ್ರೂಯಿಂಗ್ ಘರ್ಷಣೆಗಳೊಂದಿಗೆ, ಜಾಗತಿಕ ಭದ್ರತಾ ಪರಿಸ್ಥಿತಿಯು ಹದಗೆಡುತ್ತದೆ ಎಂದು ಮಾಜಿ ಹಣಕಾಸು ಸಚಿವರು ನೆನಪಿಸಿದರು.

”ಈ ಮೂರೂ ಸಂಗತಿಗಳು ಕಾರ್ಯರೂಪಕ್ಕೆ ಬಂದರೆ, ಸರ್ಕಾರ ಏನು ಮಾಡುತ್ತದೆ? ಹಣದುಬ್ಬರ ಮತ್ತು ನಿರುದ್ಯೋಗದಿಂದ ಬಳಲುತ್ತಿರುವ ಜನರ ಮೇಲೆ ಅದು ಯಾವ ರೀತಿಯ ಹೊರೆಗಳನ್ನು ಹಾಕುತ್ತದೆ? ಆರ್ಥಿಕ ಸಮೀಕ್ಷೆಯಲ್ಲಿ ಅಥವಾ ಬಜೆಟ್ ಭಾಷಣದಲ್ಲಿ ಯಾವುದೇ ಉತ್ತರಗಳನ್ನು ನೀಡಲಾಗಿಲ್ಲ” ಎಂದು ಚಿದಂಬರಂ ಹೇಳಿದರು.

ಬಜೆಟ್ ಬಗ್ಗೆ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಟ್ವೀಟ್ ಮಾಡಿದ್ದು, ”ಕಳೆದ ವರ್ಷದ ಬಜೆಟ್ ಕೃಷಿ, ಆರೋಗ್ಯ, ಶಿಕ್ಷಣ, ಎಂಜಿಎನ್‌ಆರ್‌ಇಜಿಎ ಮತ್ತು ಎಸ್‌ಸಿಗಳ ಕಲ್ಯಾಣಕ್ಕೆ ಮೀಸಲಿಡಲು ಮೆಚ್ಚುಗೆಯನ್ನು ಗಳಿಸಿತು. ಆದರೆ ಇಂದು ವಾಸ್ತವ ಸ್ಪಷ್ಟವಾಗಿದೆ. ವಾಸ್ತವಿಕ ವೆಚ್ಚವು ಬಜೆಟ್‌ಗಿಂತ ಗಣನೀಯವಾಗಿ ಕಡಿಮೆಯಾಗಿದೆ. ಓವರ್ ಪ್ರಾಮಿಸ್, ಅಂಡರ್ ಡೆಲಿವರ್- ಇದು ಮೋದಿಯವರ ಒಪಿಯುಡಿ ಕಾರ್ಯತಂತ್ರದ ಮುಖ್ಯಾಂಶವಾಗಿದೆ” ಎಂದು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...